AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆ ಹುಡುಗ ಕೆಟ್ಟದಾಗಿ ಮುಟ್ಟುತ್ತಿದ್ದ, ನಮ್ಮ ಬಟ್ಟೆ ಕಳಚುತ್ತಿದ್ದ’; ಭಯಾನಕ ಅನುಭವ ಬಿಚ್ಚಿಟ್ಟ ಕಂಗನಾ ರಣಾವತ್

ಕಂಗನಾ ಒಂದು ಅಚ್ಚರಿಯ ವಿಚಾರ ಹೇಳಿಕೊಂಡಿದ್ದಾರೆ. 11ನೇ ವಯಸ್ಸಿಗೆ ತಮಗಾದ ಲೈಂಗಿಕ ದೌರ್ಜನ್ಯದ ಬಗ್ಗೆ ಅವರು ಮಾತನಾಡಿದ್ದಾರೆ. ಈ ವಿಚಾರ ಕೇಳಿ ಸ್ಪರ್ಧಿಗಳು ಅಚ್ಚರಿ ವ್ಯಕ್ತಪಡಿಸಿದ್ದಾರೆ.

‘ಆ ಹುಡುಗ ಕೆಟ್ಟದಾಗಿ ಮುಟ್ಟುತ್ತಿದ್ದ, ನಮ್ಮ ಬಟ್ಟೆ ಕಳಚುತ್ತಿದ್ದ’; ಭಯಾನಕ ಅನುಭವ ಬಿಚ್ಚಿಟ್ಟ ಕಂಗನಾ ರಣಾವತ್
ಕಂಗನಾ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Apr 25, 2022 | 1:45 PM

Share

ನಟಿ ಕಂಗನಾ ರಣಾವತ್ (Kangana Ranaut) ಬಾಲಿವುಡ್​ನ ಬೇಡಿಕೆಯ ನಟಿ. ಅವರು ತುಂಬಾನೇ ಎತ್ತರಕ್ಕೆ ಬೆಳೆದು ನಿಂತಿದ್ದಾರೆ. ನಟನೆಯ ಜತೆಗೆ ಕಿರುತೆರೆಯ ನಿರೂಪಣೆಯಲ್ಲೂ ಅವರು ತೊಡಗಿಕೊಂಡಿದ್ದಾರೆ. ‘ಲಾಕಪ್​’ ರಿಯಾಲಿಟಿ ಶೋ (Lock Upp Reality Show) ನಿರೂಪಣೆಗೆ ಕಂಗನಾ ಮೆಚ್ಚುಗೆ ಪಡೆದುಕೊಂಡಿದ್ದಾರೆ. ಈ ಶೋ 56 ದಿನಗಳನ್ನು ಪೂರ್ಣಗೊಳಿಸಿದ್ದು, ಶೋ ಕೊನೆಗೊಳ್ಳಲು ಕೆಲವೇ ದಿನಗಳು ಬಾಕಿ ಉಳಿದಿವೆ. ಈ ರಿಯಾಲಿಟಿ ಶೋನಲ್ಲಿ ಅನೇಕ ವಿಚಾರಗಳು ಬಹಿರಂಗಗೊಂಡಿವೆ. ಕಂಗನಾ ಕೂಡ ಒಂದು ಅಚ್ಚರಿಯ ವಿಚಾರ ಹೇಳಿಕೊಂಡಿದ್ದಾರೆ. 11ನೇ ವಯಸ್ಸಿಗೆ ತಮಗಾದ ಲೈಂಗಿಕ ದೌರ್ಜನ್ಯದ ಬಗ್ಗೆ ಅವರು ಮಾತನಾಡಿದ್ದಾರೆ. ಈ ವಿಚಾರ ಕೇಳಿ ಸ್ಪರ್ಧಿಗಳು ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಲಾಕಪ್​ ಶೋನ ಸ್ಪರ್ಧಿ ಮನ್ವರ್ ಫರೂಕಿ ಅವರು ತಮ್ಮ ಜೀವನದಲ್ಲಾದ ಒಂದು ಕಹಿ ಘಟನೆಯನ್ನು ನೆನೆದರು. ‘ನಾನು ಆರು ವರ್ಷದ ಬಾಲಕನಾಗಿದ್ದಾಗ ಲೈಂಗಿಕ ದೌರ್ಜನ್ಯಕ್ಕೆ ಒಳಗಾದೆ. ನನ್ನ ಸಂಬಂಧಿಕರೇ ನನಗೆ ಈ ರೀತಿ ಮಾಡಿದ್ದರು. ನನಗೆ ಆಗ ಏನೂ ಅರ್ಥವಾಗುತ್ತಿರಲಿಲ್ಲ. 3-4 ವರ್ಷ ಹೀಗೆ ನಡೆದೇ ಇತ್ತು. ಒಮ್ಮೆ ಅದು ವಿಪರೀತವಾಯಿತು. ನಾನು ಅವರನ್ನು ಎದುರಿಸಿದೆ. ಇದನ್ನು ನಿಲ್ಲಿಸಬೇಕು ಎಂದು ಅವರು ಅರಿತುಕೊಂಡರು’ ಎಂದಿದ್ದಾರೆ ಮನ್ವರ್.

ಈ ಅನುಭವವನ್ನು ಹೇಳಿಕೊಂಡಿದ್ದಕ್ಕೆ ಕಂಗನಾ ಮೆಚ್ಚುಗೆ ವ್ಯಕ್ತಪಡಿಸಿದರು. ಅಲ್ಲದೆ, ತಮಗಾದ ಅನುಭವದ ಬಗ್ಗೆ ಅವರು ಹೇಳಿಕೊಂಡರು. ‘ಪ್ರತಿ ವರ್ಷ ಹಲವಾರು ಮಕ್ಕಳು ಈ ರೀತಿಯ ಕಿರುಕುಳಕ್ಕೆ ಒಳಗಾಗುತ್ತಾರೆ. ಆದರೆ ಅದನ್ನು ಸಾರ್ವಜನಿಕವಾಗಿ ಮಾತನಾಡಲು ಹಿಂಜರಿಯುತ್ತಾರೆ. ನಾನೂ ಇದನ್ನು ಎದುರಿಸಿದ್ದೇನೆ. ನಾನು ಚಿಕ್ಕವನಾಗಿದ್ದೆ. ನಮ್ಮ ಊರಿನ ಒಬ್ಬ ಹುಡುಗ ನನ್ನನ್ನು ಕೆಟ್ಟ ರೀತಿಯಲ್ಲಿ ಸ್ಪರ್ಶಿಸುತ್ತಿದ್ದ. ನನ್ನನ್ನು ಮುಟ್ಟುತ್ತಿದ್ದ ಬಾಲಕ ನನಗಿಂತ ಮೂರರಿಂದ ನಾಲ್ಕು ವರ್ಷ ದೊಡ್ಡವನಾಗಿದ್ದ. ಅವನು ಲೈಂಗಿಕ ಆಸಕ್ತನಾಗಿದ್ದ ಅನಿಸುತ್ತದೆ. ನಮ್ಮನ್ನು ಕರೆದು ಬಟ್ಟೆ ಬಿಚ್ಚಿಸಿ, ತಪಾಸಣೆ ಮಾಡುತ್ತಿದ್ದ. ಆ ಸಮಯದಲ್ಲಿ ಇದರ ಅರ್ಥವೇನೆಂದು ನನಗೆ ತಿಳಿದಿರಲಿಲ್ಲ. ನಿಮ್ಮ ಕುಟುಂಬವು ಎಷ್ಟೇ ಎಚ್ಚರಿಕೆ ತೆಗೆದುಕೊಳ್ಳುತ್ತದೆ ಎಂದರೂ ಈ ರೀತಿಯ ಅನುಭವ ಆಗುತ್ತದೆ’ ಎಂದಿದ್ದಾರೆ ಕಂಗನಾ.

‘ಈ ರೀತಿಯ ಘಟನೆ ನಡೆದಾಗ ಮಕ್ಕಳು ತಾವು ತಪ್ಪಿತಸ್ಥರೆಂದು ಭಾವಿಸುತ್ತಾರೆ. ಇದು ನಮ್ಮ ಸಮಾಜದ ಮಕ್ಕಳಲ್ಲಿ ಇರುವ ದೊಡ್ಡ ಸಮಸ್ಯೆ. ಈ ರೀತಿಯ ಘಟನೆಗಳಿಂದ ಮಕ್ಕಳು ಮಾನಸಿಕವಾಗಿ ಆಘಾತಕ್ಕೊಳಗಾಗುತ್ತಾರೆ. ಒಳ್ಳೆಯ ಮತ್ತು ಕೆಟ್ಟ ಸ್ಪರ್ಶದ ನಡುವಿನ ವ್ಯತ್ಯಾಸವನ್ನು ಅವರಿಗೆ ಹೇಳಿದರೆ ಸಾಕಾಗುವುದಿಲ್ಲ’ ಎಂದಿದ್ದಾರೆ ಅವರು.

ಇದನ್ನೂ ಓದಿ: ಡೈರೆಕ್ಟರ್ ಜತೆ ಖ್ಯಾತ ನಟಿಯ ಸೀಕ್ರೆಟ್​ ಅಫೇರ್ ಬಯಲು​; ಪ್ರೆಗ್ನೆನ್ಸಿ ವಿಷಯ ಕೇಳಿ ಕಣ್ಣೀರು ಹಾಕಿದ ಕಂಗನಾ

ಯಶ್ ಅವರನ್ನು ಆ್ಯಂಗ್ರಿ ಯಂಗ್ ಮ್ಯಾನ್ ಅಮಿತಾಭ್​ ಬಚ್ಚನ್​ಗೆ ಹೋಲಿಸಿದ ಕಂಗನಾ ರಣಾವತ್

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ