AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಪಾಳಮೋಕ್ಷ ಕಾಂಟ್ರವರ್ಸಿ: ಟೀಕೆ ಮಾಡಿದವರಿಗೆ ‘ಜೈ ಭೀಮ್​’ ನಟ ಪ್ರಕಾಶ್​ ರಾಜ್​ ಖಡಕ್​ ತಿರುಗೇಟು

Jai Bhim | Prakash Raj: ಹಿಂದಿ ಹೇರಿಕೆ ಬಗ್ಗೆ ಇಡೀ ದಕ್ಷಿಣ ಭಾರತದಲ್ಲಿ ವಿರೋಧ ವ್ಯಕ್ತವಾಗುತ್ತಲೇ ಇದೆ. ನಿಜಜೀವನದಲ್ಲಿ ಪ್ರಕಾಶ್​ ರಾಜ್​ ಕೂಡ ಹಿಂದಿ ಹೇರಿಕೆಯನ್ನು ಖಂಡಿಸುತ್ತಲೇ ಬಂದಿದ್ದಾರೆ. ‘ಜೈ ಭೀಮ್​’ ಸಿನಿಮಾದ ಕಪಾಳಮೋಕ್ಷ ದೃಶ್ಯ ಸಹ ಅದನ್ನೇ ಪ್ರತಿಬಿಂಬಿಸಿದೆ.

ಕಪಾಳಮೋಕ್ಷ ಕಾಂಟ್ರವರ್ಸಿ: ಟೀಕೆ ಮಾಡಿದವರಿಗೆ ‘ಜೈ ಭೀಮ್​’ ನಟ ಪ್ರಕಾಶ್​ ರಾಜ್​ ಖಡಕ್​ ತಿರುಗೇಟು
ಪ್ರಕಾಶ್​ ರಾಜ್​
TV9 Web
| Updated By: ಮದನ್​ ಕುಮಾರ್​|

Updated on: Nov 06, 2021 | 8:58 PM

Share

ನಟ ಪ್ರಕಾಶ್​ ರಾಜ್​ ಅವರು ಒಂದಿಲ್ಲೊಂದು ಕಾರಣಕ್ಕೆ ವಿವಾದ ಮಾಡಿಕೊಳ್ಳುತ್ತಲೇ ಇರುತ್ತಾರೆ. ರಾಜಕೀಯದ ನಿಲುವುಗಳಿಂದ ಅವರನ್ನು ಟೇಕೆ ಮಾಡುವವರು ಅನೇಕರಿದ್ದಾರೆ. ಇತ್ತೀಚೆಗೆ ಮಾ ಎಲೆಕ್ಷನ್​ ಸಲುವಾಗಿ ಪ್ರಕಾಶ್​ ರಾಜ್​ ಅವರು ಕೆಲವರ ವಿರೋಧ ಕಟ್ಟಿಕೊಂಡಿದ್ದರು. ಆ ವಿಚಾರ ತಣ್ಣಗಾಯಿತು ಎನ್ನುವಾಗಲೇ ಮತ್ತೊಂದು ವಿವಾದ ಮುನ್ನೆಲೆಗೆ ಬಂದಿದೆ. ‘ಜೈ ಭೀಮ್​’ ಸಿನಿಮಾದಲ್ಲಿ ಅವರು ನಟಿಸಿದ ಒಂದು ದೃಶ್ಯವನ್ನು ಕೆಲವರು ಟೀಕಿಸುತ್ತಿದ್ದಾರೆ. ಅಂಥವರಿಗೆ ಪ್ರಕಾಶ್​ ರಾಜ್​ ಖಡಕ್​ ತಿರುಗೇಟು ನೀಡಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ ವಿವಾದದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಸೂರ್ಯ ನಟನೆಯ ‘ಜೈ ಭೀಮ್​’ ಸಿನಿಮಾದಲ್ಲಿ ಪ್ರಕಾಶ್​ ರೈ ಅವರು ಪೊಲೀಸ್​ ಅಧಿಕಾರಿ ಪಾತ್ರ ಮಾಡಿದ್ದಾರೆ. ತನಿಖೆ ಸಮಯದಲ್ಲಿ ಹಿಂದಿ ಮಾತನಾಡಿದ ವ್ಯಕ್ತಿಗೆ ಅವರು ಕಪಾಳಮೋಕ್ಷ ಮಾಡುತ್ತಾರೆ. ಅಲ್ಲದೇ, ತಮಿಳಿನಲ್ಲಿ ಮಾತನಾಡುವಂತೆ ತಾಕೀತು ಮಾಡುತ್ತಾರೆ. ಈ ದೃಶ್ಯಕ್ಕೆ ಕೆಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ‘ಜೈ ಭೀಮ್​ ರೀತಿಯ ಸಿನಿಮಾ ನೋಡಿದ ಬಳಿಕ ಕೆಲವರಿಗೆ ಬುಡಕಟ್ಟು ಜನರ ಕಷ್ಟ ಕಾಣಿಸುವುದಿಲ್ಲ. ಅನ್ಯಾಯದ ಭೀಕರತೆ ಕಾಣಿಸುವುದೇ ಇಲ್ಲ. ಕಪಾಳಮೋಕ್ಷ ಮಾಡಿದ್ದನ್ನು ಮಾತ್ರ ಅವರು ನೋಡುತ್ತಾರೆ. ಅಷ್ಟೇ ಅವರಿಗೆ ಅರ್ಥವಾಗಿರುವುದು. ಇದರಿಂದ ಅವರ ಉದ್ದೇಶ ಏನು ಎಂಬುದು ಬಯಲಾಗುತ್ತದೆ’ ಎಂದು ಪ್ರಕಾಶ್​ ರಾಜ್​ ಹೇಳಿದ್ದಾರೆ.

‘ಕೆಲವರಿಗೆ ಈ ದೃಶ್ಯದಿಂದ ಕಿರಿಕಿರಿ ಆಗಿದೆ. ಯಾಕೆಂದರೆ ಅದರಲ್ಲಿ ನಟಿಸಿರುವುದು ಪ್ರಕಾಶ್​ ರಾಜ್​. ಅಂಥವರ ಬಣ್ಣ ಬಯಲಾಗಿದೆ. ಬುಡಕಟ್ಟು ಜನರ ನೋವು ಅವರಿಗೆ ನಾಟುವುದಿಲ್ಲ ಎಂದಾದರೆ ಅಂಥ ವ್ಯಕ್ತಿಗಳಿಗೆ ಪ್ರತಿಕ್ರಿಯೆ ನೀಡುವುದರಲ್ಲ ಅರ್ಥವಿಲ್ಲ’ ಎಂದಿದ್ದಾರೆ ಪ್ರಕಾಶ್​ ರಾಜ್​.

ಹಿಂದಿ ಹೇರಿಕೆ ಬಗ್ಗೆ ಇಡೀ ದಕ್ಷಿಣ ಭಾರತದಲ್ಲಿ ವಿರೋಧ ವ್ಯಕ್ತವಾಗುತ್ತಲೇ ಇದೆ. ನಿಜಜೀವನದಲ್ಲಿ ಪ್ರಕಾಶ್​ ರಾಜ್​ ಕೂಡ ಹಿಂದಿ ಹೇರಿಕೆಯನ್ನು ಖಂಡಿಸುತ್ತಲೇ ಬಂದಿದ್ದಾರೆ. ‘ಜೈ ಭೀಮ್​’ ಸಿನಿಮಾದ ಕಪಾಳಮೋಕ್ಷ ದೃಶ್ಯ ಕೂಡ ಅದನ್ನೇ ಪ್ರತಿಬಿಂಬಿಸಿದೆ. ಅದೇ ಕಾರಣಕ್ಕಾಗಿ ಇಂಥ ದೃಶ್ಯದಲ್ಲಿ ನಟಿಸಲು ಪ್ರಕಾಶ್​ ರಾಜ್​ ಒಪ್ಪಿಕೊಂಡರು. ತಮ್ಮ ಆ ನಿರ್ಧಾರಕ್ಕೆ ಅವರು ಈಗಲೂ ಬದ್ಧರಾಗಿದ್ದಾರೆ.

ನ.2ರಂದು ಅಮೇಜಾನ್​ ಪ್ರೈಮ್​ ವಿಡಿಯೋ ಮೂಲಕ ‘ಜೈ ಭೀಮ್​’ ಸಿನಿಮಾ ಬಿಡುಗಡೆ ಆಯಿತು. ಪ್ರೇಕ್ಷಕರಿಂದ ಈ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ನೈಜ ಘಟನೆ ಆಧರಿಸಿ ಈ ಸಿನಿಮಾ ತಯಾರಾಗಿದೆ. ಓಟಿಟಿ ಪ್ಲಾಟ್​ಫಾರ್ಮ್​ನಲ್ಲಿ ‘ಸೂರರೈ ಪೋಟ್ರು’ ಬಳಿಕ ಸೂರ್ಯ ಅವರಿಗೆ ಮತ್ತೊಂದು ಗೆಲುವು ಸಿಕ್ಕಂತಾಗಿದೆ.

ಇದನ್ನೂ ಓದಿ:

ಪುನೀತ್​ ಸಾವಿನ ಬಗ್ಗೆ ಮೂಡಿದೆ ಅನುಮಾನ; ವೈದ್ಯರ ವಿರುದ್ಧ ದೂರು ದಾಖಲು

ಕೆನ್ನೆಗೆ ಬಾರಿಸಿ ಸುದ್ದಿಯಾದ ಪ್ರಕಾಶ್ ರೈ; ನಟನ ಬೆಂಬಲಕ್ಕೆ ನಿಂತ ದಕ್ಷಿಣ ಭಾರತದ ಮಂದಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ