AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಪ್ರಸಾರದಲ್ಲಿ ದೊಡ್ಡ ಬದಲಾವಣೆ; ಒಟಿಟಿಯಲ್ಲಿ ಫಸ್ಟ್​, ಟಿವಿಯಲ್ಲಿ ಆಮೇಲೆ

Bigg Boss on OTT: ಈಗ ಮತ್ತೆ ಬಿಗ್ ಬಾಸ್ ಶೋ ಆರಂಭವಾಗುತ್ತಿದೆ. ಕನ್ನಡ ಮಾತ್ರವಲ್ಲ ಹಿಂದಿಯಲ್ಲೂ ಈ ಶೋ ಪ್ರಸಾರ ಕಾಣಲಿದೆ. ಟಿವಿ ಕ್ಷೇತ್ರದ ಬಲು ಜನಪ್ರಿಯ ರಿಯಾಲಿಟಿ ಶೋ ಆಗಿದೆ ಬಿಗ್​ಬಾಸ್. ಟಿವಿಯಲ್ಲಿ ಕೋಟ್ಯಂತರ ಮಂದಿ ವೀಕ್ಷಕರು ಬಿಗ್​ಬಾಸ್ ವೀಕ್ಷಣೆ ಮಾಡುತ್ತಾರೆ. ಆದರೆ ಇದೀಗ ಒಟಿಟಿಯಲ್ಲಿ ಬಿಗ್​ಬಾಸ್ ಶೋ ಮೊದಲು ಪ್ರಸಾರ ಆಗಲಿದೆ.

ಬಿಗ್ ಬಾಸ್ ಪ್ರಸಾರದಲ್ಲಿ ದೊಡ್ಡ ಬದಲಾವಣೆ; ಒಟಿಟಿಯಲ್ಲಿ ಫಸ್ಟ್​, ಟಿವಿಯಲ್ಲಿ ಆಮೇಲೆ
Bigg Boss Hindi
 ಶ್ರೀಲಕ್ಷ್ಮೀ ಎಚ್
| Edited By: |

Updated on: Jul 08, 2025 | 11:38 AM

Share

ಈಗ ಮತ್ತೆ ಬಿಗ್ ಬಾಸ್ ಶೋ (Bigg Boss Show) ಆರಂಭವಾಗುತ್ತಿದೆ. ಕನ್ನಡ ಮಾತ್ರವಲ್ಲ ಹಿಂದಿಯಲ್ಲೂ ಈ ಶೋ ಪ್ರಸಾರ ಕಾಣಲಿದೆ. ಹಿಂದಿಯಲ್ಲಿ 19ನೇ ಸೀಸನ್ ಈ ಬಾರಿ ಸೆಪ್ಟೆಂಬರ್ ಅಂತ್ಯದ ವೇಳೆಗೆ ಪ್ರಸಾರ ಆಗುವ ನಿರೀಕ್ಷೆ ಇದೆ. ಎಂದಿನಂತೆ ಸಲ್ಮಾನ್ ಖಾನ್ ಅವರು ಈ ಶೋನ ನಡೆಸಿಕೊಡಲಿದ್ದಾರೆ. ವಿಶೇಷ ಎಂದರೆ ಈ ಬಾರಿ ಶೋ ಐದು ತಿಂಗಳು ಇರಲಿದೆ ಎನ್ನಲಾಗುತ್ತಿದೆ. ಈ ಮೂಲಕ ಮನರಂಜನೆ ಹೆಚ್ಚೇ ಇರುವ ನಿರೀಕ್ಷೆ ಇದೆ. ಈ ಮಧ್ಯೆ ಒಂದು ಅಚ್ಚರಿಯ ವಿಚಾರ ಹೊರ ಬಿದ್ದಿದೆ.

ಈ ಬಾರಿ ಹಿಂದಿ ಬಿಗ್ ಬಾಸ್​​ ಪ್ರಸಾರದಲ್ಲಿ ಕೆಲವು ಬದಲಾವಣೆ ಮಾಡಿಕೊಳ್ಳಲು ನಿರ್ಧರಿಸಿಯಾಗಿದೆ ಎನ್ನಲಾಗುತ್ತಿದೆ. ಈ ಮೊದಲೆಲ್ಲ ಶೋ ಟಿವಿ ಹಾಗೂ ಒಟಿಟಿಯಲ್ಲಿ ಒಟ್ಟಿಗೆ ಪ್ರಸಾರ ಕಾಣುತ್ತಿತ್ತು. ಆದರೆ, ಈ ಬಾರಿ ಒಟಿಟಿಗೆ ಹೆಚ್ಚಿನ ಆದ್ಯತೆ ನೀಡಲು ಜಿಯೋ ಹಾಟ್​ಸ್ಟಾರ್​ನಲ್ಲಿ ಶೋ ಮೊದಲು ಪ್ರಸಾರ ಕಾಣಲಿದೆ. ಆ ಬಳಿಕ ಟಿವಿಯಲ್ಲಿ ಬರಲಿದೆ ಎನ್ನಲಾಗಿದೆ.

ಇತ್ತೀಚೆಗೆ ಒಟಿಟಿಗೆ ಹೆಚ್ಚು ಆದ್ಯತೆ ನೀಡುವ ಕೆಲಸ ಆಗುತ್ತಿದೆ. ಈ ಕಾರಣದಿಂದ ಒಟಿಟಿಯಲ್ಲಿ ಮೊದಲು ಎಪಿಸೋಡ್ ಪ್ರಸಾರ ಆಗಲಿದೆ. ಒಂದೂವರೆ ಗಂಟೆಗಳ ಬಳಿಕ ಟಿವಿಯಲ್ಲಿ ಎಪಿಸೋಡ್ ಪ್ರಸಾರ ಕಾಣಲಿದೆ. ಈ ಮೂಲಕ ಡಿಜಿಟಲ್ ಪ್ರೇಕ್ಷಕರಿಗೆ ಹೆಚ್ಚಿನ ಆದ್ಯತೆ ನೀಡುವ ಕೆಲಸ ಆಗುತ್ತಿದೆ.

ಕನ್ನಡದಲ್ಲೂ ಬದಲಾವಣೆ ಆಗುತ್ತದೆಯೇ?

ಈ ಶೋ ಕನ್ನಡದಲ್ಲೂ ಪ್ರಸಾರ ಕಾಣಲು ರೆಡಿ ಆಗಿದೆ. ಸೆಪ್ಟೆಂಬರ್ ಅಂತ್ಯದ ವೇಳೆಗೆ ಶೋ ಪ್ರಸಾರ ಆಗಲಿದೆ. ಹಿಂದಿಯಲ್ಲಿ ಈ ಬದಲಾವಣೆ ತರಲಾಗಿದೆ ಎಂದರೆ ಕನ್ನಡದಲ್ಲೂ ಅದನ್ನೇ ತರುವ ನಿರೀಕ್ಷೆ ಇದೆ. ಹಾಗಾದಲ್ಲಿ ಒಟಿಟಿಯಲ್ಲಿ ಶೋನ ಮೊದಲು ವೀಕ್ಷಿಸಬಹುದಾಗಿದೆ. ಸುದೀಪ್ ಅವರೇ ಈ ಶೋನ ನಡೆಸಿಕೊಡಲಿದ್ದಾರೆ. ಹಿಂದಿಯಲ್ಲಿ ಸಲ್ಮಾನ್ ಖಾನ್ ಅವರು ಈ ಶೋನ ನಡೆಸಿಕೊಡುತ್ತರಾದರೂ, ಆಗಾಗ ಬೇರೆ ಬೇರೆ ಸೆಲೆಬ್ರಿಟಿಗಳು ಬರುವ ನಿರೀಕ್ಷೆ ಇದೆ ಎನ್ನಲಾಗುತ್ತಿದೆ.  ಸದ್ಯ ಕನ್ನಡದಲ್ಲಿ ಯಾವೆಲ್ಲ ಸ್ಪರ್ಧಿಗಳು ಬಿಗ್ ಬಾಸ್​ಗೆ ಬರುತ್ತಾರೆ ಎನ್ನುವ ಕುತೂಹಲ ಮೂಡಿದೆ. ಶೀಘ್ರವೇ ಪ್ರೋಮೋ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ