AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬ್ಲಿಂಕ್’ ಸಿನಿಮಾ ಪೈರಸಿ ಕಾಪಿ ನೋಡಿದ್ರಾ? QR ಕೋಡ್ ಹಾಕಿ ವಿಶೇಷ ಮನವಿ ಮಾಡಿದ ನಿರ್ಮಾಪಕ

ಶ್ರೀನಿಧಿ ಬೆಂಗಳೂರು ‘ಬ್ಲಿಂಕ್’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ರವಿಚಂದ್ರ ಎ.ಜೆ. ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ದೀಕ್ಷಿತ್ ಶೆಟ್ಟಿ, ಚೈತ್ರಾ ಆಚಾರ್, ಗೋಪಾಲ್ ದೇಶಪಾಂಡೆ ಸೇರಿದಂತೆ ಹಲವರು ಸಿನಿಮಾದಲ್ಲಿ ನಟಿಸಿದ್ದಾರೆ. ಸಿನಿಮಾ ಲೀಕ್ ಆದ ಬಗ್ಗೆ ರವಿಚಂದ್ರ ಅವರು ವಿಡಿಯೋ ಮಾಡಿದ್ದಾರೆ. ಜೊತೆಗೆ ವಿಶೇಷ ಮನವಿ ಮಾಡಿದ್ದಾರೆ.

‘ಬ್ಲಿಂಕ್’ ಸಿನಿಮಾ ಪೈರಸಿ ಕಾಪಿ ನೋಡಿದ್ರಾ? QR ಕೋಡ್ ಹಾಕಿ ವಿಶೇಷ ಮನವಿ ಮಾಡಿದ ನಿರ್ಮಾಪಕ
ಬ್ಲಿಂಕ್
ರಾಜೇಶ್ ದುಗ್ಗುಮನೆ
|

Updated on: May 11, 2024 | 5:44 PM

Share

ಕನ್ನಡ ಸಿನಿಮಾಗಳನ್ನು ಪ್ರೇಕ್ಷಕರು ನೋಡುತ್ತಿಲ್ಲ ಎನ್ನುವ ಆರೋಪ ಇತ್ತೀಚೆಗೆ ಜೋರಾಗಿದೆ. ‘ಬ್ಲಿಂಕ್’ ಹೆಸರಿನ ಸಿನಿಮಾ ಮಾರ್ಚ್ 8ರಂದು ಥಿಯೇಟರ್​ನಲ್ಲಿ ರಿಲೀಸ್ ಆಯಿತು. ವಿಮರ್ಶಕರಿಂದ ಸಿನಿಮಾ ಮೆಚ್ಚಗೆ ಪಡೆಯಿತು. ಆದರೆ, ಅಂದುಕೊಂಡಷ್ಟು ಜನರು ಸಿನಿಮಾ ನೋಡಿಲ್ಲ. ಇದು ತಂಡದ ಬೇಸರಕ್ಕೆ ಕಾರಣ ಆಗಿತ್ತು. ಒಂದೊಳ್ಳೆಯ ಪ್ರಯತ್ನವನ್ನು ತಂಡ ಬೆಂಬಲಿಸಿಲ್ಲ ಎನ್ನುವ ಕೊರಗು ತಂಡಕ್ಕೆ ಇದೆ. ಈ ಸಿನಿಮಾ ಅಮೆರಿಕ ಹಾಗೂ ಇಂಗ್ಲೆಂಡ್​ನಲ್ಲಿ ಅಮೇಜಾನ್ ಪ್ರೈಮ್ ವಿಡಿಯೋ (Amazon Prime Video) ಒಟಿಟಿ ಮೂಲಕ ಪ್ರಸಾರ ಕಾಣುತ್ತಿದೆ. ಹೀಗಾಗಿ ಕೆಲವರು ಇದನ್ನು ಎಚ್​ಡಿ ಗುಣಮಟ್ಟದಲ್ಲಿ ಲೀಕ್ ಮಾಡಿದ್ದಾರೆ. ಈ ಬಗ್ಗೆ ತಂಡ ಬೇಸರ ಹೊರಹಾಕಿದೆ.

ಶ್ರೀನಿಧಿ ಬೆಂಗಳೂರು ‘ಬ್ಲಿಂಕ್’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ರವಿಚಂದ್ರ ಎ.ಜೆ. ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ‘ದಿಯಾ’ ಖ್ಯಾತಿಯ ದೀಕ್ಷಿತ್ ಶೆಟ್ಟಿ ಅವರು ಈ ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿದ್ದಾರೆ. ಚೈತ್ರಾ ಆಚಾರ್, ಗೋಪಾಲ್ ದೇಶಪಾಂಡೆ ಸೇರಿದಂತೆ ಹಲವರು ಸಿನಿಮಾದಲ್ಲಿ ನಟಿಸಿದ್ದಾರೆ. ಟೈಮ್ ಟ್ರಾವೆಲ್ ಕಾನ್ಸೆಪ್ಟ್​ನ ಸಿನಿಮಾ ಹೊಂದಿದೆ. ಸಿನಿಮಾ ಲೀಕ್ ಆದ ಬಗ್ಗೆ ರವಿಚಂದ್ರ ಅವರು ವಿಡಿಯೋ ಮಾಡಿದ್ದಾರೆ. ಜೊತೆಗೆ ವಿಶೇಷ ಮನವಿ ಮಾಡಿದ್ದಾರೆ.

ಇದನ್ನೂ ಓದಿ: Blink Movie Review: ಟೈಮ್​ ಟ್ರಾವೆಲ್​ ಮೂಲಕ ಸ್ಯಾಂಡಲ್​ವುಡ್​ಗೆ ಬಂದ ಈಡಿಪಸ್​ 

‘ನಾನು ರವಿಚಂದ್ರ, ಬ್ಲಿಂಕ್ ಚಿತ್ರದ ನಿರ್ಮಾಪಕ. ಸತತ 56 ದಿನಗಳ ಕಾಲ ಈ ಸಿನಿಮಾ ಥಿಯೇಟರ್​ನಲ್ಲಿ ಪ್ರಸಾರ ಕಂಡಿದೆ. ಈ ಚಿತ್ರವನ್ನು ಬೆಂಬಲಿಸಿದ ಎಲ್ಲರಿಗೂ ಧನ್ಯವಾದ. ನಮ್ಮ ಮೊದಲ ಪ್ರಯತ್ನಕ್ಕೆ ನೀವು ತೋರಿಸಿದ ಪ್ರೀತಿಗೆ ಥ್ಯಾಂಕ್ಸ್. ನಮ್ಮ ಸಿನಿಮಾ ಶೀಘ್ರವೇ ಪ್ರೈಮ್​ನಲ್ಲಿ ರಿಲೀಸ್ ಆಗಲಿದೆ’ ಎಂದು ರವಿಚಂದ್ರ ಅವರು ಮಾಹಿತಿ ನೀಡಿದ್ದಾರೆ. ಇದರ ಜೊತೆಗೆ ಒಂದು ಬೇಸರದ ವಿಚಾರ ಕೂಡ ಹೇಳಿಕೊಂಡಿದ್ದಾರೆ.

‘ನಮ್ಮ ಸಿನಿಮಾದ ಎಚ್​ಡಿ ಗುಣಮಟ್ಟದ ವಿಡಿಯೋ ಲೀಕ್ ಆಗುತ್ತಿದೆ. ಆನ್​​ಲೈನ್​ನಲ್ಲಿ ಎಲ್ಲರೂ ಇದನ್ನು ನೋಡುತ್ತಿದ್ದಾರೆ. ಸಾಕಷ್ಟು ಲಿಂಕ್​ಗಳನ್ನು ನಿಷ್ಕ್ರಿಯಗೊಳಿಸಲು ಪ್ರಯತ್ನಿಸಿದೆವು. ಆದರೆ, ಎಲ್ಲಾ ಲಿಂಕ್ ತೆಗೆಯಲು ಸಾಧ್ಯವಾಗುತ್ತಿಲ್ಲ. ಅಷ್ಟು ಜನರಾದರೂ ನಮ್ಮ ಸಿನಿಮಾ ನೋಡುತ್ತಿದ್ದಾರಲ್ಲ ಅನ್ನೋದು ಖುಷಿ. ನಾನು ಕ್ಯುಆರ್​ ಕೋಡ್​ನ ಹಾಕಿದ್ದೇನೆ. ಪೈರಸಿ ಕಾಪಿ ನೋಡಿದ ನಿಮಗೆ ಎಷ್ಟು ಹಣ ಕೊಡಬೇಕು ಅನಿಸುತ್ತದೆಯೋ ಅಷ್ಟು ಹಣವನ್ನು ಪೇ ಮಾಡಿ. ಕಷ್ಟಪಟ್ಟು ಸಿನಿಮಾ ಮಾಡಿರುತ್ತೇವೆ. ಪ್ರೈಮ್​ನಲ್ಲಿ ನೋಡದೇ ಪೈರೇಟೆಡ್ ಕಾಪಿ ನೋಡಿದ್ರೆ ನಮಗೆ ಇನ್ನೊಂದು ಸಿನಿಮಾ ಮಾಡಲು ಧೈರ್ಯ ಬರಲ್ಲ. ಸ್ವಲ್ಪ ದಿನ ಪ್ರೈಮ್​ನಲ್ಲಿ ಬರುತ್ತದೆ, ಅಲ್ಲಿಯೇ ಸಿನಿಮಾ ನೋಡಿ’ ಎಂದು ಅವರು ಕೋರಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ