AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರ್ತಿದೆ ಕಪಿಲ್ ಶರ್ಮಾ ಹೊಸ ಶೋ; ವಾಹಿನಿ ತೊರೆದು ಒಟಿಟಿಯತ್ತ ಮುಖ ಮಾಡಿದ ಕಾಮಿಡಿಯನ್  

ಕಪಿಲ್ ಶರ್ಮಾ ಒಂದು ಹೇಳಿಕೆ ನೀಡಿದ್ದರು. ‘ಮನೆ ಬದಲಾಗಿದೆ ಆದರೆ ಕುಟುಂಬವಲ್ಲ’ ಎಂದಿದ್ದರು. ಈ ಮೂಲಕ ಸೋನಿ ಟಿವಿಯನ್ನು ತೊರೆವ ಬಗ್ಗೆ ಘೋಷಣೆ ಮಾಡಿದ್ದರು. ಹಲವು ವರ್ಷಗಳಿಂದ ಸೋನಿ ವಾಹಿನಿ ಜೊತೆ ಕಪಿಲ್ ಒಳ್ಳೆಯ ಒಡನಾಟ ಹೊಂದಿದ್ದರು. ಈಗ ಅವರು ನೆಟ್​ಫ್ಲಿಕ್ಸ್ ಒಟಿಟಿಯತ್ತ ಮುಖ ಮಾಡಿದ್ದಾರೆ.

ಬರ್ತಿದೆ ಕಪಿಲ್ ಶರ್ಮಾ ಹೊಸ ಶೋ; ವಾಹಿನಿ ತೊರೆದು ಒಟಿಟಿಯತ್ತ ಮುಖ ಮಾಡಿದ ಕಾಮಿಡಿಯನ್  
ದಿ ಗ್ರೇಟ್ ಇಂಡಿಯನ್ ಕಪಿಲ್ ಶೋ
ರಾಜೇಶ್ ದುಗ್ಗುಮನೆ
|

Updated on: Mar 01, 2024 | 7:01 AM

Share

ನಟ ಕಪಿಲ್ ಶರ್ಮಾ (Kapil Sharma) ಅವರು ತಮ್ಮದೇ ಆದ ಹಲವು ಶೋಗಳನ್ನು ಮಾಡಿದ್ದಾರೆ. ‘ಫ್ಯಾಮಿಲಿ ಟೈಮ್ ವಿತ್ ಕಪಿಲ್ ಶರ್ಮಾ’, ‘ದಿ ಕಪಿಲ್ ಶರ್ಮಾ ಶೋ’ ಹೀಗೆ ನಾನಾ ಹೆಸರುಗಳಲ್ಲಿ ಅವರು ಶೋಗಳನ್ನು ನಡೆಸಿಕೊಟ್ಟಿದ್ದಾರೆ. ಈಗ ಹೊಸ ಹೆಸರಿನೊಂದಿಗೆ ಅವರು ಎಂಟ್ರಿ ಕೊಟ್ಟಿದ್ದಾರೆ. ಇದಕ್ಕೆ ‘ದಿ ಗ್ರೇಟ್ ಇಂಡಿಯನ್ ಕಪಿಲ್ ಶೋ’ ಎಂದು ಇದಕ್ಕೆ ಶೀರ್ಷಿಕೆ ಇಡಲಾಗಿದೆ. ಈ ಮೊದಲು ಕಪಿಲ್ ಶರ್ಮಾ ಶೋಗಳು ಸೋನಿ ಟಿವಿಯಲ್ಲಿ ಪ್ರಸಾರ ಕಾಣುತ್ತಿತ್ತು. ಈ ಬಾರಿ ಅವರು ನೆಟ್​ಫ್ಲಿಕ್ಸ್​ನತ್ತ ಮುಖ ಮಾಡಿದ್ದಾರೆ.

ಕಪಿಲ್ ಶರ್ಮಾ ಹಾಗೂ ಸುನಿಲ್ ಗ್ರೋವರ್ ಈ ಮೊದಲು ಹಲವು ಶೋಗಳನ್ನು ಒಟ್ಟಾಗಿ ಮಾಡಿದ್ದಾರೆ. ಸುನಿಲ್ ಗ್ರೋವರ್ ಅವರ ಡಾಕ್ಟರ್ ಮಶೂರ್ ಗುಲಾಟಿ ಪಾತ್ರ ಸಾಕಷ್ಟು ಗಮನ ಸೆಳೆದಿತ್ತು. ಆದರೆ, ಇಬ್ಬರ ಮಧ್ಯೆ ಕಿರಿಕ್ ಆಗಿದ್ದರಿಂದ ಇಬ್ಬರೂ ದೂರ ಆದರು. ಈಗ ಸುಮಾರು ಆರು ವರ್ಷಗಳ ಬಳಿಕ ಇಬ್ಬರೂ ಮತ್ತೆ ಒಂದಾಗಿದ್ದಾರೆ. ಈ ವಿಚಾರ ಫ್ಯಾನ್ಸ್​ಗೆ ಸಾಕಷ್ಟು ಖುಷಿ ನೀಡಿದೆ.

ಇತ್ತೀಚೆಗಷ್ಟೇ ಕಪಿಲ್ ಶರ್ಮಾ ಅವರು ಒಂದು ಹೇಳಿಕೆ ನೀಡಿದ್ದರು. ‘ಮನೆ ಬದಲಾಗಿದೆ ಆದರೆ ಕುಟುಂಬವಲ್ಲ’ ಎಂದಿದ್ದರು. ಈ ಮೂಲಕ ಸೋನಿ ಟಿವಿಯನ್ನು ತೊರೆದ ಬಗ್ಗೆ ಘೋಷಣೆ ಮಾಡಿದ್ದರು. ಹಲವು ವರ್ಷಗಳಿಂದ ಅವರು ಸೋನಿ ವಾಹಿನಿ ಜೊತೆ ಒಳ್ಳೆಯ ಒಡನಾಟ ಹೊಂದಿದ್ದರು. ಈಗ ಅವರು ನೆಟ್​ಫ್ಲಿಕ್ಸ್ ಒಟಿಟಿಯತ್ತ ಮುಖ ಮಾಡಿದ್ದಾರೆ. ‘ದಿ ಗ್ರೇಟ್ ಇಂಡಿಯನ್ ಕಪಿಲ್ ಶೋ’ನಲ್ಲಿ ಇನ್ನೂ ಹಲವರು ಇರಲಿದ್ದಾರೆ. ಇದರ ಪ್ರಮೋಷನಲ್ ಟೀಸರ್ ಗಮನ ಸೆಳೆದೆ.

ಇದನ್ನೂ ಓದಿ: ಆನ್​ಲೈನ್ ಬೆಟ್ಟಿಂಗ್ ಕೇಸ್; ಕಪಿಲ್ ಶರ್ಮಾ, ಶ್ರದ್ಧಾ ಕಪೂರ್ ಸೇರಿ ಹಲವರಿಗೆ ನೋಟಿಸ್

ಕಪಿಲ್ ಶರ್ಮಾ ಮೊದಲಾದವರು ಕುಳಿತು ಈ ಶೋನ ಟೈಟಲ್ ಹೇಗೆ ಅನೌನ್ಸ್ ಮಾಡೋದು ಎನ್ನುವ ಯೋಚನೆಯಲ್ಲಿ ಇರುತ್ತಾರೆ. ಒಬ್ಬೊಬ್ಬರು ಒಂದೊಂದು ಐಡಿಯಾ ಕೊಡುತ್ತಾರೆ. ಆದರೆ, ಬಜೆಟ್ ಕಾರಣಕ್ಕೆ ಎಲ್ಲಾ ಪ್ಲ್ಯಾನ್ ಕ್ಯಾನ್ಸಲ್ ಆಗುತ್ತದೆ. ಕೊನೆಯಲ್ಲಿ ಅದೇ ಸೆಟ್​ನಲ್ಲಿ ಟೈಟಲ್ ಅನೌನ್ಸ್ ಆಗುತ್ತದೆ. ಈ ಟೀಸರ್ ಸಾಕಷ್ಟು ಫನ್ ಆಗಿದೆ.  ಮಾರ್ಚ್ 30ರಿಂದ ಈ ಶೋ ಆರಂಭ ಆಗಲಿದೆ. ಪ್ರತಿ ಶನಿವಾರ ರಾತ್ರಿ 8 ಗಂಟೆಗೆ ಶೋ ಪ್ರಸಾರ ಕಾಣಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು