AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kantara OTT: ಒಟಿಟಿಯಲ್ಲಿ ಬದಲಾಯಿತು ‘ವರಾಹ ರೂಪಂ..’ ಹಾಡು; ಹೊಸ ಸಾಂಗ್ ಹೇಗಿದೆ ನೋಡಿ

ಎಲ್ಲಾ ಪ್ಲಾಟ್​ಫಾರ್ಮ್​​ಗಳಿಂದ ‘ವರಾಹ ರೂಪಂ..’ ಹಾಡನ್ನು ತೆಗೆಯಲಾಗಿದೆ. ಈಗ ಸಿನಿಮಾ ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ರಿಲೀಸ್ ಆಗಿದೆ. ಪ್ರೈಮ್​​ನಲ್ಲಿ ಪ್ರಸಾರಕಂಡ ವರ್ಷನ್​​ನಲ್ಲಿ ಹಾಡಿನ ಟೋನ್ ಬದಲಿಸಲಾಗಿದೆ.

Kantara OTT: ಒಟಿಟಿಯಲ್ಲಿ ಬದಲಾಯಿತು ‘ವರಾಹ ರೂಪಂ..’ ಹಾಡು; ಹೊಸ ಸಾಂಗ್ ಹೇಗಿದೆ ನೋಡಿ
ಕಾಂತಾರ
TV9 Web
| Edited By: |

Updated on: Nov 24, 2022 | 11:24 AM

Share

‘ಕಾಂತಾರ’ ಚಿತ್ರದ (Kantara Movie) ‘ವರಾಹ ರೂಪಂ..’ ಹಾಡು ವಿವಾದದಿಂದ ಸಮಸ್ಯೆ ಎದುರಿಸಿತ್ತು. ಕೇರಳದ ಸ್ಥಳೀಯ ನ್ಯಾಯಾಲಯ ಈ ಹಾಡನ್ನು ಪ್ರಸಾರ ಮಾಡದಂತೆ ತಡೆ ನೀಡಿತ್ತು. ಇದನ್ನು ಪ್ರಶ್ನಿಸಿ ‘ಹೊಂಬಾಳೆ ಫಿಲ್ಮ್ಸ್​’ (Hombale Films) ಕೇರಳ ಹೈಕೋರ್ಟ್​​ಗೆ ಮೇಲ್ಮನವಿ ಸಲ್ಲಿಕೆ ಮಾಡಿತ್ತು. ಆದರೆ, ಇದನ್ನು ಹೈಕೋರ್ಟ್ ರದ್ದು ಮಾಡಿ ಆದೇಶ ನೀಡಿದೆ. ಇದರಿಂದ ಚಿತ್ರಕ್ಕೆ ಹಿನ್ನಡೆ ಆಗಿದೆ. ಈ ಕಾರಣದಿಂದ ಹಾಡಿನ ಟ್ಯೂನ್ ಬದಲಿಸಲಾಗಿದೆ.

‘ವರಾಹ ರೂಪಂ..’ ಹಾಡು ‘ಕಾಂತಾರ’ ಕ್ಲೈಮ್ಯಾಕ್ಸ್​ನಲ್ಲಿ ಬರುತ್ತದೆ. ಈ ಸಾಂಗ್ ಸಾಕಷ್ಟು ಗಮನ ಸೆಳೆದಿತ್ತು. ಹಾಡನ್ನು ಕೇಳಿ ಎಲ್ಲರೂ ಥ್ರಿಲ್ ಆಗಿದ್ದರು. ಸಿನಿಮಾ ರಿಲೀಸ್ ಆದ ಕೆಲ ವಾರಗಳ ನಂತರದಲ್ಲಿ ‘ತೈಕ್ಕುಡಂ ಬ್ರಿಡ್ಜ್​​’ ಕೇಸ್ ದಾಖಲು ಮಾಡಿತ್ತು. ಕೋರ್ಟ್​ನಲ್ಲಿ ಕೇಸ್ ಅವರ ಪರವಾಗಿ ಆಯಿತು. ಈ ಕಾರಣದಿಂದ ಎಲ್ಲಾ ಪ್ಲಾಟ್​ಫಾರ್ಮ್​​ಗಳಿಂದ ಹಾಡನ್ನು ತೆಗೆಯಲಾಯಿತು. ಈಗ ಸಿನಿಮಾ ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ರಿಲೀಸ್ ಆಗಿದೆ. ಪ್ರೈಮ್​​ನಲ್ಲಿ ಪ್ರಸಾರಕಂಡ ವರ್ಷನ್​​ನಲ್ಲಿ ಹಾಡಿನ ಟೋನ್ ಬದಲಿಸಲಾಗಿದೆ.

‘ವರಾಹ ರೂಪಂ..’ ಹಾಡಿನ ಟೋನ್​ನಲ್ಲಿ ಸಣ್ಣಪುಟ್ಟ ಬದಲಾವಣೆ ಮಾಡಲಾಗಿದೆ. ಇದನ್ನು ಕೇಳಿ ಪ್ರೇಕ್ಷಕರು ಮಿಶ್ರ ಪ್ರತಿಕ್ರಿಯೆ ನೀಡಿದ್ದಾರೆ. ಕೆಲವರು ಈ ಹಾಡನ್ನು ಮೆಚ್ಚಿಕೊಂಡರೆ, ಇನ್ನೂ ಕೆಲವರು ಹೊಸ ಹಾಡಿನ ಬಗ್ಗೆ ಅಪಸ್ವರ ತೆಗೆದಿದ್ದಾರೆ. ಕೋರ್ಟ್​ನಲ್ಲಿ ನಡೆಯುತ್ತಿರುವ ಕೇಸ್ ವಿಚಾರದಲ್ಲಿ ಹೊಂಬಾಳೆ ಫಿಲ್ಮ್ಸ್​ ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ
Image
‘ವರಾಹ ರೂಪಂ..’ ವಿವಾದ: ಹೊಂಬಾಳೆ​​ಗೆ ಹಿನ್ನಡೆ; ಮೇಲ್ಮನವಿ ಅರ್ಜಿ ವಜಾ ಮಾಡಿದ ಕೇರಳ ಹೈಕೋರ್ಟ್​
Image
Kantara: ‘ಕಾಂತಾರ’ ಚಿತ್ರದಿಂದ ಅಲ್ಲು ಅರ್ಜುನ್​ ತಂದೆಗೆ ಭಾರಿ ಲಾಭ; ಎಷ್ಟಕ್ಕೆ ನಡೆಯಿತು ತೆಲುಗು ವ್ಯವಹಾರ?
Image
Rishab Shetty: ಒಂದೇ ದಿನಕ್ಕೆ 15 ಕೋಟಿ ರೂಪಾಯಿ ಬಾಚಿದ ‘ಕಾಂತಾರ’; ಪರಭಾಷೆಯಲ್ಲಿ ಭರ್ಜರಿ ಕಮಾಯಿ
Image
Anushka Shetty: ‘ಕಾಂತಾರ’ ನೋಡಿ ಅನುಷ್ಕಾ ಶೆಟ್ಟಿ ಫಿದಾ; ರಿಷಬ್​ ಬಗ್ಗೆ ಸ್ಪೆಷಲ್​ ಮಾತುಗಳನ್ನು ಹೇಳಿದ ಸ್ಟಾರ್​ ನಟಿ

‘ವರಾಹ ರೂಪಂ..’ ಹಾಡನ್ನು ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಹಾಗೂ ‘ಹೊಂಬಾಳೆ ಫಿಲ್ಮ್ಸ್​’ ಯೂಟ್ಯೂಬ್ ಚಾನೆಲ್​ಗಳಲ್ಲಿ ಅಪ್​ಲೋಡ್ ಮಾಡಲಾಗಿತ್ತು. ‘ಹೊಂಬಾಳೆ ಫಿಲ್ಮ್ಸ್​’ ಯೂಟ್ಯೂಬ್ ಚಾನೆಲ್​ನಿಂದ ಹಳೆಯ  ಹಾಡನ್ನು ಡಿಲೀಟ್ ಮಾಡಲಾಗಿದೆ.  ಹೊಸ ಹಾಡು ಯಾವಾಗ ಅಪ್​​ಲೋಡ್ ಆಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ‘ವರಾಹ ರೂಪಂ..’ ವಿವಾದ: ಹೊಂಬಾಳೆ​​ಗೆ ಹಿನ್ನಡೆ; ಮೇಲ್ಮನವಿ ಅರ್ಜಿ ವಜಾ ಮಾಡಿದ ಕೇರಳ ಹೈಕೋರ್ಟ್​

ಹೈಕೋರ್ಟ್ ಹೇಳಿದ್ದೇನು?

‘ಅಧೀನ ನ್ಯಾಯಾಲಯಗಳು ಹೊರಡಿಸಿದ ಎಲ್ಲಾ ಆದೇಶಗಳಲ್ಲಿ ನಾವು ಮಧ್ಯ ಪ್ರವೇಶಿಸಬಾರದು. ಹಾಗೆ ಮಾಡಿದರೆ ಅಧೀನ ನ್ಯಾಯಾಲಯಗಳು ಬಲಗುಂದಿದಂತೆ ಆಗುತ್ತವೆ. ಅಧೀನ ನ್ಯಾಯಾಲಯಗಳ ಕಾರ್ಯನಿರ್ವಹಣೆಯಲ್ಲಿ ಮಧ್ಯಪ್ರವೇಶಿಸಿದರೆ ಅರ್ಜಿದಾರರ ಶಾಸನಬದ್ಧ ಹಕ್ಕುಗಳಿಗೆ ಚ್ಯುತಿಯಾಗುತ್ತದೆ. ಎಲ್ಲಾ ಮೇಲ್ಮನವಿಗಳನ್ನು ಸ್ವೀಕರಿಸಲು ಸಾಧ್ಯವಿಲ್ಲ. ಹಾಗೆ ಮಾಡಿದರೆ ಕೋರ್ಟ್​​ನಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಲಿದೆ’ ಎಂದು ಕೇರಳ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.