AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಲೀನ್ ಶೇವ್ ಲುಕ್​ನಲ್ಲಿ ‘ಬಿಗ್ ಬಾಸ್’ ವೇದಿಕೆ ಏರಿದ ಸುದೀಪ್; ಇದಕ್ಕಿದೆ ಪ್ರಮುಖ ಕಾರಣ

ಕಿಚ್ಚನ ಲುಕ್​ಅನ್ನು ಕಲರ್ಸ್ ಸೂಪರ್ ಟಿವಿ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಕ್ಲೀನ್ ಶೇವ್ ಲುಕ್​ನಲ್ಲಿ ‘ಬಿಗ್ ಬಾಸ್’ ವೇದಿಕೆ ಏರಿದ ಸುದೀಪ್; ಇದಕ್ಕಿದೆ ಪ್ರಮುಖ ಕಾರಣ
sudeep
TV9 Web
| Edited By: |

Updated on: Aug 20, 2022 | 3:55 PM

Share

ನಟ ಕಿಚ್ಚ ಸುದೀಪ್ (Kichcha Sudeep) ಅವರು ಆರಂಭದಿಂದಲೂ ಕನ್ನಡದಲ್ಲಿ ಬಿಗ್ ಬಾಸ್ ನಡೆಸಿಕೊಡುತ್ತಾ ಬರುತ್ತಿದ್ದಾರೆ. ಅವರ ಖಡಕ್ ನಿರೂಪಣೆ ವೀಕ್ಷಕರಿಗೆ ಸಖತ್ ಇಷ್ಟವಾಗುತ್ತದೆ. ಈ ಬಾರಿ ‘ಬಿಗ್ ಬಾಸ್ ಒಟಿಟಿ’ಯ (Bigg Boss OTT) ನಿರೂಪಣೆ ಜವಾಬ್ದಾರಿ ಸುದೀಪ್ ಹೆಗಲು ಏರಿದೆ. ಪ್ರತಿವಾರದ ನಿರೂಪಣೆ ಜತೆಗೆ ಸುದೀಪ್ ಲುಕ್, ಸುದೀಪ್ ಧರಿಸುವ ಬಟ್ಟೆ ಎಲ್ಲವೂ ಹೈಲೈಟ್ ಆಗುತ್ತದೆ. ಈ ಬಾರಿ ಸುದೀಪ್ ಅವರು ಹೊಸ ಲುಕ್​ನಲ್ಲಿ ಬಿಗ್ ಬಾಸ್ ವೇದಿಕೆ ಏರಿದ್ದಾರೆ. ಅವರ ಹೊಸ ಲುಕ್​ಅನ್ನು ವಾಹಿನಿಯವರು ರಿವೀಲ್ ಮಾಡಿದ್ದಾರೆ. ಕ್ಲೀನ್​ ಶೇವ್​ನಲ್ಲಿ ಸುದೀಪ್ ಮಿಂಚಿದ್ದಾರೆ. ಅವರ ಹೊಸ ಗೆಟಪ್ ಕಂಡು ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಸುದೀಪ್​ಗೆ ಇಷ್ಟು ದಿನ ಗಡ್ಡ ಇತ್ತು. ‘ವಿಕ್ರಾಂತ್ ರೋಣ’ ಸಿನಿಮಾದಲ್ಲೂ ಅವರಿಗೆ ಅದೇ ರೀತಿಯ ಲುಕ್ ಇತ್ತು. ಅದನ್ನೇ ಸುದೀಪ್ ಮುಂದುವರಿಸಿದ್ದರು. ಈಗ ಅವರು ಏಕಾಏಕಿ ಕ್ಲೀನ್​ ಶೇವ್ ಮಾಡಿಸಿದ್ದಾರೆ. ಕಿಚ್ಚನ ಹೊಸ ಗೆಟಪ್ ಫ್ಯಾನ್ಸ್​ಗೆ ಸಖತ್ ಖುಷಿ ನೀಡಿದೆ.

ಸುದೀಪ್ ಅವರು ಇಷ್ಟು ದಿನ ‘ವಿಕ್ರಾಂತ್ ರೋಣ’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಇದ್ದರು. ಹಲವು ನಗರಗಳಿಗೆ ತೆರಳಿ ಸಿನಿಮಾ ಪ್ರಚಾರ ಮಾಡಿದ್ದರು. ಈ ಕಾರಣಕ್ಕೆ ಅವರು ‘ಕಬ್ಜ’ ಚಿತ್ರದ ಶೂಟಿಂಗ್​ನಲ್ಲಿ ಭಾಗಿ ಆಗಲು ಸಾಧ್ಯವಾಗಿರಲಿಲ್ಲ. ಈಗ ‘ವಿಕ್ರಾಂತ್ ರೋಣ’ ತೆರೆಕಂಡು ಯಶಸ್ಸು ಗಳಿಸಿದೆ. ಈ ಕಾರಣದಿಂದ ಅವರು ‘ಕಬ್ಜ’ ಚಿತ್ರಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರಕ್ಕಾಗಿ ಸುದೀಪ್ ಕ್ಲೀನ್ ಶೇವ್ ಅವತಾರ ತಾಳಿದ್ದಾರೆ ಎನ್ನಲಾಗುತ್ತಿದೆ. ಉಪೇಂದ್ರ ನಟನೆಯ ಈ ಚಿತ್ರ ರೆಟ್ರೋ ಶೈಲಿಯಲ್ಲಿ ಮೂಡಿ ಬರುತ್ತಿದೆ. ಈ ಕಾರಣದಿಂದಲೂ ಸಿನಿಮಾ ಕುತೂಹಲ ಹುಟ್ಟಿಸಿದೆ.

ಇದನ್ನೂ ಓದಿ: ಮೊಬೈಲ್ ನಂಬರ್ ಆಗಾಗ ಬದಲಿಸೋಕೆ ನನಗೆ ಸುದೀಪ್​​ ಸ್ಫೂರ್ತಿ ಎಂದ ರಿಷಬ್ ಶೆಟ್ಟಿ

ಸದ್ಯ ಕಿಚ್ಚನ ಲುಕ್​ಅನ್ನು ಕಲರ್ಸ್ ಸೂಪರ್ ಟಿವಿ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ‘ಮೊದಲಿಗಿಂತ ಈಗ ನೀವು ಮತ್ತಷ್ಟು ಯಂಗ್ ಆಗಿದ್ದೀರಿ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ಇನ್ನೂ ಕೆಲವರು ‘ಲವರ್ ಬಾಯ್ ಕಿಚ್ಚ’ ಎಂದು ಕಮೆಂಟ್ ಮಾಡಿದ್ದಾರೆ. ಒ  ಟ್ಟಿನಲ್ಲಿ ಅವರ ಹೊಸ ಲುಕ್ ಫ್ಯಾನ್ಸ್​ಗೆ ಸಖತ್ ಇಷ್ಟವಾಗಿದೆ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್