AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಮಿರ್ ಖಾನ್ ಮಗನ ಸಿನಿಮಾಗೆ ಗುಜರಾತ್ ಹೈಕೋರ್ಟ್ ತಡೆ; ಮೇಲ್ಮನವಿ ಸಲ್ಲಿಸಲಿರುವ ಚಿತ್ರತಂಡ

‘ಮಹಾರಾಜ್​’ ಚಿತ್ರದಲ್ಲಿ ಆಮಿರ್​ ಖಾನ್​ ಮಗ ಜುನೈದ್​ ಖಾನ್​ ಜೊತೆ ಜೈದೀಪ್​ ಅಹಲಾವತ್​, ಶಾಲಿನಿ ಪಾಂಡೆ ಕೂಡ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಜುನೈದ್​ ಖಾನ್​ ನಟನೆಯ ಮೊದಲ ಸಿನಿಮಾಗೆ ಈ ರೀತಿ ವಿಘ್ನಗಳು ಎದುರಾಗಿದ್ದರಿಂದ ಅಭಿಮಾನಿಗಳಿಗೆ ಬೇಸರವಾಗಿದೆ. ಸಿದ್ದಾರ್ಥ್​ ಪಿ. ಮಲ್ಹೋತ್ರಾ ಅವರು ‘ಮಹಾರಾಜ್​’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ.

ಆಮಿರ್ ಖಾನ್ ಮಗನ ಸಿನಿಮಾಗೆ ಗುಜರಾತ್ ಹೈಕೋರ್ಟ್ ತಡೆ; ಮೇಲ್ಮನವಿ ಸಲ್ಲಿಸಲಿರುವ ಚಿತ್ರತಂಡ
ಜೈದೀಪ್​ ಅಹಲಾವತ್​, ಜುನೈದ್​ ಖಾನ್​
ಮದನ್​ ಕುಮಾರ್​
|

Updated on: Jun 14, 2024 | 6:25 PM

Share

ಬಾಲಿವುಡ್​ನ ಖ್ಯಾತ ನಟ ಆಮಿರ್​ ಖಾನ್​ ಅವರ ಪುತ್ರ ಜುನೈದ್​ ಖಾನ್​ (Junaid Khan) ಕೂಡ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದಾರೆ. ಅವರು ಹೀರೋ ಆಗಿ ನಟಿಸಿರುವ ಮೊದಲ ಸಿನಿಮಾ ‘ಮಹಾರಾಜ್​​’ ಇಂದು (ಜೂನ್​ 14) ಬಿಡುಗಡೆ ಆಗಬೇಕಿತ್ತು. ಆದರೆ ಈ ಸಿನಿಮಾದ ಬಿಡುಗಡೆಗೆ ಗುಜರಾತ್​ ಹೈಕೋರ್ಟ್​ ತಡೆ (Stay Order) ನೀಡಿದೆ. ನೇರವಾಗಿ ನೆಟ್​ಫ್ಲಿಕ್ಸ್​ ಒಟಿಟಿ ಮೂಲಕ ವೀಕ್ಷಣೆಗೆ ಲಭ್ಯವಾಗಬೇಕಿದ್ದ ಈ ಸಿನಿಮಾಗೆ ಕಾನೂನಿನ ತೊಡಕು ಉಂಟಾಗಿದೆ. ಆದ್ದರಿಂದ ಕೋರ್ಟ್​ನಲ್ಲಿ ಮೇಲ್ಮನವಿ ಸಲ್ಲಿಸಲು ‘ಮಹಾರಾಜ್​’ (Maharaj) ಚಿತ್ರತಂಡ ನಿರ್ಧರಿಸಿದೆ.

‘ಮಹಾರಾಜ್​’ ಸಿನಿಮಾಗೆ ಬಾಲಿವುಡ್​ನ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾದ ‘ಯಶ್​ ರಾಜ್​ ಫಿಲ್ಮ್ಸ್​’ ಬಂಡವಾಳ ಹೂಡಿದೆ. ನೈಜ ಘಟನೆಯನ್ನು ಆಧರಿಸಿ ಸೌರಭ್​ ಶಾ ಬರೆದ ‘ಮಹಾರಾಜ್​’ ಕೃತಿಯನ್ನು ಆಧಾರವಾಗಿ ಇಟ್ಟುಕೊಂಡು ಈ ಸಿನಿಮಾ ಮಾಡಲಾಗಿದೆ. ಈ ಚಿತ್ರದಲ್ಲಿ ಯಾರ ಧಾರ್ಮಿಕ ಭಾವನೆಗಳಿಗೂ ಹಾನಿ ಆಗುವಂತಹ ಅಂಶಗಳು ಇಲ್ಲ ಎಂದು ಕೃತಿಯ ಲೇಖಕ ಸೌರಭ್​ ಶಾ ಹೇಳಿದ್ದಾರೆ. ಹಾಗಿದ್ದರೂ ಕೂಡ ‘ಮಹಾರಾಜ್​’ ಚಿತ್ರದ ಬಗ್ಗೆ ಕೆಲವರು ತಕರಾರು ತೆಗೆದಿದ್ದಾರೆ.

ಬಿಡುಗಡೆಗೆ ಇನ್ನೇನು ಕೆಲವೇ ಗಂಟೆಗಳು ಇದೆ ಎನ್ನುವಾಗ ಗುಜರಾತ್​ ಹೈಕೋರ್ಟ್​ನಿಂದ ತಡೆ ಬಂದಿರುವುದರಿಂದ ಚಿತ್ರತಂಡಕ್ಕೆ ತೊಂದರೆ ಆಗಿದೆ. ಆದ್ದರಿಂದ ಈ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ನಿರ್ಮಾಣ ಸಂಸ್ಥೆಯಾದ ‘ಯಶ್​ ರಾಜ್​ ಫಿಲ್ಮ್ಸ್​’ ಹಾಗೂ ಒಟಿಟಿ ಪ್ರಕಾರ ಹಕ್ಕು ಪಡೆದುಕೊಂಡಿರುವ ‘ನೆಟ್​ಫ್ಲಿಕ್ಸ್​’ ಸಂಸ್ಥೆಗಳು ನಿರ್ಧರಿಸಿವೆ ಎಂದು ಮಾಧ್ಯಮಗಳಲ್ಲಿ ವರದಿ ಆಗಿದೆ.

ಇದನ್ನೂ ಓದಿ: ಆಮಿರ್​ ಖಾನ್​ ಮಗ ಜುನೈದ್​ ಖಾನ್​ಗೆ ಶ್ರೀದೇವಿಯ 2ನೇ ಮಗಳು ಖುಷಿ ಕಪೂರ್​ ಜೋಡಿ

ಚರ್ಚೆ ಹುಟ್ಟುಹಾಕಿರುವ ‘ಮಹಾರಾಜ್​’ ಸಿನಿಮಾದಲ್ಲಿ ಜುನೈದ್​ ಖಾನ್​ ಜೊತೆ ‘ಪಾತಾಳ್​ ಲೋಕ್​’ ಖ್ಯಾತಿಯ ಜೈದೀಪ್​ ಅಹಲಾವತ್​ ಅವರು ನಟಿಸಿದ್ದಾರೆ. ಅಲ್ಲದೇ, ‘ಅರ್ಜುನ್​ ರೆಡ್ಡಿ’ ಖ್ಯಾತಿಯ ನಟಿ ಶಾಲಿನಿ ಪಾಂಡೆ ಕೂಡ ಪ್ರಮುಖ ಪಾತ್ರವೊಂದರಲ್ಲಿ ಅಭಿನಯಿಸಿದ್ದಾರೆ. ಜುನೈದ್​ ಖಾನ್​ ಅವರ ಮೊದಲ ಚಿತ್ರಕ್ಕೆ ಈ ರೀತಿ ವಿಘ್ನ ಎದುರಾಗಿರುವುದು ಅವರ ಅಭಿಮಾನಿಗಳಿಗೆ ಬೇಸರ ಮೂಡಿದೆ. ಇದಲ್ಲದೇ ಇನ್ನೂ ಎರಡು ಸಿನಿಮಾಗಳಲ್ಲಿ ಜುನೈದ್​ ಖಾನ್​ ಬ್ಯುಸಿ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?