AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓಟಿಟಿಗೆ ಬಂತು ‘ತಲೈವಿ’; ಚಿತ್ರಮಂದಿರದಲ್ಲಿ ಸೋತ ಕಂಗನಾ ಸಿನಿಮಾಗೆ ನೆಟ್​ಫ್ಲಿಕ್ಸ್​ನಲ್ಲಿ ಸಿಗುತ್ತಾ ಜಯ?

Thalaivii | Netflix: ವಿಮರ್ಶಕರು ‘ತಲೈವಿ’ ಸಿನಿಮಾವನ್ನು ಮೆಚ್ಚಿಕೊಂಡಿದ್ದರೂ ಕೂಡ ಚಿತ್ರಮಂದಿರಕ್ಕೆ ಬಂದು ಸಿನಿಮಾ ವೀಕ್ಷಿಸಲು ಹೆಚ್ಚಿನ ಪ್ರೇಕ್ಷಕರು ಆಸಕ್ತಿ ತೋರಿಸಿಲ್ಲ. ಹಾಗಾಗಿ ಬಿಡುಗಡೆಯಾಗಿ ಕೇವಲ 15ಕ್ಕೆ ಈ ಚಿತ್ರ ಈಗ ನೆಟ್​ಫ್ಲಿಕ್ಸ್​ ಅಂಗಳಕ್ಕೆ ಬಂದಿದೆ.

ಓಟಿಟಿಗೆ ಬಂತು ‘ತಲೈವಿ’; ಚಿತ್ರಮಂದಿರದಲ್ಲಿ ಸೋತ ಕಂಗನಾ ಸಿನಿಮಾಗೆ ನೆಟ್​ಫ್ಲಿಕ್ಸ್​ನಲ್ಲಿ ಸಿಗುತ್ತಾ ಜಯ?
ಓಟಿಟಿಗೆ ಬಂತು ‘ತಲೈವಿ’ ಸಿನಿಮಾ
TV9 Web
| Edited By: |

Updated on: Sep 25, 2021 | 1:27 PM

Share

ನಟಿ ಕಂಗನಾ ರಣಾವತ್​ ಅವರು ಭಾರಿ ನಿರೀಕ್ಷೆಯೊಂದಿಗೆ ‘ತಲೈವಿ’ ಸಿನಿಮಾ ಬಿಡುಗಡೆ ಮಾಡಿದ್ದರು. ಸೆ.10ರಂದು ಹಿಂದಿ, ತಮಿಳು ಮತ್ತು ತೆಲುಗಿನಲ್ಲಿ ಈ ಚಿತ್ರ ರಿಲೀಸ್​ ಆಗಿತ್ತು. ಆದರೆ ಹಲವು ಕಾರಣಗಳಿಂದಾಗಿ ಚಿತ್ರಮಂದಿರಲ್ಲಿ ‘ತಲೈವಿ’ ಯಶಸ್ಸು ಕಾಣಲಿಲ್ಲ. ಆದರೆ ಈಗ ಓಟಿಟಿ ವೇದಿಕೆಗೆ ಈ ಸಿನಿಮಾ ಕಾಲಿಟ್ಟಿದೆ. ನೆಟ್​ಫ್ಲಿಕ್ಸ್​ ಮೂಲಕ ಇದರ ಹಿಂದಿ ವರ್ಷನ್​ ಬಿಡುಗಡೆ ಆಗಿದೆ. ಸೆ.25ರಿಂದ ಪ್ರಸಾರ ಆರಂಭಿಸಿರುವ ಈ ಚಿತ್ರ ಆನ್​ಲೈನ್​ನಲ್ಲಾದರೂ ಗೆಲ್ಲುತ್ತಾ ಎಂಬ ಕೌತುಕದ ಪ್ರಶ್ನೆ ಈಗ ಮೂಡಿದೆ.

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಜೀವನವನ್ನು ಆಧರಿಸಿ ಈ ಸಿನಿಮಾ ಮೂಡಿಬಂದಿದೆ. ಸಿನಿಮಾ ಮತ್ತು ರಾಜಕೀಯ ಎರಡೂ ಕ್ಷೇತ್ರದಲ್ಲಿ ಯಶಸ್ಸು ಕಂಡವರು ಜಯಲಲಿತಾ. ಆದರೆ ಅವರ ಬದುಕಿನ ಕಥೆ ಹೇಳುವ ‘ತಲೈವಿ’ ಚಿತ್ರಕ್ಕೆ ಥಿಯೇಟರ್​ನಲ್ಲಿ ಯಶಸ್ಸು ಸಿಕ್ಕಿಲ್ಲ. ವಿಮರ್ಶಕರು ಈ ಸಿನಿಮಾವನ್ನು ಮೆಚ್ಚಿಕೊಂಡಿದ್ದರೂ ಕೂಡ ಚಿತ್ರಮಂದಿರಕ್ಕೆ ಬಂದು ಸಿನಿಮಾ ವೀಕ್ಷಿಸಲು ಹೆಚ್ಚಿನ ಪ್ರೇಕ್ಷಕರು ಆಸಕ್ತಿ ತೋರಿಸಿಲ್ಲ. ಹಾಗಾಗಿ ಬಿಡುಗಡೆಯಾಗಿ ಕೇವಲ 15ಕ್ಕೆ ಈ ಚಿತ್ರ ಈಗ ನೆಟ್​ಫ್ಲಿಕ್ಸ್​ ಅಂಗಳಕ್ಕೆ ಬಂದಿದೆ.

‘ತಲೈವಿ’ ಚಿತ್ರಕ್ಕೆ ಎ.ಎಲ್​. ವಿಜಯ್ ನಿರ್ದೇಶನವಿದೆ. ಅಚ್ಚರಿ ವಿಚಾರ ಏನೆಂದರೆ ಈಗಾಗಲೇ ‘ತಲೈವಿ 2’ ಸಿನಿಮಾ ಬಗ್ಗೆಯೂ ಮಾತುಕತೆ ನಡೆಯುತ್ತಿದೆ. ಈ ಸುದ್ದಿ ಕೇಳಿ ಅಭಿಮಾನಿಗಳು ಖುಷಿ ಆಗಿದ್ದಾರೆ. ಆದರೆ ಕಂಗನಾ ಕಡೆಯಿಂದ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಚಿತ್ರದ ಸಹ ಬರಹಗಾರ ರಜತ್​ ಅರೋರಾ ಅವರು ಈ ಬಗ್ಗೆ ಇತ್ತೀಚೆಗೆ ಬಾಯಿ ಬಿಟ್ಟಿದ್ದಾರೆ.

‘ಜಯಲಲಿತಾ ಸಿಎಂ ಆದ ನಂತರ ಏನಾಯಿತು ಎಂದು ಸಿನಿಮಾದಲ್ಲಿ ತೋರಿಸಿಯೇ ಇಲ್ಲ ಅಂತ ಅನೇಕರು ಹೇಳುತ್ತಿದ್ದಾರೆ. ಹಾಗೆ ತೋರಿಸೋಕೆ ಸಾಕಷ್ಟು ವಿಷಯಗಳಿವೆ ಜಯಲಲಿತಾ ರಾಜಕೀಯ ಬದುಕು ತುಂಬಾನೇ ದೀರ್ಘವಾಗಿದೆ. ಇದನ್ನು 15 ನಿಮಿಷಗಳಲ್ಲಿ ಹೇಳಿದರೆ ನಾವು ಅದಕ್ಕೆ ನ್ಯಾಯ ಒದಗಿಸಿದಂತೆ ಆಗುವುದಿಲ್ಲ ಎಂದು ನಮಗನಿಸಿತು. ಹೀಗಾಗಿ, ‘ತಲೈವಿ ಪಾರ್ಟ್​ 2’ ತರೋಕೆ ಸಿದ್ಧತೆ ನಡೆದಿದೆ. ನಾವು ಕಂಗನಾ ಜತೆಗೆ ಮಾತುಕತೆ ನಡೆಸಿದ್ದೇವೆ’ ಎಂದು ರಜತ್​ ಅರೋರಾ ಹೇಳಿದ್ದಾರೆ.

ಇದನ್ನೂ ಓದಿ:

ಹೀನಾಯವಾಗಿ ಮುಗ್ಗರಿಸಿದ ‘ತಲೈವಿ’; ಮೊದಲ ದಿನ ಕಂಗನಾ ರಣಾವತ್​ ಚಿತ್ರ ಗಳಿಸಿದ್ದೆಷ್ಟು?

ಸೀತೆ ಪಾತ್ರ ಮಾಡಲು ಕಂಗನಾಗೆ 32 ಕೋಟಿ ರೂ. ಸಂಬಳ? ಇದು ದೊಡ್ಡ ಪ್ರಮಾದ ಎಂದ ಕಮಾಲ್​ ಖಾನ್​

ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ