AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಗಸ್ಟ್ 15ಕ್ಕೆ ಒಟಿಟಿಯಲ್ಲಿ ಬರಲಿದೆ ‘ಜಾನಕಿ vs ಸ್ಟೇಟ್ ಆಫ್ ಕೇರಳ’ ಸಿನಿಮಾ

ಹಲವು ಕಾರಣಗಳಿಂದಾಗಿ ‘ಜಾನಕಿ vs ಸ್ಟೇಟ್ ಆಫ್ ಕೇರಳ’ ಸಿನಿಮಾ ಕೌತುಕ ಮೂಡಿಸಿತ್ತು. ಚಿತ್ರಮಂದಿರದಲ್ಲಿ ತೆರೆಕಂಡು ಉತ್ತಮ ವಿಮರ್ಶೆ ಪಡೆದ ಈ ಸಿನಿಮಾ ಈಗ ಒಟಿಟಿಗೆ ಎಂಟ್ರಿ ನೀಡುತ್ತಿದೆ. ಮಲಯಾಳಂ, ಕನ್ನಡ, ತೆಲುಗು, ತಮಿಳು ಮತ್ತು ಹಿಂದಿ ಭಾಷೆಯಲ್ಲಿ ವೀಕ್ಷಣೆಗೆ ಲಭ್ಯವಾಗಲಿದೆ. ಆ ಕುರಿತು ಇಲ್ಲಿದೆ ಮಾಹಿತಿ..

ಆಗಸ್ಟ್ 15ಕ್ಕೆ ಒಟಿಟಿಯಲ್ಲಿ ಬರಲಿದೆ ‘ಜಾನಕಿ vs ಸ್ಟೇಟ್ ಆಫ್ ಕೇರಳ’ ಸಿನಿಮಾ
Anupama Parameswaran, Suresh Gopi
ಮದನ್​ ಕುಮಾರ್​
|

Updated on: Aug 05, 2025 | 8:23 PM

Share

ಬಿಡುಗಡೆಗೂ ಮುನ್ನ ‘ಜಾನಕಿ vs ಸ್ಟೇಟ್ ಆಫ್ ಕೇರಳ’ (Janaki V vs State of Kerala) ಸಿನಿಮಾ ಒಂದಷ್ಟು ವಿವಾದಕ್ಕೆ ಕಾರಣ ಆಗಿತ್ತು. ಜುಲೈ 17ರಂದು ಬಿಡುಗಡೆ ಆದ ಸಿನಿಮಾದಲ್ಲಿ ಕೋರ್ಟ್​ ರೂಮ್ ಡ್ರಾಮಾ ಇದೆ. ಮಲಯಾಳಂ ನಟ, ಕೇಂದ್ರ ಸಚಿವ ಸುರೇಶ್ ಗೋಪಿ ಅವರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಖ್ಯಾತ ನಟಿ ಅನುಪಮಾ ಪರಮೇಶ್ವರನ್ (Anupama Parameswaran) ಕೂಡ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಚಿತ್ರಮಂದಿರದಲ್ಲಿ ಉತ್ತಮ ವಿಮರ್ಶೆ ಪಡೆದ ಈ ಸಿನಿಮಾ ಈಗ ಒಟಿಟಿಗೆ ಬರಲು ಸಜ್ಜಾಗಿದೆ. ಹೌದು, ‘ಜಾನಕಿ vs ಸ್ಟೇಟ್ ಆಫ್ ಕೇರಳ’ ಸಿನಿಮಾ ‘ಜೀ5’ (Zee5) ಮೂಲಕ ಪ್ರಸಾರ ಆಗಲಿದೆ. ಆಗಸ್ಟ್ 15ರಿಂದ ಈ ಸಿನಿಮಾ ವೀಕ್ಷಣೆಗೆ ಲಭ್ಯವಾಗಲಿದೆ.

ಪ್ರವೀಣ್ ನಾರಾಯಣನ್ ಅವರು ಕಥೆ ಬರೆದು ‘ಜಾನಕಿ vs ಸ್ಟೇಟ್ ಆಫ್ ಕೇರಳ’ ಸಿನಿಮಾವನ್ನು ನಿರ್ದೇಶಿಸಿದ್ದಾರೆ. ಜೆ. ಫಣೀಂದ್ರ ಕುಮಾರ್ ಅವರು ನಿರ್ಮಾಣ ಮಾಡಿದ್ದಾರೆ. ಸೇತುರಾಮನ್ ನಾಯರ್ ಕಂಕೋಲ್ ಅವರು ಸಹ-ನಿರ್ಮಾಪಕರಾಗಿದ್ದಾರೆ. ಸುರೇಶ್ ಗೋಪಿ, ಅನುಪಮಾ ಪರಮೇಶ್ವರನ್ ಮಾತ್ರವಲ್ಲದೇ ದಿವ್ಯ ಪಿಳ್ಳೈ, ಅಸ್ಕರ್ ಅಲಿ, ಶ್ರುತಿ ರಾಮಚಂದ್ರನ್, ಮಾಧವ್ ಸುರೇಶ್ ಗೋಪಿ, ಬೈಜು ಸಂತೋಷ್ ಕೂಡ ಈ ಸಿನಿಮಾದಲ್ಲಿ ಇದ್ದಾರೆ.

ಮಲಯಾಳಂ ಭಾಷೆಯ ಈ ಸಿನಿಮಾ ಈಗ ಕನ್ನಡ, ತಮಿಳು, ತೆಲುಗು, ಹಿಂದಿಗೆ ಡಬ್ ಆಗಿ ಒಟಿಟಿಯಲ್ಲಿ ಬಿಡುಗಡೆ ಆಗಲಿದೆ. ಆ ಮೂಲಕ ಹೆಚ್ಚಿನ ಪ್ರೇಕ್ಷಕರನ್ನು ತಲುಪಲಿದೆ. ಕಾನೂನು ವ್ಯವಸ್ಥೆಯ ಬಗ್ಗೆ ಈ ಸಿನಿಮಾದಲ್ಲಿ ಕಥೆ ಇದೆ. ಕಥಾನಾಯಕಿ ಜಾನಕಿ ಬಾಳಲ್ಲಿ ಒಂದು ಘಟನೆ ನಡೆಯುತ್ತದೆ. ಈ ವೇಳೆ ಆಕೆ ನ್ಯಾಯಕ್ಕಾಗಿ ಹೋರಾಡುತ್ತಾಳೆ. ಮುಂದೇನಾಗುತ್ತದೆ ಎಂಬುದು ಸಸ್ಪೆನ್ಸ್.

ಒಟಿಟಿ ಬಿಡುಗಡೆ ಬಗ್ಗೆ ಜೀ5 ತಮಿಳು ಹಾಗೂ ಮಲಯಾಳಂ ಮಾರ್ಕೆಟಿಂಗ್ ಮುಖ್ಯಸ್ಥ ಲಾಯ್ಡ್ ಸಿ ಕ್ಸೇವಿಯರ್ ಮಾತನಾಡಿ, ‘ಈ ಸಿನಿಮಾ ಮನರಂಜನೆ ನೀಡುವುದರ ಜೊತೆಗೆ ಚಿಂತನೆಯನ್ನು ಪ್ರಚೋದಿಸುತ್ತದೆ’ ಎಂದಿದ್ದಾರೆ. ನಟ ಸುರೇಶ್ ಗೋಪಿ ಮಾತನಾಡಿ, ‘ಈ ಸಿನಿಮಾಗೆ ಚಿತ್ರಮಂದಿರಗಳಲ್ಲಿ ಸಿಕ್ಕ ಪ್ರತಿಕ್ರಿಯೆ ಭಾವನಾತ್ಮಕವಾಗಿದೆ. ಡಿಜಿಟಲ್‌ ಮೂಲಕ ಜಾನಕಿಯ ಕಥೆ ದೇಶಾದ್ಯಂತ ಪ್ರೇಕ್ಷಕರನ್ನು ತಲುಪುತ್ತದೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಗೆಬಗೆಯ ಕಾಸ್ಟ್ಯೂಮ್ ಧರಿಸಿ ಮಿಂಚಿದ ಅನುಪಮಾ ಪರಮೇಶ್ವರನ್

‘ಜಾನಕಿ vs ಸ್ಟೇಟ್ ಆಫ್ ಕೇರಳ’ ಸಿನಿಮಾದಲ್ಲಿ ಜಾನಕಿ ಎಂಬ ಪಾತ್ರ ಮಾಡಿರುವ ಅನುಪಮಾ ಪರಮೇಶ್ವರನ್ ಅವರು ಒಟಿಟಿ ಬಿಡುಗಡೆ ಬಗ್ಗೆ ತಮ್ಮ ಮಾತುಗಳನ್ನು ಹಂಚಿಕೊಂಡಿದ್ದಾರೆ. ‘ಜಾನಕಿಯ ಧೈರ್ಯವು ಈ ಸಿನಿಮಾ ನೋಡುವ ಪ್ರತಿಯೊಬ್ಬರಿಗೂ ಸ್ಫೂರ್ತಿ ನೀಡುತ್ತದೆ’ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು