AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀ5ನಲ್ಲಿ ಪ್ರಸಾರ ಕಾಣಲಿದೆ ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾ; ಇಲ್ಲಿದೆ ಮಾಹಿತಿ

ಧ್ರುವ ಸರ್ಜಾ ಅಭಿನಯದ 'ಕೆಡಿ-ದಿ ಡೆವಿಲ್' ಸಿನಿಮಾ ಜೂನ್ 5 ರಿಂದ ಜೀ5 ಓಟಿಟಿಯಲ್ಲಿ ಪ್ರಸಾರವಾಗಲಿದೆ. ಪ್ರೇಮ್ ನಿರ್ದೇಶನದ ಈ ಆಕ್ಷನ್ ಸಿನಿಮಾ ಕನ್ನಡ, ತೆಲುಗು, ತಮಿಳು, ಮಲಯಾಳಂ ಭಾಷೆಗಳಲ್ಲಿ ಲಭ್ಯ. 70ರ ದಶಕದ ಕಥಾಹಂದರ ಹೊಂದಿರುವ 'ಕೆಡಿ' ಅಣ್ಣ-ತಮ್ಮನ ಬಾಂಧವ್ಯ ಕಥೆಯನ್ನು ಒಳಗೊಂಡಿದೆ. ರವಿಚಂದ್ರನ್, ಸಂಜಯ್ ದತ್ ಸೇರಿ ದೊಡ್ಡ ತಾರಾಗಣವಿದೆ.

ಜೀ5ನಲ್ಲಿ ಪ್ರಸಾರ ಕಾಣಲಿದೆ ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾ; ಇಲ್ಲಿದೆ ಮಾಹಿತಿ
ಕೆಡಿ ಸಿನಿಮಾ Image Credit source: KD Movie
ರಾಜೇಶ್ ದುಗ್ಗುಮನೆ
|

Updated on: May 29, 2026 | 11:23 AM

Share

ನಿರ್ದೇಶಕ ಪ್ರೇಮ್ ಹಾಗೂ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಕಾಂಬಿನೇಷನ್‌ನ ಬಹುನಿರೀಕ್ಷಿತ ‘KD-ದಿ ಡೆವಿಲ್’ (KD Movie) ಸಿನಿಮಾ ಥಿಯೇಟರ್​​ನಲ್ಲಿ ಒಳ್ಳೆಯ ಕಲೆಕ್ಷನ್ ಮಾಡಿದೆ. ಈಗ ಸಿನಿಮಾ ಡಿಜಿಟಲ್ ಪರದೆಯ ಮೇಲೆ ಅಬ್ಬರಿಸಲು ಸಜ್ಜಾಗಿದೆ. ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸಿದ್ದ ಈ ಚಿತ್ರ ಜೂನ್ 5 ರಂದು ಜೀ5 ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಅಧಿಕೃತವಾಗಿ ಸ್ಟ್ರೀಮಿಂಗ್ ಆರಂಭಿಸಲಿದೆ. ವಿಶೇಷವೆಂದರೆ, ಕನ್ನಡದ ಜೊತೆಗೆ ದಕ್ಷಿಣ ಭಾರತದ ಪ್ರಮುಖ ಭಾಷೆಗಳಾದ ತೆಲುಗು, ತಮಿಳು ಹಾಗೂ ಮಲಯಾಳಂನಲ್ಲೂ ಈ ಸಿನಿಮಾ ವೀಕ್ಷಣೆಗೆ ಲಭ್ಯವಿದೆ.

ನಿರ್ದೇಶಕ ಪ್ರೇಮ್ ‘ಜೋಗಿ’ ಚಿತ್ರದಲ್ಲಿ ಅಮ್ಮ ಹಾಗೂ ಮಗನ ಕಥೆ ಹೇಳಿ ಎಲ್ಲರ ಮೆಚ್ಚುಗೆ ಗಳಿಸಿದ್ದರು. ಈ ಬಾರಿ ಅಣ್ಣ-ತಮ್ಮನ ಕಥೆ ಹೇಳಿದ್ದಾರೆ. ಈ ಚಿತ್ರದಲ್ಲಿ ಅವರು ಪ್ರೇಕ್ಷಕರನ್ನು 70ರ ದಶಕದ ಕಾಲಘಟ್ಟಕ್ಕೆ ಕರೆದುಕೊಂಡು ಹೋಗಿದ್ದಾರೆ. ಅಣ್ಣನೇ ಸರ್ವಸ್ವ ಎಂದು ಬದುಕುವ ‘ಕಾಳಿದಾಸ ಅಲಿಯಾಸ್ ಕೆಡಿ’ ಪಾತ್ರದಲ್ಲಿ ಧ್ರುವ ಸರ್ಜಾ ಕಾಣಿಸಿಕೊಂಡಿದ್ದಾರೆ.

ಅಣ್ಣ-ತಮ್ಮನ ನಡುವಿನ ಭಾವನಾತ್ಮಕ ಬಾಂಧವ್ಯದ ಜೊತೆಗೆ ಆ ಕಾಲದ ರಾಜಕೀಯ ಪೈಪೋಟಿ ಮತ್ತು ರಕ್ತಸಿಕ್ತ ರೌಡಿಸಂ ಕಥೆಯನ್ನು ಚಿತ್ರ ಒಳಗೊಂಡಿದೆ. ಧ್ರುವ ಅವರು ಮಾಸ್ ಹಾಗೂ ಆ್ಯಕ್ಷನ್ ಮೂಲಕ ಅಭಿಮಾನಿಗಳ ಎದುರು ಬಂದಿದ್ದಾರೆ. ‘ಕೆಡಿ’ ಸಿನಿಮಾದ ಮತ್ತೊಂದು ದೊಡ್ಡ ಪ್ಲಸ್ ಪಾಯಿಂಟ್ ಎಂದರೆ ಚಿತ್ರದ ಅದ್ದೂರಿ ತಾರಾಗಣ. ಈ ಸಿನಿಮಾದಲ್ಲಿ ಭಾರತೀಯ ಚಿತ್ರರಂಗದ ಘಟಾನುಘಟಿ ಕಲಾವಿದರು ಒಂದಾಗಿದ್ದಾರೆ.

ಇದನ್ನೂ ಓದಿ: 20 ದಿನಕ್ಕೆ‘ಕೆಡಿ’ಸಿನಿಮಾ ಗಳಿಸಿದ್ದೆಷ್ಟು? ನಿರ್ಮಾಪಕರಿಗೆ ಲಾಭವೋ, ನಷ್ಟವೋ?

ಕ್ರೇಜಿಸ್ಟಾರ್ ವಿ. ರವಿಚಂದ್ರನ್, ರಮೇಶ್ ಅರವಿಂದ್, ಬಾಲಿವುಡ್ ನಟ ಸಂಜಯ್ ದತ್, ಶಿಲ್ಪಾ ಶೆಟ್ಟಿ, ರೀಷ್ಮಾ ನಾಣಯ್ಯ ಬಣ್ಣ ಹಚ್ಚಿದ್ದಾರೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಚಿತ್ರದ ಪ್ರಮುಖ ಅತಿಥಿ ಪಾತ್ರವೊಂದರಲ್ಲಿ ಕಾಣಿಸಿಕೊಂಡು ಚಿತ್ರದ ತೂಕವನ್ನು ಹೆಚ್ಚಿಸಿದ್ದಾರೆ. ಕನ್ನಡದ ನಿರ್ಮಾಣ ಸಂಸ್ಥೆಯಾದ ಕೆವಿಎನ್ ಪ್ರೊಡಕ್ಷನ್ಸ್ ಈ ಚಿತ್ರವನ್ನು ದೊಡ್ಡ ಬೆಕಟ್​​ನಲ್ಲಿ ನಿರ್ಮಿಸಿದೆ. ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ವಾರ ಭವಿಷ್ಯ; ಜೂನ್ 22 ರಿಂದ 28 ರವರೆಗಿನ ದ್ವಾದಶ ರಾಶಿಗಳ ಫಲಾಫಲ
ವಾರ ಭವಿಷ್ಯ; ಜೂನ್ 22 ರಿಂದ 28 ರವರೆಗಿನ ದ್ವಾದಶ ರಾಶಿಗಳ ಫಲಾಫಲ
ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್‌ ಪದಗ್ರಹಣ ನೇರಪ್ರಸಾರ
ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್‌ ಪದಗ್ರಹಣ ನೇರಪ್ರಸಾರ
ಮೇಕೆದಾಟು ಯೋಜನೆ: ತಮಿಳುನಾಡು ಆಕ್ಷೇಪಕ್ಕೆ ಹೆಚ್​​ಡಿಕೆ ಅಸಮಾಧಾನ
ಮೇಕೆದಾಟು ಯೋಜನೆ: ತಮಿಳುನಾಡು ಆಕ್ಷೇಪಕ್ಕೆ ಹೆಚ್​​ಡಿಕೆ ಅಸಮಾಧಾನ