AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಮೇಜಾನ್​ ಪ್ರೈಂ ವಿಡಿಯೋ’ ಒಟಿಟಿಗೆ ಕಾಲಿಟ್ಟ ಕನ್ನಡದ ‘ಹೊಸ ದಿನಚರಿ’ ಸಿನಿಮಾ

ಪ್ರತಿಯೊಬ್ಬರ ಬದುಕಿನಲ್ಲೂ ಪ್ರೀತಿ ಎಂಬುದು ಖಂಡಿತವಾಗಿಯೂ ಇರುತ್ತದೆ. ಹಾಗಂತ, ಪ್ರೀತಿಸಿದ ವ್ಯಕ್ತಿ ನಮ್ಮ ಜೊತೆ ಕೊನೆಯ ತನಕ ಇರುತ್ತಾರಾ ಎಂಬುದು ದೊಡ್ಡ ಪ್ರಶ್ನೆ. ಈ ರೀತಿಯ ಕಾನ್ಸೆಪ್ಟ್​ನಲ್ಲಿ ‘ಹೊಸ ದಿನಚರಿ’ ಸಿನಿಮಾ ಮೂಡಿಬಂದಿದೆ. ಈ ಚಿತ್ರ ಈಗ ‘ಅಮೇಜಾನ್​ ಪ್ರೈಂ ವಿಡಿಯೋ’ದಲ್ಲಿ ಸ್ಟ್ರೀಮ್​ ಆಗುತ್ತಿದೆ.

‘ಅಮೇಜಾನ್​ ಪ್ರೈಂ ವಿಡಿಯೋ’ ಒಟಿಟಿಗೆ ಕಾಲಿಟ್ಟ ಕನ್ನಡದ ‘ಹೊಸ ದಿನಚರಿ’ ಸಿನಿಮಾ
‘ಹೊಸ ದಿನಚರಿ’ ಸಿನಿಮಾ ಪೋಸ್ಟರ್​
ಮದನ್​ ಕುಮಾರ್​
|

Updated on: Sep 08, 2023 | 11:50 AM

Share

ಅನೇಕ ಹೊಸ ಚಿತ್ರಗಳು (New Kannada Movie) ಒಟಿಟಿಯಲ್ಲಿ ಸದ್ದು ಮಾಡುತ್ತಿವೆ. ಒಟಿಟಿಯಲ್ಲಿ ಜನರು ಇಷ್ಟಪಡುವ ಸಿನಿಮಾಗಳ ಶೈಲಿಯೇ ತುಸು ಭಿನ್ನವಾಗಿರುತ್ತವೆ. ಕನ್ನಡದ ಅನೇಕ ಸಿನಿಮಾಗಳು ಒಟಿಟಿಯಲ್ಲಿ ಲಭ್ಯವಾಗಿವೆ. ಈಗ ಅವುಗಳ ಸಾಲಿಗೆ ‘ಹೊಸ ದಿನಚರಿ’ ಸಿನಿಮಾ (Hosa Dinachari Movie) ಕೂಡ ಸೇರ್ಪಡೆ ಆಗಿದೆ. ಸಾಫ್ಟ್ ವೇರ್ ಕ್ಷೇತ್ರದ ಹಿನ್ನೆಲೆ ಹೊಂದಿರುವ ಕೀರ್ತಿ ಶೇಖರ್ ಮತ್ತು ವೈಶಾಖ್ ಪುಷ್ಪಲತಾ ಅವರ ಮೊದಲ ಪ್ರಯತ್ನವಾಗಿ ಈ ಸಿನಿಮಾ ಮೂಡಿಬಂದಿದೆ. ಈ ಮೊದಲು ಒಂದಷ್ಟು ಶಾರ್ಟ್​ಫಿಲ್ಮ್​ಗಳನ್ನು ನಿರ್ಮಿಸಿದ್ದ ಕೀರ್ತಿ ಅವರು ‘ಹೊಸ ದಿನಚರಿ’ ಸಿನಿಮಾದ ಮೂಲಕ ಡೈರೆಕ್ಟರ್​ ಆಗಿ ಬಡ್ತಿ ಪಡೆದಿದ್ದಾರೆ. ಕೀರ್ತಿ ಅವರಿಗೆ ವೈಶಾಖ್ ಕೂಡ ಸಾಥ್ ನೀಡಿದ್ದಾರೆ. ಇವರಿಬ್ಬರ ಸಾರಥ್ಯದಲ್ಲಿ ಈ ಸಿನಿಮಾ ಮೂಡಿಬಂದಿದೆ.

2022ರ ಡಿಸೆಂಬರ್​ನಲ್ಲಿ ಚಿತ್ರಮಂದಿರಗಳಲ್ಲಿ ‘ಹೊಸ ದಿನಚರಿ’ ಸಿನಿಮಾ ಬಿಡುಗಡೆ ಆಗಿತ್ತು. ಪ್ರೇಕ್ಷಕರಿಂದ ಮತ್ತು ವಿಮರ್ಶಕರಿಂದ ಪ್ರಶಂಸೆ ಪಡೆದುಕೊಂಡಿದ್ದ ಈ ಸಿನಿಮಾ ಈಗ ಒಟಿಟಿ ಅಂಗಳಕ್ಕೆ ಕಾಲಿಟ್ಟಿದೆ. ‘ಅಮೇಜಾನ್​ ಪ್ರೈಂ ವಿಡಿಯೋ’ ಮೂಲಕ ಈ ಸಿನಿಮಾ ವೀಕ್ಷಣೆಗೆ ಲಭ್ಯವಾಗಿದೆ. ಒಟಿಟಿಯಲ್ಲಿ ವೀಕ್ಷಿಸಿದ ಅನೇಕರು ಈ ಸಿನಿಮಾ ಬಗ್ಗೆ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಈ ಚಿತ್ರದ ಕಂಟೆಂಟ್​ ಅನೇಕರಿಗೆ ಇಷ್ಟ ಆಗಿದೆ.

ಇದನ್ನೂ ಓದಿ: ಅಮೇಜಾನ್ ಪ್ರೈಮ್​ ವಿಡಿಯೋ ಮೂಲಕ ಪ್ರಸಾರ ಕಾಣಲಿದೆ ‘ಜೈಲರ್’; ಒಟಿಟಿ ರಿಲೀಸ್ ದಿನಾಂಕ ಘೋಷಣೆ

ಗಂಗಾಧರ್ ಸಾಲಿಮಠ ಅವರು ‘ಹೊಸ ದಿನಚರಿ’ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಮೃತ್ಯುಂಜಯ ಶುಕ್ಲಾ ಮತ್ತು ಅಲೋಕ್ ಚೌರಾಸಿಯಾ ಅವರು ಸಹ ಈ ಸಿನಿಮಾದ ನಿರ್ಮಾಣಕ್ಕೆ ಕೈ ಜೋಡಿಸಿದ್ದಾರೆ. ಬಾಬು ಹಿರಣ್ಣಯ್ಯ, ಅರುಣಾ ಬಾಲರಾಜ್ ಅವರಂತಹ ಅನುಭವಿ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಅವರ ಜೊತೆಗೆ ನಟಿಸಿದ ಬಹುತೇಕ ಎಲ್ಲ ಕಲಾವಿದರು ಹೊಸಬರು. ಚೇತನ್ ವಿಕ್ಕಿ, ದೀಪಕ್ ಸುಬ್ರಹ್ಮಣ್ಯ, ಶ್ರೀಪ್ರಿಯಾ, ಮಂದಾರಾ, ವರ್ಷಾ ಮುಂತಾದವರು ಈ ಚಿತ್ರದಲ್ಲಿ ಅಭಿನಸಿದ್ದಾರೆ. ವೈಶಾಖ್ ವರ್ಮಾ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ಅಶ್ವಿನ್ ಹೇಮಂತ್ ಅವರು ಹಿನ್ನೆಲೆ ಸಂಗೀತ ನೀಡಿದ್ದಾರೆ. ರಂಜಿತ್ ಸೇತು ಅವರು ‘ಹೊಸ ದಿನಚರಿ’ ಚಿತ್ರಕ್ಕೆ ಸಂಕಲನ ಮಾಡಿದ್ದಾರೆ.

ಇದನ್ನೂ ಓದಿ: ಈ ಬಾರಿ ಕನ್ನಡ ಬಿಗ್ ಬಾಸ್ ಒಟಿಟಿ ಸೀಸನ್ ಇರುತ್ತಾ, ಇರಲ್ವಾ? ಇಲ್ಲಿದೆ ಪಕ್ಕಾ ಮಾಹಿತಿ

ಪ್ರತಿಯೊಬ್ಬರ ಬದುಕಿನಲ್ಲೂ ಪ್ರೀತಿ ಎಂಬುದು ಖಂಡಿತವಾಗಿಯೂ ಇರುತ್ತದೆ. ಹಾಗಂತ, ಪ್ರೀತಿಸಿದ ವ್ಯಕ್ತಿ ನಮ್ಮ ಜೊತೆ ಕೊನೆಯ ತನಕ ಇರುತ್ತಾರಾ ಎಂಬುದು ದೊಡ್ಡ ಪ್ರಶ್ನೆ. ಒಂದು ವೇಳೆ ಅವರು ಇಲ್ಲದೇ ಬೇರೊಬ್ಬರು ನಮ್ಮ ಜೀವನದಲ್ಲಿ ಬಂದಾಗ ಏನಾಗುತ್ತದೆ ಎನ್ನುವ ಕಥಾಹಂದರವನ್ನು ‘ಹೊಸ ದಿನಚರಿ’ ಸಿನಿಮಾ ಹೊಂದಿದೆ. ‘ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ಸೋಮವಾರದಿಂದ (ಸೆಪ್ಟೆಂಬರ್​ 4) ಸ್ಟ್ರೀಮ್ ಆಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು