ಕ್ಲೀನ್ ಶೇವ್ ಲುಕ್​ನಲ್ಲಿ ‘ಬಿಗ್ ಬಾಸ್’ ವೇದಿಕೆ ಏರಿದ ಸುದೀಪ್; ಇದಕ್ಕಿದೆ ಪ್ರಮುಖ ಕಾರಣ

ಕಿಚ್ಚನ ಲುಕ್​ಅನ್ನು ಕಲರ್ಸ್ ಸೂಪರ್ ಟಿವಿ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಕ್ಲೀನ್ ಶೇವ್ ಲುಕ್​ನಲ್ಲಿ ‘ಬಿಗ್ ಬಾಸ್’ ವೇದಿಕೆ ಏರಿದ ಸುದೀಪ್; ಇದಕ್ಕಿದೆ ಪ್ರಮುಖ ಕಾರಣ
sudeep
Follow us
| Updated By: ರಾಜೇಶ್ ದುಗ್ಗುಮನೆ

Updated on: Aug 20, 2022 | 3:55 PM

ನಟ ಕಿಚ್ಚ ಸುದೀಪ್ (Kichcha Sudeep) ಅವರು ಆರಂಭದಿಂದಲೂ ಕನ್ನಡದಲ್ಲಿ ಬಿಗ್ ಬಾಸ್ ನಡೆಸಿಕೊಡುತ್ತಾ ಬರುತ್ತಿದ್ದಾರೆ. ಅವರ ಖಡಕ್ ನಿರೂಪಣೆ ವೀಕ್ಷಕರಿಗೆ ಸಖತ್ ಇಷ್ಟವಾಗುತ್ತದೆ. ಈ ಬಾರಿ ‘ಬಿಗ್ ಬಾಸ್ ಒಟಿಟಿ’ಯ (Bigg Boss OTT) ನಿರೂಪಣೆ ಜವಾಬ್ದಾರಿ ಸುದೀಪ್ ಹೆಗಲು ಏರಿದೆ. ಪ್ರತಿವಾರದ ನಿರೂಪಣೆ ಜತೆಗೆ ಸುದೀಪ್ ಲುಕ್, ಸುದೀಪ್ ಧರಿಸುವ ಬಟ್ಟೆ ಎಲ್ಲವೂ ಹೈಲೈಟ್ ಆಗುತ್ತದೆ. ಈ ಬಾರಿ ಸುದೀಪ್ ಅವರು ಹೊಸ ಲುಕ್​ನಲ್ಲಿ ಬಿಗ್ ಬಾಸ್ ವೇದಿಕೆ ಏರಿದ್ದಾರೆ. ಅವರ ಹೊಸ ಲುಕ್​ಅನ್ನು ವಾಹಿನಿಯವರು ರಿವೀಲ್ ಮಾಡಿದ್ದಾರೆ. ಕ್ಲೀನ್​ ಶೇವ್​ನಲ್ಲಿ ಸುದೀಪ್ ಮಿಂಚಿದ್ದಾರೆ. ಅವರ ಹೊಸ ಗೆಟಪ್ ಕಂಡು ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಸುದೀಪ್​ಗೆ ಇಷ್ಟು ದಿನ ಗಡ್ಡ ಇತ್ತು. ‘ವಿಕ್ರಾಂತ್ ರೋಣ’ ಸಿನಿಮಾದಲ್ಲೂ ಅವರಿಗೆ ಅದೇ ರೀತಿಯ ಲುಕ್ ಇತ್ತು. ಅದನ್ನೇ ಸುದೀಪ್ ಮುಂದುವರಿಸಿದ್ದರು. ಈಗ ಅವರು ಏಕಾಏಕಿ ಕ್ಲೀನ್​ ಶೇವ್ ಮಾಡಿಸಿದ್ದಾರೆ. ಕಿಚ್ಚನ ಹೊಸ ಗೆಟಪ್ ಫ್ಯಾನ್ಸ್​ಗೆ ಸಖತ್ ಖುಷಿ ನೀಡಿದೆ.

ಸುದೀಪ್ ಅವರು ಇಷ್ಟು ದಿನ ‘ವಿಕ್ರಾಂತ್ ರೋಣ’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಇದ್ದರು. ಹಲವು ನಗರಗಳಿಗೆ ತೆರಳಿ ಸಿನಿಮಾ ಪ್ರಚಾರ ಮಾಡಿದ್ದರು. ಈ ಕಾರಣಕ್ಕೆ ಅವರು ‘ಕಬ್ಜ’ ಚಿತ್ರದ ಶೂಟಿಂಗ್​ನಲ್ಲಿ ಭಾಗಿ ಆಗಲು ಸಾಧ್ಯವಾಗಿರಲಿಲ್ಲ. ಈಗ ‘ವಿಕ್ರಾಂತ್ ರೋಣ’ ತೆರೆಕಂಡು ಯಶಸ್ಸು ಗಳಿಸಿದೆ. ಈ ಕಾರಣದಿಂದ ಅವರು ‘ಕಬ್ಜ’ ಚಿತ್ರಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರಕ್ಕಾಗಿ ಸುದೀಪ್ ಕ್ಲೀನ್ ಶೇವ್ ಅವತಾರ ತಾಳಿದ್ದಾರೆ ಎನ್ನಲಾಗುತ್ತಿದೆ. ಉಪೇಂದ್ರ ನಟನೆಯ ಈ ಚಿತ್ರ ರೆಟ್ರೋ ಶೈಲಿಯಲ್ಲಿ ಮೂಡಿ ಬರುತ್ತಿದೆ. ಈ ಕಾರಣದಿಂದಲೂ ಸಿನಿಮಾ ಕುತೂಹಲ ಹುಟ್ಟಿಸಿದೆ.

ಇದನ್ನೂ ಓದಿ: ಮೊಬೈಲ್ ನಂಬರ್ ಆಗಾಗ ಬದಲಿಸೋಕೆ ನನಗೆ ಸುದೀಪ್​​ ಸ್ಫೂರ್ತಿ ಎಂದ ರಿಷಬ್ ಶೆಟ್ಟಿ

ಸದ್ಯ ಕಿಚ್ಚನ ಲುಕ್​ಅನ್ನು ಕಲರ್ಸ್ ಸೂಪರ್ ಟಿವಿ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ‘ಮೊದಲಿಗಿಂತ ಈಗ ನೀವು ಮತ್ತಷ್ಟು ಯಂಗ್ ಆಗಿದ್ದೀರಿ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ಇನ್ನೂ ಕೆಲವರು ‘ಲವರ್ ಬಾಯ್ ಕಿಚ್ಚ’ ಎಂದು ಕಮೆಂಟ್ ಮಾಡಿದ್ದಾರೆ. ಒ  ಟ್ಟಿನಲ್ಲಿ ಅವರ ಹೊಸ ಲುಕ್ ಫ್ಯಾನ್ಸ್​ಗೆ ಸಖತ್ ಇಷ್ಟವಾಗಿದೆ.

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ