AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇಂಥ ಕೆಲಸ ಮಾಡಿದ್ರೆ ಬಾಗಿಲು ತೋರಿಸ್ತೀವಿ’: ಖಡಕ್​ ಎಚ್ಚರಿಕೆ ನೀಡಿದ ಸುದೀಪ್

Kichcha Sudeep | Bigg Boss Kannada OTT: ‘ಮುಂದಿನ ಬಾರಿ ಈ ರೀತಿ ಮಾಡಿದರೆ ನಿಮಗೆ ಬಾಗಿಲು ತೋರಿಸಬೇಕಾಗುತ್ತದೆ’ ಎಂದು ಜಶ್ವಂತ್​ಗೆ ಕಿಚ್ಚ ಸುದೀಪ್​ ನೇರವಾಗಿ ಹೇಳಿದ್ದಾರೆ. ವಾರದ ಪಂಚಾಯಿತಿಯಲ್ಲಿ ಈ ಬಗ್ಗೆ ಪ್ರಸ್ತಾಪ ಆಗಿದೆ.

‘ಇಂಥ ಕೆಲಸ ಮಾಡಿದ್ರೆ ಬಾಗಿಲು ತೋರಿಸ್ತೀವಿ’: ಖಡಕ್​ ಎಚ್ಚರಿಕೆ ನೀಡಿದ ಸುದೀಪ್
ಕಿಚ್ಚ ಸುದೀಪ್
TV9 Web
| Edited By: |

Updated on:Aug 21, 2022 | 9:34 PM

Share

ಬಿಗ್​ ಬಾಸ್​ ಮನೆಯಲ್ಲಿ ಅಸಲಿ ಆಟ ಶುರುವಾಗಿದೆ. ಈ ಬಾರಿ ಒಟಿಟಿಯಲ್ಲಿ (Bigg Boss Kannada OTT) ಈ ರಿಯಾಲಿಟಿ ಶೋ ಪ್ರಸಾರ ಆಗುತ್ತಿದೆ. ದಿನದಿಂದ ದಿನಕ್ಕೆ ಸ್ಪರ್ಧಿಗಳ ಅಸಲಿ ಮುಖ ರಿವೀಲ್​ ಆಗುತ್ತಿದೆ. 16 ಸ್ಪರ್ಧಿಗಳಿಂದ ಶುರುವಾದ ಈ ಶೋನಲ್ಲಿ ಈಗ 12 ಜನರ ನಡುವೆ ಪೈಪೋಟಿ ಮುಂದುವರಿದಿದೆ. ಪ್ರತಿ ವಾರ ಕಿಚ್ಚ ಸುದೀಪ್ (Kichcha Sudeep) ಅವರು ಎಲ್ಲರನ್ನೂ ಕೂರಿಸಿ ಪಂಚಾಯಿತಿ ಮಾಡುತ್ತಾರೆ. ಪ್ರತಿಯೊಬ್ಬರ ಪ್ಲಸ್​ ಮತ್ತು ಮೈನಸ್​ಗಳನ್ನು ಅವರು ಗಮನಿಸಿ ಹೇಳುತ್ತಾರೆ. ಕೆಲವೊಮ್ಮೆ ಖಡಕ್​ ಆಗಿ ಎಚ್ಚರಿಕೆ ಕೂಡ ನೀಡುತ್ತಾರೆ. ಈ ವಾರ ಜಶ್ವಂತ್​ ಅವರಿಗೆ ಸುದೀಪ್​ ವಾರ್ನಿಂಗ್​ ನೀಡಿದ್ದಾರೆ. ಅದಕ್ಕೆ ಕಾರಣ ಕೂಡ ಇದೆ. ಗರ್ಲ್​ಫ್ರೆಂಡ್​ ನಂದು ಜೊತೆಗಿನ ಅತಿಯಾದ ಒಡನಾಟದ ಕಾರಣದಿಂದ ಜಶ್ವಂತ್​ (Jashwanth) ಅವರಿಗೆ ಈ ಪರಿಸ್ಥಿತಿ ಬಂದಿದೆ.

ಆರಂಭದಲ್ಲಿ ಜಶ್ವಂತ್​ ಮತ್ತು ನಂದು ಅವರು ಜೋಡಿಯಾಗಿ ಬಿಗ್​ ಬಾಸ್​ ಮನೆ ಪ್ರವೇಶಿಸಿದರು. ಆದರೆ ಕೆಲವೇ ದಿನಗಳಲ್ಲಿ ಅವರಿಬ್ಬರು ಪ್ರತ್ಯೇಕವಾಗಿ ಆಟ ಮುಂದುವರಿಸಬೇಕು ಎಂದು ಬಿಗ್​ ಬಾಸ್​ ಆದೇಶಿಸಿದರು. ಆದರೂ ಕೂಡ ಜಶ್ವಂತ್​ ವರ್ತನೆಯಲ್ಲಿ ಹೆಚ್ಚಿನ ಬದಲಾವಣೆ ಕಾಣಿಸಲಿಲ್ಲ. ಅದನ್ನು ಕಿಚ್ಚ ಸುದೀಪ್ ಗಮನಿಸಿದ್ದಾರೆ. ವಾರದ ಪಂಚಾಯಿತಿಯಲ್ಲಿ ಅದನ್ನು ಅವರು ನೇರವಾಗಿ ಜಶ್ವಂತ್​ಗೆ ಹೇಳಿದ್ದಾರೆ.

ಪ್ರತಿ ವಾರ ಎಲ್ಲರೂ ಒಬ್ಬೊಬ್ಬರನ್ನು ನಾಮಿನೇಟ್​ ಮಾಡಬೇಕು. ತಮ್ಮ ಸ್ವಂತ ನಿರ್ಧಾರದಿಂದ ನಾಮಿನೇಟ್​ ಮಾಡಬೇಕೇ ಹೊರತು, ಇನ್ನೊಬ್ಬರ ಜೊತೆ ಚರ್ಚೆ ಮಾಡಿ ತೀರ್ಮಾನಕ್ಕೆ ಬರುವಂತಿಲ್ಲ. ಆದರೆ ಜಶ್ವಂತ್​ ಅವರು ಆ ನಿಯಮ ಮುರಿದಿದ್ದಾರೆ. ಗರ್ಲ್​ಫ್ರೆಂಡ್​ ನಂದು ಜೊತೆ ಅವರು ನಾಮಿನೇಷನ್​ ಬಗ್ಗೆ ಚರ್ಚೆ ಮಾಡಿದ್ದರು. ಅದನ್ನು ಗಮನಿಸಿದ ಸುದೀಪ್​ ಅವರು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ
Image
Sonu Srinivas Gowda: ರಾತ್ರಿ 2.15ಕ್ಕೆ ಸೋನು ಗೌಡ ಜತೆ ಮಾತಾಡಲು ಬಂದ ರಾಕೇಶ್; ವೈರಲ್​ ಹುಡುಗಿಯ ಪ್ರತಿಕ್ರಿಯೆ ಹೇಗಿತ್ತು?​
Image
Sonu Srinivas Gowda: ಮೂಡ್ ಇಲ್ಲ ಅಂದ್ರೆ ಸೋನು ಶ್ರೀನಿವಾಸ್​ ಗೌಡ 3 ದಿನ ಸ್ನಾನ ಮಾಡಲ್ಲ; ಎಲ್ಲರ ಎದುರು ಸತ್ಯ ಬಯಲು
Image
Sonu Srinivas Gowda: ‘ನೀವು ಹೀಗೆ ಮಾಡಿದ್ರೆ ಈ ಶೋ ನಡೆಯಲ್ಲ’: ಸುದೀಪ್​ ಕೋಪಕ್ಕೆ ಕಾರಣವಾಯ್ತು ಸೋನು ಗೌಡ ವರ್ತನೆ
Image
Sonu Srinivas Gowda: ‘ಸೋನು ಬಾತ್​ ರೂಮ್​ ಯಾಕೆ ಹುಡುಕಲಿಲ್ಲ?’: ವೇದಿಕೆ ಮೇಲೆ ಸುದೀಪ್​ ಕೇಳಿದ್ರು ನೇರ ಪ್ರಶ್ನೆ

‘ಮುಂದಿನ ಬಾರಿ ಈ ರೀತಿ ಮಾಡಿದರೆ ನಿಮಗೆ ಬಾಗಿಲು ತೋರಿಸಬೇಕಾಗುತ್ತದೆ. ನೀವಿಬ್ಬರು ಬೇರೆ ಬೇರೆ ಸ್ಪರ್ಧಿಗಳಾಗಿ ಆಡ್ತಾ ಇದೀರಿ. ಹಾಗಿದ್ದ ಮೇಲೆ ಚರ್ಚೆ ಮಾಡ್ಕೊಂಡು ನಾಮಿನೇಟ್​ ಮಾಡುವಂತಿಲ್ಲ’ ಎಂದು ಕಿಚ್ಚ ಸುದೀಪ್​ ಹೇಳಿದ್ದಾರೆ. ಇದನ್ನು ಜಶ್ವಂತ್​ ಎಷ್ಟು ಗಂಭೀರವಾಗಿ ತೆಗೆದುಕೊಳ್ಳುತ್ತಾರೆ ಅಂತ ಕಾದು ನೋಡಬೇಕು.

ಸದ್ಯ ಲೋಕೇಶ್​ ಮತ್ತು ಅರ್ಜುನ್​ ರಮೇಶ್​ ಅವರು ಗಾಯದ ಸಮಸ್ಯೆಯ ಕಾರಣಕ್ಕೆ ಬಿಗ್​ ಬಾಸ್​ ಮನೆಯಿಂದ ಔಟ್​ ಆಗಿದ್ದಾರೆ. ಕಿರಣ್​ ಯೋಗೇಶ್ವರ್​ ಹಾಗೂ ಸ್ಫೂರ್ತಿ ಗೌಡ ಅವರು ಕಡಿಮೆ ವೋಟ್​ ಪಡೆದು ಎಲಿಮಿನೇಟ್​ ಆಗಿದ್ದಾರೆ. ಇನ್ನುಳಿದ 12 ಜನರು ತಮ್ಮದೇ ತಂತ್ರಗಳ ಮೂಲಕ ಆಟ ಮುಂದುವರಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:34 pm, Sun, 21 August 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ