AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಯಸಿ ನಂದಿನಿ ಔಟ್​ ಆದ್ಮೇಲೆ ಸಾನ್ಯಾ ಜತೆ ಹೆಚ್ಚಿತು ಜಶ್ವಂತ್​ ಸಲುಗೆ; ರೂಪೇಶ್​ಗೆ ಟೆನ್ಷನ್​ ಶುರು

Bigg Boss Kannada OTT: ಬಿಗ್​ ಬಾಸ್​ ಶೋನಿಂದ ನಂದಿನಿ ಎಲಿಮಿನೇಟ್​ ಆದ ಬಳಿಕ ಜಶ್ವಂತ್​ ಬೋಪಣ್ಣ ಅವರು ಸಾನ್ಯಾ ಅಯ್ಯರ್​ ಜೊತೆ ಹೆಚ್ಚು ಕ್ಲೋಸ್​ ಆಗಿದ್ದಾರೆ. ಇದು ಎಲ್ಲರ ಗಮನಕ್ಕೂ ಬಂದಿದೆ.

ಪ್ರೇಯಸಿ ನಂದಿನಿ ಔಟ್​ ಆದ್ಮೇಲೆ ಸಾನ್ಯಾ ಜತೆ ಹೆಚ್ಚಿತು ಜಶ್ವಂತ್​ ಸಲುಗೆ; ರೂಪೇಶ್​ಗೆ ಟೆನ್ಷನ್​ ಶುರು
ಜಶ್ವಂತ್​. ಸಾನ್ಯಾ, ರೂಪೇಶ್​
TV9 Web
| Edited By: |

Updated on: Sep 11, 2022 | 6:28 PM

Share

ಅಂತಿಮ ಘಟ್ಟ ತಲುಪುತ್ತಿದ್ದಂತೆಯೇ ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಶೋನಲ್ಲಿ ಹಲವು ಇಂಟರೆಸ್ಟಿಂಗ್​ ಘಟನೆಗಳು ನಡೆಯುತ್ತಿವೆ. ಇಷ್ಟು ದಿನ ನಂದಿನಿ ಮತ್ತು ಜಶ್ವಂತ್​ ಬೋಪಣ್ಣ (Jashwanth Bopanna) ಬಿಗ್​ ಬಾಸ್​ ಮನೆಯಲ್ಲಿ ಜೋಡಿಯಾಗಿ ಆಗಾಗ ಕಾಣಿಸಿಕೊಳ್ಳುತ್ತಿದ್ದರು. ಆದರೆ ಐದನೇ ವಾರದ ಎಲಿಮಿನೇಷನ್​ನಲ್ಲಿ (Bigg Boss Elimination) ನಂದಿನಿ ಔಟ್​ ಆದರು. ಆ ಬಳಿಕ ಜಶ್ವಂತ್​ ಅವರು ಸಾನ್ಯಾ ಅಯ್ಯರ್​ ಜತೆ ಹೆಚ್ಚು ಆಪ್ತತೆ ಬೆಳೆಸಿಕೊಂಡಿದ್ದಾರೆ. ಇದು ಮನೆಮಂದಿಯ ಗಮನಕ್ಕೆ ಬಂದಿದೆ. ವೀಕ್ಷಕರು ಕೂಡ ಇದನ್ನು ಗಮನಿಸಿದ್ದಾರೆ. ಅಷ್ಟೇ ಅಲ್ಲದೇ, ಬಿಗ್​ ಬಾಸ್​ ನಡೆಸಿಕೊಡುವ ಕಿಚ್ಚ ಸುದೀಪ್​ ಕೂಡ ಈ ಬಗ್ಗೆ ಪ್ರಸ್ತಾಪಿಸಿದ್ದಾರೆ. ‘ಸೂಪರ್​ ಸಂಡೇ ವಿತ್​ ಸುದೀಪ್​’ ಎಪಿಸೋಡ್​ನಲ್ಲಿ ಇದರ ಬಗ್ಗೆ ಮಾತುಕತೆ ಆಗಿದೆ. ಜಶ್ವಂತ್​ ಮತ್ತು ಸಾನ್ಯಾ (Sanya Iyer) ಹತ್ತಿರ ಆಗುತ್ತಿದ್ದಂತೆಯೇ ರೂಪೇಶ್​ ಅವರು ಯಾಕೋ ಟೆನ್ಷನ್​ ಮಾಡಿಕೊಂಡಿದ್ದಾರೆ.

ಎಲ್ಲರಿಗೂ ತಿಳಿದಿರುವಂತೆ ಜಶ್ವಂತ್​ ಬೋಪಣ್ಣ ಮತ್ತು ನಂದಿನಿ ಅವರು ರಿಯಲ್​ ಲೈಫ್​ನಲ್ಲಿಯೂ ಪ್ರೇಮಿಗಳು. ಅವರು ಜೋಡಿ ಸ್ಪರ್ಧಿಗಳಾಗಿಯೇ ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಶೋಗೆ ಕಾಲಿಟ್ಟಿದ್ದರು. ಆದರೆ ಎರಡನೇ ವಾರದಿಂದ ಅವರಿಬ್ಬರು ಪ್ರತ್ಯೇಕ ಸ್ಪರ್ಧಿಗಳಾಗಿ ಮುಂದುವರಿಯಬೇಕು ಎಂದು ಬಿಗ್​ ಬಾಸ್​ ಕಡೆಯಿಂದ ಆದೇಶ ಬಂತು. ಹಾಗಿದ್ದರೂ ಕೂಡ ಪ್ರೇಮಿಗಳು ಎಂಬ ಕಾರಣಕ್ಕೆ ಹೆಚ್ಚಾಗಿ ಅವರಿಬ್ಬರು ಜೊತೆಯಲ್ಲೇ ಇರುತ್ತಿದ್ದರು.

ಇದನ್ನೂ ಓದಿ
Image
ದೊಡ್ಮನೆಯಲ್ಲಿ ಎದೆ ಬಡಿದುಕೊಂಡು ಅತ್ತ ಜಯಶ್ರೀ; ಬಿಗ್​ ಬಾಸ್​ ಶೋನಲ್ಲಿ ಅಂಥದ್ದೇನಾಯ್ತು?
Image
BBK: ಬಿಗ್​ ಬಾಸ್​ಗೆ ಅವಮಾನ ಮಾಡಿದ ಸೋನು ಗೌಡ; ಮುಲಾಜಿಲ್ಲದೇ ಕ್ಲಾಸ್​ ತೆಗೆದುಕೊಂಡ ಕಿಚ್ಚ ಸುದೀಪ್​
Image
ಬಿಗ್​ ಬಾಸ್​ನಲ್ಲಿ ಹುಡುಗರಿಗೆ ಹೊರಗಿನಿಂದ ಸಿಗುತ್ತಿದೆ ಆ ಒಂದು ವಸ್ತು; ಸೋನು ಹೇಳಿಯೇ ಬಿಟ್ರು
Image
‘ಬಿಗ್​ ಬಾಸ್​ ಒಟಿಟಿ’ ಮನೆಯೊಳಗೆ ನಿಜವಾಗಿ ಏನೆಲ್ಲ ನಡೆಯಿತು? ಎಲ್ಲವನ್ನೂ ವಿವರಿಸಿದ ಸ್ಫೂರ್ತಿ ಗೌಡ

ದಿನ ಕಳೆಯುತ್ತಿದ್ದಂತೆಯೇ ಜಶ್ವಂತ್​ ಅವರು ಸಾನ್ಯಾ ಅಯ್ಯರ್​ ಜೊತೆ ಹೆಚ್ಚು ಮಾತನಾಡಲು ಆರಂಭಿಸಿದರು. ಅದರಿಂದ ನಂದಿನಿಗೆ ಕಸಿವಿಸಿ ಆಗುತ್ತಿತ್ತು. ತಮಗೆ ಜಶ್ವಂತ್​ ಹೆಚ್ಚು ಸಮಯ ನೀಡುತ್ತಿಲ್ಲ ಎಂದು ನಂದಿನಿ ಆಗಾಗ ತಕರಾರು ತೆಗೆಯಲು ಶುರುಮಾಡಿದ್ದರು. ಇದರಿಂದ ಇಬ್ಬರ ನಡುವೆ ಯಾವಾಗಲೂ ಜಗಳ ಆಗುತ್ತಲೇ ಇತ್ತು. ಬಾಯ್​ಫ್ರೆಂಡ್​ ಜಶ್ವಂತ್​ ವಿಚಾರದಲ್ಲಿ ನಂದಿನಿ ಹೆಚ್ಚು ಪೊಸೆಸಿವ್​ ಎಂಬುದು ಇಡೀ ಮನೆಗೆ ಗೊತ್ತಾಯಿತು. ಈಗ ನಂದಿನಿ ಔಟ್​ ಆಗಿದ್ದು, ಜಶ್ವಂತ್​ ಅವರು ಸಾನ್ಯಾ ಜೊತೆ ಸಲುಗೆ ಹೆಚ್ಚಿಸಿಕೊಂಡಿದ್ದಾರೆ.

ನಂದಿನಿ ಮನೆಯಲ್ಲಿ ಇದ್ದಷ್ಟು ದಿನ ಸಾನ್ಯಾ ಅವರು ಜಶ್ವಂತ್​ಗಿಂತಲೂ ಹೆಚ್ಚಾಗಿ ರೂಪೇಶ್​ ಶೆಟ್ಟಿ ಜೊತೆ ಇರುತ್ತಿದ್ದರು. ಆದರೆ ನಂದಿನಿ ಹೋದ ಬಳಿಕ ರೂಪೇಶ್​ ಮತ್ತು ಸಾನ್ಯಾ ನಡುವೆ ಜಶ್ವಂತ್​ ಬಂದಿದ್ದಾರೆ. ಇದರಿಂದ ರೂಪೇಶ್​ಗೆ ಟೆನ್ಷನ್​ ಹೆಚ್ಚಾಗಿದೆ ಎನಿಸುತ್ತಿದೆ. ಇಂಥ ಹಲವು ಸಂಗತಿಗಳ ನಡುವೆ, ಅಂತಿಮವಾಗಿ ಯಾರು ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಟ್ರೋಫಿ ಗೆಲ್ಲುತ್ತಾರೆ ಎಂಬುದನ್ನು ತಿಳಿಯುವ ಸಮಯ ಹತ್ತಿರ ಆಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ