AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

 ಸಾರ್ವಜನಿಕವಾಗಿ ಕಳಚಿತು ಗೌನ್ ಸ್ಟ್ರಾಪ್​; ಮುಜುಗರಕ್ಕೆ ಒಳಗಾದ ನಟಿ

ಜಿಯೋ ಮಾಮಿ ಫಿಲ್ಮ್​ ಫೆಸ್ಟಿವಲ್​ನಲ್ಲಿ ಜಿಯಾ ಶಂಕರ್ ಭಾಗಿ ಆಗಿದ್ದರು. ಅವರು ಗೌನ್ ಧರಿಸಿ ಮಿಂಚುತ್ತಿದ್ದರು. ಅವರ ಫೋಟೋ ಸೆರೆಹಿಡಿಯಲು ಪಾಪರಾಜಿಗಳ ದಂಡೇ ಇತ್ತು. ಈ ಸಮಯಕ್ಕೆ ಸರಿಯಾಗಿ ಅವರ ಗೌನ್​ನ ಸ್ಟ್ರಾಪ್ ಕಳಚಿ ಬಿದ್ದಿದೆ.

 ಸಾರ್ವಜನಿಕವಾಗಿ ಕಳಚಿತು ಗೌನ್ ಸ್ಟ್ರಾಪ್​; ಮುಜುಗರಕ್ಕೆ ಒಳಗಾದ ನಟಿ
ಜಿಯಾ ಶಂಕರ್
ರಾಜೇಶ್ ದುಗ್ಗುಮನೆ
|

Updated on: Nov 04, 2023 | 7:03 AM

Share

ಧರಿಸುವ ಚಿತ್ರ ವಿಚಿತ್ರ ಬಟ್ಟೆಯಿಂದ ಕೆಲವೊಮ್ಮೆ ಸೆಲೆಬ್ರಿಟಿಗಳು ಅವಮಾನ ಎದುರಿಸುವ ಪರಿಸ್ಥಿತಿ ಬಂದೊದಗುತ್ತದೆ. ಸಾರ್ವಜನಿಕವಾಗಿ ಕಾಣಿಸಿಕೊಂಡ ಸಂದರ್ಭದಲ್ಲಿ ಆಗುವ ಎಡವಟ್ಟಿನಿಂದ ತೊಂದರೆಗೆ ಒಳಗಾಗುತ್ತಾರೆ. ಈ ರೀತಿ ಅವಮಾನ ಎದುರಿಸಿದ ಅನೇಕರು ಇದ್ದಾರೆ. ಈಗ ‘ಬಿಗ್ ಬಾಸ್ ಹಿಂದಿ ಒಟಿಟಿ 2’ (Bigg Boss OTT) ಸ್ಪರ್ಧಿ ಜಿಯಾ ಶಂಕರ್​ಗೂ ಹಾಗೆಯೇ ಆಗಿದೆ. ಅವರಿಗೆ ಮುಜುಗರ ಆದರೂ ಅದನ್ನು ತೋರಿಸಿಕೊಳ್ಳದೆ ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನಿಸಿದ್ದಾರೆ. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಜಿಯೋ ಮಾಮಿ ಫಿಲ್ಮ್​ ಫೆಸ್ಟಿವಲ್​ನಲ್ಲಿ ಜಿಯಾ ಶಂಕರ್ ಭಾಗಿ ಆಗಿದ್ದರು. ಅವರು ಗೌನ್ ಧರಿಸಿ ಮಿಂಚುತ್ತಿದ್ದರು. ಅವರ ಫೋಟೋ ಸೆರೆಹಿಡಿಯಲು ಪಾಪರಾಜಿಗಳ ದಂಡೇ ಇತ್ತು. ಈ ಸಮಯಕ್ಕೆ ಸರಿಯಾಗಿ ಅವರ ಗೌನ್​ನ ಸ್ಟ್ರಾಪ್ ಕಳಚಿ ಬಿದ್ದಿದೆ. ಈ ವೇಳೆ ಅವರು ಪರಿಸ್ಥಿತಿಯನ್ನು ನಿಭಾಯಿಸಿದ ರೀತಿಯನ್ನು ಎಲ್ಲರೂ ಮೆಚ್ಚಿಕೊಳ್ಳುತ್ತಿದ್ದಾರೆ.

ಸ್ಟ್ರಾಪ್ ಕಳಚಿದ ಬೆನ್ನಲ್ಲೇ ಅವರಿಗೆ ಮುಜುಗರ ಆಗಿದೆ. ಆದರೂ ಅವರು ಪರಿಸ್ಥಿತಿಯನ್ನು ನಿಭಾಯಿಸಿದರು. ಮುಜುಗುರ ಪಟ್ಟುಕೊಳ್ಳದೆ ಸ್ಟ್ರಾಪ್​ನ ಮೇಲೆ ಹಾಕಿ ಮುನ್ನಡೆದರು. ಸದ್ಯ ಈ ವಿಡಿಯೋ ವೈರಲ್ ಆಗುತ್ತಿದೆ. ‘ನಿಮ್ಮನ್ನು ನೀವು ಹೀಗೆ ಮುನ್ನಡೆಸಿಕೊಂಡು ಹೋಗಬೇಕು’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ‘ಅವರು ಎಷ್ಟು ಪ್ರಬುಧ್ಧವಾಗಿ ಪರಿಸ್ಥಿತಿ ನಿಭಾಯಿಸಿದರು. ಈ ರೀತಿಯ ಪರಿಸ್ಥಿತಿ ಎದುರಾಗಿದ್ದರೆ ನನ್ನ ಬಳಿ ಅದನ್ನು ನಿಭಾಯಿಸಲು ಸಾಧ್ಯವೇ ಆಗುತ್ತಿರಲಿಲ್ಲ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್ ಎಫೆಕ್ಟ್: ‘ಸೀತಾ ರಾಮ’ ಧಾರಾವಾಹಿ ಟಿಆರ್​ಪಿಯಲ್ಲಿ ಇಳಿಕೆ; ಇಲ್ಲಿದೆ ವಿವರ

2017ರಲ್ಲಿ ಪ್ರಸಾರ ಕಂಡ ‘ಮೇರಿ ಹಾನಿಕಾರಕ್ ಬೀವಿ’ ಧಾರಾವಾಹಿ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು ಜಿಯಾ. ಇದಲ್ಲದೆ ‘ಕಾಟೇಲಾಲ್ & ಸನ್ಸ್ ’ ಹಾಗೂ ‘ಪಿಶಾಚಿನಿ’ ಧಾರಾವಾಹಿಗಳಲ್ಲಿ ಅವರು ನಟಿಸಿದ್ದಾರೆ. ಜಿಯಾ ಅವರು ಮರಾಠಿ ಚಿತ್ರರಂಗದಲ್ಲೂ ಗುರುತಿಸಿಕೊಂಡಿದ್ದಾರೆ. ಮರಾಠಿಯ ‘ವೇದ್’ ಸಿನಿಮಾ ಮೂಲಕ ಸಾಕಷ್ಟು ಜಮಪ್ರಿಯತೆ ಪಡೆದರು. ‘ಬಿಗ್ ಬಾಸ್ ಸೀಸನ್ 2’ ಮೂಲಕ ಅವರು ಖ್ಯಾತಿ ಹೆಚ್ಚಿಸಿಕೊಂಡರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು