AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯಲ್ಲೂ ಕರಣ್​ ಜೋಹರ್​ ನೆಪೋಟಿಸಮ್​; ಶಮಿತಾ ಶೆಟ್ಟಿಗೆ ಸಿಗುತ್ತಿದೆ ರಾಜ ಮರ್ಯಾದೆ

ಪ್ರತಿ ಬಾರಿ ಟಿವಿಯಲ್ಲಿ ಬಿಗ್​ ಬಾಸ್​ ಪ್ರಸಾರವಾಗುತ್ತಿತ್ತು. ಆದರೆ, ಈ ಬಾರಿ ಇದರ ಸ್ವರೂಪ ಬದಲಿಸಲಾಗಿದೆ. ಮೊದಲ ಆರು ವಾರಗಳ ಕಾಲ ಒಟಿಟಿಯಲ್ಲಿ ಈ ಶೋ ಪ್ರಸಾರವಾಗಲಿದೆ.

ಬಿಗ್​ ಬಾಸ್​ ಮನೆಯಲ್ಲೂ ಕರಣ್​ ಜೋಹರ್​ ನೆಪೋಟಿಸಮ್​; ಶಮಿತಾ ಶೆಟ್ಟಿಗೆ ಸಿಗುತ್ತಿದೆ ರಾಜ ಮರ್ಯಾದೆ
TV9 Web
| Edited By: |

Updated on: Aug 18, 2021 | 3:09 PM

Share

ಕರಣ್​ ಜೋಹರ್​ ಅವರು ಬಾಲಿವುಡ್​ನಲ್ಲಿ ಸಾಕಷ್ಟು ಹಿಟ್​ ಚಿತ್ರಗಳನ್ನು ನಿರ್ಮಾಣ ಮಾಡಿದ್ದಾರೆ. ಆದರೆ, ಅವರು ಸ್ವಜನ ಪಕ್ಷಪಾತ ಮಾಡುತ್ತಾರೆ ಎನ್ನುವ ಆರೋಪ ಆಗಾಗ ಕೇಳಿ ಬರುತ್ತಲೇ ಇರುತ್ತದೆ. ಸದ್ಯ ಕರಣ್​ ಅವರು ಬಿಗ್​ ಬಾಸ್​ ಒಟಿಟಿ ಶೋ ನಡೆಸಿಕೊಡುತ್ತಿದ್ದಾರೆ. ಇದರಲ್ಲೂ ಅವರು ನೆಪೋಟಿಸಮ್​ ತೋರಿಸುತ್ತಿದ್ದಾರೆ ಎನ್ನುವ ಆರೋಪ ಜೋರಾಗಿದೆ. ಇದಕ್ಕೆ ತಾಜಾ ಉದಾಹರಣೆ ಕೂಡ ಸಿಕ್ಕಿದೆ. ಹೀಗಾಗಿ, ಕರಣ್​ ವಿರುದ್ಧ ಎಲ್ಲರೂ ಹರಿಹಾಯುತ್ತಿದ್ದಾರೆ.

ಪ್ರತಿ ಬಾರಿ ಟಿವಿಯಲ್ಲಿ ಬಿಗ್​ ಬಾಸ್​ ಪ್ರಸಾರವಾಗುತ್ತಿತ್ತು. ಆದರೆ, ಈ ಬಾರಿ ಇದರ ಸ್ವರೂಪ ಬದಲಿಸಲಾಗಿದೆ. ಮೊದಲ ಆರು ವಾರಗಳ ಕಾಲ ಒಟಿಟಿಯಲ್ಲಿ ಈ ಶೋ ಪ್ರಸಾರವಾಗಲಿದೆ. ಒಟಿಟಿ ಶೋ ನಿರೂಪಣೆ ಜವಾಬ್ದಾರಿ ಕರಣ್​ ಅವರದ್ದು. ಅವರು ನಿರೂಪಣೆಯಲ್ಲಿ ಪಕ್ಷಪಾತ ಮಾಡುತ್ತಿರುವುದು ವೀಕ್ಷಕರಿಗೆ ಸ್ಪಷ್ಟವಾಗಿದೆ.

ಶಿಲ್ಪಾ ಶೆಟ್ಟಿ ಸಹೋದರಿ ಶಮಿತಾ ಶೆಟ್ಟಿ ಬಿಗ್​ ಬಾಸ್​ ಮನೆ ಸೇರಿದ್ದಾರೆ. ಶಿಲ್ಪಾಗೂ ಕರಣ್​ಗೂ ಒಳ್ಳೆಯ ಗೆಳೆತನವಿದೆ. ಈ ಕಾರಣಕ್ಕೆ ಕರಣ್​ ಅವರು ಶಮಿತಾ ತಂಟೆಗೆ ಅಷ್ಟಾಗಿ ಹೋಗುತ್ತಿಲ್ಲ. ಕಳೆದ ವಾರ ಶಮಿತಾ ಶೆಟ್ಟಿ ಹಾಗೂ ದಿವ್ಯಾ ಅಗರ್​ವಾಲ್​ ನಡುವೆ ಕಿತ್ತಾಟ ನಡೆದಿತ್ತು. ಈ ವಿಚಾರಕ್ಕೆ ಸಂಬಂಧಿಸಿ ಕರಣ್​ ಅವರು ದಿವ್ಯಾಗೆ ಕ್ಲಾಸ್​ ತೆಗೆದುಕೊಂಡಿದ್ದಾರೆ. ಶಮಿತಾ ತಂಟೆಗೆ ಅವರು ಹೋಗಿಲ್ಲ. ಇದು ಅನೇಕರ ಆಕ್ರೋಶಕ್ಕೆ ಕಾರಣವಾಗಿದೆ.

‘ನಾನು ದಿವ್ಯಾ ಅವರನ್ನು ಬೆಂಬಲಿಸುತ್ತೇನೆ. ನಿಮ್ಮ ಪಕ್ಷಪಾತವನ್ನು ಬಿಗ್​ ಬಾಸ್​ ನಿರೂಪಣೆಯಲ್ಲೂ ತೋರಿಸುತ್ತೀರಲ್ಲ. ನಿಮಗೆ ನಾಚಿಕೆ ಆಗಬೇಕು’ ಎಂದು ಕೆಲವರು ಕಮೆಂಟ್​ ಮಾಡಿದ್ದಾರೆ. ಇನ್ನೂ ಕೆಲವರು ಸಲ್ಮಾನ್​ ಖಾನ್​ ಅವರನ್ನು ಮಿಸ್​ ಮಾಡಿಕೊಳ್ಳುತ್ತಿದ್ದೇವೆ ಎಂದಿದ್ದಾರೆ. ‘ಸಲ್ಮಾನ್​ ಖಾನ್​ ಅವರು ಅದ್ಭುತವಾಗಿ ಶೋ ನಡೆಸಿಕೊಡುತ್ತಿದ್ದರು. ಅವರು ಎಂದಿಗೂ ಪಕ್ಷಪಾತ ಮಾಡಿಲ್ಲ’ ಎಂದಿದ್ದಾರೆ ಕೆಲವರು. ಒಟ್ಟಿನಲ್ಲಿ ಕರಣ್​ ಅವರ ನಿರೂಪಣೆಗೆ ನೆಗೆಟಿವ್​ ಕಮೆಂಟ್​ಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿವೆ.

ಇದನ್ನೂ ಓದಿ: ಕಸದ ಚೀಲವನ್ನೇ ಕಾಸ್ಟ್ಯೂಮ್​ ಮಾಡಿಕೊಂಡಿದ್ದ ನಟಿ ಊರ್ಫಿ ಬಿಗ್​ ಬಾಸ್​ನಿಂದ ಔಟ್​; ನಿಲ್ಲದ ಕಣ್ಣೀರು

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್