AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯಲ್ಲೂ ಕರಣ್​ ಜೋಹರ್​ ನೆಪೋಟಿಸಮ್​; ಶಮಿತಾ ಶೆಟ್ಟಿಗೆ ಸಿಗುತ್ತಿದೆ ರಾಜ ಮರ್ಯಾದೆ

ಪ್ರತಿ ಬಾರಿ ಟಿವಿಯಲ್ಲಿ ಬಿಗ್​ ಬಾಸ್​ ಪ್ರಸಾರವಾಗುತ್ತಿತ್ತು. ಆದರೆ, ಈ ಬಾರಿ ಇದರ ಸ್ವರೂಪ ಬದಲಿಸಲಾಗಿದೆ. ಮೊದಲ ಆರು ವಾರಗಳ ಕಾಲ ಒಟಿಟಿಯಲ್ಲಿ ಈ ಶೋ ಪ್ರಸಾರವಾಗಲಿದೆ.

ಬಿಗ್​ ಬಾಸ್​ ಮನೆಯಲ್ಲೂ ಕರಣ್​ ಜೋಹರ್​ ನೆಪೋಟಿಸಮ್​; ಶಮಿತಾ ಶೆಟ್ಟಿಗೆ ಸಿಗುತ್ತಿದೆ ರಾಜ ಮರ್ಯಾದೆ
TV9 Web
| Edited By: |

Updated on: Aug 18, 2021 | 3:09 PM

Share

ಕರಣ್​ ಜೋಹರ್​ ಅವರು ಬಾಲಿವುಡ್​ನಲ್ಲಿ ಸಾಕಷ್ಟು ಹಿಟ್​ ಚಿತ್ರಗಳನ್ನು ನಿರ್ಮಾಣ ಮಾಡಿದ್ದಾರೆ. ಆದರೆ, ಅವರು ಸ್ವಜನ ಪಕ್ಷಪಾತ ಮಾಡುತ್ತಾರೆ ಎನ್ನುವ ಆರೋಪ ಆಗಾಗ ಕೇಳಿ ಬರುತ್ತಲೇ ಇರುತ್ತದೆ. ಸದ್ಯ ಕರಣ್​ ಅವರು ಬಿಗ್​ ಬಾಸ್​ ಒಟಿಟಿ ಶೋ ನಡೆಸಿಕೊಡುತ್ತಿದ್ದಾರೆ. ಇದರಲ್ಲೂ ಅವರು ನೆಪೋಟಿಸಮ್​ ತೋರಿಸುತ್ತಿದ್ದಾರೆ ಎನ್ನುವ ಆರೋಪ ಜೋರಾಗಿದೆ. ಇದಕ್ಕೆ ತಾಜಾ ಉದಾಹರಣೆ ಕೂಡ ಸಿಕ್ಕಿದೆ. ಹೀಗಾಗಿ, ಕರಣ್​ ವಿರುದ್ಧ ಎಲ್ಲರೂ ಹರಿಹಾಯುತ್ತಿದ್ದಾರೆ.

ಪ್ರತಿ ಬಾರಿ ಟಿವಿಯಲ್ಲಿ ಬಿಗ್​ ಬಾಸ್​ ಪ್ರಸಾರವಾಗುತ್ತಿತ್ತು. ಆದರೆ, ಈ ಬಾರಿ ಇದರ ಸ್ವರೂಪ ಬದಲಿಸಲಾಗಿದೆ. ಮೊದಲ ಆರು ವಾರಗಳ ಕಾಲ ಒಟಿಟಿಯಲ್ಲಿ ಈ ಶೋ ಪ್ರಸಾರವಾಗಲಿದೆ. ಒಟಿಟಿ ಶೋ ನಿರೂಪಣೆ ಜವಾಬ್ದಾರಿ ಕರಣ್​ ಅವರದ್ದು. ಅವರು ನಿರೂಪಣೆಯಲ್ಲಿ ಪಕ್ಷಪಾತ ಮಾಡುತ್ತಿರುವುದು ವೀಕ್ಷಕರಿಗೆ ಸ್ಪಷ್ಟವಾಗಿದೆ.

ಶಿಲ್ಪಾ ಶೆಟ್ಟಿ ಸಹೋದರಿ ಶಮಿತಾ ಶೆಟ್ಟಿ ಬಿಗ್​ ಬಾಸ್​ ಮನೆ ಸೇರಿದ್ದಾರೆ. ಶಿಲ್ಪಾಗೂ ಕರಣ್​ಗೂ ಒಳ್ಳೆಯ ಗೆಳೆತನವಿದೆ. ಈ ಕಾರಣಕ್ಕೆ ಕರಣ್​ ಅವರು ಶಮಿತಾ ತಂಟೆಗೆ ಅಷ್ಟಾಗಿ ಹೋಗುತ್ತಿಲ್ಲ. ಕಳೆದ ವಾರ ಶಮಿತಾ ಶೆಟ್ಟಿ ಹಾಗೂ ದಿವ್ಯಾ ಅಗರ್​ವಾಲ್​ ನಡುವೆ ಕಿತ್ತಾಟ ನಡೆದಿತ್ತು. ಈ ವಿಚಾರಕ್ಕೆ ಸಂಬಂಧಿಸಿ ಕರಣ್​ ಅವರು ದಿವ್ಯಾಗೆ ಕ್ಲಾಸ್​ ತೆಗೆದುಕೊಂಡಿದ್ದಾರೆ. ಶಮಿತಾ ತಂಟೆಗೆ ಅವರು ಹೋಗಿಲ್ಲ. ಇದು ಅನೇಕರ ಆಕ್ರೋಶಕ್ಕೆ ಕಾರಣವಾಗಿದೆ.

‘ನಾನು ದಿವ್ಯಾ ಅವರನ್ನು ಬೆಂಬಲಿಸುತ್ತೇನೆ. ನಿಮ್ಮ ಪಕ್ಷಪಾತವನ್ನು ಬಿಗ್​ ಬಾಸ್​ ನಿರೂಪಣೆಯಲ್ಲೂ ತೋರಿಸುತ್ತೀರಲ್ಲ. ನಿಮಗೆ ನಾಚಿಕೆ ಆಗಬೇಕು’ ಎಂದು ಕೆಲವರು ಕಮೆಂಟ್​ ಮಾಡಿದ್ದಾರೆ. ಇನ್ನೂ ಕೆಲವರು ಸಲ್ಮಾನ್​ ಖಾನ್​ ಅವರನ್ನು ಮಿಸ್​ ಮಾಡಿಕೊಳ್ಳುತ್ತಿದ್ದೇವೆ ಎಂದಿದ್ದಾರೆ. ‘ಸಲ್ಮಾನ್​ ಖಾನ್​ ಅವರು ಅದ್ಭುತವಾಗಿ ಶೋ ನಡೆಸಿಕೊಡುತ್ತಿದ್ದರು. ಅವರು ಎಂದಿಗೂ ಪಕ್ಷಪಾತ ಮಾಡಿಲ್ಲ’ ಎಂದಿದ್ದಾರೆ ಕೆಲವರು. ಒಟ್ಟಿನಲ್ಲಿ ಕರಣ್​ ಅವರ ನಿರೂಪಣೆಗೆ ನೆಗೆಟಿವ್​ ಕಮೆಂಟ್​ಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿವೆ.

ಇದನ್ನೂ ಓದಿ: ಕಸದ ಚೀಲವನ್ನೇ ಕಾಸ್ಟ್ಯೂಮ್​ ಮಾಡಿಕೊಂಡಿದ್ದ ನಟಿ ಊರ್ಫಿ ಬಿಗ್​ ಬಾಸ್​ನಿಂದ ಔಟ್​; ನಿಲ್ಲದ ಕಣ್ಣೀರು

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ