AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Heeramandi Trailer: ‘ಹೀರಾಮಂಡಿ’ ವೈಭವ ಕಂಡು ಬೆರಗಾದ ರಶ್ಮಿಕಾ, ಆಲಿಯಾ, ವಿಕ್ಕಿ ಕೌಶಲ್​

‘ಹೀರಾಮಂಡಿ’ ಟ್ರೇಲರ್​ ನೋಡಿದ ನಟಿ ಆಲಿಯಾ ಭಟ್​ ಇದನ್ನು ಮ್ಯಾಜಿಕಲ್​ ಎಂದು ಕರೆದಿದ್ದಾರೆ. ನಟ ವಿಕ್ಕಿ ಕೌಶಲ್​ ಅವರಿಗೂ ಈ ಟ್ರೇಲರ್​ ತುಂಬಾ ಇಷ್ಟವಾಗಿದೆ. ‘ಇದು ಸಖತ್​ ಅದ್ಭುತವಾಗಿದೆ. ಶ್ರೇಷ್ಠ ಕಲಾಕೃತಿ’ ಎಂದು ಅವರು ಮೆಚ್ಚಿಗೆ ಸೂಚಿಸಿದ್ದಾರೆ. ಪ್ಯಾನ್​ ಇಂಡಿಯಾ ನಟಿ ರಶ್ಮಿಕಾ ಮಂದಣ್ಣ ಅವರು ಈ ವೆಬ್​ ಸರಣಿಯಲ್ಲಿನ ನಟಿಯರ ಪ್ರತಿಭೆಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Heeramandi Trailer: ‘ಹೀರಾಮಂಡಿ’ ವೈಭವ ಕಂಡು ಬೆರಗಾದ ರಶ್ಮಿಕಾ, ಆಲಿಯಾ, ವಿಕ್ಕಿ ಕೌಶಲ್​
‘ಹೀರಾಮಂಡಿ’ ವೆಬ್​ ಸರಣಿ ಪೋಸ್ಟರ್​
ಮದನ್​ ಕುಮಾರ್​
|

Updated on: Apr 10, 2024 | 9:57 PM

Share

ನಿರ್ದೇಶಕ ಸಂಜಯ್​ ಲೀಲಾ ಬನ್ಸಾಲಿ (Leela Bhansali) ಅವರು ಏನೇ ಮಾಡಿದರು ಸಖತ್​ ಅದ್ದೂರಿಯಾಗಿ ಮಾಡುತ್ತಾರೆ. ಇಷ್ಟು ವರ್ಷಗಳ ಕಾಲ ಅವರು ಹಿರಿತೆರೆಯಲ್ಲಿ ಮ್ಯಾಜಿಕ್​ ಮಾಡಿದ್ದಾರೆ. ‘ದೇವದಾಸ್​’, ‘ಬಾಜಿರಾವ್​ ಮಸ್ತಾನಿ’, ‘ಪದ್ಮಾವತ್​’, ‘ಗಂಗೂಬಾಯಿ ಕಾಠಿಯಾವಾಡಿ’ ಮುಂತಾದ ಸಿನಿಮಾಗಳನ್ನು ನೀಡಿರುವ ಅವರು ಇದೇ ಮೊದಲ ಬಾರಿಗೆ ಒಟಿಟಿ ಜಗತ್ತಿಗೆ ಕಾಲಿಟ್ಟಿದ್ದಾರೆ. ಅವರ ನಿರ್ದೇಶನದಲ್ಲಿ ‘ಹೀರಾಮಂಡಿ’ (Heeramandi) ವೆಬ್​ ಸಿರೀಸ್​ ನಿರ್ಮಾಣ ಆಗಿದ್ದು ಇದರ ಟ್ರೇಲರ್​ ಬಿಡುಗಡೆ ಆಗಿದೆ. ಈ ಟ್ರೇಲರ್ (Heeramandi Trailer) ನೋಡಿ ವಿಕ್ಕಿ ಕೌಶಲ್​, ರಶ್ಮಿಕಾ ಮಂದಣ್ಣ, ಆಲಿಯಾ ಭಟ್​ ಮುಂತಾದ ಸೆಲೆಬ್ರಿಟಿಗಳು ಮೆಚ್ಚುಗೆ ಸೂಚಿಸಿದ್ದಾರೆ.

ಸಖತ್​​ ವೈಭವದಿಂದ ‘ಹೀರಾಮಂಡಿ’ ವೆಬ್​ ಸರಣಿಯನ್ನು ಸಂಜಯ್​ ಲೀಲಾ ಬನ್ಸಾಲಿ ಅವರು ಕಟ್ಟಿಕೊಟ್ಟಿದ್ದಾರೆ ಎಂಬುದಕ್ಕೆ ಈ ಟ್ರೇಲರ್ ಸಾಕ್ಷಿ ಒದಗಿಸಿದೆ. ಸ್ವಾತಂತ್ರ್ಯಪೂರ್ವ ಕಾಲದ ಕಹಾನಿಯನ್ನು ಈ ಮೂಲಕ ಹೇಳಲಾಗುತ್ತಿದೆ. ಅನೇಕ ನಟಿಯರು ಈ ಸಿನಿಮಾದಲ್ಲಿ ಮುಖ್ಯ ಪಾತ್ರಗಳನ್ನು ಮಾಡಿದ್ದಾರೆ. ನೆಟ್​ಫ್ಲಿಕ್ಸ್​ ಮೂಲಕ ಮೇ 1ರಂದು ಈ ವೆಬ್​ ಸಿರೀಸ್​ ವೀಕ್ಷಣೆಗೆ ಲಭ್ಯವಾಗಲಿದೆ.

ಇದನ್ನೂ ಓದಿ: ‘ರಾಮಾಯಣ’ ಸಿನಿಮಾಗಾಗಿ ಹಳ್ಳಿಗೆ ಹೋಗಿ ತರಬೇತಿ ಪಡೆಯುತ್ತಿರುವ ರಣಬೀರ್​ ಕಪೂರ್​

ಮನಿಶಾ ಕೊಯಿರಾಲಾ, ಸೋನಾಕ್ಷಿ ಸಿನ್ಹಾ, ಅದಿತಿ ರಾವ್​ ಹೈದರಿ, ರಿಚಾ ಚಡ್ಡಾ, ಶರ್ಮಿನ್​ ಸೇಗಲ್​, ಸಂಜೀದಾ ಶೇಖ್​ ಮುಂತಾದವರು ‘ಹೀರಾಮಂಡಿ’ ವೆಬ್​ ಸಿರೀಸ್​ನಲ್ಲಿ ನಟಿಸಿದ್ದಾರೆ. ಅದ್ದೂರಿ ಸೆಟ್​ಗಳು, ಹಿನ್ನೆಲೆ ಸಂಗೀತ, ಕಲಾವಿದರ ಕಾಸ್ಟ್ಯೂಮ್​ ಎಲ್ಲವೂ ಗಮನ ಸೆಳೆಯುತ್ತಿದೆ. ಈ ವೆಬ್​ ಸರಣಿ ನೋಡಲು ಸಂಜಯ್​ ಲೀಲಾ ಬನ್ಸಾಲಿ ಅಭಿಮಾನಿಗಳು ಕಾತರದಿಂದ ಕಾದಿದ್ದಾರೆ.

‘ಹೀರಾಮಂಡಿ’ ಟ್ರೇಲರ್:

‘ಹೀರಾಮಂಡಿ’ ಟ್ರೇಲರ್​ ನೋಡಿದ ಆಲಿಯಾ ಭಟ್​ ಅವರು ಇದನ್ನು ಮ್ಯಾಜಿಕಲ್​ ಎಂದು ಹೊಗಳಿದ್ದಾರೆ. ಈ ಮೊದಲು ಆಲಿಯಾ ಭಟ್​ ಅವರು ಸಂಜಯ್​ ಲೀಲಾ ಬನ್ಸಾಲಿ ನಿರ್ದೇಶನದ ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದರು. ಆ ಚಿತ್ರದಲ್ಲಿನ ಅಭಿನಯಕ್ಕೆ ಅವರು ‘ಅತ್ಯುತ್ತಮ ನಟಿ’ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡರು. ವಿಕ್ಕಿ ಕೌಶಲ್​ ಅವರಿಗೂ ‘ಹೀರಾಮಂಡಿ’ ಟ್ರೇಲರ್​ ಸಖತ್​ ಇಷ್ಟ ಆಗಿದೆ. ‘ಇದು ತುಂಬ ಅದ್ಭುತವಾಗಿದೆ. ಶ್ರೇಷ್ಠ ಕಲಾಕೃತಿ’ ಎಂದು ಅವರು ಮೆಚ್ಚಿಗೆ ಸೂಚಿಸಿದ್ದಾರೆ. ನಟಿ ರಶ್ಮಿಕಾ ಮಂದಣ್ಣ ಅವರು ಈ ವೆಬ್​ ಸಿರೀಸ್​ನಲ್ಲಿನ ಮಹಿಳಾ ಕಲಾವಿದರ ಪ್ರತಿಭೆಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು