AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಅವಾಂತರ:  ಲೈವ್​ನಲ್ಲಿ ಸಹ ಸ್ಪರ್ಧಿಯ ಬಾಡಿನ ಬೇಕಾಬಿಟ್ಟಿ ಮುಟ್ಟಿದ ಮಾಡೆಲ್ ವಿರುದ್ಧ ಟೀಕೆ

ಈ ಬಾರಿ ಹಲವು ಸೆಲೆಬ್ರಿಟಿಗಳು ಬಿಗ್ ಬಾಸ್ ಮನೆ ಒಳಗೆ ತೆರಳಿದ್ದಾರೆ. ಮಾಡೆಲ್​ಗಳು, ನಟರು ಕೂಡ ಇದ್ದಾರೆ. ಈ ಪೈಕಿ ಮಾಡೆಲ್ ಜದ್ ಹದೀದ್ ಅವರ ವರ್ತನೆ ಬಗ್ಗೆ ಅನೇಕರಿಂದ ಟೀಕೆ ವ್ಯಕ್ತವಾಗಿದೆ.

ಬಿಗ್ ಬಾಸ್ ಅವಾಂತರ:  ಲೈವ್​ನಲ್ಲಿ ಸಹ ಸ್ಪರ್ಧಿಯ ಬಾಡಿನ ಬೇಕಾಬಿಟ್ಟಿ ಮುಟ್ಟಿದ ಮಾಡೆಲ್ ವಿರುದ್ಧ ಟೀಕೆ
ಆಕಾಂಕ್ಷಾ-ಜದ್
Follow us
ರಾಜೇಶ್ ದುಗ್ಗುಮನೆ
|

Updated on: Jun 27, 2023 | 8:55 AM

‘ಬಿಗ್ ಬಾಸ್’ (Bigg Boss) ಅನ್ನೋದು ಸದಾ ವಿವಾದಗಳ ಮೂಲಕ ಸುದ್ದಿ ಆಗುತ್ತಲೇ ಇರುತ್ತದೆ. ಈ ಮೊದಲು ಹಲವು ರೀತಿಯಲ್ಲಿ ವಿವಾದಗಳು ಸೃಷ್ಟಿ ಆಗಿವೆ. ಆದಾಗ್ಯೂ ಈ ಶೋ ನೋಡುವವರ ಸಂಖ್ಯೆ ಕಡಿಮೆ ಆಗಿಲ್ಲ. ಒಂದು ವರ್ಗದ ಜನರು ಈಗಲೂ ಬಿಗ್ ಬಾಸ್ ವೀಕ್ಷಣೆ ಮಾಡುತ್ತಾರೆ. ಈಗ ‘ಹಿಂದಿ ಬಿಗ್ ಬಾಸ್ ಒಟಿಟಿ 2’ (Bigg Boss OTT 2) ಆರಂಭ ಆಗಿದೆ. ಎರಡನೇ ವಾರಕ್ಕೆ ಕಾಲಿಟ್ಟಿರುವ ಈ ಶೋ ಸಾಕಷ್ಟು ಸುದ್ದಿ ಆಗುತ್ತಿದೆ. ಮನೆಯಲ್ಲಿ ಹೈಡ್ರಾಮಾ ನಡೆಯುತ್ತಿದೆ. ಈ ಮಧ್ಯೆ ಮಹಿಳಾ ಸ್ಪರ್ಧಿಯ ಖಾಸಗಿ ಭಾಗವನ್ನು ಮುಟ್ಟಿದ ಆರೋಪ ಪುರುಷ ಸ್ಪರ್ಧಿಯ ಮೇಲೆ ಬಂದಿದೆ. ಈ ವಿಡಿಯೋ ವೈರಲ್ ಆಗುತ್ತಿದೆ.

ಈ ಬಾರಿ ಹಲವು ಸೆಲೆಬ್ರಿಟಿಗಳು ಬಿಗ್ ಬಾಸ್ ಮನೆ ಒಳಗೆ ತೆರಳಿದ್ದಾರೆ. ಮಾಡೆಲ್​ಗಳು, ನಟರು ಕೂಡ ಇದ್ದಾರೆ. ಈ ಪೈಕಿ ಮಾಡೆಲ್ ಜದ್ ಹದೀದ್ ಅವರ ವರ್ತನೆ ಬಗ್ಗೆ ಅನೇಕರಿಂದ ಟೀಕೆ ವ್ಯಕ್ತವಾಗಿದೆ. ಅವರು ಆಕಾಂಕ್ಷಾ ಪುರಿಗೆ  ಮುಜುಗರ ಆಗುವ ರೀತಿಯಲ್ಲಿ ಮುಟ್ಟಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದೆ. ಈ ಬಗ್ಗೆ ಅನೇಕರು ಅಪಸ್ವರ ತೆಗೆದಿದ್ದಾರೆ.

ಜದ್ ಹಾಗೂ ಆಕಾಂಕ್ಷಾ ಮಧ್ಯೆ ಯಾವುದೋ ವಿಚಾರಕ್ಕೆ ಮಾತುಕತೆ ನಡೆಯುತ್ತಾ ಇತ್ತು. ಈ ವೇಳೆ ಆಕಾಂಕ್ಷಾ ಅವರನ್ನು ಜದ್ ಎಳೆದುಕೊಂಡಿದ್ದಾರೆ. ಜದ್ ಅವರ ಕೈ ಎಲ್ಲೆ ಮೀರಿದ್ದು ಆಕಾಂಕ್ಷಾಗೆ ಅರ್ಥವಾಗಿದೆ. ‘ಆ ರೀತಿ ಮಾಡಬೇಡಿ. ನನಗೆ ಯಾರಾದರೂ ಮುಟ್ಟಿದರೆ ಆಗುವುದಿಲ್ಲ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಡ್ರಗ್​ ಕೇಸ್​ನಲ್ಲಿ ಅರೆಸ್ಟ್ ಆದ ನಿರ್ಮಾಪಕನಿಗೆ ಚಿತ್ರರಂಗದವರೇ ಗ್ರಾಹಕರು? ಬಿಗ್ ಬಾಸ್ ಸ್ಪರ್ಧಿಯ ಹೆಸರು ರಿವೀಲ್

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ. ಇದನ್ನು ನೋಡಿ ಹಲವರು ಜದ್ ವಿರುದ್ಧ ಕಿಡಿಕಾರಿದ್ದಾರೆ. ಅನೇಕರು ಬಿಗ್ ಬಾಸ್ ಶೋ ವಿರುದ್ಧ ಕೋಪಗೊಂಡಿದ್ದಾರೆ. ಶೋ ಆರಂಭಕ್ಕೂ ಮೊದಲು ಮಾತನಾಡಿದ್ದ ಸಲ್ಮಾನ್ ಖಾನ್ ಯಾವುದೂ ಮಿತಿ ಮೀರದಂತೆ ನೋಡಿಕೊಳ್ಳುತ್ತೇವೆ ಎಂದು ಹೇಳಿದ್ದರು. ಅನೇಕರು ಈ ಬಗ್ಗೆ ಪ್ರಶ್ನೆ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ
ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ
ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
Live: ರಕ್ಷಣಾ ಇಲಾಖೆಯಿಂದ ಸುದ್ದಿಗೋಷ್ಠಿ
Live: ರಕ್ಷಣಾ ಇಲಾಖೆಯಿಂದ ಸುದ್ದಿಗೋಷ್ಠಿ
ದೇಶಕ್ಕಾಗಿ ಏನು ಮಾಡಿದರೂ ಕಮ್ಮಿ: ಜಮೀರ್ ಅಹ್ಮದ್, ಸಚಿವ
ದೇಶಕ್ಕಾಗಿ ಏನು ಮಾಡಿದರೂ ಕಮ್ಮಿ: ಜಮೀರ್ ಅಹ್ಮದ್, ಸಚಿವ
ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!
ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!
ಪ್ರಧಾನಿ ಮೋದಿ ತೆಗೆದುಕೊಳ್ಳುತ್ತಿರುವ ಕ್ರಮಗಳ ಜೊತೆಗಿದ್ದೇವೆ: ಮುಸಲ್ಮಾನರು
ಪ್ರಧಾನಿ ಮೋದಿ ತೆಗೆದುಕೊಳ್ಳುತ್ತಿರುವ ಕ್ರಮಗಳ ಜೊತೆಗಿದ್ದೇವೆ: ಮುಸಲ್ಮಾನರು
ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ
ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ