ಬಿಗ್​ ಬಾಸ್​ ಮನೆಯಲ್ಲೂ ಕರಣ್​ ಜೋಹರ್​ ನೆಪೋಟಿಸಮ್​; ಶಮಿತಾ ಶೆಟ್ಟಿಗೆ ಸಿಗುತ್ತಿದೆ ರಾಜ ಮರ್ಯಾದೆ

ಪ್ರತಿ ಬಾರಿ ಟಿವಿಯಲ್ಲಿ ಬಿಗ್​ ಬಾಸ್​ ಪ್ರಸಾರವಾಗುತ್ತಿತ್ತು. ಆದರೆ, ಈ ಬಾರಿ ಇದರ ಸ್ವರೂಪ ಬದಲಿಸಲಾಗಿದೆ. ಮೊದಲ ಆರು ವಾರಗಳ ಕಾಲ ಒಟಿಟಿಯಲ್ಲಿ ಈ ಶೋ ಪ್ರಸಾರವಾಗಲಿದೆ.

ಬಿಗ್​ ಬಾಸ್​ ಮನೆಯಲ್ಲೂ ಕರಣ್​ ಜೋಹರ್​ ನೆಪೋಟಿಸಮ್​; ಶಮಿತಾ ಶೆಟ್ಟಿಗೆ ಸಿಗುತ್ತಿದೆ ರಾಜ ಮರ್ಯಾದೆ
Follow us
| Updated By: ರಾಜೇಶ್ ದುಗ್ಗುಮನೆ

Updated on: Aug 18, 2021 | 3:09 PM

ಕರಣ್​ ಜೋಹರ್​ ಅವರು ಬಾಲಿವುಡ್​ನಲ್ಲಿ ಸಾಕಷ್ಟು ಹಿಟ್​ ಚಿತ್ರಗಳನ್ನು ನಿರ್ಮಾಣ ಮಾಡಿದ್ದಾರೆ. ಆದರೆ, ಅವರು ಸ್ವಜನ ಪಕ್ಷಪಾತ ಮಾಡುತ್ತಾರೆ ಎನ್ನುವ ಆರೋಪ ಆಗಾಗ ಕೇಳಿ ಬರುತ್ತಲೇ ಇರುತ್ತದೆ. ಸದ್ಯ ಕರಣ್​ ಅವರು ಬಿಗ್​ ಬಾಸ್​ ಒಟಿಟಿ ಶೋ ನಡೆಸಿಕೊಡುತ್ತಿದ್ದಾರೆ. ಇದರಲ್ಲೂ ಅವರು ನೆಪೋಟಿಸಮ್​ ತೋರಿಸುತ್ತಿದ್ದಾರೆ ಎನ್ನುವ ಆರೋಪ ಜೋರಾಗಿದೆ. ಇದಕ್ಕೆ ತಾಜಾ ಉದಾಹರಣೆ ಕೂಡ ಸಿಕ್ಕಿದೆ. ಹೀಗಾಗಿ, ಕರಣ್​ ವಿರುದ್ಧ ಎಲ್ಲರೂ ಹರಿಹಾಯುತ್ತಿದ್ದಾರೆ.

ಪ್ರತಿ ಬಾರಿ ಟಿವಿಯಲ್ಲಿ ಬಿಗ್​ ಬಾಸ್​ ಪ್ರಸಾರವಾಗುತ್ತಿತ್ತು. ಆದರೆ, ಈ ಬಾರಿ ಇದರ ಸ್ವರೂಪ ಬದಲಿಸಲಾಗಿದೆ. ಮೊದಲ ಆರು ವಾರಗಳ ಕಾಲ ಒಟಿಟಿಯಲ್ಲಿ ಈ ಶೋ ಪ್ರಸಾರವಾಗಲಿದೆ. ಒಟಿಟಿ ಶೋ ನಿರೂಪಣೆ ಜವಾಬ್ದಾರಿ ಕರಣ್​ ಅವರದ್ದು. ಅವರು ನಿರೂಪಣೆಯಲ್ಲಿ ಪಕ್ಷಪಾತ ಮಾಡುತ್ತಿರುವುದು ವೀಕ್ಷಕರಿಗೆ ಸ್ಪಷ್ಟವಾಗಿದೆ.

ಶಿಲ್ಪಾ ಶೆಟ್ಟಿ ಸಹೋದರಿ ಶಮಿತಾ ಶೆಟ್ಟಿ ಬಿಗ್​ ಬಾಸ್​ ಮನೆ ಸೇರಿದ್ದಾರೆ. ಶಿಲ್ಪಾಗೂ ಕರಣ್​ಗೂ ಒಳ್ಳೆಯ ಗೆಳೆತನವಿದೆ. ಈ ಕಾರಣಕ್ಕೆ ಕರಣ್​ ಅವರು ಶಮಿತಾ ತಂಟೆಗೆ ಅಷ್ಟಾಗಿ ಹೋಗುತ್ತಿಲ್ಲ. ಕಳೆದ ವಾರ ಶಮಿತಾ ಶೆಟ್ಟಿ ಹಾಗೂ ದಿವ್ಯಾ ಅಗರ್​ವಾಲ್​ ನಡುವೆ ಕಿತ್ತಾಟ ನಡೆದಿತ್ತು. ಈ ವಿಚಾರಕ್ಕೆ ಸಂಬಂಧಿಸಿ ಕರಣ್​ ಅವರು ದಿವ್ಯಾಗೆ ಕ್ಲಾಸ್​ ತೆಗೆದುಕೊಂಡಿದ್ದಾರೆ. ಶಮಿತಾ ತಂಟೆಗೆ ಅವರು ಹೋಗಿಲ್ಲ. ಇದು ಅನೇಕರ ಆಕ್ರೋಶಕ್ಕೆ ಕಾರಣವಾಗಿದೆ.

‘ನಾನು ದಿವ್ಯಾ ಅವರನ್ನು ಬೆಂಬಲಿಸುತ್ತೇನೆ. ನಿಮ್ಮ ಪಕ್ಷಪಾತವನ್ನು ಬಿಗ್​ ಬಾಸ್​ ನಿರೂಪಣೆಯಲ್ಲೂ ತೋರಿಸುತ್ತೀರಲ್ಲ. ನಿಮಗೆ ನಾಚಿಕೆ ಆಗಬೇಕು’ ಎಂದು ಕೆಲವರು ಕಮೆಂಟ್​ ಮಾಡಿದ್ದಾರೆ. ಇನ್ನೂ ಕೆಲವರು ಸಲ್ಮಾನ್​ ಖಾನ್​ ಅವರನ್ನು ಮಿಸ್​ ಮಾಡಿಕೊಳ್ಳುತ್ತಿದ್ದೇವೆ ಎಂದಿದ್ದಾರೆ. ‘ಸಲ್ಮಾನ್​ ಖಾನ್​ ಅವರು ಅದ್ಭುತವಾಗಿ ಶೋ ನಡೆಸಿಕೊಡುತ್ತಿದ್ದರು. ಅವರು ಎಂದಿಗೂ ಪಕ್ಷಪಾತ ಮಾಡಿಲ್ಲ’ ಎಂದಿದ್ದಾರೆ ಕೆಲವರು. ಒಟ್ಟಿನಲ್ಲಿ ಕರಣ್​ ಅವರ ನಿರೂಪಣೆಗೆ ನೆಗೆಟಿವ್​ ಕಮೆಂಟ್​ಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿವೆ.

ಇದನ್ನೂ ಓದಿ: ಕಸದ ಚೀಲವನ್ನೇ ಕಾಸ್ಟ್ಯೂಮ್​ ಮಾಡಿಕೊಂಡಿದ್ದ ನಟಿ ಊರ್ಫಿ ಬಿಗ್​ ಬಾಸ್​ನಿಂದ ಔಟ್​; ನಿಲ್ಲದ ಕಣ್ಣೀರು

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ