AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇನ್ನು ಯಾವುದೇ ಆಟ ಆಡಲ್ಲ’; ಬಿಗ್ ಬಾಸ್ ಮನೆಯಿಂದ ಹೊರಹೋಗ್ತಾರಾ ಜಯಶ್ರೀ?

ಟಾಸ್ಕ್​ಗೆ ನಾನು ಕೂಡ ಬರುತ್ತೀನಿ ಎಂದರು ಜಯಶ್ರೀ. ಆದರೆ, ಈ ಟಾಸ್ಕ್​​ನಲ್ಲಿ ಅವರಿಗೆ ಅವಕಾಶ ನೀಡಿಲ್ಲ ನಂದು. ಈ ವಿಚಾರಕ್ಕೆ ಜಯಶ್ರೀ ಸಿಟ್ಟಾಗಿದ್ದಾರೆ.

‘ಇನ್ನು ಯಾವುದೇ ಆಟ ಆಡಲ್ಲ’; ಬಿಗ್ ಬಾಸ್ ಮನೆಯಿಂದ ಹೊರಹೋಗ್ತಾರಾ ಜಯಶ್ರೀ?
TV9 Web
| Edited By: |

Updated on:Aug 18, 2022 | 5:44 PM

Share

‘ಬಿಗ್ ಬಾಸ್ ಒಟಿಟಿ’ಯಲ್ಲಿ (Bigg Boss OTT) ಸಾಕಷ್ಟು ಘಟನೆಗಳು ನಡೆಯುತ್ತಿವೆ. ಹಲವರ ಮಧ್ಯೆ ಟಾಸ್ಕ್​ ವಿಚಾರಕ್ಕೆ ಕಿರಿಕ್​ಗಳು ನಡೆಯುತ್ತಿವೆ. ಈ ಬಾರಿ ಜಯಶ್ರೀ ಆರಾಧ್ಯ (Jayashree Aradhya) ಅವರ ಸರದಿ. ಅವರು ‘ಬಿಗ್ ಬಾಸ್ ಒಟಿಟಿ’ಯಲ್ಲಿ ಅತ್ತಿದ್ದಾರೆ. ತಂಡದವರಿಂದಲೇ ಮೋಸ ಆಗಿದೆ ಎಂಬ ಆರೋಪ ಅವರ ಕಡೆಯಿಂದ ಬಂದಿದೆ. ತಂಡದ ಕ್ಯಾಪ್ಟನ್ ನಂದು ವಿರುದ್ಧವೇ ಜಯಶ್ರೀ ಅವರು ಗಂಭೀರ ಆರೋಪ ಮಾಡಿದ್ದಾರೆ. ಈ ಘಟನೆ ಬೆನ್ನಲ್ಲೇ ‘ಇನ್ನು ಯಾವುದೇ ಆಟ ಆಡಲ್ಲ’ ಎಂದು ಶಪಥ ಮಾಡಿದ್ದಾರೆ. ಇದರಿಂದ ಅವರಿಗೆ ತೊಂದರೆ ಎದುರಾಗಬಹುದು ಎಂದು ಕೆಲವರು ಊಹಿಸುತ್ತಿದ್ದಾರೆ.

‘ಬಿಗ್ ಬಾಸ್​’ನಲ್ಲಿ ಈ ವಾರ ಎರಡು ಟೀಂ ಮಾಡಲಾಗಿತ್ತು. ಒಂದು ಟೀಂಗೆ ನಂದು ನಾಯಕಿ. ಮತ್ತೊಂದು ಟೀಂಗೆ ಸೋಮಣ್ಣ ಕ್ಯಾಪ್ಟನ್ ಆಗಿದ್ದರು. ಒಂದು ಟಾಸ್ಕ್​ನಲ್ಲಿ ನಂದು, ಜಶ್ವಂತ್ ಹಾಗೂ ಚೈತ್ರಾ ಟಾಸ್ಕ್​ ಆಡಲು ಇಳಿದರು. ಈ ಟಾಸ್ಕ್​ಗೆ ನಾನು ಕೂಡ ಬರುತ್ತೀನಿ ಎಂದರು ಜಯಶ್ರೀ. ಆದರೆ, ಈ ಟಾಸ್ಕ್​​ನಲ್ಲಿ ಅವರಿಗೆ ಅವಕಾಶ ನೀಡಿಲ್ಲ ನಂದು. ಈ ವಿಚಾರಕ್ಕೆ ಜಯಶ್ರೀ ಸಿಟ್ಟಾಗಿದ್ದಾರೆ.

‘ಎಲ್ಲದೂ ನಿಮ್ಮದೇ ನಿರ್ಧಾರ ಎಂದಾದರೆ, ಟೀಂ ಎಂದು ಏಕೆ ಇಟ್ಟುಕೊಂಡಿದ್ದೀರಾ? ನನ್ನನ್ನು ಏಕೆ ಬಿಟ್ಟಿದ್ದೀರಾ? ಹೀಗೆ ಅಂತಾದರೆ ನಾನು ಇನ್ಮುಂದೆ ಆಟ ಆಡಲ್ಲ’ ಎಂದು ಘೋಷಿಸಿದರು ಜಯಶ್ರೀ. ಈ ಚರ್ಚೆ ಎಲ್ಲಿಂದ ಎಲ್ಲಿಗೋ ತಲುಪಿತು. ಜಯಶ್ರೀ ಮಾತನ್ನು ಕೇಳಿ ಕ್ಯಾಪ್ಟನ್ ನಂದು ಸಿಟ್ಟಾದರು. ಮುಂದಿನ ಟಾಸ್ಕ್​​ಗೆ ಅವಕಾಶ ನೀಡುವ ಭರವಸೆ ಕೊಟ್ಟರೂ ಜಯಶ್ರೀ ಯಾರ ಮಾತನ್ನೂ ಕೇಳುವ ಸ್ಥಿತಿಯಲ್ಲಿ ಇರಲಿಲ್ಲ. ಕೊನೆಗೂ ಅವರ ಮನಸ್ಸು ಬದಲಾಯಿತು.

ಇದನ್ನೂ ಓದಿ: ಹೊರಗೆ ಟ್ರೋಲ್ ಆಗಿದ್ದ ಸೋನುಗೆ ಆ ಒಂದು ಕಾರಣಕ್ಕೆ ಬಿಗ್ ಬಾಸ್​​ನಲ್ಲಿ ಸಿಕ್ತು ಸಖತ್ ಮರ್ಯಾದೆ

ಈ ಬಾರಿಯ ನಾಮಿನೇಷನ್ ಲಿಸ್ಟ್​ನಲ್ಲಿ ಜಯಶ್ರೀ ಇದ್ದಾರೆ. ಅವರಿಗೆ ತಮ್ಮ ಸಾಮರ್ಥ್ಯವನ್ನು ಪ್ರೂವ್ ಮಾಡಿಕೊಳ್ಳೋಕೆ ಒಂದು ಅವಕಾಶ ಬೇಕಿದೆ. ಆದರೆ, ಚಿಕ್ಕ ವಿಚಾರಕ್ಕೆ ದೊಡ್ಡದಾಗಿ ಜಗಳ ಆಡಿದ್ದರಿಂದ ಅವರಿಗೆ ಜನರಿಂದ ವೋಟ್ ಬೀಳುತ್ತದೆಯೋ ಅಥವಾ ಇಲ್ಲವೋ ಎಂಬ ಅನುಮಾನ ಮೂಡಿದೆ. ಒಂದೊಮ್ಮೆ ಕಡಿಮೆ ವೋಟ್ ಬಿದ್ದರೆ ಜಯಶ್ರೀ ಮನೆಯಿಂದ ಹೊರಹೋಗುವುದು ಖಚಿತವಾಗಲಿದೆ.

Published On - 3:01 pm, Thu, 18 August 22

Follow Us
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
CCTV Video: ಸಾಲ ಮಾಡಿ ತಂದಿದ್ದ ಕನಸಿನ ಬೈಕ್ ಕೊಂಡ ರಾತ್ರಿಯೇ ಕಳ್ಳತನ!
CCTV Video: ಸಾಲ ಮಾಡಿ ತಂದಿದ್ದ ಕನಸಿನ ಬೈಕ್ ಕೊಂಡ ರಾತ್ರಿಯೇ ಕಳ್ಳತನ!
ಯುವತಿಯರ ಅಂಗಾಂಗ ಮುಟ್ಟಿ ಪರಾರಿಯಾಗುತ್ತಿರುವ ಕಾಮುಕರು: ವಿಡಿಯೋ ವೈರಲ್
ಯುವತಿಯರ ಅಂಗಾಂಗ ಮುಟ್ಟಿ ಪರಾರಿಯಾಗುತ್ತಿರುವ ಕಾಮುಕರು: ವಿಡಿಯೋ ವೈರಲ್
ಜರ್ಮನಿಯ ಗುರುದ್ವಾರದಲ್ಲಿ ಹಿಂಸಾತ್ಮಕ ಘರ್ಷಣೆ, ಬಂದೂಕು, ಚಾಕುವಿನಿಂದ ದಾಳಿ
ಜರ್ಮನಿಯ ಗುರುದ್ವಾರದಲ್ಲಿ ಹಿಂಸಾತ್ಮಕ ಘರ್ಷಣೆ, ಬಂದೂಕು, ಚಾಕುವಿನಿಂದ ದಾಳಿ
ಮತ್ತೊಬ್ಬರ ಏಳಿಗೆಯನ್ನು ನೋಡಿ ಅಸೂಯೆ ಪಟ್ಟರೆ ಏನಾಗುತ್ತೆ?
ಮತ್ತೊಬ್ಬರ ಏಳಿಗೆಯನ್ನು ನೋಡಿ ಅಸೂಯೆ ಪಟ್ಟರೆ ಏನಾಗುತ್ತೆ?
ಇಂದು ಈ ರಾಶಿಯವರಿಗೆ ಸಣ್ಣ ಪುಣ್ಣ ಆರೋಗ್ಯ ಸಮಸ್ಯೆ ಕಾಡಬಹುದು!
ಇಂದು ಈ ರಾಶಿಯವರಿಗೆ ಸಣ್ಣ ಪುಣ್ಣ ಆರೋಗ್ಯ ಸಮಸ್ಯೆ ಕಾಡಬಹುದು!
ಇದ್ದಕ್ಕಿದ್ದಂತೆ ಹೈವೇಗೆ ಹಾರಿದ ಹಸು; ಕಾರಿನ ಸ್ಥಿತಿ ಏನಾಯ್ತು ನೋಡಿ!
ಇದ್ದಕ್ಕಿದ್ದಂತೆ ಹೈವೇಗೆ ಹಾರಿದ ಹಸು; ಕಾರಿನ ಸ್ಥಿತಿ ಏನಾಯ್ತು ನೋಡಿ!
ಅಣ್ಣಾವ್ರ ಹುಟ್ಟುಹಬ್ಬದ ದಿನ ರಿಲೀಸ್ ಆಗಲಿದೆ ಚಂದನ್ ಶೆಟ್ಟಿ ಹೊಸ ಸಿನಿಮಾ
ಅಣ್ಣಾವ್ರ ಹುಟ್ಟುಹಬ್ಬದ ದಿನ ರಿಲೀಸ್ ಆಗಲಿದೆ ಚಂದನ್ ಶೆಟ್ಟಿ ಹೊಸ ಸಿನಿಮಾ
ಪ್ರತಿ ಸಿನಿಮಾದಲ್ಲಿ ಬೇರೆ ರೀತಿ ಕಾಣೋದು ಹೇಗೆ? ಉತ್ತರಿಸಿದ ಕಿರಣ್ ರಾಜ್
ಪ್ರತಿ ಸಿನಿಮಾದಲ್ಲಿ ಬೇರೆ ರೀತಿ ಕಾಣೋದು ಹೇಗೆ? ಉತ್ತರಿಸಿದ ಕಿರಣ್ ರಾಜ್