AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಹಿಂದಿ ಹೀರೋ’ ಎಂದು ಗರ್ವ ತೋರಿಸಿ ಸೋತ ಜಾನ್​ ಅಬ್ರಾಹಂ ಸಿನಿಮಾಗೆ ಈಗ ಒಟಿಟಿ ಮಾತ್ರ ಗತಿ

Attack Movie OTT Release Date: ಚಿತ್ರಮಂದಿರದಲ್ಲಿ ಏ.1ರಂದು ಬಿಡುಗಡೆ ಆಗಿದ್ದ ಜಾನ್​ ಅಬ್ರಾಹಂ ನಟನೆಯ ‘ಅಟ್ಯಾಕ್​’ ಸಿನಿಮಾವನ್ನು ಜನರು ಮೆಚ್ಚಿಕೊಳ್ಳಲಿಲ್ಲ. ಈಗ ಒಟಿಟಿಯಲ್ಲಿ ಈ ಚಿತ್ರ ರಿಲೀಸ್​ ಆಗುತ್ತಿದೆ.

‘ನಾನು ಹಿಂದಿ ಹೀರೋ’ ಎಂದು ಗರ್ವ ತೋರಿಸಿ ಸೋತ ಜಾನ್​ ಅಬ್ರಾಹಂ ಸಿನಿಮಾಗೆ ಈಗ ಒಟಿಟಿ ಮಾತ್ರ ಗತಿ
ಜಾನ್ ಅಬ್ರಾಹಂ
Follow us
TV9 Web
| Updated By: ಮದನ್​ ಕುಮಾರ್​

Updated on:May 15, 2022 | 9:11 AM

ನಟ ಜಾನ್​ ಅಬ್ರಾಹಂ (John Abraham) ಅವರಿಗೆ ಬಾಲಿವುಡ್​ನಲ್ಲಿ ಬಹಳ ಬೇಡಿಕೆ ಇದೆ. ಅನೇಕ ಹಿಟ್​ ಸಿನಿಮಾಗಳನ್ನು ನೀಡಿರುವ ಅವರಿಗೆ ಅಪಾರ ಅಭಿಮಾನಿಗಳೂ ಇದ್ದಾರೆ. ಆದರೆ ಇತ್ತೀಚೆಗೆ ದಕ್ಷಿಣ ಭಾರತದಿಂದ ಜಾನ್​ ಅಬ್ರಹಾಂ ಅವರಿಗೆ ಭಾರಿ ಟೀಕೆ ಕೇಳಿಬಂದಿತ್ತು. ಅದಕ್ಕೆ ಕಾರಣ ಆಗಿದ್ದು ಅವರು ನೀಡಿದ ಒಂದೇ ಒಂದು ಹೇಳಿಕೆ. ‘ನಾನು ಹಿಂದಿ ಹೀರೋ. ಪ್ರಾದೇಶಿಕ ಸಿನಿಮಾ ಮಾಡಲ್ಲ’ ಎಂದು ಅವರು ಗರ್ವದಿಂದ ಮಾತನಾಡಿದ್ದರು. ಆ ಹೇಳಿಕೆ ನೀಡಿದ ಬಳಿಕ ಅವರ ‘ಅಟ್ಯಾಕ್​’ ಸಿನಿಮಾ (Attack Movie) ಚಿತ್ರಮಂದಿರದಲ್ಲಿ ರಿಲೀಸ್​ ಆಯ್ತು. ಅದು ಹೇಳ ಹೆಸರಿಲ್ಲದಂತೆ ಕೊಚ್ಚಿಕೊಂಡು ಹೋಯಿತು. ಬಾಕ್ಸ್​ ಆಫೀಸ್​ನಲ್ಲಿ ‘ಅಟ್ಯಾಕ್’​ ಸಿನಿಮಾ ಲೈಫ್​ ಟೈಮ್​ ಮಾಡಿದ ಕಲೆಕ್ಷನ್​ ಕೇವಲ 16 ಕೋಟಿ ರೂಪಾಯಿ. ಸೌತ್​ ಸಿನಿಮಾಗಳಾದ ‘ಆರ್​ಆರ್​ಆರ್​’ ಮತ್ತು ‘ಕೆಜಿಎಫ್​: ಚಾಪ್ಟರ್​ 2’ ಚಿತ್ರಗಳು ಸಾವಿರಾರು ಕೋಟಿ ರೂಪಾಯಿ ಕಲೆಕ್ಷನ್​ ಮಾಡಿ ಬೀಗಿದವು. ಬಾಕ್ಸ್​ ಆಫೀಸ್​ನಲ್ಲಿ ಹೀನಾಯವಾಗಿ ಸೋತ ಬಳಿಕ ‘ಅಟ್ಯಾಕ್​’ ಚಿತ್ರಕ್ಕೆ ಉಳಿದಿದ್ದು ಒಟಿಟಿ (OTT Platform) ಆಯ್ಕೆ ಮಾತ್ರ. ಹೌದು, ಜೀ5 ಮೂಲಕ ಈ ಚಿತ್ರ ಪ್ರಸಾರಕ್ಕೆ ಸಜ್ಜಾಗಿದೆ. ಮೇ 27ರಂದು ವೀಕ್ಷಣೆಗೆ ಲಭ್ಯವಾಗಲಿದೆ.

ಚಿತ್ರಮಂದಿರದಲ್ಲಿ ಏ.1ರಂದು ‘ಅಟ್ಯಾಕ್​’ ಸಿನಿಮಾ ಬಿಡುಗಡೆ ಆಯಿತು. ಜಾನ್​ ಅಬ್ರಾಹಂ ಅವರು ಆ್ಯಕ್ಷನ್​ ಹೀರೋ ಅವತಾರದಲ್ಲಿ ಕಾಣಿಸಿಕೊಂಡರು. ಅವರ ಜೊತೆ ಜಾಕ್ವೆಲಿನ್​ ಫರ್ನಾಂಡಿಸ್​ ಮತ್ತು ರಾಕುಲ್​ ಪ್ರೀತ್​ ಸಿಂಗ್​ ಕೂಡ ನಟಿಸಿದ್ದಾರೆ. ಸೈನ್ಸ್​ ಫಿಕ್ಷನ್​ ಮಾದರಿಯಲ್ಲಿ ಮೂಡಿಬಂದ ಈ ಚಿತ್ರಕ್ಕೆ ಪ್ರೇಕ್ಷಕರು ಮೆಚ್ಚುಗೆ ಸೂಚಿಸಲೇ ಇಲ್ಲ. ಕನಿಷ್ಠ ಒಟಿಟಿಯಲ್ಲಾದರೂ ಜನರು ನೋಡಬಹುದು ಎಂಬ ಭರವಸೆಯೊಂದಿಗೆ ಪ್ರಸಾರ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಜಾನ್​ ಅಬ್ರಾಹಂ ಹೇಳಿದ್ದು ಏನು?

ಇದನ್ನೂ ಓದಿ
Image
ಜ್ಯೂ. ಎನ್​ಟಿಆರ್​ ಬರ್ತ್​ಡೇ ದಿನವೇ ‘ಆರ್​ಆರ್​ಆರ್’ ಚಿತ್ರದ ಒಟಿಟಿ ಪ್ರೀಮಿಯರ್​; ಇಲ್ಲಿದೆ ಹೊಸ ಟ್ರೇಲರ್​
Image
ಸೌತ್​ ಸಿನಿಮಾ ಬಗ್ಗೆ ಹಗುರಾಗಿ ಮಾತಾಡಿದ್ದ ಜಾನ್​ ಅಬ್ರಾಹಂ; ‘ಆರ್​ಆರ್​ಆರ್​’ ಎದುರಲ್ಲಿ ಹೀನಾಯ ಸೋಲು
Image
ಸ್ವೀಟ್​ ಕಂಡರೆ ಅತ್ತ ತಿರುಗಿಯೂ ನೋಡಲ್ಲ ಜಾನ್​ ಅಬ್ರಾಹಂ; ಅವರಿಗೆ ಇರೋ ಸಮಸ್ಯೆ ಏನು?
Image
ವಿಡಿಯೋ ಮಾಡಿದ್ದಕ್ಕೆ ಅಭಿಮಾನಿಯ ಮೊಬೈಲ್​ ಕಸಿದುಕೊಂಡ ಜಾನ್​ ಅಬ್ರಾಹಂ; ಮುಂದೇನಾಯ್ತು?

ಬಾಲಿವುಡ್​ ವರ್ಸಸ್​ ಸೌತ್​ ಸಿನಿಮಾ ಎಂಬ ಚರ್ಚೆ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಜಾನ್​ ಅಬ್ರಾಹಂ ಅವರಿಗೆ ಕೆಲವೇ ದಿನಗಳ ಹಿಂದೆ ಪ್ರಶ್ನೆ ಕೇಳಲಾಗಿತ್ತು. ಅದಕ್ಕೆ ಉತ್ತರಿಸುವಾಗ ಅಹಂಕಾರದಿಂದ ಅವರು ಮಾತನಾಡಿದ್ದರು. ‘ನನಗೆ ರಾಜಮೌಳಿ ಬಗ್ಗೆ ಗೌರವ ಇದೆ. ಅದೇ ರೀತಿ ನಾವು ಏನು ಮಾಡಿದ್ದೇವೆ ಎನ್ನುವ ಬಗ್ಗೆ ಎಲ್ಲಕ್ಕಿಂತ ಹೆಚ್ಚಿನ ಗೌರವ ಇದೆ. ಖಂಡಿತವಾಗಿಯೂ ನಾವು ಎರಡನೇ ಸ್ಥಾನದಲ್ಲಿ ಇಲ್ಲ. ನಾನು ಎಂದಿಗೂ ಪ್ರಾದೇಶಿಕ ಸಿನಿಮಾ ಮಾಡುವುದಿಲ್ಲ. ನಾನು ಬಾಲಿವುಡ್​ ಹೀರೋ. ನಾನು ಅಲ್ಲಿ ನಟಿಸಬೇಕು ಎನ್ನುವ ಕಾರಣಕ್ಕೆ ಸೆಕೆಂಡ್ ಹೀರೋ ಆಗಿ ಹೋಗುವುದಿಲ್ಲ. ಇತರ ನಟರಂತೆ ತೆಲುಗು ಅಥವಾ ಯಾವುದೇ ರೀಜನಲ್​ ಸಿನಿಮಾ ಮಾಡೋಕೇ ಹೋಗಲ್ಲ’ ಎಂದಿದ್ದರು.

ಜಾನ್​ ಅಬ್ರಾಹಂ ನೀಡಿದ್ದ ಹೇಳಿಕೆಗೆ ಭಾರಿ ವಿರೋಧ ವ್ಯಕ್ತವಾಗಿತ್ತು. ‘ಭಾರತದ ಎಲ್ಲ ಸ್ಟಾರ್​ ನಟರೂ ತಾವು ಇಂಡಿಯನ್​ ಸಿನಿಮಾ ಹೀರೋ ಎಂದು ಗುರುತಿಸಿಕೊಳ್ಳಲು ಇಷ್ಟಪಡುತ್ತಾರೆ. ಆದರೆ ಜಾನ್​ ಅಬ್ರಾಹಂ ಅವರು ಹಿಂದಿ ಸಿನಿಮಾದ ಹೀರೋ ಅಂತ ಹೇಳಿಕೊಳ್ಳುತ್ತಾರೆ’ ಎಂದು ನೆಟ್ಟಿಗರು ಕಾಲೆಳೆದರು. ಎಲ್ಲ ಭಾಷೆಯ ಸಿನಿಮಾಗಳಿಗೂ ಮೊದಲು ಗೌರವ ಕೊಡುವುದನ್ನು ಕಲಿತುಕೊಳ್ಳಿ ಎಂದು ಜನರು ಜಾನ್​ ಅಬ್ರಾಹಂ ಅವರ ಕಿವಿ ಹಿಂಡಿದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:11 am, Sun, 15 May 22

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ