AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟಿಟಿಗೆ ಬರುತ್ತಿದೆ ಅಟ್ಟರ್ ಫ್ಲಾಪ್ ಸಿನಿಮಾ ಎಮರ್ಜೆನ್ಸಿ; ಈಗಲಾದ್ರೂ ಪ್ರೇಕ್ಷಕರು ಮೆಚ್ಚಿಕೊಳ್ತಾರಾ?

ಜನವರಿ 17ರಂದು ‘ಎಮರ್ಜೆನ್ಸಿ’ ಸಿನಿಮಾ ಬಿಡುಗಡೆ ಆಗಿತ್ತು. ಉತ್ತಮ ಕಲೆಕ್ಷನ್ ಮಾಡಲು ಈ ಚಿತ್ರಕ್ಕೆ ಸಾಧ್ಯವಾಗಲಿಲ್ಲ. ಈಗ ಒಟಿಟಿಯಲ್ಲಿ ರಿಲೀಸ್ ಮಾಡಲು ಸಿದ್ಧತೆ ನಡೆದಿದೆ. ಒಟಿಟಿ ರಿಲೀಸ್ ದಿನಾಂಕದ ಬಗ್ಗೆ ನಟಿ, ನಿರ್ದೇಶಕಿ ಕಂಗನಾ ರಣಾವತ್ ಅವರು ಮಾಹಿತಿ ನೀಡಿದ್ದಾರೆ. ಆ ಬಗ್ಗೆ ಇಲ್ಲಿದೆ ಇನ್ನಷ್ಟು ವಿವರ..

ಒಟಿಟಿಗೆ ಬರುತ್ತಿದೆ ಅಟ್ಟರ್ ಫ್ಲಾಪ್ ಸಿನಿಮಾ ಎಮರ್ಜೆನ್ಸಿ; ಈಗಲಾದ್ರೂ ಪ್ರೇಕ್ಷಕರು ಮೆಚ್ಚಿಕೊಳ್ತಾರಾ?
Kangana Ranaut
Follow us
ಮದನ್​ ಕುಮಾರ್​
|

Updated on: Feb 21, 2025 | 4:07 PM

ನಟಿ ಕಂಗನಾ ರಣಾವತ್ ಅವರು ‘ಎಮರ್ಜೆನ್ಸಿ’ ಸಿನಿಮಾ ಮೇಲೆ ಸಿಕ್ಕಾಪಟ್ಟೆ ನಿರೀಕ್ಷೆ ಇಟ್ಟುಕೊಂಡಿದ್ದರು. ಸ್ವತಃ ನಿರ್ದೇಶನ ಮಾಡಿ, ನಿರ್ಮಾಣದಲ್ಲೂ ಪಾಲುದಾರಿಕೆ ಹೊಂದಿದ್ದರು. ಇಂದಿರಾ ಗಾಂಧಿ ಬಯೋಪಿಕ್ ಆಗಿ ಮೂಡಿಬಂದ ಆ ಸಿನಿಮಾದಲ್ಲಿ ಕಂಗನಾ ಅವರು ಇಂದಿರಾ ಗಾಂಧಿಯಾಗಿ ಕಾಣಿಸಿಕೊಂಡಿದ್ದರು. ಬಿಡುಗಡೆಗೂ ಮುನ್ನ ವಿವಾದದ ಮೂಲಕ ಆ ಸಿನಿಮಾ ಸದ್ದು ಮಾಡಿತ್ತು. ಆದರೆ ಬಾಕ್ಸ್ ಆಫೀಸ್​ನಲ್ಲಿ ಮೋಡಿ ಮಾಡಲು ‘ಎಮರ್ಜೆನ್ಸಿ’ ಚಿತ್ರ ವಿಫಲವಾಯಿತು. ಈಗ ಈ ಸಿನಿಮಾ ಒಟಿಟಿಗೆ ಬರುತ್ತಿದೆ.

‘ಎಮರ್ಜೆನ್ಸಿ’ಗೂ ಮುನ್ನ ಕಂಗನಾ ರಣಾವತ್ ನಟಿಸಿದ್ದ ಹಲವು ಸಿನಿಮಾಗಳು ಬ್ಯಾಕ್​ ಟು ಬ್ಯಾಕ್ ಸೋತಿದ್ದವು. ಆದರೆ ‘ಎಮರ್ಜೆನ್ಸಿ’ ಸಾಧಾರಣ ಗಳಿಕೆಯನ್ನಾದರೂ ಮಾಡುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಆಗಿದ್ದೇ ಬೇರೆ. ಅಂದಾಜು 60 ಕೋಟಿ ರೂಪಾಯಿ ಬಜೆಟ್​ನಲ್ಲಿ ಮೂಡಿಬಂದ ಆ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಗಳಿಸಿದ್ದು ಕೇವಲ 16.52 ಕೋಟಿ ರೂಪಾಯಿ. ಆ ಮೂಲಕ ಅಟ್ಟರ್​ ಫ್ಲಾಪ್​ ಎನಿಸಿಕೊಂಡಿತು.

ಚಿತ್ರಮಂದಿರದಲ್ಲಿ ಸೋತ ‘ಎಮರ್ಜೆನ್ಸಿ’ ಸಿನಿಮಾದ ಒಟಿಟಿ ಪ್ರಸಾರ ಹಕ್ಕುಗಳನ್ನು ‘ನೆಟ್​ಫ್ಲಿಕ್ಸ್’ ಪಡೆದುಕೊಂಡಿದೆ. ಈಗ ಒಟಿಟಿ ರಿಲೀಸ್ ದಿನಾಂಕವನ್ನು ಕಂಗನಾ ರಣಾವತ್ ಅವರು ಬಹಿರಂಗಪಡಿಸಿದ್ದಾರೆ. ಮಾರ್ಚ್​ 17ರಿಂದ ನೆಟ್​ಫ್ಲಿಕ್ಸ್​ನಲ್ಲಿ ಈ ಸಿನಿಮಾ ಪ್ರಸಾರ ಆಗಲಿದೆ. ಥಿಯೇಟರ್​ನಲ್ಲಿ ತೆರೆಕಂಡಾಗ ನೆಗೆಟಿವ್ ವಿಮರ್ಶೆ ಪಡೆದುಕೊಂಡಿದ್ದ ಸಿನಿಮಾಗೆ ಒಟಿಟಿ ಪ್ರೇಕ್ಷಕರು ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬದನ್ನು ಕಾದು ನೋಡಬೇಕು.

ಇದನ್ನೂ ಓದಿ: ಹೋಟೆಲ್ ಉದ್ಯಮಕ್ಕೆ ಕಾಲಿಟ್ಟಿದ ಕಂಗನಾ ರನೌತ್, ಸಿನಿಮಾದಲ್ಲಿ ಲಾಸ್ ಕಾರಣವೇ?

ಇಂದಿರಾ ಗಾಂಧಿ ಹೇರಿದ್ದ ತುರ್ತು ಪರಿಸ್ಥಿತಿಯನ್ನು ಕೇಂದ್ರವಾಗಿಟ್ಟುಕೊಂಡು ‘ಎಮರ್ಜೆನ್ಸಿ’ ಸಿನಿಮಾ ಸಿದ್ಧವಾಗಿದೆ. ಕಂಗನಾ ರಣಾವತ್ ಅವರು ಇಂದಿರಾ ಗಾಂಧಿ ಪಾತ್ರದಲ್ಲಿ ನಟಿಸಿದ್ದನ್ನು ಫ್ಯಾನ್ಸ್ ಮೆಚ್ಚಿಕೊಂಡಿದ್ದಾರೆ. ಆದರೆ ಎಲ್ಲ ವರ್ಗದ ಪ್ರೇಕ್ಷಕರು ಈ ಸಿನಿಮಾ ಬಗ್ಗೆ ಅಷ್ಟೇನೂ ಆಸಕ್ತಿ ತೋರಿಸಲಿಲ್ಲ. ಹಾಗಾಗಿ ಗಲ್ಲಾ ಪೆಟ್ಟಿಗೆಯಲ್ಲಿ ಲಾಭ ಆಗಲಿಲ್ಲ. ಈ ಸಿನಿಮಾದಲ್ಲಿ ಅನುಪಮ್ ಖೇರ್​, ಮಿಲಿಂದ್ ಸೋಮನ್, ಸತೀಶ್ ಕೌಶಿಕ್, ಶ್ರೇಯಸ್ ತಲ್ಪಡೆ ಮುಂತಾದವರು ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ