AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karan Johar: ನೆಪೋಟಿಸಂ ಬಗ್ಗೆಯೇ ಒಟಿಟಿಯಲ್ಲಿ ಕಾರ್ಯಕ್ರಮ ಮಾಡಲಿರುವ ಕರಣ್​ ಜೋಹರ್​

Disney Plus Hotstar: ನೆಪೋಟಿಸಂ ಕುರಿತಾದ ಈ ಕಾರ್ಯಕ್ರಮಕ್ಕೆ ಬಾಲಿವುಡ್​ನ ಕೆಲವರಿಂದ ವಿರೋಧ ವ್ಯಕ್ತವಾದರೂ ಆಗಬಹುದು. ಮುಖ್ಯವಾಗಿ ಕಂಗನಾ ರಣಾವತ್​ ಅವರು ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ ಎಂಬ ಕೌತುಕ ಮೂಡಿದೆ.

Karan Johar: ನೆಪೋಟಿಸಂ ಬಗ್ಗೆಯೇ ಒಟಿಟಿಯಲ್ಲಿ ಕಾರ್ಯಕ್ರಮ ಮಾಡಲಿರುವ ಕರಣ್​ ಜೋಹರ್​
ಕರಣ್​ ಜೋಹರ್​
ಮದನ್​ ಕುಮಾರ್​
|

Updated on: Jun 13, 2023 | 8:47 AM

Share

ಒಂದಷ್ಟು ವರ್ಷಗಳ ಹಿಂದೆ ನೆಪೋಟಿಸಂ (Nepotism) ಎಂಬ ಪದ ಬಹುತೇಕರಿಗೆ ಗೊತ್ತಿರಲಿಲ್ಲ. ಆದರೆ ನಟಿ ಕಂಗನಾ ರಣಾವತ್​ (Kangana Ranaut) ಅವರು ಆ ಪದವನ್ನು ಪರಿಚಯಿಸಿ, ಸಖತ್​ ಪ್ರಚಾರ ಮಾಡಿದರು. ಯಾವುದೇ ಕ್ಷೇತ್ರದಲ್ಲಿ ಹೊರಗಿನವರಿಗೆ ಅವಕಾಶ ನೀಡಿದೇ ಕೇವಲ ತಮ್ಮವರನ್ನೇ ಬೆಳೆಸುತ್ತಾ ಪಕ್ಷಪಾತ ಮಾಡೋದಕ್ಕೆ ನೆಪೋಟಿಸಂ ಎನ್ನಬಹುದು. ಬಾಲಿವುಡ್​ನಲ್ಲಿ ಕೇವಲ ಸ್ಟಾರ್​ ನಟ-ನಟಿಯರ ಮಕ್ಕಳಿಗೆ ಮಾತ್ರ ಅವಕಾಶ ನೀಡುತ್ತಾರೆ ಎಂಬ ಕಾರಣಕ್ಕೆ ನಿರ್ಮಾಪಕ, ನಿರ್ದೇಶಕ ಕರಣ್​ ಜೋಹರ್​ (Karan Johar) ಅವರನ್ನು ನೆಪೋಟಿಸಂನ ಉಸ್ತುವಾರಿ ಎನ್ನಲಾಗುತ್ತದೆ. ಈ ಬಗ್ಗೆ ಎಷ್ಟೇ ಟೀಕೆ ಕೇಳಿಬಂದರೂ ಅವರು ತಲೆ ಕೆಡಿಸಿಕೊಂಡಿಲ್ಲ. ಅಚ್ಚರಿ ಏನೆಂದರೆ ಈಗ ಅವರು ನೆಪೋಟಿಸಂ ಕುರಿತಾಗಿಯೇ ಒಂದು ಕಾರ್ಯಕ್ರಮ ನಡೆಸಿಕೊಡಲು ಸಜ್ಜಾಗಿದ್ದಾರೆ ಎಂಬುದು ತಿಳಿದುಬಂದಿದೆ. ಒಟಿಟಿ ಮೂಲಕ ಈ ಶೋ ಪ್ರಸಾರ ಆಗಲಿದೆ.

ಒಟಿಟಿ ಸಂಸ್ಥೆಗಳ ನಡುವೆ ಸಖತ್​ ಪೈಪೋಟಿ ಇದೆ. ‘ಡಿಸ್ನಿ ಪ್ಲಸ್​ ಹಾಟ್​ ಸ್ಟಾರ್​’ ಸಂಸ್ಥೆ ಕೂಡ ಭಾರತದ ಪ್ರೇಕ್ಷಕರಿಗೆ ಬಗೆಬಗೆಯ ಕಾರ್ಯಕ್ರಮಗಳನ್ನು ನೀಡುತ್ತಿದೆ. ಕರಣ್​ ಜೋಹರ್​ ಅವರು ‘ಡಿಸ್ನಿ ಪ್ಲಸ್​ ಹಾಟ್​ ಸ್ಟಾರ್​’ ಒಟಿಟಿಯಲ್ಲಿ ‘ಶೋ ಟೈಮ್​’ ಎಂಬ ಕಾರ್ಯಕ್ರಮವನ್ನು ಪ್ರಸಾರ ಮಾಡಲು ತೀರ್ಮಾನಿಸಿದ್ದಾರೆ. ಆ ಶೋ ಸಂಪೂರ್ಣ ನೆಪೋಟಿಸಂ ಕುರಿತಾಗಿ ಇರಲಿದೆ ಎಂದು ಹೇಳಲಾಗುತ್ತಿದೆ. ಅದಕ್ಕೆ ಬಾಲಿವುಡ್​ನ ಕೆಲವರಿಂದ ವಿರೋಧ ವ್ಯಕ್ತವಾದರೂ ಆಗಬಹುದು. ಮುಖ್ಯವಾಗಿ ಕಂಗನಾ ರಣಾವತ್​ ಅವರು ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕು.

ಇದನ್ನೂ ಓದಿ: ಕರಣ್​ ಜೋಹರ್​ ಜೊತೆ ಅಯಾನ್​ ಮುಖರ್ಜಿ ಮುನಿಸು; ‘ಬ್ರಹ್ಮಾಸ್ತ್ರ’ ತಂಡದ ಕಿರಿಕ್​ ಬಹಿರಂಗ

ಹಿಂದಿ ಚಿತ್ರರಂಗದಲ್ಲಿ ಕರಣ್​ ಜೋಹರ್​ ಅವರು ಪ್ರಭಾವಿ ವ್ಯಕ್ತಿಯಾಗಿ ಬೆಳೆದು ನಿಂತಿದ್ದಾರೆ. ನಿರ್ದೇಶಕನಾಗಿ, ನಿರ್ಮಾಪಕನಾಗಿ ಹಾಗೂ ನಿರೂಪಕನಾಗಿ ಅವರು ಫೇಮಸ್​ ಆಗಿದ್ದಾರೆ. ತಮ್ಮದೇ ನಿರ್ಮಾಣ ಸಂಸ್ಥೆ ಹೊಂದಿರುವ ಅವರು ಅನೇಕರಿಗೆ ಅವಕಾಶ ನೀಡಿದ್ದಾರೆ. ಅವರ ಮೇಲೆ ಇರುವ ಆರೋಪಗಳು ಕೂಡ ಹಲವು. ನೆಪೋಟಿಸಂ ಕಾರಣಕ್ಕೆ ಅವರು ಆಗಾಗ ಟೀಕೆಗೆ ಒಳಗಾಗುತ್ತಾರೆ. ಕರಣ್​ ಜೋಹರ್​ ಅವರು ಬಾಲಿವುಡ್​ನಲ್ಲಿ ನಿರ್ದೇಶಕನಾಗಿ 25 ವರ್ಷಗಳನ್ನು ಪೂರೈಸಿದ್ದಾರೆ.

ಇದನ್ನೂ ಓದಿ: ತಬ್ಬಿಕೊಂಡು ರಾಜಿಯಾದ ಪ್ರಿಯಾಂಕಾ-ಕರಣ್​ ಜೋಹರ್​; ಮಧ್ಯ ಮಾತಾಡಿ ನಿಷ್ಠುರವಾಗಿದ್ದು ಕಂಗನಾ

ಕರಣ್​ ಜೋಹರ್​ ಅವರಿಗೆ ಬಾಲಿವುಡ್​ನಲ್ಲಿ ಅನೇಕರ ಜೊತೆ ಆಪ್ತತೆ ಇದೆ. ಶಾರುಖ್​ ಖಾನ್​, ಕಾಜೋಲ್​, ದೀಪಿಕಾ ಪಡುಕೋಣೆ, ಸಲ್ಮಾನ್​ ಖಾನ್​, ರಾಣಿ ಮುಖರ್ಜಿ ಮುಂತಾದವರ ಕುಟುಂಬಗಳಿಗೆ ಕರಣ್​ ಜೋಹರ್​ ಆಪ್ತರಾಗಿದ್ದಾರೆ. ‘ಕಾಫಿ ವಿತ್​ ಕರಣ್​’ ಕಾರ್ಯಕ್ರಮ ನಡೆಸಿಕೊಡುವ ಮೂಲಕ ಅವರು ಸಾಕಷ್ಟು ಖ್ಯಾತಿ ಗಳಿಸಿದ್ದಾರೆ. ವಿವಾದಗಳ ಕಾರಣಕ್ಕೂ ಈ ಕಾರ್ಯಕ್ರಮ ಸುದ್ದಿ ಆಗುತ್ತದೆ. ಕರಣ್​ ಜೋಹರ್​ ಜೊತೆಗಿನ ಸ್ನೇಹಕ್ಕಾಗಿಯೇ ಅನೇಕ ಸೆಲೆಬ್ರಿಟಿಗಳು ಈ ಶೋನಲ್ಲಿ ಭಾಗಿ ಆಗಿದ್ದುಂಟು. ಈಗ ‘ಶೋ ಟೈಮ್​’ ಕಾರ್ಯಕ್ರಮದ ಸ್ವರೂಪ ಹೇಗಿರಬಹುದು ಎಂಬುದನ್ನು ತಿಳಿದುಕೊಳ್ಳುವ ಕೌತುಕ ಮೂಡಿದೆ.

ಇದನ್ನೂ ಓದಿ: ನೆಪೋಟಿಸಂ ಅಂದ್ರೆ ನೆನಪಾಗೋದೇ ಕರಣ್​ ಜೋಹರ್​

ಮೇ 25ರಂದು ಕರಣ್​ ಜೋಹರ್​ ಅವರು ಬರ್ತ್​ಡೇ ಆಚರಿಸಿಕೊಂಡಿದ್ದರು. ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ರಾಕಿ ಔರ್ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾದ ಫಸ್ಟ್​ ಲುಕ್​ ಕೂಡ ಅಂದು ಬಿಡುಗಡೆ ಮಾಡಲಾಗಿತ್ತು. ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ. ಇದರಲ್ಲಿ ಅಲಿಯಾ ಭಟ್​ ಮತ್ತು ರಣವೀರ್​ ಸಿಂಗ್​ ಜೋಡಿಯಾಗಿ ನಟಿಸಿದ್ದಾರೆ. ಜುಲೈ 28ರಂದು ಈ ಸಿನಿಮಾ ಬಿಡುಗಡೆ ಆಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?