AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಲ್ಕಿ 2898 ಎಡಿ’ ಒಟಿಟಿ ರಿಲೀಸ್ ಬಗ್ಗೆ ಫ್ಯಾನ್ಸ್​ಗೆ ಗುಡ್ ನ್ಯೂಸ್

‘ಕಲ್ಕಿ 2898 ಎಡಿ’ ಸಿನಿಮಾ 1200 ಕೋಟಿ ರೂಪಾಯಿ ಗಳಿಕೆ ಮಾಡುವ ಹಂತದಲ್ಲಿದೆ. ಈ ಚಿತ್ರದಿಂದ ಪ್ರಭಾಸ್, ಅಮಿತಾಭ್ ಬಚ್ಚನ್ ಖ್ಯಾತಿ ಹೆಚ್ಚಿದೆ. ಈಗ ಸಿನಿಮಾ ತಂಡ ಚಿತ್ರವನ್ನು ಒಟಿಟಿಯಲ್ಲಿ ಪ್ರಸಾರ ಮಾಡಲು ರೆಡಿ ಆಗಿದೆ ಎಂಬ ವರದಿಗಳು ಬಂದಿವೆ. ಅಮೇಜಾನ್ ಪ್ರೈಮ್ ವಿಡಿಯೋ ಹಾಗೂ ನೆಟ್​ಫ್ಲಿಕ್ಸ್ ಮೂಲಕ ಸಿನಿಮಾ ಪ್ರಸಾರ ಕಾಣಲಿದೆ.

‘ಕಲ್ಕಿ 2898 ಎಡಿ’ ಒಟಿಟಿ ರಿಲೀಸ್ ಬಗ್ಗೆ ಫ್ಯಾನ್ಸ್​ಗೆ ಗುಡ್ ನ್ಯೂಸ್
ಕಲ್ಕಿ 2898 ಎಡಿ
ರಾಜೇಶ್ ದುಗ್ಗುಮನೆ
|

Updated on:Aug 13, 2024 | 12:54 PM

Share

‘ಕಲ್ಕಿ 2898 ಎಡಿ’ ಸಿನಿಮಾ ಜೂನ್ 27ರಂದು ವಿಶ್ವಾದ್ಯಂತ ರಿಲೀಸ್ ಆಯಿತು. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಮಾಡಿದ ಗಳಿಕೆ ಬರೋಬ್ಬರಿ 1100 ಕೋಟಿ ರೂಪಾಯಿ. ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ಈ ಸಿನಿಮಾ ಒಟಿಟಿಗೆ ಕಾಲಿಡಲು ರೆಡಿ ಆಗಿದೆ ಎಂದು ವರದಿ ಆಗಿದೆ. ಆಗಸ್ಟ್ 23ರಂದು ಈ ಸಿನಿಮಾ ಒಟಿಟಿಯಲ್ಲಿ ಪ್ರಸಾರ ಕಾಣಲಿದೆ. ಈ ವಿಚಾರ ತಿಳಿದು ಫ್ಯಾನ್ಸ್ ಖುಷಿ ಪಟ್ಟಿದ್ದಾರೆ. ಥಿಯೇಟರ್​​ನಲ್ಲಿ ಮಿಸ್ ಮಾಡಿಕೊಂಡವರು ಈ ಚಿತ್ರವನ್ನು ಒಟಿಟಿಯಲ್ಲಿ ವೀಕ್ಷಿಸಬಹುದು.

‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ಪ್ರಭಾಸ್ ನಟಿಸಿದ್ದಾರೆ. ಈ ಸಿನಿಮಾ ಮೂಲಕ ನಿರ್ದೇಶಕ ನಾಗ್ ಅಶ್ವಿನ್ ಅವರು ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿದ್ದಾರೆ. ಈ ಸಿನಿಮಾದಲ್ಲಿ ಕಮಲ್ ಹಾಸನ್, ಅಮಿತಾಭ್ ಬಚ್ಚನ್, ದೀಪಿಕಾ ಪಡುಕೋಣೆ ಮೊದಲಾದವರು ನಟಿಸಿದ್ದಾರೆ. ಈ ಚಿತ್ರದಿಂದ ಪ್ರಭಾಸ್ ಅವರ ಖ್ಯಾತಿ ಹೆಚ್ಚಾಗಿದೆ. ಈ ಸಿನಿಮಾನ ಈಗ ಒಟಿಟಿಯಲ್ಲಿ ನೋಡಬೇಕು ಎಂದುಕೊಂಡವರಿಗೆ ಗುಡ್​ ನ್ಯೂಸ್ ಸಿಕ್ಕಿದೆ.

‘ಕಲ್ಕಿ 2898 ಎಡಿ’ ಚಿತ್ರವನ್ನು ದೊಡ್ಡ ಮೊತ್ತಕ್ಕೆ ಅಮೇಜಾನ್ ಪ್ರೈಮ್ ವಿಡಿಯೋ ಖರೀದಿ ಮಾಡಿದೆ. ಈ ಸಿನಿಮಾದ ಹಿಂದಿ ವರ್ಷನ್ ಹಕ್ಕು ನೆಟ್​ಫ್ಲಿಕ್ಸ್ ಕೈ ಸೇರಿದೆ. ತೆಲುಗು, ಕನ್ನಡ, ಮಲಯಾಳಂ ಹಾಗೂ ತಮಿಳು ವರ್ಷನ್ ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ಲಭ್ಯವಿರಲಿದ್ದು, ಹಿಂದಿ ವರ್ಷನ್ ನೆಟ್​ಫ್ಲಿಕ್ಸ್​ನಲ್ಲಿ ಪ್ರಸಾರ ಕಾಣಲಿದೆ. ಎರಡೂ ಒಂದೇ ದಿನ ಪ್ರದರ್ಶನ ಕಾಣಲಿದೆ.

ಇದನ್ನೂ ಓದಿ: ‘ಕಲ್ಕಿ 2898 ಎಡಿ’ ಸಿನಿಮಾ ಅವಕಾಶ ನಿರಾಕರಿಸಿದ್ದ ಕೀರ್ತಿ ಸುರೇಶ್

ಕಳೆದ ವಾರ ಬ್ಯಾಕ್ ಟು ಬ್ಯಾಕ್ ಸಿನಿಮಾಗಳು ಒಟಿಟಿಯಲ್ಲಿ ಪ್ರಸಾರ ಕಂಡಿದೆ. ಈಗ ‘ಕಲ್ಕಿ 2898 ಎಡಿ’ ಸಿನಿಮಾ ಥಿಯೇಟರ್​ನಲ್ಲಿ ರಿಲೀಸ್ ಆದ ಸುಮಾರು ಎರಡು ತಿಂಗಳ ಬಳಿಕ ಒಟಿಟಿಗೆ ಕಾಲಿಡುತ್ತಿದೆ. ಈ ಚಿತ್ರವನ್ನು ಒಟಿಟಿಯಲ್ಲಿ ವೀಕ್ಷಿಸಲು ಫ್ಯಾನ್ಸ್ ಕಾದಿದ್ದಾರೆ. ಅಶ್ವಿನಿ ದತ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:54 pm, Tue, 13 August 24

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!