AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಲ್ಕಿ 2898 ಎಡಿ’ ಒಟಿಟಿ ರಿಲೀಸ್ ಬಗ್ಗೆ ಫ್ಯಾನ್ಸ್​ಗೆ ಗುಡ್ ನ್ಯೂಸ್

‘ಕಲ್ಕಿ 2898 ಎಡಿ’ ಸಿನಿಮಾ 1200 ಕೋಟಿ ರೂಪಾಯಿ ಗಳಿಕೆ ಮಾಡುವ ಹಂತದಲ್ಲಿದೆ. ಈ ಚಿತ್ರದಿಂದ ಪ್ರಭಾಸ್, ಅಮಿತಾಭ್ ಬಚ್ಚನ್ ಖ್ಯಾತಿ ಹೆಚ್ಚಿದೆ. ಈಗ ಸಿನಿಮಾ ತಂಡ ಚಿತ್ರವನ್ನು ಒಟಿಟಿಯಲ್ಲಿ ಪ್ರಸಾರ ಮಾಡಲು ರೆಡಿ ಆಗಿದೆ ಎಂಬ ವರದಿಗಳು ಬಂದಿವೆ. ಅಮೇಜಾನ್ ಪ್ರೈಮ್ ವಿಡಿಯೋ ಹಾಗೂ ನೆಟ್​ಫ್ಲಿಕ್ಸ್ ಮೂಲಕ ಸಿನಿಮಾ ಪ್ರಸಾರ ಕಾಣಲಿದೆ.

‘ಕಲ್ಕಿ 2898 ಎಡಿ’ ಒಟಿಟಿ ರಿಲೀಸ್ ಬಗ್ಗೆ ಫ್ಯಾನ್ಸ್​ಗೆ ಗುಡ್ ನ್ಯೂಸ್
ಕಲ್ಕಿ 2898 ಎಡಿ
ರಾಜೇಶ್ ದುಗ್ಗುಮನೆ
|

Updated on:Aug 13, 2024 | 12:54 PM

Share

‘ಕಲ್ಕಿ 2898 ಎಡಿ’ ಸಿನಿಮಾ ಜೂನ್ 27ರಂದು ವಿಶ್ವಾದ್ಯಂತ ರಿಲೀಸ್ ಆಯಿತು. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಮಾಡಿದ ಗಳಿಕೆ ಬರೋಬ್ಬರಿ 1100 ಕೋಟಿ ರೂಪಾಯಿ. ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ಈ ಸಿನಿಮಾ ಒಟಿಟಿಗೆ ಕಾಲಿಡಲು ರೆಡಿ ಆಗಿದೆ ಎಂದು ವರದಿ ಆಗಿದೆ. ಆಗಸ್ಟ್ 23ರಂದು ಈ ಸಿನಿಮಾ ಒಟಿಟಿಯಲ್ಲಿ ಪ್ರಸಾರ ಕಾಣಲಿದೆ. ಈ ವಿಚಾರ ತಿಳಿದು ಫ್ಯಾನ್ಸ್ ಖುಷಿ ಪಟ್ಟಿದ್ದಾರೆ. ಥಿಯೇಟರ್​​ನಲ್ಲಿ ಮಿಸ್ ಮಾಡಿಕೊಂಡವರು ಈ ಚಿತ್ರವನ್ನು ಒಟಿಟಿಯಲ್ಲಿ ವೀಕ್ಷಿಸಬಹುದು.

‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ಪ್ರಭಾಸ್ ನಟಿಸಿದ್ದಾರೆ. ಈ ಸಿನಿಮಾ ಮೂಲಕ ನಿರ್ದೇಶಕ ನಾಗ್ ಅಶ್ವಿನ್ ಅವರು ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿದ್ದಾರೆ. ಈ ಸಿನಿಮಾದಲ್ಲಿ ಕಮಲ್ ಹಾಸನ್, ಅಮಿತಾಭ್ ಬಚ್ಚನ್, ದೀಪಿಕಾ ಪಡುಕೋಣೆ ಮೊದಲಾದವರು ನಟಿಸಿದ್ದಾರೆ. ಈ ಚಿತ್ರದಿಂದ ಪ್ರಭಾಸ್ ಅವರ ಖ್ಯಾತಿ ಹೆಚ್ಚಾಗಿದೆ. ಈ ಸಿನಿಮಾನ ಈಗ ಒಟಿಟಿಯಲ್ಲಿ ನೋಡಬೇಕು ಎಂದುಕೊಂಡವರಿಗೆ ಗುಡ್​ ನ್ಯೂಸ್ ಸಿಕ್ಕಿದೆ.

‘ಕಲ್ಕಿ 2898 ಎಡಿ’ ಚಿತ್ರವನ್ನು ದೊಡ್ಡ ಮೊತ್ತಕ್ಕೆ ಅಮೇಜಾನ್ ಪ್ರೈಮ್ ವಿಡಿಯೋ ಖರೀದಿ ಮಾಡಿದೆ. ಈ ಸಿನಿಮಾದ ಹಿಂದಿ ವರ್ಷನ್ ಹಕ್ಕು ನೆಟ್​ಫ್ಲಿಕ್ಸ್ ಕೈ ಸೇರಿದೆ. ತೆಲುಗು, ಕನ್ನಡ, ಮಲಯಾಳಂ ಹಾಗೂ ತಮಿಳು ವರ್ಷನ್ ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ಲಭ್ಯವಿರಲಿದ್ದು, ಹಿಂದಿ ವರ್ಷನ್ ನೆಟ್​ಫ್ಲಿಕ್ಸ್​ನಲ್ಲಿ ಪ್ರಸಾರ ಕಾಣಲಿದೆ. ಎರಡೂ ಒಂದೇ ದಿನ ಪ್ರದರ್ಶನ ಕಾಣಲಿದೆ.

ಇದನ್ನೂ ಓದಿ: ‘ಕಲ್ಕಿ 2898 ಎಡಿ’ ಸಿನಿಮಾ ಅವಕಾಶ ನಿರಾಕರಿಸಿದ್ದ ಕೀರ್ತಿ ಸುರೇಶ್

ಕಳೆದ ವಾರ ಬ್ಯಾಕ್ ಟು ಬ್ಯಾಕ್ ಸಿನಿಮಾಗಳು ಒಟಿಟಿಯಲ್ಲಿ ಪ್ರಸಾರ ಕಂಡಿದೆ. ಈಗ ‘ಕಲ್ಕಿ 2898 ಎಡಿ’ ಸಿನಿಮಾ ಥಿಯೇಟರ್​ನಲ್ಲಿ ರಿಲೀಸ್ ಆದ ಸುಮಾರು ಎರಡು ತಿಂಗಳ ಬಳಿಕ ಒಟಿಟಿಗೆ ಕಾಲಿಡುತ್ತಿದೆ. ಈ ಚಿತ್ರವನ್ನು ಒಟಿಟಿಯಲ್ಲಿ ವೀಕ್ಷಿಸಲು ಫ್ಯಾನ್ಸ್ ಕಾದಿದ್ದಾರೆ. ಅಶ್ವಿನಿ ದತ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:54 pm, Tue, 13 August 24

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!