AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kangana Ranaut: ‘‘ನೀವು ಕಣ್ಣೀರು ಹಾಕುವ ದಿನ ಬಂದಿದೆ’’; ಕಂಗನಾ ಹೀಗೆ ಗಂಭೀರ ಎಚ್ಚರಿಕೆ ನೀಡಿದ್ದು ಯಾರಿಗೆ?

Karan Johar | Lock Upp: ‘ಆಲ್ಟ್ ಬಾಲಾಜಿ’ ಹಾಗೂ ಎಂಎಕ್ಸ್ ಪ್ಲೇಯರ್ ನಲ್ಲಿ ಪ್ರಸಾರವಾಗುತ್ತಿರುವ ಈ ಶೋ ಸದ್ಯ 200 ಮಿಲಿಯನ್ ವೀಕ್ಷಣೆ ಕಂಡಿದೆ. ಈ ಬಗ್ಗೆ ಕಂಗನಾ ಪೋಸ್ಟ್ ಹಂಚಿಕೊಂಡಿದ್ದು, ಆ ಸಂಭ್ರಮವನ್ನು ಹಂಚಿಕೊಳ್ಳುತ್ತಾ ತಮ್ಮ ವಿರೋಧಿಯ ಹೆಸರನ್ನು ಎಳೆದುತಂದಿದ್ದಾರೆ.

Kangana Ranaut: ‘‘ನೀವು ಕಣ್ಣೀರು ಹಾಕುವ ದಿನ ಬಂದಿದೆ’’; ಕಂಗನಾ ಹೀಗೆ ಗಂಭೀರ ಎಚ್ಚರಿಕೆ ನೀಡಿದ್ದು ಯಾರಿಗೆ?
ಕಂಗನಾ ರಣಾವತ್
TV9 Web
| Edited By: |

Updated on: Apr 01, 2022 | 4:38 PM

Share

ಕಂಗನಾ ರಣಾವತ್ ತಮ್ಮ ಹೇಳಿಕೆಗಳಿಂದ ಸದಾ ಕಾಲ‌ ಸುದ್ದಿಯಾಗುತ್ತಾರೆ. ಸಾಮಾಜಿಕ ಜಾಲತಾಣಗಳಲ್ಲೂ ಸಕ್ರಿಯರಾಗಿರುವ ಅವರು, ತಮಗೆ ತೋಚಿದ್ದನ್ನು ಹಂಚಿಕೊಳ್ಳುತ್ತಾರೆ. ಇದೀಗ ಅವರು ‘ಲಾಕ್‌ ಅಪ್’ ಶೋ (Lock Upp Show) ನಡೆಸಿಕೊಡುತ್ತಿದ್ದು, ಕಾರ್ಯಕ್ರಮ ಹಲವು ಕಾರಣಗಳಿಗೆ ಸಖತ್ ಸುದ್ದಿಯಾಗುತ್ತಿದೆ. ಈ ಶೋಗೆ ಕಂಗನಾ (Kangana Ranaut) ನಿರೂಪಕಿಯೂ ಹೌದು, ತೀರ್ಪುಗಾರರೂ ಹೌದು‌. ‘ಆಲ್ಟ್ ಬಾಲಾಜಿ’ ಹಾಗೂ ಎಂಎಕ್ಸ್ ಪ್ಲೇಯರ್ ನಲ್ಲಿ ಪ್ರಸಾರವಾಗುತ್ತಿರುವ ಈ ಶೋ ಸದ್ಯ 200 ಮಿಲಿಯನ್ ವೀಕ್ಷಣೆ ಕಂಡಿದೆ. ಈ ಬಗ್ಗೆ ಕಂಗನಾ ಪೋಸ್ಟ್ ಹಂಚಿಕೊಂಡಿದ್ದು, ಆ ಸಂಭ್ರಮವನ್ನು ಹಂಚಿಕೊಳ್ಳುತ್ತಾ ತಮ್ಮ ವಿರೋಧಿಯ ಹೆಸರನ್ನು ಎಳೆದುತಂದಿದ್ದಾರೆ. ಹೌದು, ಬಾಲಿವುಡ್​ನ ಖ್ಯಾತ ನಿರ್ದೇಶಕ ಹಾಗೂ ನಿರ್ಮಾಪಕ ಕರಣ್ ಜೋಹರ್ ಹೆಸರನ್ನು ಪರೋಕ್ಷವಾಗಿ ಪ್ರಸ್ತಾಪಿಸಿರುವ ಕಂಗನಾ, “ಕರಣ್ ಜೋಹರ್ ಅಡಗಿ ಕುಳಿತು ಅಳುತ್ತಿರಬೇಕು” ಎಂದು ಮೂದಲಿಸಿದ್ದಾರೆ. ಈ ಮೂಲಕ ಲಾಕ್ ಅಪ್ ಯಶಸ್ಸನ್ನು ಅವರು ಸಂಭ್ರಮಿಸಿದ್ದಾರೆ.

ಗುರುವಾರ ರಾತ್ರಿ ತಮ್ಮ ಇನ್​ಸ್ಟಾಗ್ರಾಂ ಸ್ಟೋರಿಯಲ್ಲಿ ಕಂಗನಾ ಪೋಸ್ಟ್ ಹಂಚಿಕೊಂಡಿದ್ದಾರೆ. ಅದರಲ್ಲಿ ನಟಿ, ‘‘ಲಾಕ್ ಅಪ್ ಶೋ 200 ಮಿಲಿಯನ್ ವೀಕ್ಷಣೆ ಕಂಡಿದೆ. ಕರಣ್ ಜೋಹರ್ ಹಾಗೂ ಅವರ ಸಹವರ್ತಿಗಳು ಅಡಗಿ ಕುಳಿತು ಅಳುತ್ತಿರಬೇಕು. ಅವರು ಕಷ್ಟಪಟ್ಟು ಎಷ್ಟೇ ಪ್ರಯತ್ನಪಟ್ಟರೂ ನಾವು 200 ಮಿಲಿಯನ್ ವೀಕ್ಷಣೆ ಕಂಡಿದ್ದೇವೆ’’ ಎಂದು ಬರೆದಿದ್ದಾರೆ. ಅಷ್ಟೇ ಅಲ್ಲದೇ, ಮುಂದಿನ ದಿನಗಳ ಬಗ್ಗೆ ಕಂಗನಾ ಪ್ರಸ್ತಾಪಿಸಿದ್ದು, ಕರಣ್​ಗೆ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ. ‘‘ಮುಂದೆ ಏನಾಗಲಿದೆ ಎಂದು ನೋಡುತ್ತಿರಿ. ನೀವು ಕಣ್ಣೀರು ಹಾಕುವ ದಿನಗಳು ಇಲ್ಲೇ ಸಮೀಪದಲ್ಲಿದೆ, ಪಾಪಾ ಜೋ’’ ಎಂದು ಬರೆದಿದ್ದಾರೆ ಕಂಗನಾ.

ಕಂಗನಾ ಹಾಗೂ ಕರಣ್ ಜೋಹರ್ ನಡುವೆ ವಾಗ್ವಾದ ಇಂದು ನಿನ್ನೆಯದಲ್ಲ. ನೆಪೋಟಿಸಂಗೆ ಕರಣ್ ಜೋಹರ್ ಪ್ರಮುಖ ಕಾರಣ ಎಂದು ಕಂಗನಾ ಆರೋಪಿಸಿದಲ್ಲಿಂದ ಪರಸ್ಪರ ಆರೋಪ- ಪ್ರತ್ಯಾರೋಪಗಳು ನಡೆದುಕೊಂಡು ಬಂದಿವೆ. ಪ್ರಸ್ತುತ ಕಂಗನಾ ಹೇಳಿಕೆ ತೀವ್ರ ಚರ್ಚೆಗೆ ಕಾರಣವಾಗಿದೆ.

ಕಂಗನಾ ಹಂಚಿಕೊಂಡ ಪೋಸ್ಟ್:

Kangana Ranaut Insta Story on Papa Jo

ಕಂಗನಾ ಹಂಚಿಕೊಂಡ ಪೋಸ್ಟ್

ಕೆಲ ದಿನಗಳ ಮೊದಲಷ್ಟೇ ‘ಲಾಕ್ ಅಪ್’ ಶೋ ಒಂದು ದಾಖಲೆ ಬರೆದಿತ್ತು. ಒಟಿಟಿ ವೇದಿಕೆಯಲ್ಲಿ ಕೇವಲ 19 ದಿನದಲ್ಲಿ 100 ಮಿಲಿಯನ್ ವೀಕ್ಷಣೆಯನ್ನು ಶೋ ಪಡೆದಿತ್ತು. ಇದಕ್ಕೆ ಕಂಗನಾ ಎಲ್ಲರಿಗೂ ಧನ್ಯವಾದ ಹೇಳಿದ್ದರು.

ಖ್ಯಾತ ನಿರ್ಮಾಪಕಿ ಏಕ್ತಾ ಕಪೂರ್ ‘ಲಾಕ್ ಅಪ್’ ಶೋ ನಿರ್ಮಾಣ ಮಾಡುತ್ತಿದ್ದಾರೆ. 2022ರ ಫೆಬ್ರವರಿ 27ರಂದು ಆಲ್ಟ್ ಬಾಲಾಜಿ ಹಾಗೂ ಎಂಎಕ್ಸ್ ಪ್ಲೇಯರ್​ನಲ್ಲಿ ಶೋದ ಮೊದಲ ಎಪಿಸೋಡ್ ಪ್ರಸಾರವಾಗಿತ್ತು. ಸ್ಪರ್ಧಿಗಳು ಲಾಕ್​ ಅಪ್​ನಲ್ಲಿ ಬಂಧಿಯಾಗಿರುತ್ತಾರೆ. ಅವರಿಗೆ ಟಾಸ್ಕ್​ಗಳನ್ನು ನೀಡಲಾಗುತ್ತದೆ. ಇದು ವಿವಾದಿತ ಶೋ ಎಂದು ತಂಡ ಮೊದಲೇ ಹೇಳಿತ್ತು. ಅದರಂತೆ ಕಾರ್ಯಕ್ರಮ ಹಾಗೆಯೇ ಮೂಡಿಬರುತ್ತಿದ್ದು, ಸ್ಪರ್ಧಿಗಳ ವೈಯಕ್ತಿಕ ಜೀವನದ ಗುಪ್ತ ಮಾಹಿತಿಗಳೂ ಹೊರಬರುತ್ತಿವೆ.

ಇದನ್ನೂ ಓದಿ: ರಿಷಿಕೇಶದಲ್ಲಿ ಗಂಗಾರತಿ ಮಾಡಿದ ಅಮಿತಾಭ್; ವಿಡಿಯೋ

RRR Box Office Collection: ಒಂದೇ ವಾರದಲ್ಲಿ ‘ಆರ್​ಆರ್​ಆರ್​’ ಗಳಿಸಿದ್ದು ಎಷ್ಟು ಕೋಟಿ? ಇಲ್ಲಿದೆ ನೋಡಿ ಬಾಕ್ಸಾಫೀಸ್ ಲೆಕ್ಕಾಚಾರ

Follow Us
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ