AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kangana Ranaut: ಕಂಗನಾ ರಣಾವತ್​ ನಿರ್ಮಾಣದ ಸಿನಿಮಾಗೆ ನೆಗೆಟಿವ್​ ವಿಮರ್ಶೆ; ಮೂವೀ ಮಾಫಿಯಾ ಮೇಲೆ ಆರೋಪ ಹೊರಿಸಿದ ನಟಿ

Avneet Kaur: ‘ಟೀಕು ವೆಡ್ಸ್​ ಶೇರು’ ಸಿನಿಮಾದಲ್ಲಿ ನಾಯಕ ಮತ್ತು ನಾಯಕಿ ನಡುವೆ ವಯಸ್ಸಿನ ಅಂತರ ಜಾಸ್ತಿ ಇದೆ. ಇದರ ಬಗ್ಗೆ ಒಂದು ವರ್ಗದ ಜನರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Kangana Ranaut: ಕಂಗನಾ ರಣಾವತ್​ ನಿರ್ಮಾಣದ ಸಿನಿಮಾಗೆ ನೆಗೆಟಿವ್​ ವಿಮರ್ಶೆ; ಮೂವೀ ಮಾಫಿಯಾ ಮೇಲೆ ಆರೋಪ ಹೊರಿಸಿದ ನಟಿ
ಕಂಗನಾ ರಣಾವತ್​
ಮದನ್​ ಕುಮಾರ್​
|

Updated on: Jun 23, 2023 | 5:42 PM

Share

ನಟಿ ಕಂಗನಾ ರಣಾವತ್​ (Kangana Ranaut) ಅವರು ನಟನೆ ಮಾತ್ರವಲ್ಲದೇ ಸಿನಿಮಾ ನಿರ್ಮಾಣದಲ್ಲೂ ಆಸಕ್ತಿ ಹೊಂದಿದ್ದಾರೆ. ಅವರ ಒಡೆತನದ ‘ಮಣಿಕರ್ಣಿಕಾ ಫಿಲ್ಮ್ಸ್​’ ಬ್ಯಾನರ್​ ಮೂಲಕ ಅವರು ಇತರ ನಟ-ನಟಿಯರಿಗೆ, ತಂತ್ರಜ್ಞರಿಗೆ ಅವಕಾಶ ನೀಡುತ್ತಿದ್ದಾರೆ. ಈ ಸಂಸ್ಥೆಯಿಂದ ‘ಟೀಕು ವೆಡ್ಸ್​ ಶೇರು’ (Tiku weds Sheru) ಸಿನಿಮಾ ಮೂಡಿಬಂದಿದೆ. ಈ ಸಿನಿಮಾ ನೇರವಾಗಿ ಒಟಿಟಿಯಲ್ಲಿ ರಿಲೀಸ್​ ಆಗಿದೆ. ‘ಅಮೇಜಾನ್​ ಪ್ರೈಂ ವಿಡಿಯೋ’ದಲ್ಲಿ ಈ ಚಿತ್ರವನ್ನು ನೋಡಿದ ಕೆಲವರು ನೆಗೆಟಿವ್​ ವಿಮರ್ಶೆ ನೀಡುತ್ತಿದ್ದಾರೆ. ಅದು ಕಂಗನಾಗೆ ಬೇಸರ ಮೂಡಿಸಿದೆ. ನವಾಜುದ್ದೀನ್​ ಸಿದ್ಧಿಕಿ (Nawazuddin Siddiqui) ಮತ್ತು ಅವನೀತ್​ ಕೌರ್​ ಅವರು ಈ ಸಿನಿಮಾದಲ್ಲಿ ಜೋಡಿಯಾಗಿ ನಟಿಸಿದ್ದಾರೆ. ಹಲವು ವಿಚಾರಗಳ ಬಗ್ಗೆ ಪ್ರೇಕ್ಷಕರು ತಕರಾರು ತೆಗೆದಿದ್ದಾರೆ. ಇದೆಲ್ಲವೂ ಮೂವೀ ಮಾಫಿಯಾದವರ ಕೈವಾಡ ಎಂದು ಕಂಗನಾ ರಣಾವತ್​ ಆರೋಪಿಸಿದ್ದಾರೆ.

ಭಾರತೀಯ ಚಿತ್ರರಂಗದ ಅನೇಕ ವಿಚಾರಗಳ ಬಗ್ಗೆ ಕಂಗನಾ ರಣಾವತ್​ ಅವರು ಟೀಕೆ ಮಾಡುತ್ತಾರೆ. ತಮಗೆ ಸಂಬಂಧವೇ ಇಲ್ಲದ ವಿಚಾರದಲ್ಲೂ ಅವರು ಮೂಗು ತೂರಿಸುವ ಪ್ರಯತ್ನ ಮಾಡುತ್ತಾರೆ. ಹಾಗಾಗಿ ಅವರನ್ನು ಜನರು ಬಹಳ ಸೂಕ್ಷ್ಮವಾಗಿ ಗಮನಿಸುತ್ತಾ ಇರುತ್ತಾರೆ. ಕಂಗನಾ ಅವರೇ ತಪ್ಪು ಮಾಡಿದರೆ ನೆಟ್ಟಿಗರು ಖಂಡಿತವಾಗಿಯೂ ಛಾಟಿ ಬೀಸುತ್ತಾರೆ. ಈಗ ಅವರು ನಿರ್ಮಾಣ ಮಾಡಿರುವ ‘ಟೀಕು ವೆಡ್ಸ್​ ಶೇರು’ ಸಿನಿಮಾದಲ್ಲಿ ನಾಯಕ ಮತ್ತು ನಾಯಕಿ ನಡುವೆ ವಯಸ್ಸಿನ ಅಂತರ ಜಾಸ್ತಿ ಇದೆ. ಇದರ ಬಗ್ಗೆ ಒಂದು ವರ್ಗದ ಜನರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Kangana Ranaut: ಚಿಕ್ಕ ಬಟ್ಟೆ ಧರಿಸಿ ದೇವಸ್ಥಾನಕ್ಕೆ ಬಂದ ಹುಡುಗಿಗೆ ಕಂಗನಾ ರಣಾವತ್​ ಕ್ಲಾಸ್​; ವೈರಲ್​ ಆಯ್ತು ಫೋಟೋ

ನವಾಜುದ್ದೀನ್​ ಸಿದ್ಧಿಕಿ ಮತ್ತು ಅವನೀತ್​ ಕೌರ್​ ಅವರು ಕಿಸ್​ ಮಾಡುವ ದೃಶ್ಯ ಈ ಸಿನಿಮಾದಲ್ಲಿ ಇದೆ. ನವಾಜುದ್ದೀನ್​ ಸಿದ್ಧಿಕಿ ಅವರಿಗೆ 49 ವರ್ಷ ವಯಸ್ಸು. ಅವನೀತ್​ ಕೌರ್​ ಅವರಿಗೆ ಇನ್ನೂ 21ರ ಪ್ರಾಯ. ಇಷ್ಟು ದೊಡ್ಡ ಏಜ್​ ಗ್ಯಾಪ್​ ಇರುವ ಕಲಾವಿದರು ಜೋಡಿಯಾಗಿ ನಟಿಸಿದ್ದು ಸರಿಯಲ್ಲ ಎಂಬುದು ಕೆಲವರ ತಕರಾರು. ಆದರೆ ಇಂಥ ಟೀಕೆಗಳಿಗೆ ಪ್ರೇಕ್ಷಕರು ಕಿವಿ ಕೊಡಬಾರದು ಎಂದು ಕಂಗನಾ ಹೇಳಿದ್ದಾರೆ. ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಅವರು ಈ ಬಗ್ಗೆ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ‘ಮೂವೀ ಮಾಫಿಯಾ ವಿಚಾರ ಬಂದ್ರೆ ನೀವೆಲ್ಲ ಸೈಲೆಂಟ್ ಆಗ್ತೀರಿ’; ಮತ್ತೆ ಸಿಟ್ಟಾದ ಕಂಗನಾ ರಣಾವತ್

‘ವಯಸ್ಸಿನ ವಿಚಾರ ಇಟ್ಟುಕೊಂಡು ಮೂವೀ ಮಾಫಿಯಾದವರು ಮಾಡುತ್ತಿರುವ ವಿವಾದದಿಂದ ಏನೂ ಲಾಭ ಇಲ್ಲ’ ಎಂದು ಕಂಗನಾ ರಣಾವತ್​ ಹೇಳಿದ್ದಾರೆ. ‘ನನ್ನ ಸಿನಿಮಾವನ್ನು ಹಾಳು ಮಾಡಲು ಮೂವೀ ಮಾಫಿಯಾದವರು ಪ್ರಯತ್ನಿಸುತ್ತಿದ್ದಾರೆ. ಚಿತ್ರ ರಿಲೀಸ್​ ಆಗುವುದಕ್ಕೂ ಮುನ್ನವೇ ಸುಳ್ಳು ವಿಮರ್ಶೆಗಳು ಮತ್ತು ಅಪಪ್ರಚಾರ ನಡೆಯುತ್ತಿದೆ. ಈಗ ನಮ್ಮ ಸಿನಿಮಾ ವೀಕ್ಷಣೆಗೆ ಲಭ್ಯವಾಗಿದೆ. ನೀವೇ ಸ್ವತಃ ನೋಡಿ. ನಿಮ್ಮ ಸ್ನೇಹಿತರ ಅಭಿಪ್ರಾಯ ಕೇಳಿ. ಪೇಯ್ಡ್​ ವಿಮರ್ಶೆಗಳು ಮತ್ತು ನಕಲಿ ಟ್ರೆಂಡ್​ಗಳನ್ನು ನಂಬಬೇಡಿ’ ಎಂದು ಕಂಗನಾ ರಣಾವತ್​ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ