AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಫಿ ವಿತ್ ಕರಣ್ ಶೋಗೆ ಬರಲಿದ್ದಾರೆ ಕಾರ್ತಿಕ್ ಆರ್ಯನ್? ಕರಣ್ ಜೊತೆಗಿನ ಕಿರಿಕ್ ಬಗ್ಗೆ ಮಾತು?

ಕಾರ್ತಿಕ್ ಹಾಗೂ ಕರಣ್ ಮಧ್ಯೆ ಮೂಡಿದ್ದ ವೈಮನಸ್ಸು ದೂರವಾಗಿದೆಯಂತೆ. ಹೀಗಾಗಿ, ಕಾರ್ತಿಕ್ ಅವರಿಗೆ ಕರಣ್ ಶೋಗೆ ಬರುವಂತೆ ಆಹ್ವಾನ ನೀಡಿದ್ದಾರೆ. ಈ ಆಹ್ವಾನವನ್ನು ಸ್ವೀಕರಿಸಿ ಬರಲು ಕಾರ್ತಿಕ್ ಕೂಡ ಮನಸ್ಸು ಮಾಡಿದ್ದಾರೆ ಎನ್ನಲಾಗಿದೆ. ಕಾರ್ಯಕ್ರಮಕ್ಕೆ ಆಗಮಿಸಿದಾಗ ಹಲವು ವಿಚಾರಗಳ ಬಗ್ಗೆ ಇಬ್ಬರೂ ಓಪನ್ ಆಗಿ ಮಾತನಾಡಲಿದ್ದಾರಂತೆ.

ಕಾಫಿ ವಿತ್ ಕರಣ್ ಶೋಗೆ ಬರಲಿದ್ದಾರೆ ಕಾರ್ತಿಕ್ ಆರ್ಯನ್? ಕರಣ್ ಜೊತೆಗಿನ ಕಿರಿಕ್ ಬಗ್ಗೆ ಮಾತು?
ಕಾರ್ತಿಕ್-ಕರಣ್
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on:Oct 13, 2023 | 2:20 PM

ಕರಣ್ ಜೋಹರ್ ನಡೆಸಿಕೊಡಲಿರುವ ‘ಕಾಫಿ ವಿತ್ ಕರಣ್ ಸೀಸನ್ 8’ (Koffee With Karan Season 8 ) ಆರಂಭಕ್ಕೆ ದಿನಗಣನೆ ಶುರುವಾಗಿದೆ. ಅಕ್ಟೋಬರ್ 26ರಂದು ಹೊಸ ಸೀಸನ್​ನ ಮೊದಲ ಎಪಿಸೋಡ್ ಪ್ರಸಾರ ಕಾಣಲಿದೆ ಎಂದು ಹೇಳಲಾಗುತ್ತಿದೆ. ಈ ಸೀಸನ್​ನಲ್ಲಿ ಯಾವೆಲ್ಲ ಅತಿಥಿಗಳು ಬರಲಿದ್ದಾರೆ ಎನ್ನುವ ಬಗ್ಗೆ ಸಾಕಷ್ಟು ಸುದ್ದಿಗಳು ಹರಿದಾಡುತ್ತಿವೆ. ಈ ಬಗ್ಗೆ ಇನ್ನೂ ಕ್ಲಾರಿಟಿ ಇಲ್ಲ. ಶೋ ಆರಂಭಕ್ಕೂ ಕೆಲವು ದಿನ ಮೊದಲು ಕರಣ್ ಜೋಹರ್ ಈ ಬಗ್ಗೆ ಮಾಹಿತಿ ನೀಡುತ್ತಾರೆ. ಈಗ ಹೊಸ ಸೀಸನ್​ಗೆ ಕಾರ್ತಿಕ್ ಆರ್ಯನ್ ಬರಲಿದ್ದಾರೆ ಎಂದು ವರದಿ ಆಗಿದೆ. ಈ ವಿಚಾರದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆಯುತ್ತಿದೆ.

ಕಾರ್ತಿಕ್ ಆರ್ಯನ್ ಅವರು ಯಾವುದೇ ಹಿನ್ನೆಲೆ ಇಲ್ಲದೆ ಬಂದವರು. ಅವರಿಗೆ ದೊಡ್ಡ ಮಟ್ಟದ ಬೇಡಿಕೆ ಸೃಷ್ಟಿ ಆಗಿದೆ. ಅನೇಕ ಸ್ಟಾರ್ ನಿರ್ಮಾಪಕರು ಇವರ ಕಾಲ್​ಶೀಟ್​ಗಾಗಿ ಕಾದಿದ್ದಾರೆ. ಆದರೆ, ಕೆಲ ವರ್ಷಗಳ ಹಿಂದೆ ಈ ರೀತಿ ಇರಲಿಲ್ಲ. ಅವರು ಆಗತಾನೇ ಚಿತ್ರರಂಗದಲ್ಲಿ ಗುರುತಿಸಿಕೊಳ್ಳುತ್ತಿದ್ದರು. ಧರ್ಮ ಪ್ರೊಡಕ್ಷನ್ ಅಡಿಯಲ್ಲಿ ಸಿದ್ಧವಾಗಬೇಕಿದ್ದ ‘ದೋಸ್ತಾನಾ 2’ ಸಿನಿಮಾದಲ್ಲಿ ಕಾರ್ತಿಕ್ ನಟಿಸಬೇಕಿತ್ತು. ಆದರೆ, ಕರಣ್ ಹಾಗೂ ಕಾರ್ತಿಕ್ ಮಧ್ಯೆ ಹೊಂದಾಣಿಕೆ ಆಗದ ಕಾರಣ ಅವರು ಚಿತ್ರದಿಂದ ಹೊರ ನಡೆದರು ಎನ್ನಲಾಗಿದೆ. ಆ ಬಳಿಕ ಪ್ರಾಜೆಕ್ಟ್ ನಿಂತೇ ಹೋಯಿತು. ಕಾರ್ತಿಕ್ ಅವರನ್ನು ತುಳಿಯಬೇಕು ಎಂದು ಕರಣ್ ಪ್ರಯತ್ನಿಸಿದ್ದರು ಎನ್ನುವ ಆರೋಪವನ್ನು ಕೆಲವರು ಮಾಡಿದ್ದಾರೆ.

ಈಗ ಕಾರ್ತಿಕ್ ಹಾಗೂ ಕರಣ್ ಮಧ್ಯೆ ಮೂಡಿದ್ದ ವೈಮನಸ್ಸು ದೂರವಾಗಿದೆಯಂತೆ. ಹೀಗಾಗಿ, ಕಾರ್ತಿಕ್ ಅವರಿಗೆ ಕರಣ್ ಶೋಗೆ ಬರುವಂತೆ ಆಹ್ವಾನ ನೀಡಿದ್ದಾರೆ. ಈ ಆಹ್ವಾನವನ್ನು ಸ್ವೀಕರಿಸಿ ಬರಲು ಕಾರ್ತಿಕ್ ಕೂಡ ಮನಸ್ಸು ಮಾಡಿದ್ದಾರೆ ಎನ್ನಲಾಗಿದೆ. ಕಾರ್ಯಕ್ರಮಕ್ಕೆ ಆಗಮಿಸಿದಾಗ ಹಲವು ವಿಚಾರಗಳ ಬಗ್ಗೆ ಇಬ್ಬರೂ ಓಪನ್ ಆಗಿ ಮಾತನಾಡಲಿದ್ದಾರಂತೆ. ಈ ವೇಳೆ ಕರಣ್ ಜೊತೆಗೆ ಆದ ಕಿರಿಕ್ ಬಗ್ಗೆಯೂ ಅವರು ಮಾತನಾಡುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

‘ಕಾಫಿ ವಿತ್ ಕರಣ್’ ಶೋನಲ್ಲಿ ಯಾವುದೇ ಮಾತಿಗೂ ಸೆನ್ಸಾರ್ ಇರುವುದಿಲ್ಲ. ಅಲ್ಲಿ ಎಲ್ಲಾ ವಿಚಾರಗಳನ್ನು ಮುಕ್ತವಾಗಿ ಮಾತನಾಡಲಾಗುತ್ತದೆ. ಇದರಿಂದ ಹಲವು ವಿವಾದಗಳು ಎದ್ದಿರುವ ಉದಾಹರಣೆ ಇದೆ. ಈಗ ಕಾರ್ತಿಕ್​ಗೆ ಯಾವ ರೀತಿಯ ಪ್ರಶ್ನೆ ಕೇಳಲಾಗುತ್ತದೆ ಎಂಬ ಬಗ್ಗೆ ಕುತೂಹಲ ಮೂಡಿದೆ. 2019ರಲ್ಲಿ ಕಾರ್ತಿಕ್ ಅವರು ಕರಣ್ ಜೋಹರ್ ಶೋಗೆ ಬಂದಿದ್ದರು. ಈಗ ಎರಡನೇ ಬಾರಿಗೆ ಅವರು ಈ ಶೋಗೆ ಬರುತ್ತಿರುವ ಬಗ್ಗೆ ಕರಣ್ ಜೋಹರ್ ಕಡೆಯಿಂದ ಈ ಬಗ್ಗೆ ಅಧಿಕೃತ ಮಾಹಿತಿ ಸಿಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಇದನ್ನೂ ಓದಿ: ಗೇ ಎಂಬ ಕಾರಣಕ್ಕೆ ಕರಣ್ ಜೋಹರ್ ಮದುವೆ ಆಗಿಲ್ವಾ? ಅಸಲಿ ಕಾರಣ ತಿಳಿಸಿದ ನಿರ್ಮಾಪಕ

ಕಾರ್ತಿಕ್ ಆರ್ಯನ್ ಅವರು ‘ಭೂಲ್ ಭುಲಯ್ಯ 2’ ಚಿತ್ರದಿಂದ ದೊಡ್ಡ ಗೆಲುವು ಕಂಡರು. ಕಳೆದ ವರ್ಷ ಅವರ ನಿರ್ದೇಶನದ ಸಿನಿಮಾಗಳು ದೊಡ್ಡ ಮಟ್ಟದಲ್ಲಿ ಸದ್ದು ಮಾಡಿಲ್ಲ. ಸದ್ಯ ಅವರು ‘ಚಂದು ಚಾಂಪಿಯನ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:15 pm, Fri, 13 October 23

ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
Live: ರಕ್ಷಣಾ ಇಲಾಖೆಯಿಂದ ಸುದ್ದಿಗೋಷ್ಠಿ
Live: ರಕ್ಷಣಾ ಇಲಾಖೆಯಿಂದ ಸುದ್ದಿಗೋಷ್ಠಿ
ದೇಶಕ್ಕಾಗಿ ಏನು ಮಾಡಿದರೂ ಕಮ್ಮಿ: ಜಮೀರ್ ಅಹ್ಮದ್, ಸಚಿವ
ದೇಶಕ್ಕಾಗಿ ಏನು ಮಾಡಿದರೂ ಕಮ್ಮಿ: ಜಮೀರ್ ಅಹ್ಮದ್, ಸಚಿವ
ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!
ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!
ಪ್ರಧಾನಿ ಮೋದಿ ತೆಗೆದುಕೊಳ್ಳುತ್ತಿರುವ ಕ್ರಮಗಳ ಜೊತೆಗಿದ್ದೇವೆ: ಮುಸಲ್ಮಾನರು
ಪ್ರಧಾನಿ ಮೋದಿ ತೆಗೆದುಕೊಳ್ಳುತ್ತಿರುವ ಕ್ರಮಗಳ ಜೊತೆಗಿದ್ದೇವೆ: ಮುಸಲ್ಮಾನರು
ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ
ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ
ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ
ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ
ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೂ ಎಚ್ಚರಿಕೆ ಸೂಚನೆ ಬಂದಿದೆ: ಡಿಕೆಶಿ
ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೂ ಎಚ್ಚರಿಕೆ ಸೂಚನೆ ಬಂದಿದೆ: ಡಿಕೆಶಿ
ಇವತ್ತು ಸಾಯಂಕಾಲ ಸಿಎಂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ: ಪರಮೇಶ್ವರ್
ಇವತ್ತು ಸಾಯಂಕಾಲ ಸಿಎಂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ: ಪರಮೇಶ್ವರ್