AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನಸಾರೆ ದಕ್ಷಿಣ ಭಾರತದ ಸಿನಿಮಾ ಹೊಗಳಿದ ಕರಣ್​ ಜೋಹರ್​; ಸ್ಕ್ರೀನ್​ಶಾಟ್​ ಹಂಚಿಕೊಂಡ ನಟ

ಟೋವಿನೋ ಥಾಮಸ್​ ನಟನೆಯ ‘ಮಿನ್ನಲ್​ ಮುರಳಿ’ ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿದೆ. ಹಾಲಿವುಡ್​ನಲ್ಲಿ ಸಾಕಷ್ಟು ಸೂಪರ್​ ಹೀರೋ ಚಿತ್ರಗಳು ಬಂದಿವೆ. ಇದೇ ಕಲ್ಪನೆಯಲ್ಲಿ ‘ಮಿನ್ನಲ್​ ಮುರಳಿ’ ಸಿನಿಮಾ ಮೂಡಿಬಂದಿದೆ.

ಮನಸಾರೆ ದಕ್ಷಿಣ ಭಾರತದ ಸಿನಿಮಾ ಹೊಗಳಿದ ಕರಣ್​ ಜೋಹರ್​; ಸ್ಕ್ರೀನ್​ಶಾಟ್​ ಹಂಚಿಕೊಂಡ ನಟ
ಕರಣ್​​-ಟುವಿನೋ
TV9 Web
| Edited By: |

Updated on: Jan 11, 2022 | 6:00 AM

Share

ನಿರ್ಮಾಪಕ ಕರಣ್​ ಜೋಹರ್​ (Karan Johar) ಅವರು ಬಾಲಿವುಡ್​ನಲ್ಲಿ (Bollywood) ದೊಡ್ಡ ಮಟ್ಟದ ಹವಾ ಸೃಷ್ಟಿ ಮಾಡಿದ್ದಾರೆ. ಹಿಂದಿ ಸಿನಿಮಾಗಳ ಜತೆಗೆ ಅವರಿಗೆ ದಕ್ಷಿಣ ಭಾರತದ ಚಿತ್ರಗಳಮೇಲೂ ಹೆಚ್ಚು ಆಸಕ್ತಿ ಇದೆ. ಇಲ್ಲಿನ ಕೆಲ ಚಿತ್ರಗಳ ಬಗ್ಗೆ ಅವರು ಮೆಚ್ಚುಗೆ ಸೂಚಿಸಿದ ಉದಾಹರಣೆ ಕೂಡ ಇದೆ. ಟಾಲಿವುಡ್​ ಹೀರೋ ವಿಜಯ್​ ದೇವರಕೊಂಡ ಅವರನ್ನು ಬಾಲಿವುಡ್​ಗೆ ಅವರೇ ಪರಿಚಯಿಸುತ್ತಿದ್ದಾರೆ. ಈಗ ದಕ್ಷಿಣ ಭಾರತದ ಮತ್ತೊಂದು ಸಿನಿಮಾ ಬಗ್ಗೆ ಕರಣ್​ ಜೋಹರ್ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಸಿನಿಮಾದ ಹೀರೋಗೆ ಮೆಸೇಜ್​ ಮಾಡಿ ಶಹಭಾಸ್​ಗಿರಿ ಕೊಟ್ಟಿದ್ದಾರೆ. ಹಾಗಾದರೆ, ಯಾವುದು ಆ ಚಿತ್ರ? ‘ಮಿನ್ನಲ್​ ಮುರಳಿ’.

ಟೋವಿನೋ ಥಾಮಸ್​ ನಟನೆಯ ‘ಮಿನ್ನಲ್​ ಮುರಳಿ’ ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿದೆ. ಹಾಲಿವುಡ್​ನಲ್ಲಿ ಸಾಕಷ್ಟು ಸೂಪರ್​ ಹೀರೋ ಚಿತ್ರಗಳು ಬಂದಿವೆ. ಇದೇ ಕಲ್ಪನೆಯಲ್ಲಿ ‘ಮಿನ್ನಲ್​ ಮುರಳಿ’ ಸಿನಿಮಾ ಮೂಡಿಬಂದಿದೆ. ಸೂಪರ್​ ಹೀರೋ ವಿಚಾರವನ್ನು ಇಟ್ಟುಕೊಂಡು ಒಂದು ಅದ್ಭುತ ಫ್ಯಾಂಟಸಿ ಕಥೆಯನ್ನು ಇಲ್ಲಿ ಹೇಳಲಾಗಿದೆ. ಈ ಸಿನಿಮಾವನ್ನು ಕರಣ್​ ಜೋಹರ್​ ವೀಕ್ಷಣೆ ಮಾಡಿದ್ದಾರೆ. ಅಲ್ಲದೆ, ಟೋವಿನೋ ಥಾಮಸ್​ಗೆ ವಾಟ್ಸಾಪ್​ ಮೂಲಕ ನಾಲ್ಕು ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಈ ಸ್ಕ್ರೀನ್​ಶಾಟ್​ಅನ್ನು ಟೋವಿನೋ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

‘ಹಾಯ್ ಟೋವಿನೋ, ಕೊನೆಗೂ ‘ಮಿನ್ನಲ್ ಮುರಳಿ’ಯನ್ನು ನೋಡುವ ಅವಕಾಶ ಸಿಕ್ಕಿತು. ಸಿನಿಮಾ ನೋಡಿ ತುಂಬಾ ಖುಷಿಯಾಯಿತು. ಈ ಚಿತ್ರವನ್ನು ತುಂಬಾನೇ ಅಚ್ಚುಕಟ್ಟಾಗಿ ತಯಾರಿಸಲಾಗಿದೆ. ಮನರಂಜನೆಯ ಅಂಶವನ್ನು ಸರಿಯಾಗಿ ಇರಿಸಲಾಗಿದೆ. ಇದು ನಿಜಕ್ಕೂ ಅದ್ಭುತ ಸೂಪರ್‌ಹೀರೋ ಚಿತ್ರವಾಗಿತ್ತು. ಅಭಿನಂದನೆಗಳು’ ಎಂದು ಕರಣ್ ತಮ್ಮ ಸಂದೇಶದಲ್ಲಿ ಬರೆದಿದ್ದಾರೆ. ಇದಕ್ಕೆ ಉತ್ತರಿಸಿರುವ ಟೋವಿನೋ, ‘ತುಂಬಾ ಧನ್ಯವಾದಗಳು ಸರ್’ ಎಂದಿದ್ದಾರೆ.

ಬಸಿಲ್​ ಜೋಸೆಫ್​ ಅವರು ‘ಮಿನ್ನಲ್ ಮುರಳಿ’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ನೇರವಾಗಿ ನೆಟ್​ಫ್ಲಿಕ್ಸ್​ನಲ್ಲಿ ರಿಲೀಸ್ ಆಗಿದೆ. ಟೋವಿನೋ ಥಾಮಸ್​ ಅವರು ವೃತ್ತಿ ಜೀವನದಲ್ಲಿ ಭಿನ್ನ ಚಿತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಈ ಚಿತ್ರದಿಂದ ಅವರ ವೃತ್ತಿ ಜೀವನಕ್ಕೆ ಹೆಚ್ಚು ಮೈಲೇಜ್​ ಸಿಕ್ಕಿದೆ.

ಇದನ್ನೂ ಓದಿ: ‘ಕರಣ್​ ಜೋಹರ್​ ಬಗ್ಗೆ ಕೆಟ್ಟದಾಗಿ ಮಾತಾಡು’ ಎಂದು ಕಾಂಟ್ರವರ್ಸಿ ಖಾನ್​ಗೆ ಮೆಸೇಜ್ ಮಾಡಿದ್ದ ಕಂಗನಾ?

Alia Bhatt: ಕರಣ್​ ಜೋಹರ್​ ಕೇಳಿದ ಸಿಂಪಲ್​ ಪ್ರಶ್ನೆಗಳಿಗೆ ಉತ್ತರಿಸಲು ತಡವರಿಸಿದ ಆಲಿಯಾ ಭಟ್​; ಇಲ್ಲಿದೆ ವಿಡಿಯೋ

Follow Us
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ