AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ‘ಬಿಗ್​​ ಬಾಸ್​ ಒಟಿಟಿ’ ಮೊದಲ ವಾರದ ಪಂಚಾಯಿತಿ; ಖಡಕ್​ ಆಗಿ ರೆಡಿ ಆದ ಕಿಚ್ಚ ಸುದೀಪ್​

Bigg Boss Elimination: ಮೊದಲ ವಾರದಲ್ಲಿ ಸಾಕಷ್ಟು ಸಂಗತಿಗಳು ನಡೆದಿವೆ. ಒಂದಷ್ಟು ಎಮೋಷನಲ್​ ಘಟನೆಗಳಿಗೆ ಈ ವಾರ ಸಾಕ್ಷಿ ಆಗಿದೆ. ಜೊತೆಗೆ ಕಿರಿಕ್​ಗಳು ಸಂಭವಿಸಿವೆ.

Kichcha Sudeep: ‘ಬಿಗ್​​ ಬಾಸ್​ ಒಟಿಟಿ’ ಮೊದಲ ವಾರದ ಪಂಚಾಯಿತಿ; ಖಡಕ್​ ಆಗಿ ರೆಡಿ ಆದ ಕಿಚ್ಚ ಸುದೀಪ್​
ಕಿಚ್ಚ ಸುದೀಪ್
TV9 Web
| Edited By: |

Updated on: Aug 13, 2022 | 5:40 PM

Share

ಆಗಸ್ಟ್​ 6ರಂದು ‘ಬಿಗ್​ ಬಾಸ್​ ಕನ್ನಡ ಒಟಿಟಿ’ (Bigg Boss Kannada OTT) ಶೋ ಆರಂಭ ಆಗಿತ್ತು. ಒಟ್ಟು 16 ಸ್ಪರ್ಧಿಗಳು ದೊಡ್ಮನೆಯಲ್ಲಿ ಒಂದು ವಾರ ಕಳೆದಿದ್ದಾರೆ. ಮೊದಲ ವಾರದ ಎಲಿಮಿನೇಷನ್​ನಲ್ಲಿ (Bigg Boss Elimination) ಯಾರು ಬಿಗ್​ ಬಾಸ್​ ಮನೆಯಿಂದ ಹೊರ ನಡೆಯುತ್ತಾರೆ ಎಂಬುದನ್ನು ತಿಳಿಯುವ ಸಮಯ ಬಂದಿದೆ. ಮೊದಲ ವಾರದ ಪಂಚಾಯಿತಿ ನಡೆಸಿಕೊಡಲು ಕಿಚ್ಚ ಸುದೀಪ್​ (Kichcha Sudeep) ಸಜ್ಜಾಗಿದ್ದಾರೆ. ಪ್ರತಿ ಬಾರಿ ಅವರು ವೀಕೆಂಡ್​ ಎಪಿಸೋಡ್​ನಲ್ಲಿ ಕಾಣಿಸಿಕೊಳ್ಳುವಾಗ ಅವರ ಸೂಟ್​ ಗಮನ ಸೆಳೆಯುತ್ತದೆ. ಇಂದು (ಆಗಸ್ಟ್​ 13) ಕೂಡ ಅವರು ಖಡಕ್​ ಆಗಿ ರೆಡಿಯಾಗಿ ಬಂದಿದ್ದಾರೆ. ಎಂದಿನ ಲವಲವಿಕೆಯಲ್ಲಿ ಪಂಚಾಯಿತಿ ನಡೆಸಿಕೊಟ್ಟಿದ್ದಾರೆ. ವೂಟ್​ ಸೆಲೆಕ್ಟ್​ ಮೂಲಕ ಸಂಜೆ 7 ಗಂಟೆಗೆ ಈ ಎಪಿಸೋಡ್​ ಪ್ರಸಾರ ಆಗಲಿದೆ.

ಕಿರುತೆರೆ, ಸಿನಿಮಾ, ಸೋಶಿಯಲ್​ ಮೀಡಿಯಾದಲ್ಲಿ ಫೇಮಸ್​ ಆದ ವ್ಯಕ್ತಿಗಳಿಗೆ ‘ಬಿಗ್​ ಬಾಸ್​ ಕನ್ನಡ ಒಟಿಟಿ’ಯಲ್ಲಿ ಸ್ಪರ್ಧಿಸುವ ಅವಕಾಶ ಸಿಕ್ಕಿದೆ. ಸೋನು ಶ್ರೀನಿವಾಸ್​ ಗೌಡ, ಸ್ಫೂರ್ತಿ ಗೌಡ, ರಾಕೇಶ್​ ಅಡಿಗ, ಆರ್ಯವರ್ಧನ್​ ಗುರೂಜಿ, ಸೋಮಣ್ಣ ಮಾಚಿಮಾಡ, ಸಾನ್ಯಾ ಅಯ್ಯರ್​, ಯಶ್ವಂತ್​, ನಂದಿನಿ, ರೂಪೇಶ್​ ಶೆಟ್ಟಿ, ಚೈತ್ರಾ ಹಳ್ಳಿಕೇರಿ, ಅರ್ಜುನ್ ರಮೇಶ್​, ಉದಯ್​ ಸೂರ್ಯ, ಜಯಶ್ರೀ ಆರಾಧ್ಯ, ಕಿರಣ್​ ಯೋಗೇಶ್ವರ್​, ಅಕ್ಷತಾ ಕುಕ್ಕಿ, ಲೋಕೇಶ್​ ಅವರು ಸ್ಪರ್ಧಿಸುತ್ತಿದ್ದಾರೆ.

ಇದನ್ನೂ ಓದಿ
Image
Bigg Boss: ‘ಬಿಗ್​ ಬಾಸ್’​ ಮನೆಗೆ ಹೊಗ್ತಾರಾ ಸ್ಟಾರ್​ ನಿರೂಪಕಿ? ಎಲ್ಲರಿಗಿಂತ ಹೆಚ್ಚು ಸಂಭಾವನೆ ಸಿಗೋದು ಇವರಿಗೆ
Image
Bigg Boss Kannada: ‘ಕಷ್ಟ ಹೇಳ್ಕೊಂಡು ಸಿಂಪಥಿ ಗಿಟ್ಟಿಸಬೇಡಿ’: ಬಿಗ್​ ಬಾಸ್​ ಸ್ಪರ್ಧಿಗೆ ಗುರೂಜಿ ಮಾತಿನ ಡಿಚ್ಚಿ
Image
Sonu Srinivas Gowda: ‘ಸುದೀಪ್​ ಇರುವ ವೇದಿಕೆಗೆ ಇದು ಗೌರವ ಅಲ್ಲ’: ಸೋನು ಶ್ರೀನಿವಾಸ್​ ಗೌಡ ಆಯ್ಕೆ ಆಗಿದ್ದಕ್ಕೆ ನೆಟ್ಟಿಗರು ಗರಂ
Image
Bigg Boss OTT Kannada: ಮೊದಲ ದಿನವೇ ಬಿಗ್​ ಬಾಸ್​ನಲ್ಲಿ ಕಣ್ಣೀರ ಕೋಡಿ; ನೋವು ತೋಡಿಕೊಂಡು ಗಳಗಳನೆ ಅತ್ತ ಸ್ಪರ್ಧಿಗಳು

ಆರು ವಾರಗಳ ಕಾಲ ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಶೋ ನಡೆಯಲಿದೆ. ಮೊದಲ ವಾರದಲ್ಲಿ ಸಾಕಷ್ಟು ಸಂಗತಿಗಳು ನಡೆದಿವೆ. ಎಲ್ಲ ಸ್ಪರ್ಧಿಗಳು ತಮ್ಮ ಖಾಸಗಿ ಜೀವನದ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಸಿಕ್ಕಾಪಟ್ಟೆ ಎಮೋಷನಲ್​ ಘಟನೆಗಳಿಗೆ ಈ ವಾರ ಸಾಕ್ಷಿ ಆಗಿದೆ. ಜೊತೆಗೆ ಒಂದಷ್ಟು ಕಿರಿಕ್​ಗಳು ಸಂಭವಿಸಿವೆ. ಎಂದಿನಂತೆ ನಾಮಿನೇಷನ್​ ಕೂಡ ನಡೆದಿದೆ. ಯಾರು ಎಲಿಮಿನೇಟ್​ ಆಗುತ್ತಾರೆ ಎಂಬ ಪ್ರಶ್ನೆಗೆ ಶೀಘ್ರವೇ ಉತ್ತರ ಸಿಗಲಿದೆ.

ಕಿಚ್ಚ ಸುದೀಪ್​ ಅವರು ಸಿನಿಮಾ ಮತ್ತು ಬಿಗ್​ ಬಾಸ್​ ಎರಡಕ್ಕೂ ಸಮಯ ಹೊಂದಿಸುತ್ತಿದ್ದಾರೆ. ಸಿನಿಮಾ ಕೆಲಸಗಳ ಸಲುವಾಗಿ ಅವರು ಎಷ್ಟೇ ಬ್ಯುಸಿ ಇದ್ದರೂ ಕೂಡ ಬಿಗ್​ ಬಾಸ್​ನ​ ವಾರಾಂತ್ಯದ ಶೂಟಿಂಗ್​ಗೆ ಎಂದಿಗೂ ಚಕ್ಕರ್​ ಹಾಕುವುದಿಲ್ಲ. ಎಲ್ಲೇ ಇದ್ದರೂ, ಎಷ್ಟೇ ಕಷ್ಟ ಆದರೂ ಬಂದು ಪಂಚಾಯಿತಿ ನಡೆಸಿಕೊಡುತ್ತಾರೆ. ಅವರನ್ನು ನೋಡಲು ಪ್ರತಿ ವಾರ ಅಭಿಮಾನಿಗಳು ಕಾದಿರುತ್ತಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ