AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೇಜಾನ್ ಪ್ರೈಮ್​ ವಿಡಿಯೋ ಮೂಲಕ ಪ್ರಸಾರ ಕಾಣಲಿದೆ ‘ಜೈಲರ್’; ಒಟಿಟಿ ರಿಲೀಸ್ ದಿನಾಂಕ ಘೋಷಣೆ

‘ಜೈಲರ್’ ಸಿನಿಮಾ ಟೀಸರ್ ಹಾಗೂ ಟ್ರೇಲರ್ ಮೂಲಕ ಸದ್ದು ಮಾಡಿತು. ಈ ಚಿತ್ರದ ‘ಕಾವಾಲಾ..’ ಹಾಡು ಕೂಡ ಸಖತ್ ಸದ್ದು ಮಾಡಿತ್ತು. ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನ ಕಮಾಲ್ ಮಾಡಿತು. ರಜನಿಕಾಂತ್ ನಟನೆಗೆ ಅಭಿಮಾನಿಗಳು ಫಿದಾ ಆದರು. ಈಗ ಸಿನಿಮಾದ ಒಟಿಟಿ ರಿಲೀಸ್ ದಿನಾಂಕ ರಿವೀಲ್ ಆಗಿದೆ.

ಅಮೇಜಾನ್ ಪ್ರೈಮ್​ ವಿಡಿಯೋ ಮೂಲಕ ಪ್ರಸಾರ ಕಾಣಲಿದೆ ‘ಜೈಲರ್’; ಒಟಿಟಿ ರಿಲೀಸ್ ದಿನಾಂಕ ಘೋಷಣೆ
ರಜನಿಕಾಂತ್
ರಾಜೇಶ್ ದುಗ್ಗುಮನೆ
|

Updated on: Sep 02, 2023 | 11:45 AM

Share

ಆಗಸ್ಟ್ 10ರಂದು ರಿಲೀಸ್ ಆದ ‘ಜೈಲರ್’ ಸಿನಿಮಾ ಭರ್ಜರಿ ಗಳಿಕೆ ಮಾಡಿದೆ. ಬಾಕ್ಸ್ ಆಫೀಸ್​ನಲ್ಲಿ ಈ ಚಿತ್ರ 650 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಚಿತ್ರದ ಮೂಲಕ ರಜನಿಕಾಂತ್ ಅವರ ವೃತ್ತಿ ಜೀವನದಲ್ಲಿ ಮತ್ತೊಂದು ಹಿಟ್ ಸಿನಿಮಾ ಸೇರ್ಪಡೆ ಆಗಿದೆ. ಈಗ ‘ಜೈಲರ್’ (Jailer Movie) ಸಿನಿಮಾದ ಒಟಿಟಿ ರಿಲೀಸ್ ದಿನಾಂಕ ಘೋಷಣೆ ಆಗಿದೆ. ಅಮೇಜಾನ್ ಪ್ರೈಮ್ ವಿಡಿಯೋ (Amazon Prime Video) ಮೂಲಕ ಚಿತ್ರ ಪ್ರಸಾರ ಕಾಣಲಿದೆ. ಚಿತ್ರವನ್ನು ಒಟಿಟಿಯಲ್ಲಿ ನೋಡಬೇಕು ಎಂದು ಕಾದವರಿಗೆ ಈ ಘೋಷಣೆ ಖುಷಿ ನೀಡಿದೆ.

‘ಜೈಲರ್’ ಸಿನಿಮಾ ಟೀಸರ್ ಹಾಗೂ ಟ್ರೇಲರ್ ಮೂಲಕ ಸದ್ದು ಮಾಡಿತು. ಈ ಚಿತ್ರದ ‘ಕಾವಾಲಾ..’ ಹಾಡು ಕೂಡ ಸಖತ್ ಸದ್ದು ಮಾಡಿತ್ತು. ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನ ಕಮಾಲ್ ಮಾಡಿತು. ರಜನಿಕಾಂತ್ ನಟನೆಗೆ ಅಭಿಮಾನಿಗಳು ಫಿದಾ ಆದರು. 72ರ ವಯಸ್ಸಿನಲ್ಲೂ ಅವರು ಅದ್ಭುತವಾಗಿ ನಟಿಸಿದ್ದಾರೆ. ಅವರ ಎನರ್ಜಿಗೆ ಫ್ಯಾನ್ಸ್ ಮಾರು ಹೋಗಿದ್ದಾರೆ. ‘ಜೈಲರ್’ ಚಿತ್ರ ಸೆಪ್ಟೆಂಬರ್ 7ರಂದು ಪ್ರಸಾರ ಕಾಣಲಿದೆ ಎಂದು ಅಮೇಜಾನ್ ಪ್ರೈಮ್ ವಿಡಿಯೋ ಮಾಹಿತಿ ನೀಡಿದೆ.

‘ಸನ್ ಪಿಕ್ಚರ್ಸ್’ ‘ಜೈಲರ್’ ಸಿನಿಮಾ ನಿರ್ಮಾಣ ಮಾಡಿದೆ. ಈ ಕಾರಣಕ್ಕೆ ‘ಸನ್ ನೆಕ್ಸ್ಟ್​’ ಒಟಿಟಿ ಮೂಲಕ ಈ ಸಿನಿಮಾ ರಿಲೀಸ್ ಆಗಬಹುದು ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಅದು ಸುಳ್ಳಾಗಿದೆ. ಅಮೇಜಾನ್ ಪ್ರೈಮ್ ವಿಡಿಯೋ ದೊಡ್ಡ ಮೊತ್ತಕ್ಕೆ ‘ಜೈಲರ್’ ಚಿತ್ರದ ಒಟಿಟಿ ಹಕ್ಕನ್ನು ಪಡೆದಿದೆ. ತಮಿಳು, ಕನ್ನಡ, ತೆಲುಗು, ಮಲಯಾಳಂ ಹಾಗೂ ಹಿಂದಿಯಲ್ಲಿ ಸಿನಿಮಾ ಪ್ರಸಾರ ಕಾಣಲಿದೆ.

ಇದನ್ನೂ ಓದಿ: ‘ಜೈಲರ್’ ಗೆದ್ದ ಖುಷಿಯಲ್ಲಿ ರಜನಿಗೆ 100 ಕೋಟಿ ರೂ. ಚೆಕ್ ಕೊಟ್ಟ ಕಲಾನಿಧಿ ಮಾರನ್; ಒಟ್ಟೂ ಸಂಭಾವನೆ ಎಷ್ಟು?

‘ಜೈಲರ್’ ಸಿನಿಮಾದಲ್ಲಿ ರಜನಿಕಾಂತ್ ಜೊತೆ ಇನ್ನೂ ಅನೇಕ ಕಲಾವಿದರು ನಟಿಸಿದ್ದಾರೆ. ಶಿವರಾಜ್​ಕುಮಾರ್ ಮಾಡಿರುವ ನರಸಿಂಹ ಹೆಸರಿನ ಅತಿಥಿ ಪಾತ್ರ ಗಮನ ಸೆಳೆದಿದೆ. ಮೋಹನ್​ಲಾಲ್, ಜಾಕಿ ಶ್ರಾಫ್, ತಮನ್ನಾ ಮಾಡಿರುವ ಪಾತ್ರಗಳು ಕೂಡ ಗಮನ ಸೆಳೆದಿವೆ. ಯೋಗಿ ಬಾಬು ಕಾಮಿಡಿ ಜನರಿಗೆ ಇಷ್ಟವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ