AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನಸಾರೆ ದಕ್ಷಿಣ ಭಾರತದ ಸಿನಿಮಾ ಹೊಗಳಿದ ಕರಣ್​ ಜೋಹರ್​; ಸ್ಕ್ರೀನ್​ಶಾಟ್​ ಹಂಚಿಕೊಂಡ ನಟ

ಟೋವಿನೋ ಥಾಮಸ್​ ನಟನೆಯ ‘ಮಿನ್ನಲ್​ ಮುರಳಿ’ ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿದೆ. ಹಾಲಿವುಡ್​ನಲ್ಲಿ ಸಾಕಷ್ಟು ಸೂಪರ್​ ಹೀರೋ ಚಿತ್ರಗಳು ಬಂದಿವೆ. ಇದೇ ಕಲ್ಪನೆಯಲ್ಲಿ ‘ಮಿನ್ನಲ್​ ಮುರಳಿ’ ಸಿನಿಮಾ ಮೂಡಿಬಂದಿದೆ.

ಮನಸಾರೆ ದಕ್ಷಿಣ ಭಾರತದ ಸಿನಿಮಾ ಹೊಗಳಿದ ಕರಣ್​ ಜೋಹರ್​; ಸ್ಕ್ರೀನ್​ಶಾಟ್​ ಹಂಚಿಕೊಂಡ ನಟ
ಕರಣ್​​-ಟುವಿನೋ
TV9 Web
| Edited By: |

Updated on: Jan 11, 2022 | 6:00 AM

Share

ನಿರ್ಮಾಪಕ ಕರಣ್​ ಜೋಹರ್​ (Karan Johar) ಅವರು ಬಾಲಿವುಡ್​ನಲ್ಲಿ (Bollywood) ದೊಡ್ಡ ಮಟ್ಟದ ಹವಾ ಸೃಷ್ಟಿ ಮಾಡಿದ್ದಾರೆ. ಹಿಂದಿ ಸಿನಿಮಾಗಳ ಜತೆಗೆ ಅವರಿಗೆ ದಕ್ಷಿಣ ಭಾರತದ ಚಿತ್ರಗಳಮೇಲೂ ಹೆಚ್ಚು ಆಸಕ್ತಿ ಇದೆ. ಇಲ್ಲಿನ ಕೆಲ ಚಿತ್ರಗಳ ಬಗ್ಗೆ ಅವರು ಮೆಚ್ಚುಗೆ ಸೂಚಿಸಿದ ಉದಾಹರಣೆ ಕೂಡ ಇದೆ. ಟಾಲಿವುಡ್​ ಹೀರೋ ವಿಜಯ್​ ದೇವರಕೊಂಡ ಅವರನ್ನು ಬಾಲಿವುಡ್​ಗೆ ಅವರೇ ಪರಿಚಯಿಸುತ್ತಿದ್ದಾರೆ. ಈಗ ದಕ್ಷಿಣ ಭಾರತದ ಮತ್ತೊಂದು ಸಿನಿಮಾ ಬಗ್ಗೆ ಕರಣ್​ ಜೋಹರ್ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಸಿನಿಮಾದ ಹೀರೋಗೆ ಮೆಸೇಜ್​ ಮಾಡಿ ಶಹಭಾಸ್​ಗಿರಿ ಕೊಟ್ಟಿದ್ದಾರೆ. ಹಾಗಾದರೆ, ಯಾವುದು ಆ ಚಿತ್ರ? ‘ಮಿನ್ನಲ್​ ಮುರಳಿ’.

ಟೋವಿನೋ ಥಾಮಸ್​ ನಟನೆಯ ‘ಮಿನ್ನಲ್​ ಮುರಳಿ’ ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿದೆ. ಹಾಲಿವುಡ್​ನಲ್ಲಿ ಸಾಕಷ್ಟು ಸೂಪರ್​ ಹೀರೋ ಚಿತ್ರಗಳು ಬಂದಿವೆ. ಇದೇ ಕಲ್ಪನೆಯಲ್ಲಿ ‘ಮಿನ್ನಲ್​ ಮುರಳಿ’ ಸಿನಿಮಾ ಮೂಡಿಬಂದಿದೆ. ಸೂಪರ್​ ಹೀರೋ ವಿಚಾರವನ್ನು ಇಟ್ಟುಕೊಂಡು ಒಂದು ಅದ್ಭುತ ಫ್ಯಾಂಟಸಿ ಕಥೆಯನ್ನು ಇಲ್ಲಿ ಹೇಳಲಾಗಿದೆ. ಈ ಸಿನಿಮಾವನ್ನು ಕರಣ್​ ಜೋಹರ್​ ವೀಕ್ಷಣೆ ಮಾಡಿದ್ದಾರೆ. ಅಲ್ಲದೆ, ಟೋವಿನೋ ಥಾಮಸ್​ಗೆ ವಾಟ್ಸಾಪ್​ ಮೂಲಕ ನಾಲ್ಕು ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಈ ಸ್ಕ್ರೀನ್​ಶಾಟ್​ಅನ್ನು ಟೋವಿನೋ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

‘ಹಾಯ್ ಟೋವಿನೋ, ಕೊನೆಗೂ ‘ಮಿನ್ನಲ್ ಮುರಳಿ’ಯನ್ನು ನೋಡುವ ಅವಕಾಶ ಸಿಕ್ಕಿತು. ಸಿನಿಮಾ ನೋಡಿ ತುಂಬಾ ಖುಷಿಯಾಯಿತು. ಈ ಚಿತ್ರವನ್ನು ತುಂಬಾನೇ ಅಚ್ಚುಕಟ್ಟಾಗಿ ತಯಾರಿಸಲಾಗಿದೆ. ಮನರಂಜನೆಯ ಅಂಶವನ್ನು ಸರಿಯಾಗಿ ಇರಿಸಲಾಗಿದೆ. ಇದು ನಿಜಕ್ಕೂ ಅದ್ಭುತ ಸೂಪರ್‌ಹೀರೋ ಚಿತ್ರವಾಗಿತ್ತು. ಅಭಿನಂದನೆಗಳು’ ಎಂದು ಕರಣ್ ತಮ್ಮ ಸಂದೇಶದಲ್ಲಿ ಬರೆದಿದ್ದಾರೆ. ಇದಕ್ಕೆ ಉತ್ತರಿಸಿರುವ ಟೋವಿನೋ, ‘ತುಂಬಾ ಧನ್ಯವಾದಗಳು ಸರ್’ ಎಂದಿದ್ದಾರೆ.

ಬಸಿಲ್​ ಜೋಸೆಫ್​ ಅವರು ‘ಮಿನ್ನಲ್ ಮುರಳಿ’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ನೇರವಾಗಿ ನೆಟ್​ಫ್ಲಿಕ್ಸ್​ನಲ್ಲಿ ರಿಲೀಸ್ ಆಗಿದೆ. ಟೋವಿನೋ ಥಾಮಸ್​ ಅವರು ವೃತ್ತಿ ಜೀವನದಲ್ಲಿ ಭಿನ್ನ ಚಿತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಈ ಚಿತ್ರದಿಂದ ಅವರ ವೃತ್ತಿ ಜೀವನಕ್ಕೆ ಹೆಚ್ಚು ಮೈಲೇಜ್​ ಸಿಕ್ಕಿದೆ.

ಇದನ್ನೂ ಓದಿ: ‘ಕರಣ್​ ಜೋಹರ್​ ಬಗ್ಗೆ ಕೆಟ್ಟದಾಗಿ ಮಾತಾಡು’ ಎಂದು ಕಾಂಟ್ರವರ್ಸಿ ಖಾನ್​ಗೆ ಮೆಸೇಜ್ ಮಾಡಿದ್ದ ಕಂಗನಾ?

Alia Bhatt: ಕರಣ್​ ಜೋಹರ್​ ಕೇಳಿದ ಸಿಂಪಲ್​ ಪ್ರಶ್ನೆಗಳಿಗೆ ಉತ್ತರಿಸಲು ತಡವರಿಸಿದ ಆಲಿಯಾ ಭಟ್​; ಇಲ್ಲಿದೆ ವಿಡಿಯೋ

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್