AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಬರಲಿದೆ ‘ಕಾಫಿ ವಿತ್​ ಕರಣ್​’; ಪ್ರಸಾರ ಎಲ್ಲಿ? ದಿನಾಂಕ ಏನು? ಇಲ್ಲಿದೆ ಪೂರ್ತಿ ಮಾಹಿತಿ..

Koffee With Karan Season 7: ಈ ಹಿಂದಿನ ಸೀಸನ್​ಗಳು ಟಿವಿಯಲ್ಲಿ ಪ್ರಸಾರ ಆಗಿದ್ದವು. ಈಗ ನೇರವಾಗಿ ಒಟಿಟಿಯಲ್ಲಿ ‘ಕಾಫಿ ವಿತ್​ ಕರಣ್​ ಸೀಸನ್ 7’ ಪ್ರಸಾರ ಆಗಲಿದೆ.

ಮತ್ತೆ ಬರಲಿದೆ ‘ಕಾಫಿ ವಿತ್​ ಕರಣ್​’; ಪ್ರಸಾರ ಎಲ್ಲಿ? ದಿನಾಂಕ ಏನು? ಇಲ್ಲಿದೆ ಪೂರ್ತಿ ಮಾಹಿತಿ..
ಕರಣ್ ಜೋಹರ್
TV9 Web
| Edited By: |

Updated on:Jun 19, 2022 | 3:34 PM

Share

ಬಾಲಿವುಡ್​ನಲ್ಲಿ ಕರಣ್​ ಜೋಹರ್​ (Karan Johar) ಅವರು ನಿರ್ಮಾಪಕನಾಗಿ ಮತ್ತು ನಿರ್ದೇಶಕನಾಗಿ ಮಾತ್ರವಲ್ಲದೇ ನಿರೂಪಕನಾಗಿಯೂ ಫೇಮಸ್​. ಅನೇಕ ಪ್ರಶಸ್ತಿ ಪ್ರದಾನ ಸಮಾರಂಭಗಳನ್ನು ಅವರು ನಿರೂಪಿಸಿದ್ದಾರೆ. ‘ಬಿಗ್​ ಬಾಸ್​ ಒಟಿಟಿ’ ಕಾರ್ಯಕ್ರಮ ಕೂಡ ಅವರ ನಿರೂಪಣೆಯಲ್ಲೇ ಮೂಡಿಬಂತು. ಅದಕ್ಕಿಂತಲೂ ಹೆಚ್ಚಾಗಿ ಅವರಿಗೆ ಜನಪ್ರಿಯತೆ ತಂದುಕೊಟ್ಟ ಕಾರ್ಯಕ್ರಮ ಎಂದರೆ ಅದು ‘ಕಾಫಿ ವಿತ್​ ಕರಣ್​’ (Koffee With Karan) ಶೋ. ಬಾಲಿವುಡ್​ನ (Bollywood) ಅನೇಕ ಸೆಲೆಬ್ರಿಟಿಗಳು ಈ ಕಾರ್ಯಕ್ರಮಕ್ಕೆ ಬಂದು ಹೋಗಿದ್ದಾರೆ. ಈಗಾಗಲೇ 6 ಸೀಸನ್​ಗಳನ್ನು ಪೂರೈಸಿರುವ ಈ ಟಾಕ್​ ಶೋನ ಹೊಸ ಸೀಸನ್​ ಆರಂಭ ಆಗುತ್ತಿದೆ. ಈ ಸುದ್ದಿಯನ್ನು ಸ್ವತಃ ಕರಣ್​ ಜೋಹರ್​ ಅವರು ತಿಳಿಸಿದ್ದಾರೆ. ಹೊಸ ಪ್ರೋಮೋ ಮೂಲಕ ಅವರು ಈ ವಿಚಾರ ತಿಳಿಸಿದ್ದಾರೆ.

ಬೇರೆ ಎಲ್ಲ ಟಾಕ್ ಶೋಗಳಿಗಿಂತಲೂ ‘ಕಾಫಿ ವಿತ್​ ಕರಣ್​’ ತುಂಬ ವಿಶೇಷ. ಈ ಕಾರ್ಯಕ್ರಮಕ್ಕೆ ಬರುವವರಿಗೆ ಕರಣ್​ ಜೋಹರ್​ ಅವರು ನೇರವಾದ ಪ್ರಶ್ನೆಗಳನ್ನು ಕೇಳುತ್ತಾರೆ. ಅಷ್ಟೇ ಅಲ್ಲ, ಕೆಲವೊಮ್ಮೆ ತುಂಬ ಬೋಲ್ಡ್ ಆದಂತಹ ಮಾತುಕಥೆ ಕೂಡ ಇಲ್ಲಿ ನಡೆಯುತ್ತದೆ. ಅದರಿಂದ ಕಾಂಟ್ರವರ್ಸಿ ಆದ ಉದಾಹರಣೆಯೂ ಇದೆ. ಒಟ್ಟಿನಲ್ಲಿ ಪ್ರೇಕ್ಷಕರಿಗೆ ಈ ಶೋ ಸಖತ್​ ಮಜಾ ನೀಡುತ್ತದೆ.

ಇದನ್ನೂ ಓದಿ: ‘ಹೃದಯಂ’ ರಿಮೇಕ್​ನಲ್ಲಿ ಸೈಫ್​ ಅಲಿ ಖಾನ್​ ಮಗ ಇಬ್ರಾಹಿಂ? ಲಾಂಚ್​ ಮಾಡ್ತಾರೆ ಕರಣ್​ ಜೋಹರ್​

ಇದನ್ನೂ ಓದಿ
Image
‘ನಾವು ‘ಕೆಜಿಎಫ್​’ ರೀತಿಯ ಸಿನಿಮಾ ಮಾಡಿದ್ರೆ ಕಟು ಟೀಕೆ ವ್ಯಕ್ತವಾಗುತ್ತಿತ್ತು’: ಕರಣ್​ ಜೋಹರ್​ ಆರೋಪ
Image
‘ನನ್ನನ್ನೇಕೆ ದೂಷಿಸುತ್ತೀರಿ?’; ಏಕಾಏಕಿ ಸಿಟ್ಟಾದ ನಿರ್ಮಾಪಕ ಕರಣ್​ ಜೋಹರ್
Image
‘ಬಾಡಿಗಾರ್ಡ್ಸ್​ ಇಲ್ಲದೇ ಬನ್ನಿ’​ ಎಂದು ರಶ್ಮಿಕಾಗೆ ಕರಣ್​ ಜೋಹರ್​ ಆಹ್ವಾನ: ನಂತರ ಏನಾಯ್ತು?
Image
‘ಇಂಥ ಕೆಲಸ ಮಾಡ್ಬೇಡಿ’: ಎಲ್ಲರ ಎದುರು ಕರಣ್​ ಜೋಹರ್​ಗೆ ಅನಿಲ್​ ಕಪೂರ್ ವಾರ್ನಿಂಗ್​; ವಿಡಿಯೋ ವೈರಲ್​​

ಈ ಹಿಂದಿನ ಸೀಸನ್​ಗಳು ಟಿವಿಯಲ್ಲಿ ಪ್ರಸಾರ ಆಗಿದ್ದವು. ಈಗ ನೇರವಾಗಿ ಒಟಿಟಿಯಲ್ಲಿ ‘ಕಾಫಿ ವಿತ್​ ಕರಣ್​ ಸೀಸನ್ 7’ ಪ್ರಸಾರ ಆಗಲಿದೆ. ‘ಡಿಸ್ನಿ ಪ್ಲಸ್​ ಹಾಟ್​ ಸ್ಟಾರ್​’ ಒಟಿಟಿಯಲ್ಲಿ ಈ ಶೋ ಬಿತ್ತರ ಆಗಲಿದೆ. ಹಾಗಾಗಿ ಇನ್ನಷ್ಟು ಬೋಲ್ಡ್​ ಮಾತುಗಳು ಈ ಬಾರಿ ಇರಲಿವೆ ಎಂಬುದು ಖಚಿತ. ಜುಲೈ 7ರಿಂದ ಈ ಸೀಸನ್​ ಶುರು ಆಗಲಿದೆ. ಕರಣ್​ ಜೋಹರ್​ ಹಂಚಿಕೊಂಡಿರುವ ಪ್ರೋಮೋಗೆ ಜನರು ಬಗೆಬಗೆಯಲ್ಲಿ ಕಮೆಂಟ್​ ಮಾಡಿದ್ದಾರೆ.

ಕರಣ್​ ಜೋಹರ್​ ಅವರು ಸದ್ಯ ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಬಹುವರ್ಷಗಳ ಬಳಿಕ ಅವರು ನಿರ್ದೇಶಕನ ಕ್ಯಾಪ್​ ಧರಿಸಿರುವ ಕಾರಣ ಆ ಚಿತ್ರದ ಮೇಲೆ ನಿರೀಕ್ಷೆ ಮೂಡಿದೆ. ನಿರ್ದೇಶನದ ಕೆಲಸಗಳ ನಡುವೆ ಬಿಡುವು ಮಾಡಿಕೊಂಡು ಅವರು ‘ಕಾಫಿ ವಿತ್​ ಕರಣ್​’ ಶೋ ನಡೆಸಿ ಕೊಡಲಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:34 pm, Sun, 19 June 22

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ