AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vikrant Rona: ಒಟಿಟಿಗೆ ಎಂಟ್ರಿ ನೀಡಲು ಸಜ್ಜಾದ ‘ವಿಕ್ರಾಂತ್​ ರೋಣ’; ಜೀ5 ಕಡೆಯಿಂದ ಸಿಕ್ತು ಅಪ್​ಡೇಟ್​

Vikrant Rona | Zee5 OTT: ‘ವಿಕ್ರಾಂತ್​ ರೋಣ’ ಚಿತ್ರದ ಒಟಿಟಿ ಹಕ್ಕುಗಳನ್ನು ‘ಜೀ5’ ಸಂಸ್ಥೆ ಖರೀದಿಸಿದೆ. ‘ಗುಮ್ಮ ಬರ್ತಿದ್ದಾನೆ..’ ಎಂದು ಪೋಸ್ಟ್​ ಮಾಡುವ ಮೂಲಕ ಒಟಿಟಿ ಪ್ರೀಮಿಯರ್​ ಬಗ್ಗೆ ಮಾಹಿತಿ ನೀಡಲಾಗಿದೆ.

Vikrant Rona: ಒಟಿಟಿಗೆ ಎಂಟ್ರಿ ನೀಡಲು ಸಜ್ಜಾದ ‘ವಿಕ್ರಾಂತ್​ ರೋಣ’; ಜೀ5 ಕಡೆಯಿಂದ ಸಿಕ್ತು ಅಪ್​ಡೇಟ್​
ಕಿಚ್ಚ ಸುದೀಪ್
TV9 Web
| Edited By: |

Updated on: Aug 25, 2022 | 9:19 AM

Share

ಅನೂಪ್​ ಭಂಡಾರಿ ನಿರ್ದೇಶನದ ‘ವಿಕ್ರಾಂತ್​ ರೋಣ’ (Vikrant Rona) ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಲಾಭ ಮಾಡಿತು. ಈ ವರ್ಷ ಗೆಲುವಿನ ರುಚಿ ಕಂಡ ಕೆಲವೇ ಸಿನಿಮಾಗಳ ಪಟ್ಟಿಯಲ್ಲಿ ಈ ಚಿತ್ರ ಕೂಡ ಸ್ಥಾನ ಪಡೆದುಕೊಂಡಿದೆ. ಕಿಚ್ಚ ಸುದೀಪ್​ (Kichcha Sudeep) ಅವರ ವೃತ್ತಿ ಜೀವನದಲ್ಲಿ ‘ವಿಕ್ರಾಂತ್​ ರೋಣ’ ಸಿನಿಮಾ ಡಿಫರೆಂಟ್​ ಎನಿಸಿಕೊಂಡಿದೆ. ಜುಲೈ 28ರಂದು ಈ ಚಿತ್ರ ದೇಶಾದ್ಯಂತ ತೆರೆಕಂಡಿತು. ಸಸ್ಪೆನ್ಸ್ ಥ್ರಿಲ್ಲರ್​ ಕಥೆಗೆ ಪ್ರೇಕ್ಷಕರು ತಲೆದೂಗಿದರು. ಈಗ ಈ ಸಿನಿಮಾ ಒಟಿಟಿ ಅಂಗಳಕ್ಕೆ ಕಾಲಿಡುತ್ತಿದೆ. ಈ ಬಗ್ಗೆ ‘ಜೀ5 ಕನ್ನಡ’ (Zee5 OTT) ಅಪ್​ಡೇಟ್​ ನೀಡಿದೆ. ಶೀಘ್ರದಲ್ಲೇ ‘ವಿಕ್ರಾಂತ್​ ರೋಣ’ ಬರಲಿದೆ ಎಂದು ಸೋಶಿಯಲ್​ ಮೀಡಿಯಾ ಮೂಲಕ ಅನೌನ್ಸ್​ ಮಾಡಲಾಗಿದೆ. ಹೌದು, ಸೆಪ್ಟೆಂಬರ್​ 2ರಂದು ಈ ಸಿನಿಮಾ ಒಟಿಟಿಯಲ್ಲಿ ಪ್ರದರ್ಶನ ಆರಂಭಿಸಲಿದೆ. ಅದಕ್ಕಾಗಿ ಕಿಚ್ಚ ಸುದೀಪ್​ ಫ್ಯಾನ್ಸ್​ ಕಾಯುತ್ತಿದ್ದಾರೆ.

ಕಿಚ್ಚ ಸುದೀಪ್​, ಅನೂಪ್​ ಭಂಡಾರಿ, ನೀತಾ ಅಶೋಕ್​, ಮಿಲನಾ ನಾಗರಾಜ್​, ಜಾಕ್ವೆಲಿನ್​ ಫರ್ನಾಂಡಿಸ್​, ಮಧುಸೂದನ್​ ರಾವ್​, ರವಿಶಂಕರ್ ಗೌಡ ಮುಂತಾದವರು ನಟಿಸಿರುವ ‘ವಿಕ್ರಾಂತ್​ ರೋಣ’ ಚಿತ್ರದಲ್ಲಿ ಮರ್ಡರ್​ ಮಿಸ್ಟರಿ ಕಹಾನಿ ಇದೆ. ಚಿತ್ರಮಂದಿರದಲ್ಲಿ ಈ ಸಿನಿಮಾವನ್ನು ಮಿಸ್​ ಮಾಡಿಕೊಂಡವರು ಒಟಿಟಿಯಲ್ಲಿ ನೋಡಿ ಎಂಜಾಯ್​ ಮಾಡುವ ಸಮಯ ಹತ್ತಿರ ಬಂದಿದೆ.

ಇದನ್ನೂ ಓದಿ
Image
ಮುಖ ತೋರಿಸದೇ ಫೇಮಸ್​ ಆದ ಭಾಸ್ಕರ್​; ಕಿಚ್ಚ ಸುದೀಪ್​ ಬದುಕಿನಲ್ಲೂ ಇದ್ದಾನೆ ಅಂಥ ಒಬ್ಬ ವ್ಯಕ್ತಿ
Image
Kichcha Sudeep: ಹೈದರಾಬಾದ್​​ನಲ್ಲಿ ‘ವಿಕ್ರಾಂತ್​ ರೋಣ’ ಸಕ್ಸಸ್​ ಮೀಟ್​; ತೆಲುಗು ಸ್ನೇಹಿತರಿಗೆ, ಪ್ರೇಕ್ಷಕರಿಗೆ ಕಿಚ್ಚನ ಧನ್ಯವಾದ
Image
‘ವಿಕ್ರಾಂತ್​ ರೋಣ’ ಸೂಪರ್​ ಹಿಟ್​; ಕಿಚ್ಚ ಸುದೀಪ್​ ಅಭಿಮಾನಿಗಳಿಗೆ ‘ಕಬ್ಜ’ ಮೇಲೆ ಹೆಚ್ಚಿತು ನಿರೀಕ್ಷೆ
Image
‘ವಿಕ್ರಾಂತ್​ ರೋಣ ಪಾರ್ಟ್​ 2 ಐಡಿಯಾ ಇದೆ, ಅದು ಬೇರೆ ಪ್ರಪಂಚದಲ್ಲಿ ನಡೆಯುತ್ತೆ’: ಅನೂಪ್​ ಭಂಡಾರಿ

‘ವಿಕ್ರಾಂತ್​ ರೋಣ’ ಸಿನಿಮಾ ಗೆಲ್ಲುವಲ್ಲಿ ಹಾಡುಗಳ ಪಾತ್ರ ಕೂಡ ಮಹತ್ವದ್ದಾಗಿದೆ. ಅಜನೀಶ್​ ಬಿ. ಲೋಕನಾಥ್​ ಸಂಗೀತ ನಿರ್ದೇಶನದಲ್ಲಿ ಮೂಡಿಬಂದ ಎಲ್ಲ ಹಾಡುಗಳು ಗಮನ ಸೆಳೆದಿವೆ. ಜಾಕ್ವೆಲಿನ್ ಫರ್ನಾಂಡಿಸ್​ ಜೊತೆ ಕಿಚ್ಚ ಸುದೀಪ್ ಹೆಜ್ಜೆ ಹಾಕಿದ ‘ರಾ ರಾ ರಕ್ಕಮ್ಮ..’ ಹಾಡಿಗೆ​ ಅಭಿಮಾನಿಗಳು ಫಿದಾ ಆಗಿದ್ದಾರೆ. ‘ಹೇ ಫಕೀರಾ..’, ‘ಚಿಕ್ಕಿ ಬೊಂಬೆ..’ ಹಾಡುಗಳು ಕೂಡ ಹೈಲೈಟ್​ ಆಗಿವೆ.

ಅದ್ದೂರಿ ಬಜೆಟ್​ನಲ್ಲಿ ‘ವಿಕ್ರಾಂತ್​ ರೋಣ’ ಸಿನಿಮಾ ಮೂಡಿಬಂದಿದೆ. ಜಾಕ್​ ಮಂಜು ಅವರು ನಿರ್ಮಾಣ ಮಾಡಿದ್ದು, ಬೃಹತ್​ ಸೆಟ್​ಗಳಲ್ಲಿ ಶೂಟಿಂಗ್​ ಮಾಡಲಾಗಿದೆ. 3ಡಿ ಅವತರಣಿಕೆಯಲ್ಲಿ ರಿಲೀಸ್​ ಆದ ಈ ಸಿನಿಮಾವನ್ನು ಥಿಯೇಟರ್​​ನಲ್ಲಿ ನೋಡಿ ಪ್ರೇಕ್ಷಕರು ಮೆಚ್ಚಿಕೊಂಡರು. ಒಟಿಟಿಯಲ್ಲಿ ಎಷ್ಟರಮಟ್ಟಿಗೆ ಜನಮನ ಗೆಲ್ಲಲಿದೆ ಎಂಬುದನ್ನು ಕಾದು ನೋಡಬೇಕು.

‘ವಿಕ್ರಾಂತ್​ ರೋಣ’ ಚಿತ್ರದ ಒಟಿಟಿ ಹಕ್ಕುಗಳನ್ನು ‘ಜೀ5’ ಸಂಸ್ಥೆ ಖರೀದಿಸಿದೆ. ‘ಗುಮ್ಮ ಬರ್ತಿದ್ದಾನೆ..’ ಎಂದು ಪೋಸ್ಟ್​ ಮಾಡುವ ಮೂಲಕ ಒಟಿಟಿ ಪ್ರೀಮಿಯರ್​ ಬಗ್ಗೆ ಮಾಹಿತಿ ನೀಡಲಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ