AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜನ ನಾಯಗನ್’ ಸಿನಿಮಾ ಲೀಕ್, ದಿಟ್ಟ ಹೆಜ್ಜೆಗೆ ಮುಂದಾದ ಕೆವಿಎನ್?

Jana Nayagan: ರಾಜಕೀಯ ಉದ್ದೇಶದಿಂದಾಗಿ ಸಿಬಿಎಫ್​​ಸಿ, ಕ್ಷುಲ್ಲಕ ಕಾರಣ ನೀಡಿ ‘ಜನ ನಾಯಗನ್’ ಸಿನಿಮಾ ಬಿಡುಗಡೆ ಆಗದಂತೆ ತಡೆದು ನಿಲ್ಲಿಸಿದೆ. ವಿಜಯ್ ಅವರು ರಾಜಕೀಯಕ್ಕೆ ಸ್ಪರ್ಧಿಸಿ, ಇದು ತಮ್ಮ ಕೊನೆಯ ಸಿನಿಮಾ ಎಂದು ಹೇಳಿದ್ದು, ಈ ಸಿನಿಮಾವನ್ನು ತಮ್ಮ ರಾಜಕೀಯ ಪಕ್ಷದ ಪರೋಕ್ಷ ಪ್ರಚಾರಕ್ಕೆ ಬಳಸಿರುವ ಸಾಧ್ಯತೆ ಇದೆಯೆಂಬ ಕಾರಣಕ್ಕೆ ವಿಜಯ್ ಅವರ ರಾಜಕೀಯ ಎದುರಾಳಿಗಳು ಪ್ರಭಾವ ಬಳಸಿ ಸಿನಿಮಾ ಬಿಡುಗಡೆ ಆಗದಂತೆ ತಡೆದಿದ್ದಾರೆ.

‘ಜನ ನಾಯಗನ್’ ಸಿನಿಮಾ ಲೀಕ್, ದಿಟ್ಟ ಹೆಜ್ಜೆಗೆ ಮುಂದಾದ ಕೆವಿಎನ್?
Jana Nayagan
ಮಂಜುನಾಥ ಸಿ.
|

Updated on: Apr 10, 2026 | 1:09 PM

Share

ದಳಪತಿ ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾಕ್ಕೆ ಆಗುತ್ತಿರುವ ಅನ್ಯಾಯ, ಕಳೆದ ಕೆಲ ವರ್ಷಗಳಲ್ಲಿ ಇನ್ಯಾವ ಸಿನಿಮಾಕ್ಕೂ ಆಗಿಲ್ಲ. ಕೇವಲ ರಾಜಕೀಯ ಉದ್ದೇಶದಿಂದಾಗಿ ಸಿಬಿಎಫ್​​ಸಿ, ಕ್ಷುಲ್ಲಕ ಕಾರಣ ನೀಡಿ ‘ಜನ ನಾಯಗನ್’ ಸಿನಿಮಾ ಬಿಡುಗಡೆ ಆಗದಂತೆ ತಡೆದು ನಿಲ್ಲಿಸಿದೆ. ವಿಜಯ್ ಅವರು ರಾಜಕೀಯಕ್ಕೆ ಸ್ಪರ್ಧಿಸಿ, ಇದು ತಮ್ಮ ಕೊನೆಯ ಸಿನಿಮಾ ಎಂದು ಹೇಳಿದ್ದು, ಈ ಸಿನಿಮಾವನ್ನು ತಮ್ಮ ರಾಜಕೀಯ ಪಕ್ಷದ ಪರೋಕ್ಷ ಪ್ರಚಾರಕ್ಕೆ ಬಳಸಿರುವ ಸಾಧ್ಯತೆ ಇದೆಯೆಂಬ ಕಾರಣಕ್ಕೆ ವಿಜಯ್ ಅವರ ರಾಜಕೀಯ ಎದುರಾಳಿಗಳು ಪ್ರಭಾವ ಬಳಸಿ ಸಿನಿಮಾ ಬಿಡುಗಡೆ ಆಗದಂತೆ ತಡೆದಿದ್ದಾರೆ.

‘ಜನ ನಾಯಗನ್’ ಬಿಡುಗಡೆಯನ್ನು ಅನ್ಯಾಯವಾಗಿ ತಡೆದ ಬೆನ್ನಲ್ಲೆ ಇದೀಗ ಸಿನಿಮಾವನ್ನು ಆನ್​​ಲೈನ್​​ನಲ್ಲಿ ಲೀಕ್ ಮಾಡಿ, ಸಿನಿಮಾಕ್ಕೆ ಭಾರಿ ಪೆಟ್ಟು ನೀಡಲಾಗಿದೆ. ಸಿನಿಮಾದ ಹಲವು ದೃಶ್ಯಗಳು ಬಿಡಿ-ಬಿಡಿಯಾಗಿ ಹಾಗೂ ಕೆಲವು ಸೈಟ್​​ಗಳಲ್ಲಿ ಸಿನಿಮಾದ ಇಡೀ ಲಿಂಕ್ ಅನ್ನು ಪೋಸ್ಟ್ ಮಾಡಿ ಲೀಕ್ ಮಾಡಲಾಗಿದೆ. ಇದು ಚಿತ್ರತಂಡಕ್ಕೆ ಆತಂಕ ತಂದಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿನಿಮಾದ ನಿರ್ದೇಶಕ ಎಚ್ ವಿನೋದ್, ಸಿನಿಮಾದ ಲೀಕ್ ಆಗಿರುವ ದೃಶ್ಯಗಳನ್ನು ಶೇರ್ ಮಾಡದಂತೆ ಮನವಿ ಮಾಡಿದ್ದಾರೆ. ಸಿನಿಮಾದ ನಿರ್ಮಾಣ ಸಂಸ್ಥೆ ಕೆವಿಎನ್ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಸಿನಿಮಾದ ಲೀಕ್ ಹಿಂದೆ ಸೆನ್ಸಾರ್ ಮಂಡಳಿ ಇದೆ ಎಂದು ವಿಜಯ್ ಅವರ ಅಭಿಮಾನಿಗಳು ಆರೋಪಿಸುತ್ತಿದ್ದಾರೆ. ಇನ್ನು ಕೆಲವರು, ಚುನಾವಣೆ ಪ್ರಚಾರ ಸಿಗಲೆಂದು ವಿಜಯ್ ಅಭಿಮಾನಿಗಳೇ ‘ಜನ ನಾಯಗನ್’ ಸಿನಿಮಾ ಲೀಕ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಒಟ್ಟಾರೆ ಸಿನಿಮಾ ಲೀಕ್ ಆಗಿದೆ, ಇದರಿಂದ ಯಾರಿಗೆ ಲಾಭವಾಗುತ್ತದೆಯೋ ತಿಳಿಯದು ಆದರೆ ನಿರ್ಮಾಪಕರಿಗಂತೂ ಭಾರಿ ನಷ್ಟವೇ ಆಗಲಿದೆ.

ಇದನ್ನೂ ಓದಿ:ದಳಪತಿ ವಿಜಯ್​​ಗೆ ಕೂಲ್​​ಡ್ರಿಂಗ್ ಕೊಟ್ಟ ಅಭಿಮಾನಿ: ವಿಡಿಯೋ ನೋಡಿ

ಸಿನಿಮಾ ಲೀಕ್ ಆಗಿರುವ ಕಾರಣ, ಹೆಚ್ಚಿನ ಡ್ಯಾಮೇಜ್ ಆಗುವ ಮುಂಚೆ ಸಿನಿಮಾವನ್ನು ಒಟಿಟಿಯಲ್ಲಿ ಬಿಡುಗಡೆ ಮಾಡಲು ನಿರ್ಮಾಣ ಸಂಸ್ಥೆ ಮುಂದಾಗಿದೆ ಎನ್ನಲಾಗುತ್ತಿದೆ. ಆದರೆ ಒಟಿಟಿ ಬಿಡುಗಡೆಗೂ ಸಹ ಚುನಾವಣಾ ನೀತಿ ಸಂಹಿತೆ ಅಡ್ಡ ಬರುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಕೆವಿಎನ್ ನಿರ್ಮಾಣ ಸಂಸ್ಥೆಯು ‘ಜನ ನಾಯಗನ್’ ಸಿನಿಮಾದ ಮೇಲೆ ಸುಮಾರು 400 ಕೋಟಿ ಹೂಡಿಕೆ ಮಾಡಿದೆ. ಜನವರಿ ತಿಂಗಳಲ್ಲೇ ಈ ಸಿನಿಮಾ ಬಿಡುಗಡೆ ಆಗಬೇಕಿತ್ತು. ಆದರೆ ಸಿಬಿಎಫ್​​ಸಿಯು ಕ್ಷುಲ್ಲಕ ಕಾರಣ ನೀಡಿ ಸಿನಿಮಾಕ್ಕೆ ಸಿಬಿಎಫ್​​ಸಿ ಪ್ರಮಾಣ ಪತ್ರ ನೀಡಲಿಲ್ಲ. ಬಳಿಕ ನ್ಯಾಯಾಲಯದಲ್ಲಿಯೂ ಸಹ ಕೆವಿಎನ್​​ಗೆ ‘ನ್ಯಾಯ’ ದೊರಕಲಿಲ್ಲ. ಇದೀಗ ಚುನಾವಣೆ ಬಂದಿರುವ ಕಾರಣ ನೀತಿ ಸಂಹಿತೆ ಜಾರಿಯಲ್ಲಿದ್ದು, ಸಿನಿಮಾದ ಬಿಡುಗಡೆ ಇನ್ನಷ್ಟು ತಡವಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಬೆಂಗಳೂರು: ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!
ಬೆಂಗಳೂರು: ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!