AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನಿಂದ ಬಂದು ಸೇಡಿನ ಮಾತಾಡಿದ್ರಾ ಕೆಆರ್​ಕೆ? ಸ್ಪಷ್ಟನೆ ನೀಡಿದ ವಿವಾದಾತ್ಮಕ ವಿಮರ್ಶಕ

Kamaal R Khan | KRK: ಕಮಾಲ್​ ಆರ್​. ಖಾನ್​ ಅವರದ್ದು ನಿಷ್ಠುರದ ವ್ಯಕ್ತಿತ್ವ. ಅನೇಕ ಬಾಲಿವುಡ್​ ಸೆಲೆಬ್ರಿಟಿಗಳನ್ನು ಅವರು ಎದುರು ಹಾಕಿಕೊಂಡಿದ್ದಾರೆ.

ಜೈಲಿನಿಂದ ಬಂದು ಸೇಡಿನ ಮಾತಾಡಿದ್ರಾ ಕೆಆರ್​ಕೆ? ಸ್ಪಷ್ಟನೆ ನೀಡಿದ ವಿವಾದಾತ್ಮಕ ವಿಮರ್ಶಕ
ಕಮಾಲ್ ಆರ್. ಖಾನ್
TV9 Web
| Edited By: |

Updated on: Sep 11, 2022 | 8:12 PM

Share

ನಟ, ವಿಮರ್ಶಕ ಕಮಾಲ್​ ಆರ್​. ಖಾನ್​ (Kamaal R Khan) ಅವರು ಇತ್ತೀಚಿನ ದಿನಗಳಲ್ಲಿ ಹೆಚ್ಚು ಸುದ್ದಿಯಲ್ಲಿದ್ದಾರೆ. ತಮ್ಮ ಮೇಲೆ ಎದುರಾದ ಕೆಲವು ಆರೋಪಗಳಿಂದಾಗಿ ಅವರು ಜೈಲು ವಾಸ ಅನುಭವಿಸುವಂತಾಯಿತು. ಎರಡು ಪ್ರತ್ಯೇಕ ಕೇಸ್​ಗಳಲ್ಲಿ ಅವರು ನ್ಯಾಯಾಂಗ ಬಂಧನದಲ್ಲಿ ಇದ್ದರು. ಈಗ ಜಾಮೀನು ಪಡೆದು ಅವರು ಹೊರಬಂದಿದ್ದಾರೆ. ಜಾಮೀನು ಪಡೆದ ಬಳಿಕ ಅವರು ಸೇಡು ತೀರಿಸಿಕೊಳ್ಳಲಿದ್ದಾರೆ ಎಂದು ಕೆಲವು ಮಾಧ್ಯಮಗಳಲ್ಲಿ ವರದಿ ಆಗಿದೆ. ಆದರೆ ಅದನ್ನು ಕಮಾಲ್​ ಆರ್​. ಖಾನ್​ (KRK) ತಳ್ಳಿ ಹಾಕಿದ್ದಾರೆ. ಈ ಬಗ್ಗೆ ಅವರು ಸ್ಪಷ್ಟನೆ ನೀಡಿದ್ದಾರೆ. ‘ನಾನು ಸೇಡು ತೀರಿಸಿಕೊಳ್ಳುವುದಿಲ್ಲ’ ಎಂದು ಅವರು ಹೇಳಿದ್ದಾರೆ.

ಕಮಾಲ್​ ಆರ್​. ಖಾನ್​ ಅವರದ್ದು ನಿಷ್ಠುರದ ವ್ಯಕ್ತಿತ್ವ. ಅನೇಕ ಬಾಲಿವುಡ್​ ಸೆಲೆಬ್ರಿಟಿಗಳನ್ನು ಅವರು ಎದುರು ಹಾಕಿಕೊಂಡಿದ್ದಾರೆ. ಅಕ್ಷಯ್​ ಕುಮಾರ್​ ನಟನೆಯ ‘ಲಕ್ಷ್ಮೀ’ ಸಿನಿಮಾ ಹಾಗೂ ಇನ್ನಿತರ ಸೆಲೆಬ್ರಿಟಿಗಳ ಬಗ್ಗೆ ಆಕ್ಷೇಪಾರ್ಹವಾಗಿ ಟ್ವೀಟ್​ ಮಾಡಿದ್ದಕ್ಕಾಗಿ ಅವರನ್ನು ಬಂಧಿಸಲಾಗಿತ್ತು. ಅಲ್ಲದೇ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೂಡ ಅವರ ಮೇಲಿದೆ. ಸದ್ಯ ಅವರು ಜಾಮೀನು ಪಡೆದು ಹೊರಬಂದಿದ್ದಾರೆ. ಅವರ ಮುಂದಿನ ನಡೆ ಏನು ಎಂಬುದನ್ನು ಇನ್ನಷ್ಟು ಗೊತ್ತಾಗಬೇಕಿದೆ.

ಇದನ್ನೂ ಓದಿ
Image
RRR ಕಲೆಕ್ಷನ್​ ರಿಪೋರ್ಟ್​ ಸುಳ್ಳು ಎಂದ ಕಮಾಲ್​ ಆರ್​ ಖಾನ್​; ಸಾಬೀತು ಮಾಡುವುದಾಗಿ ಘೋಷಣೆ
Image
‘ಭಕ್ತರ ಭಕ್ತ ಮಹಾಭಕ್ತ’, ‘ಕಾಶ್ಮೀರದ ಶರ್ಮಾ’: ಖಾನ್​ ಚಿತ್ರಕ್ಕೆ ಹೊಸ ಹೆಸರು ಸೂಚಿಸಿದ ಇನ್ನೊಬ್ಬ ಖಾನ್​
Image
‘ಈ ನಟರಿಗೆ ಅಹಂಕಾರ ಜಾಸ್ತಿ’; ವಿಡಿಯೋ ಮೂಲಕ ಎಳೆ ಎಳೆಯಾಗಿ ವಿವರಿಸಿದ ಕಮಾಲ್​ ಆರ್.​ ಖಾನ್​
Image
ಸಲ್ಮಾನ್​ ಖಾನ್​ ವಿರುದ್ಧ ಯಾವುದೇ ಹೇಳಿಕೆ ನೀಡಬೇಡಿ; ಕಮಾಲ್​ ಆರ್​ ಖಾನ್​ಗೆ ಕೋರ್ಟ್​ ಆದೇಶ

‘ನನ್ನ ಸೇಡಿಗಾಗಿ ನಾನು ವಾಪಸ್​ ಬಂದಿದ್ದೇನೆ’ ಅಂತ ಕಮಾಲ್​ ಆರ್​. ಖಾನ್​ ಹೇಳಿರುವುದಾಗಿ ಕೆಲವು ಮಾಧ್ಯಮಗಳು ವರದಿ ಮಾಡಿವೆ. ಇದರ ಬಗ್ಗೆ ಅವರಿಂದ ಪ್ರತಿಕ್ರಿಯೆ ಬಂದಿದೆ. ‘ಮಾಧ್ಯಮಗಳು ಹೊಸ ಕಥೆ ಕಟ್ಟುತ್ತಿವೆ. ನಾನು ವಾಪಸ್​ ಬಂದಿದ್ದೇನೆ ಮತ್ತು ಮನೆಯಲ್ಲಿ ಸುರಕ್ಷಿತವಾಗಿದ್ದೇನೆ. ನನಗೆ ಆದ ಎಲ್ಲ ಕೆಟ್ಟ ಘಟನೆಗಳನ್ನು ನಾನು ಮರೆತಿದ್ದೇನೆ. ನನ್ನ ಹಣೆಯಲ್ಲಿ ಅದು ಬರೆದಿದ್ದು ಅಂತ ನಂಬಿದ್ದೇನೆ’ ಎಂದು ಕಮಾಲ್​ ಆರ್​. ಖಾನ್​ ಹೇಳಿದ್ದಾರೆ.

ಸೆಪ್ಟೆಂಬರ್​ 8ರಂದು ಕಮಾಲ್ ಆರ್​. ಖಾನ್​ ಅವರ ಮಗ ಫೈಸಲ್​ ಕಮಾಲ್​ ಮಾಡಿದ ಟ್ವೀಟ್​ ಅಚ್ಚರಿ ಮೂಡಿಸಿತ್ತು. ‘ಮುಂಬೈನಲ್ಲಿ ಕೆಲವರು ನನ್ನ ತಂದೆಗೆ ಸಾಯುವಂತೆ ಟಾರ್ಚರ್​ ನೀಡುತ್ತಿದ್ದಾರೆ. 23 ವರ್ಷದವನಾದ ನಾನು ಲಂಡನ್​ನಲ್ಲಿ ವಾಸಿಸುತ್ತಿದ್ದೇನೆ. ಅಪ್ಪನಿಗೆ ಹೇಗೆ ಸಹಾಯ ಮಾಡಬೇಕೋ ನನಗೆ ತಿಳಿಯುತ್ತಿಲ್ಲ. ಅಭಿಷೇಕ್​ ಬಚ್ಚನ್​, ರಿತೇಶ್​ ದೇಶಮುಖ್​ ಮತ್ತು ದೇವೇಂದ್ರ ಫಡ್ನವಿಸ್​ ಅವರು ಅಪ್ಪನ ಪ್ರಾಣ ಉಳಿಸಬೇಕು ಅಂತ ಮನವಿ ಮಾಡಿಕೊಳ್ಳುತ್ತೇನೆ. ಅಪ್ಪ ಇಲ್ಲದಿದ್ದರೆ ನಾನು ಮತ್ತು ನನ್ನ ಸಹೋದರಿ ಸಾಯುತ್ತೇವೆ’ ಎಂದು ಫೈಸಲ್​ ಕಮಾಲ್​ ಟ್ವೀಟ್​ ಮಾಡಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ