Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ಒಟಿಟಿಯಲ್ಲಿ ಬಿಡುಗಡೆ ಆಗುತ್ತಿರುವ ಸಿನಿಮಾಗಳ ಪಟ್ಟಿ ಇಲ್ಲಿದೆ

OTT release: ಕಳೆದ ವಾರದಂತೆಯೇ ಈ ವಾರವೂ ಸಹ ಕೆಲ ಹಿಟ್ ಸಿನಿಮಾಗಳು ಒಟಿಟಿಗೆ ಲಗ್ಗೆ ಇಟ್ಟಿವೆ. ಕನ್ನಡದ ಸಿನಿಮಾ ಒಂದು ಸಹ ಈ ವಾರ ಒಟಿಟಿಗೆ ಬಂದಿದೆ. ಕನ್ನಡದ ಒಂದು ಸಿನಿಮಾ ಸೇರಿದಂತೆ ಬೇರೆ ಬೇರೆ ಭಾಷೆಯ ಹಿಟ್ ಸಿನಿಮಾಗಳು ಈ ವಾರ ಒಟಿಟಿಯಲ್ಲಿ ಬಿಡುಗಡೆ ಕಂಡಿವೆ. ಇಲ್ಲಿದೆ ಪಟ್ಟಿ.

ಈ ವಾರ ಒಟಿಟಿಯಲ್ಲಿ ಬಿಡುಗಡೆ ಆಗುತ್ತಿರುವ ಸಿನಿಮಾಗಳ ಪಟ್ಟಿ ಇಲ್ಲಿದೆ
Ott Release
Follow us
ಮಂಜುನಾಥ ಸಿ.
|

Updated on:Mar 29, 2025 | 8:44 PM

ಐಪಿಎಲ್ ಶುರುವಾಗಿ ವಾರವಾಗುತ್ತಾ ಬಂದಿದೆ. ಕಳೆದ ವಾರ ಚಿತ್ರಮಂದಿರಗಳಲ್ಲಿ ಯಾವುದೇ ದೊಡ್ಡ ಸಿನಿಮಾಗಳು ಇರಲಿಲ್ಲ. ಆದರೆ ಈ ವಾರ ಪರಿಸ್ಥಿತಿ ಹಾಗಿಲ್ಲ. ಕನ್ನಡದ ‘ಮನದ ಕಡಲು’ ಸೇರಿದಂತೆ ಹಿಂದಿಯ ‘ಸಿಖಂಧರ್’, ತೆಲುಗಿನ ‘ರಾಬಿನ್​ಹುಡ್’ ‘ಮ್ಯಾಡ್’ ಇನ್ನೂ ಕೆಲ ಸಿನಿಮಾಗಳು ಚಿತ್ರಮಂದಿರದಲ್ಲಿ ಬಿಡುಗಡೆ ಆಗಿವೆ. ಹಾಗೆಂದು ಒಟಿಟಿಗಳು ಸಹ ಹಿಂದೆ ಬಿದ್ದಿಲ್ಲ. ಕಳೆದ ವಾರದಂತೆಯೇ ಈ ವಾರವೂ ಸಹ ಕೆಲ ಹಿಟ್ ಸಿನಿಮಾಗಳು ಒಟಿಟಿಗೆ ಲಗ್ಗೆ ಇಟ್ಟಿವೆ. ಕನ್ನಡದ ಸಿನಿಮಾ ಒಂದು ಸಹ ಈ ವಾರ ಒಟಿಟಿಗೆ ಬಂದಿದೆ.

‘ಛೂ ಮಂತರ್’

ಶರಣ್ ನಟನೆಯ ‘ಛೂ ಮಂತರ್’ ಸಿನಿಮಾ ಜನವರಿಯಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿತ್ತು. ಹಾರರ್ ಕತೆಯ ಜೊತೆಗೆ ಕಾಮಿಡಿ ಸಹ ಇರುವ ಈ ಸಿನಿಮಾ ಯಶಸ್ಸನ್ನು ಚಿತ್ರಮಂದಿರಗಳಲ್ಲಿ ಕಂಡಿತ್ತು. ಇದೀಗ ಈ ಸಿನಿಮಾ ಒಟಿಟಿಗೆ ಬಂದಿದ್ದು, ಅಮೆಜಾನ್ ಪ್ರೈಂನಲ್ಲಿ ಸ್ಟ್ರೀಮಿಂಗ್ ಆರಂಭಿಸಿದೆ. ಶರಣ್ ಜೊತೆಗೆ ಚಿಕ್ಕಣ್ಣ, ಅದಿತಿ ಇನ್ನೂ ಕೆಲ ನಟ-ನಟಿಯರು ಸಿನಿಮಾದಲ್ಲಿದ್ದಾರೆ.

ಮುಫಾಸಾ

ವಿಶ್ವದಾದ್ಯಂತ ಜನಪ್ರಿಯವಾಗಿರುವ ‘ದಿ ಲಯನ್ ಕಿಂಗ್’ ಮಾದರಿಯದ್ದೇ ಸಿನಿಮಾ ‘ಮುಫಾಸಾ’ ಈ ವಾರ ಒಟಿಟಿಗೆ ಲಗ್ಗೆ ಇಟ್ಟಿದೆ. ಭಾರಿ ಬಜೆಟ್​ನ ಈ ಇಂಗ್ಲೀಷ್ ಸಿನಿಮಾ ಹಲವು ಭಾರತೀಯ ಭಾಷೆಗಳಲ್ಲಿ ಡಬ್ ಆಗಿ ಒಟಿಟಿಗೆ ಬಂದಿದೆ. ಹಿಂದಿಯಲ್ಲಿ ಈ ಸಿನಿಮಾಕ್ಕೆ ಸ್ವತಃ ಶಾರುಖ್ ಖಾನ್ ಧ್ವನಿ ನೀಡಿರುವುದು ವಿಶೇಷ. ‘ಮುಫಾಸಾ’ ಸಿನಿಮಾ ಮಾರ್ಚ್ 28 ರಿಂದ ಜಿಯೋ ಹಾಟ್​ಸ್ಟಾರ್​​ನಲ್ಲಿ ಸ್ಟ್ರೀಮಿಂಗ್ ಆರಂಭಿಸಿದೆ.

ಇದನ್ನೂ ಓದಿ
Image
ಚಿನ್ನ ಕಳ್ಳಸಾಗಣೆ: ಮಾರ್ಚ್ 18ರವರೆಗೆ ನಟಿ ರನ್ಯಾ ರಾವ್​ಗೆ ನ್ಯಾಯಾಂಗ ಬಂಧನ
Image
ಮಹೇಶ್ ಬಾಬು ಜೊತೆ ನಟಿಸಿದರೂ ಸಿಗದ ಅದೃಷ್ಟ; ಈಗ ಗೂಗಲ್​ನಲ್ಲಿ ಕೆಲಸ
Image
‘ಮಾಣಿಕ್ಯ’ ಚಿತ್ರದ ನಟಿ ರನ್ಯಾ ಬಳಿ ಸಿಕ್ಕಿದ್ದು ಬರೋಬ್ಬರಿ 15 ಕೆಜಿ ಚಿನ್ನ
Image
ಪುಡಿರೌಡಿ ತರ ಆಡೋದು ಬಿಡಿ, ಸಿಎಂ ಆದ್ರೆ ಕಷ್ಟ ಇದೆ’; ಡಿಕೆಶಿಗೆ ಕೌಂಟರ್

ವಿಡುದಲೈ ಪಾರ್ಟ್ 2

ಖ್ಯಾತ ನಿರ್ದೇಶಕ ವೆಟ್ರಿಮಾರನ್ ನಿರ್ದೇಶನ ಮಾಡಿದ್ದ ‘ವಿಡಯದಲೈ’ ಸಿನಿಮಾದ ಮುಂದುವರೆದ ಭಾಗ ‘ವಿಡುದಲೈ ಭಾಗ 2’ ಕೆಲ ತಿಂಗಳ ಹಿಂದೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿತ್ತು. ಸಿನಿಮಾದ ಬಗ್ಗೆ ಮಿಶ್ರ ಅಭಿಪ್ರಾಯಗಳು ವ್ಯಕ್ತವಾಗಿದ್ದವು. ಇದೀಗ ಈ ಸಿನಿಮಾ ಒಟಿಟಿಗೆ ಬಂದಿದೆ. ತುಸು ತಡವಾಗಿಯೇ ಸ್ಟ್ರೀಮಿಂಗ್ ಆರಂಭಿಸಿದೆ. ‘ವಿಡುದಲೈ ಪಾರ್ಟ್ 2’ ಜೀ5ನಲ್ಲಿ ವೀಕ್ಷಣೆಗೆ ಲಭ್ಯವಿದೆ. ಈ ಸಿನಿಮಾದ ಮೊದಲ ಭಾಗವೂ ಅದೇ ಒಟಿಟಿಯಲ್ಲಿದೆ.

ಇದನ್ನೂ ಓದಿ:ಈ ವಾರ ಒಟಿಟಿಗೆ ಬಂದಿದೆ ಕನ್ನಡದ ಸುಂದರ ಸಿನಿಮಾ

ದೇವ

ಶಾಹಿದ್ ಕಪೂರ್ ನಟಿಸಿರುವ ‘ದೇವ’ ಸಿನಿಮಾ ಕೆಲ ವಾರಗಳ ಹಿಂದಷ್ಟೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿತ್ತು. ಶಾಹಿದ್ ಕಪೂರ್, ರೌಡಿ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿರುವ ಸಿನಿಮಾ ಇದು. ಶಾಹಿದ್​ರ ಭಿನ್ನ ಪಾತ್ರದ ಕಾರಣಕ್ಕೆ ಸಿನಿಮಾ ಗಮನ ಸೆಳೆದಿತ್ತು. ಆದರೆ ಅಷ್ಟೇನೂ ಒಳ್ಳೆಯ ಪ್ರದರ್ಶನ ಕಾಣಲಿಲ್ಲ ಸಿನಿಮಾ. ಇದೀಗ ಈ ಸಿನಿಮಾ ನೆಟ್​ಫ್ಲಿಕ್ಸ್​ನಲ್ಲಿ ಸ್ಟ್ರೀಮಿಂಗ್ ಆರಂಭಿಸಿದೆ.

ಸೆರುಪ್ಪುಗಲ್ ಜಾಗೃತೆ

‘ಸೆರುಪ್ಪುಗಲ್ ಜಾಗೃತೆ’ (ಚಪ್ಪಲಿ ಹುಷಾರು) ಹೆಸರಿನ ತಮಿಳು ಸಿನಿಮಾ ಇದೇ ವಾರ ಒಟಿಟಿಗೆ ಬಿಡುಗಡೆ ಆಗಿದೆ. ಕಳೆದು ಹೋದ ಒಂದು ಜೊತೆ ಚಪ್ಪಲಿಗಳಿಗಾಗಿ ಹುಡುಕಾಡುವ ಸಿನಿಮಾ ಇದು. ಅಂದಹಾಗೆ ಕಳೆದು ಹೋದ ಆ ಚಪ್ಪಲಿಯ ಒಳಗೆ ವಜ್ರಗಳಿವೆ. ಈ ಕಾಡಿಮಿ ಥ್ರಿಲ್ಲರ್ ಸಿನಿಮಾ ಜೀ5 ನಲ್ಲಿ ಸ್ಟ್ರೀಂ ಆಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:43 pm, Sat, 29 March 25

ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ