AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟಿಟಿ ಪ್ಲಾಟ್​ಫಾರ್ಮ್​ನಲ್ಲಿ 200 ಕೋಟಿ ರೂಪಾಯಿ ಲಾಭ ಮಾಡಿದ ‘ವಿಕ್ರಮ್​’ ಸಿನಿಮಾ

ಕಮಲ್​ ಹಾಸನ್​ ನಟನೆ ಮತ್ತು ಲೋಕೇಶ್​ ಕನಗರಾಜ್​ ನಿರ್ದೇಶನಕ್ಕೆ ಪ್ರೇಕ್ಷಕರು ಭೇಷ್​ ಎಂದಿದ್ದಾರೆ. ‘ವಿಕ್ರಮ್​’ ಚಿತ್ರದ ಒಟಿಟಿ ಪ್ರಸಾರ ಹಕ್ಕುಗಳಿಗೆ ಒಳ್ಳೆಯ ಬೇಡಿಕೆ ಬಂದಿದೆ.

ಒಟಿಟಿ ಪ್ಲಾಟ್​ಫಾರ್ಮ್​ನಲ್ಲಿ 200 ಕೋಟಿ ರೂಪಾಯಿ ಲಾಭ ಮಾಡಿದ ‘ವಿಕ್ರಮ್​’ ಸಿನಿಮಾ
ಕಮಲ್ ಹಾಸನ್
TV9 Web
| Updated By: ಮದನ್​ ಕುಮಾರ್​|

Updated on:Jun 03, 2022 | 12:19 PM

Share

ನಟ ಕಮಲ್​ ಹಾಸನ್​ (Kamal Haasan) ಅವರ ಸಿನಿಮಾಗಳ ಮೇಲೆ ಜನರಿಗೆ ಇರುವ ಕ್ರೇಜ್​ ಅಷ್ಟಿಷ್ಟಲ್ಲ. ಹಲವಾರು ಸೂಪರ್​ ಹಿಟ್​ ಸಿನಿಮಾಗಳನ್ನು ನೀಡಿರುವ ಅವರು ಈಗ ‘ವಿಕ್ರಮ್​’ ಚಿತ್ರದ (Vikram Movie) ಮೂಲಕ ಪ್ರೇಕ್ಷಕರ ಎದುರು ಬಂದಿದ್ದಾರೆ. ಅದ್ದೂರಿಯಾಗಿ ಈ ಸಿನಿಮಾ ಮೂಡಿಬಂದಿದೆ. ಇಂದು (ಜೂನ್​ 3) ವಿಶ್ವಾದ್ಯಂತ ಈ ಚಿತ್ರ ರಿಲೀಸ್​ ಆಗಿದೆ. ಎಲ್ಲ ಕಡೆಗಳಲ್ಲಿ ಅತ್ಯುತ್ತಮವಾದ ಓಪನಿಂಗ್​ ಸಿಕ್ಕಿದೆ. ಇದರಿಂದ ಬಾಕ್ಸ್​ ಆಫೀಸ್​ನಲ್ಲಿ ‘ವಿಕ್ರಮ್​’ ಸಿನಿಮಾ ಭರಪೂರ ಕಮಾಯಿ ಮಾಡಲಿದೆ. ಆದರೆ ಅದಕ್ಕೂ ಮುನ್ನವೇ ಒಟಿಟಿ ಪ್ಲಾಟ್​ಫಾರ್ಮ್​ (OTT) ಮೂಲಕ ಈ ಚಿತ್ರಕ್ಕೆ 200 ಕೋಟಿ ರೂಪಾಯಿ ಬಿಸ್ನೆಸ್​ ಆಗಿದೆ ಎಂಬ ಮಾಹಿತಿ ಕೇಳಿಬಂದಿದೆ. ಒಟಿಟಿ ಮತ್ತು ಕಿರುತೆರೆ ಪ್ರಸಾರ ಹಕ್ಕುಗಳಿಂದ ಇಷ್ಟು ದೊಡ್ಡ ಮೊತ್ತ ಹರಿದುಬಂದಿದೆ ಎನ್ನಲಾಗಿದೆ. ಈ ಚಿತ್ರಕ್ಕೆ ಕಮಲ್​ ಹಾಸನ್​ ಅವರ ‘ರಾಜ್​ ಕಮಲ್​ ಫಿಲ್ಮ್ಸ್​ ಇಂಟರ್​ನ್ಯಾಷನಲ್​’ ಸಂಸ್ಥೆ ಬಂಡವಾಳ ಹೂಡಿದೆ.

‘ವಿಕ್ರಮ್​’ ಸಿನಿಮಾದಲ್ಲಿ ಘಟಾನುಘಟಿ ಕಲಾವಿದರು ನಟಿಸಿದ್ದಾರೆ. ಕಮಲ್​ ಹಾಸನ್​ ಜೊತೆಗೆ ವಿಜಯ್​ ಸೇತುಪತಿ, ಫಹಾದ್​ ಫಾಸಿಲ್​ ಕೂಡ ಮಿಂಚಿದ್ದಾರೆ. ಸೂರ್ಯ ಅವರು ಅತಿಥಿ ಪಾತ್ರ ಮಾಡಿದ್ದಾರೆ. ಈ ಕಲಾವಿದರ ಕಾಂಬಿನೇಷನ್​ ಕಾರಣದಿಂದ ಚಿತ್ರಕ್ಕೆ ಹೈವೋಲ್ಟೇಜ್​ ಬಂದಂತೆ ಆಗಿದೆ. ಇದು ಪ್ರೇಕ್ಷಕರಿಗೆ ಇಷ್ಟ ಆಗಿದೆ. ಹಾಗಾಗಿ ಚಿತ್ರದ ಒಟಿಟಿ ಪ್ರಸಾರ ಹಕ್ಕುಗಳಿಗೆ ಒಳ್ಳೆಯ ಬೇಡಿಕೆ ಬಂದಿದೆ.

ಇದನ್ನೂ ಓದಿ: ಕಮಲ್​ ಹಾಸನ್​ ನಟನೆಯ ‘ವಿಕ್ರಮ್​’ ಚಿತ್ರಕ್ಕೆ 13 ಕಡೆ ಕತ್ತರಿ ಹಾಕಿದ ಸೆನ್ಸಾರ್​ ಮಂಡಳಿ; ಸಿಕ್ಕ ಪ್ರಮಾಣಪತ್ರ ಯಾವುದು?

ಇದನ್ನೂ ಓದಿ
Image
ಕಮಲ್​ ಹಾಸನ್​ ನಟನೆಯ ‘ವಿಕ್ರಮ್​’ ಚಿತ್ರಕ್ಕೆ 13 ಕಡೆ ಕತ್ತರಿ ಹಾಕಿದ ಸೆನ್ಸಾರ್​ ಮಂಡಳಿ; ಸಿಕ್ಕ ಪ್ರಮಾಣಪತ್ರ ಯಾವುದು?
Image
‘ರಜಿನಿಕಾಂತ್​- ನಾನು ಒಳ್ಳೆಯ ಫ್ರೆಂಡ್ಸ್​, ಆದರೆ ಒಂದು ವಿಚಾರದ ಹೊರತಾಗಿ’ ಎಂದ ಕಮಲ್​ ಹಾಸನ್​; ಏನದು?
Image
ಕಮಲ್​ ಹಾಸನ್ ಜೊತೆ ಪ್ರಶಾಂತ್​ ನೀಲ್​ ಸಿನಿಮಾ? ಹೈ-ವೋಲ್ಟೇಜ್​ ಕಾಂಬಿನೇಷನ್​ ಬಗ್ಗೆ ಹೊಸ ಗುಸುಗುಸು
Image
ಕಮಲ್​ ಹಾಸನ್​ ಮಾಜಿ ಪತ್ನಿ ಸಾರಿಕಾಗೆ ಆರ್ಥಿಕ ಸಂಕಷ್ಟ; 3 ಸಾವಿರ ರೂಪಾಯಿಗಾಗಿ ಕಷ್ಟಪಟ್ಟ ಖ್ಯಾತ ನಟಿ

‘ವಿಕ್ರಮ್​’ ಸಿನಿಮಾಗೆ ಅದ್ದೂರಿಯಾಗಿ ಪ್ರಚಾರ ಮಾಡಲಾಗಿದೆ. ಬುರ್ಜ್​ ಖಲೀಫಾ ಮೇಲೆ ಕೆಲವು ದೃಶ್ಯಗಳನ್ನು ಬಿತ್ತರ ಮಾಡಲಾಯಿತು. ಬೆಂಗಳೂರಿಗೂ ಬಂದು ಕಮಲ್​ ಹಾಸನ್​ ಪ್ರಚಾರ ಮಾಡಿದರು. ಪ್ರೇಕ್ಷಕರಿಂದ ಮೊದಲ ದಿನವೇ ಈ ಸಿನಿಮಾಗೆ ಉತ್ತಮ ವಿಮರ್ಶೆ ವ್ಯಕ್ತವಾಗಿದೆ. ಹಾಗಾಗಿ ಭರ್ಜರಿ ಓಪನಿಂಗ್​ ಸಿಕ್ಕಿದೆ. ಶನಿವಾರ (ಜೂನ್​ 4) ಮತ್ತು ಭಾನುವಾರ (ಜೂನ್​ 5) ದೊಡ್ಡ ಮಟ್ಟದಲ್ಲಿ ಕಮಾಯಿ ಆಗುವ ನಿರೀಕ್ಷೆ ಇದೆ.

ನಿರ್ದೇಶಕ ಲೋಕೇಶ್​ ಕನಗರಾಜ್​ ಅವರ ಪ್ರಯತ್ನಕ್ಕೆ ಪ್ರೇಕ್ಷಕರು ಭೇಷ್​ ಎಂದಿದ್ದಾರೆ. ಸಿನಿಮಾದಲ್ಲಿ ಬರುವ ಸಾಹಸ ದೃಶ್ಯಗಳನ್ನು ಕಮಲ್​ ಹಾಸನ್​ ಫ್ಯಾನ್ಸ್​ ಮೆಚ್ಚಿಕೊಂಡಿದ್ದಾರೆ. 67ನೇ ವಯಸ್ಸಿನಲ್ಲೂ ಅವರು ಈ ಪರಿ ಆ್ಯಕ್ಷನ್​ ಮೆರೆದಿರುವುದು ಕಂಡು ಅಭಿಮಾನಿಗಳು ಅಚ್ಚರಿಪಟ್ಟಿದ್ದಾರೆ. ಕರ್ನಾಟಕದಲ್ಲೂ ಈ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:19 pm, Fri, 3 June 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ