AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾನ್​ಸ್ಟೇಬಲ್ ನಾಪತ್ತೆ ಹಿಂದಿನ ಕಥೆ; ಬಂದಿದೆ ಹೊಸ ಕ್ರೈಮ್ ಥ್ರಿಲರ್, ಪ್ರತಿ ಎಪಿಸೋಡ್​ನಲ್ಲೂ ಟ್ವಿಸ್ಟ್  

Kerala Crime Files Season 2: ‘ಕೇರಳ ಕ್ರೈಮ್ ಫೈಲ್ಸ್ ಸೀಸನ್ 2’ ಇತ್ತೀಚೆಗೆ ರಿಲೀಸ್ ಆಗಿದೆ. ಮಲಯಾಳಂ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅನಿರೀಕ್ಷಿತ ಟ್ವಿಸ್ಟ್‌ಗಳಿಂದ ಕೂಡಿದ ಈ ಸೀರಿಸ್‌ನ ಕ್ಲೈಮ್ಯಾಕ್ಸ್ ನಿರಾಸೆ ಮೂಡಿಸಬಹುದ. ಅಜು ವರ್ಗೀಸ್ ಮತ್ತು ಅರ್ಜುನ್ ರಾಧಾಕೃಷ್ಣನ್ ಪ್ರಮುಖ ಪಾತ್ರಗಳಲ್ಲಿದ್ದಾರೆ.

ಕಾನ್​ಸ್ಟೇಬಲ್ ನಾಪತ್ತೆ ಹಿಂದಿನ ಕಥೆ; ಬಂದಿದೆ ಹೊಸ ಕ್ರೈಮ್ ಥ್ರಿಲರ್, ಪ್ರತಿ ಎಪಿಸೋಡ್​ನಲ್ಲೂ ಟ್ವಿಸ್ಟ್  
ಕೇರಳಾ ಕ್ರೈಮ್ ಸ್ಟೋರಿ
ರಾಜೇಶ್ ದುಗ್ಗುಮನೆ
|

Updated on: Jun 23, 2025 | 12:48 PM

Share

ಒಟಿಟಿಯಲ್ಲಿ (OTT) ಪ್ರತಿ ವಾರ ಹೊಸ ಹೊಸ ಸಿನಿಮಾಗಳು ಹಾಗೂ ವೆಬ್ ಸೀರಿಸ್​ಗಳು ರಿಲೀಸ್ ಆಗುತ್ತಲೇ ಇರುತ್ತವೆ. ಆದರೆ, ಯಾವುದನ್ನು ನೋಡಬೇಕು ಎಂಬ ಗೊಂದಲ ಅನೇಕರಿಗೆ ಇರುತ್ತದೆ. ಏಕೆಂದರೆ ಸರಣಿ/ಸಿನಿಮಾನ ನೋಡಿ ನಿರಾಸೆ ಆದರೆ ಸಮಯವೆಲ್ಲ ವ್ಯರ್ಥ. ಆದರೆ, ನಾವು ಈಗ ಒಂದು ಹೊಸ ವೆಬ್ ಸೀರಿಸ್​ನ ಹೇಳುತ್ತಿದ್ದೇವೆ. ಜೂನ್ 20ರಂದು ಈ ಸರಣಿ ಪ್ರಸಾರ ಆರಂಭಿಸಿದೆ. ಹಾಗಾದರೆ ಯಾವುದು ಆ ಸೀರಿಸ್? ಆ ಬಗ್ಗೆ ಇಲ್ಲಿದೆ ವಿವರ.

‘ಕೇರಳ ಕ್ರೈಮ್ ಫೈಲ್ಸ್’ 2023ರ ಜೂನ್ ತಿಂಗಳಲ್ಲಿ ಪ್ರಸಾರ ಕಂಡಿತ್ತು. ಇದಾಗಿ ಸರಿಯಾಗಿ ಎರಡು ವರ್ಷ ಅಂದರೆ 2025ರ ಜೂನ್ ತಿಂಗಳಲ್ಲೇ ಈ ಸರಣಿಗೆ ಎರಡನೇ ಸೀಸನ್ ಪ್ರಸಾರ ಕಂಡಿದೆ. ಈ ವೆಬ್ ಸೀರಿಸ್​ನಲ್ಲಿ ಕಾನ್​ಸ್ಟೇಬಲ್ ಅಂಬಲಿ ರಾಜು (ಇಂದ್ರನ್ಸ್ ) ಹಾಗೂ ಅಯ್ಯಪ್ಪನ್ (ಹರಿಶ್ರೀ ಅಶೋಕನ್) ಕಾಣೆ ಆಗುತ್ತಾರೆ. ಅಂಬಲಿ ರಾಜು ತುಂಬಾನೇ ನಿಷ್ಠಾವಂತ ವ್ಯಕ್ತಿ. ಅಯ್ಯಪ್ಪನ್ ಡಾಗ್ ಶೆಲ್ಟರ್​ನಲ್ಲಿ ಕೆಲಸ ಮಾಡಿಕೊಂಡಿದ್ದವನು. ಇವರ ಕಾಣೆ ಹಿಂದಿನ ರಹಸ್ಯವೇನು? ಇವರು ಕೊನೆಯಲ್ಲಿ ಜೀವಂತವಾಗಿ ಸಿಗುತ್ತಾರಾ ಅನ್ನೋದನ್ನು ಸರಣಿ ನೋಡಿಯೇ ತಿಳಿದುಕೊಳ್ಳಬೇಕು.

ಮೊದಲ ಸರಣಿಯಲ್ಲಿ ಅಜು ವರ್ಗೀಸ್ ಅವರು ಎಸ್​ಐ ಮನೋಜ್ ಶ್ರೀಧರನ್ ಹೆಸರಿನ ಪಾತ್ರ ಮಾಡಿದ್ದರು. ಅವರು ಎರಡನೇ ಪಾರ್ಟ್​ನಲ್ಲೂ ಕಾಣಿಸಿಕೊಳ್ಳುತ್ತಾರೆ. ಅರ್ಜುನ್ ರಾಧಾಕೃಷ್ಣನ್ ಅವರಿಗೆ ಈ ಸರಣಿಯಲ್ಲಿ ಪ್ರಮುಖ ಪಾತ್ರ ಸಿಕ್ಕಿದೆ. ಸರಣಿ ಉದ್ದಕ್ಕೂ ಅವರು ಕಾಣಿಸಿಕೊಳ್ಳುತ್ತಾರೆ. ಎಸ್ಐ ಪಾತ್ರವನ್ನು ಅವರು ನಿರ್ವಹಿಸಿದ್ದಾರೆ.

ಇದನ್ನೂ ಓದಿ
Image
ಸಲ್ಮಾನ್ ಖಾನ್​ಗೆ ನಿಜಕ್ಕೂ ಇದ್ದ ಗೆಳತಿಯರೆಷ್ಟು? ಲೆಕ್ಕ ಕೊಟ್ಟ ಸಲ್ಲು
Image
ಬಾಕ್ಸ್ ಆಫೀಸ್​ನಲ್ಲಿ ಜಾಕ್​ಪಾಟ್ ಹೊಡೆದ ‘ಕುಬೇರ’ ಹಾಗೂ ‘ಸಿತಾರೆ ಜಮೀನ್ ಪರ್
Image
ಸಲ್ಮಾನ್ ಖಾನ್​ಗೆ ಮೆದುಳು ಸಂಬಂಧಿ ರೋಗ; ಕಾಡುತ್ತಿದೆ ಸ್ಟ್ರೋಕ್ ಆಗೋ ಭಯ
Image
ನಿಜವಾದ ವಿಷಕಾರಿ ಜಂತುಗಳ ಜೊತೆ ರಾಜ್​ಕುಮಾರ್ ಶೂಟ್; ಇದಕ್ಕೆ ಗುಂಡಿಗೆ ಬೇಕು

ಇದನ್ನೂ ಓದಿ: ಈ ವಾರ ಒಟಿಟಿಗೆ ಬಂದ ಸಿನಿಮಾಗಳು ಯಾವುವು: ಇಲ್ಲಿದೆ ಪಟ್ಟಿ

ಈ ವೆಬ್ ಸೀರಿಸ್​ನಲ್ಲಿ ಹಲವು ಟ್ವಿಸ್ಟ್​ಗಳಿವೆ. ಪ್ರತಿ ಎಪಿಸೋಡ್ ಕೊನೆ ಆಗುವಾಗಲೂ ಒಂದಷ್ಟು ಹೊಸ ವಿಚಾರಗಳು ತೆರೆದುಕೊಳ್ಳುತ್ತಾ ಹೋಗುತ್ತದೆ. ಆದರೆ, ಸರಣಿಯ ಕ್ಲೈಮ್ಯಾಕ್ಸ್ ನೀವಂದುಕೊಡಂತೆ ಇರದೇ ಇರಬಹುದು. ಹೀಗಾಗಿ, ಕೆಲವರಿಗೆ ಈ ಬಗ್ಗೆ ಬೇಸರ ಆಗಿದ್ದಿದೆ. ನಿರ್ದೇಶಕ ಅಹ್ಮದ್ ಕಬೀರ್ ಅವರು ಹೊಸ ರೀತಿಯ ಪ್ರಯೋಗ ಮಾಡಲು ಈ ರೀತಿ ಮಾಡಿರಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್