AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada OTT Finale: ಜಯಶ್ರೀ, ಜಶ್ವಂತ್​, ಸೋಮಣ್ಣ, ಸೋನು ಗೌಡ ಪಾಲಿಗೆ ಅಂತ್ಯವಾಯ್ತು ಬಿಗ್​ ಬಾಸ್​ ಪಯಣ

Sonu Srinivas Gowda | BBK OTT: ‘ಬಿಗ್ ಬಾಸ್​ ಕನ್ನಡ ಒಟಿಟಿ’ ಫಿನಾಲೆಯಲ್ಲಿದ್ದ 8 ಜನರ ಪೈಕಿ 4 ಸ್ಪರ್ಧಿಗಳು ಔಟ್​ ಆಗಿದ್ದಾರೆ. ಇನ್ನುಳಿದ ನಾಲ್ಕು ಜನರು ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ರಲ್ಲಿ ಸ್ಪರ್ಧಿಸುವ ಅವಕಾಶ ಪಡೆದಿದ್ದಾರೆ.

Bigg Boss Kannada OTT Finale: ಜಯಶ್ರೀ, ಜಶ್ವಂತ್​, ಸೋಮಣ್ಣ, ಸೋನು ಗೌಡ ಪಾಲಿಗೆ ಅಂತ್ಯವಾಯ್ತು ಬಿಗ್​ ಬಾಸ್​ ಪಯಣ
ಸೋಮಣ್ಣ, ಜಯಶ್ರೀ, ಜಶ್ವಂತ್, ಸೋನು ಗೌಡ, ಸುದೀಪ್​
TV9 Web
| Updated By: ಮದನ್​ ಕುಮಾರ್​|

Updated on:Sep 17, 2022 | 12:11 AM

Share

ಬಿಗ್​ ಬಾಸ್​ ರಿಯಾಲಿಟಿ ಶೋ ಗೆಲ್ಲಬೇಕು ಅಂಥಲೇ ಎಲ್ಲರೂ ದೊಡ್ಮನೆಗೆ ಕಾಲಿಡುತ್ತಾರೆ. ಆದರೆ ಎಲ್ಲರಿಗೂ ಗೆಲ್ಲುವ ಅದೃಷ್ಟ ಇರುವುದಿಲ್ಲ. ವೀಕ್ಷಕರಿಂದ ಕಡಿಮೆ ವೋಟ್​ ಪಡೆದರೆ ಹಿನ್ನಡೆ ಆಗುತ್ತದೆ. ಇದೇ ಮೊದಲ ಬಾರಿಗೆ ಒಟಿಟಿಯಲ್ಲಿ ಕನ್ನಡದ ‘ಬಿಗ್​ ಬಾಸ್’ (Bigg Boss Kannada OTT) ಶೋ ಪ್ರಸಾರ ಆಯಿತು. ಈ ಶೋನಲ್ಲಿ ಟಾಪ್​ 4 ಸ್ಥಾನ ಪಡೆದವರಿಗೆ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ಕ್ಕೆ ಎಂಟ್ರಿ ನೀಡುವ ಚಾನ್ಸ್​ ಸಿಗುತ್ತದೆ ಎಂದು ಮೊದಲೇ ಹೇಳಲಾಗಿತ್ತು. ಆದರೆ ಫಿನಾಲೆ ವಾರದವರೆಗೂ ಬಂದ 8 ಜನರ ಪೈಕಿ ನಾಲ್ವರು ಕೊನೇ ಕ್ಷಣದಲ್ಲಿ ಮುಗ್ಗರಿಸಿದ್ದಾರೆ. ಜಯಶ್ರೀ ಆರಾಧ್ಯ (Jayashree Aradhya), ಜಶ್ವಂತ್​ ಬೋಪಣ್ಣ, ಸೋಮಣ್ಣ ಮಾಚಿಮಾಡ ಮತ್ತು ಸೋನು ಶ್ರೀನಿವಾಸ್ ಗೌಡ (Sonu Srinivas Gowda) ಅವರು ಫಿನಾಲೆ ವಾರದಲ್ಲಿ ಔಟ್​ ಆಗಿದ್ದಾರೆ. ಇನ್ನುಳಿದ ಸ್ಪರ್ಧಿಗಳಾದ ಆರ್ಯವರ್ಧನ್​ ಗುರೂಜಿ, ರೂಪೇಶ್​ ಶೆಟ್ಟಿ, ರಾಕೇಶ್​ ಅಡಿಗ ಮತ್ತು ಸಾನ್ಯಾ ಅಯ್ಯರ್​ ಅವರು ‘ಬಿಗ್​​ ಬಾಸ್​ ಕನ್ನಡ ಸೀಸನ್​ 9’ಕ್ಕೆ ಹೋಗುವ ಚಾನ್ಸ್​ ಪಡೆದಿದ್ದಾರೆ.

ಜಯಶ್ರೀ ಆರಾಧ್ಯ ಅವರು ಸತತ 5 ವಾರವೂ ನಾಮಿನೇಟ್​ ಆಗಿದ್ದರು. ಆದರೆ ವೀಕ್ಷಕರ ವೋಟ್​ ಪಡೆಯುವ ಮೂಲಕ ತಮ್ಮ ಸ್ಥಾನ ಉಳಿಸಿಕೊಂಡಿದ್ದರು. ಹಾಗಂತ ಫಿನಾಲೆ ವಾರದಲ್ಲಿ ಅವರಿಗೆ ನಿರೀಕ್ಷಿತ ಮಟ್ಟದಲ್ಲಿ ವೋಟ್​ ಸಿಕ್ಕಿಲ್ಲ. ಹಾಗಾಗಿ ಅವರ ಬಿಗ್​ ಬಾಸ್​ ಪಯಣ ಅಂತ್ಯವಾಗಿದೆ. ಹೆಚ್ಚೇನೂ ಬೇಸರ ಇಲ್ಲದೇ ಅವರು ದೊಡ್ಮನೆಯಿಂದ ಹೊರಬಂದಿದ್ದಾರೆ.

ಕನ್ನಡ ಸರಿಯಾಗಿ ಬರಲ್ಲ ಎಂಬ ಕಾರಣಕ್ಕೆ ಜಶ್ವಂತ್​ ಬೋಪಣ್ಣ ಅವರನ್ನು ವೀಕ್ಷಕರು ಹೆಚ್ಚಾಗಿ ಇಷ್ಟಪಟ್ಟಿಲ್ಲ ಎನಿಸುತ್ತದೆ. ಆದರೂ ಕೂಡ ಅವರು ಫಿನಾಲೆ ವಾರದವರೆಗೂ ಪೈಪೋಟಿ ನೀಡಿದರು. ಅಂತಿಮವಾಗಿ ಅವರು ಕೂಡ ಹೆಚ್ಚಿನ ವೋಟ್​ ಪಡೆಯದ ಕಾರಣ ಬಿಗ್​ ಬಾಸ್​ ಆಟ ಮುಗಿಸಿದ್ದಾರೆ. ಅದೇ ರೀತಿ ಸೋಮಣ್ಣ ಮಾಚಿಮಾಡ ಕೂಡ ಕೊನೇ ವಾರದಲ್ಲಿ ಔಟ್​ ಆಗಿದ್ದಾರೆ. ದೊಡ್ಮನೆಯಲ್ಲಿ ಹೆಚ್ಚು ಮನರಂಜನೆ ನೀಡಲು ಅವರಿಗೆ ಸಾಧ್ಯವಾಗಿಲ್ಲ. ಅದೇ ಕಾರಣಕ್ಕಾಗಿ ಅವರಿಗೆ ಹೆಚ್ಚು ವೋಟ್​ ಸಿಕ್ಕಿಲ್ಲದೇ ಇರಬಹುದು.

ಇದನ್ನೂ ಓದಿ
Image
BBK9 ಶೋನಲ್ಲಿ ಸ್ಪರ್ಧಿಸುವ ಚಾನ್ಸ್​ ಪಡೆದ ರಾಕೇಶ್​, ರೂಪೇಶ್​, ಆರ್ಯವರ್ಧನ್​, ಸಾನ್ಯಾ ಐಯ್ಯರ್​
Image
Aryavardhan Guruji: ಬಿಗ್​ ಬಾಸ್​ ಕನ್ನಡ 9ನೇ ಸೀಸನ್​ಗೆ ಎಂಟ್ರಿ ಪಡೆದ ಮೊದಲ ಸ್ಪರ್ಧಿ ಆರ್ಯವರ್ಧನ್​ ಗುರೂಜಿ
Image
Bigg Boss Kannada OTT Finale: ಸಾನ್ಯಾ ಅಯ್ಯರ್​ಗೆ ಸಾನ್ಯಾ ಶೆಟ್ಟಿ ಅಂತ ಕರೆದರೆ ಆಹಾ ಎಷ್ಟೊಂದು ಖುಷಿ; ಇಲ್ಲಿದೆ ವಿಡಿಯೋ ಸಾಕ್ಷಿ
Image
Bigg Boss Kannada OTT: ಕೊನೇ ದಿನಕ್ಕಾಗಿ ಸಾನ್ಯಾ ಐಯ್ಯರ್​-ಸೋನು​ ಗೌಡ ನಡುವೆ ಮೇಕಪ್​ ಪೈಪೋಟಿ

ವೈರಲ್​ ಹುಡುಗಿ ಸೋನು ಶ್ರೀನಿವಾಸ್​ ಗೌಡ ಅವರು ಕೊನೇ ಹಂತದವರೆಗೂ ಆತ್ಮವಿಶ್ವಾಸ ಉಳಿಸಿಕೊಂಡಿದ್ದರು. ಫೈನಲ್​ ರೌಂಡ್​ನಲ್ಲಿ ಅವರ ಮತ್ತು ಸಾನ್ಯಾ ಐಯ್ಯರ್​ ನಡುವೆ ಹಣಾಹಣಿ ನಡೆಯಿತು. ಕಡೆಗೂ ಸೋನು ಗೌಡ ಅವರಿಗೆ ವಿಜಯಲಕ್ಷ್ಮಿ ಒಲಿಯಲಿಲ್ಲ. ಟಿವಿ ಸೀಸನ್​ಗೆ ಹೋಗಬೇಕು ಎಂದುಕೊಂಡಿದ್ದ ಅವರು ಕನಸು ಚೂರಾಯಿತು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:11 am, Sat, 17 September 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?