AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK: ಬಿಗ್​ ಬಾಸ್​ಗೆ ಅವಮಾನ ಮಾಡಿದ ಸೋನು ಗೌಡ; ಮುಲಾಜಿಲ್ಲದೇ ಕ್ಲಾಸ್​ ತೆಗೆದುಕೊಂಡ ಕಿಚ್ಚ ಸುದೀಪ್​

Kichcha Sudeep | Sonu Srinivas Gowda: ಸೋನು ಶ್ರೀನಿವಾಸ್​ ಗೌಡ ಅವರು ಬಿಗ್​ ಬಾಸ್​ ಮನೆಯಲ್ಲಿ ನಡೆದುಕೊಂಡ ರೀತಿಯನ್ನು ಸುದೀಪ್​ ಖಂಡಿಸಿದ್ದಾರೆ. ತಪ್ಪು ಒಪ್ಪಿಕೊಂಡು ಸೋನು ಕಣ್ಣೀರು ಹಾಕಿದ್ದಾರೆ.

BBK: ಬಿಗ್​ ಬಾಸ್​ಗೆ ಅವಮಾನ ಮಾಡಿದ ಸೋನು ಗೌಡ; ಮುಲಾಜಿಲ್ಲದೇ ಕ್ಲಾಸ್​ ತೆಗೆದುಕೊಂಡ ಕಿಚ್ಚ ಸುದೀಪ್​
ಸೋನು ಶ್ರೀನಿವಾಸ್ ಗೌಡ, ಕಿಚ್ಚ ಸುದೀಪ್
Follow us
TV9 Web
| Updated By: ಮದನ್​ ಕುಮಾರ್​

Updated on: Sep 03, 2022 | 8:38 PM

ಬಿಗ್​ ಬಾಸ್​ (Bigg Boss) ಆಟ ಎಂದರೆ ಸುಲಭ ಅಲ್ಲ. ಸ್ಪರ್ಧಿಗಳ ಮೇಲೆ 24 ಗಂಟೆಯೂ ಕ್ಯಾಮೆರಾ ಇರುತ್ತದೆ. ದೊಡ್ಮನೆ ಸದಸ್ಯರ ಪ್ರತಿ ನಡೆ ಕೂಡ ಸೆರೆಯಾಗುತ್ತದೆ. ಆದ್ದರಿಂದ ಎಷ್ಟು ಎಚ್ಚರಿಕೆಯಿಂದ ಇದ್ದರೂ ಸಾಲದು. ಒಂದು ವೇಳೆ ಯಾರಾದರೂ ದಾರಿ ತಪ್ಪಿದರೆ ಅಂಥವರಿಗೆ ಕಿಚ್ಚ ಸುದೀಪ್​ (Kichcha Sudeep) ಅವರು ಎಚ್ಚರಿಕೆ ನೀಡುತ್ತಾರೆ. ಈ ವಾರ ಕೂಡ ಹಾಗೆಯೇ ಆಗಿದೆ. ರೀಲ್ಸ್​ ಮೂಲಕ ಫೇಮಸ್​ ಆದ ಸೋನು ಶ್ರೀನಿವಾಸ್​ ಗೌಡ (Sonu Srinivas Gowda) ಅವರು ಬಿಗ್​ ಬಾಸ್​ ಮನೆಯಲ್ಲಿ ನಡೆದುಕೊಂಡ ರೀತಿ ಸುದೀಪ್​ಗೆ ಇಷ್ಟ ಆಗಿಲ್ಲ. ಅದನ್ನು ಅವರು ನೇರವಾಗಿಯೇ ಹೇಳಿದ್ದಾರೆ. ಸೋನು ಮಾಡಿದ ಎಲ್ಲ ತಪ್ಪುಗಳನ್ನು ಪ್ರಸ್ತಾಪಿಸಿ, ಮುಲಾಜಿಲ್ಲದೇ ಸುದೀಪ್​ ಕ್ಲಾಸ್ ತೆಗೆದುಕೊಂಡಿದ್ದಾರೆ. ಇದು ಮನೆಯಲ್ಲಿ ಇರುವ ಇನ್ನುಳಿದ ಸ್ಪರ್ಧಿಗಳಿಗೂ ಎಚ್ಚರಿಕೆ ನೀಡಿದಂತಿತ್ತು.

ಎಲ್ಲ ಸ್ಪರ್ಧಿಗಳಿಗೂ ಆಗಾಗ ಬಿಗ್​ ಬಾಸ್​ ಕಡೆಯಿಂದ ಆದೇಶಗಳು ಬರುತ್ತವೆ. ಅದನ್ನು ಎಲ್ಲರೂ ಗಂಭೀರವಾಗಿ ಪರಿಗಣಿಸಬೇಕು. ಆದರೆ ಬಿಗ್​ ಬಾಸ್​ ನೀಡಿದ ಆದೇಶಗಳಿಗೆ ಸೋನು ಗೌಡ ಅವರು ಗೌರವ ನೀಡಿಲ್ಲ. ಅಷ್ಟೇ ಅಲ್ಲದೇ, ಬಿಗ್​ ಬಾಸ್​ಗೆ ಆವಾಜ್​ ಹಾಕುವ ರೀತಿಯಲ್ಲಿ ಅವರು ನಡೆದುಕೊಂಡಿದ್ದಾರೆ. ಇದನ್ನು ಸುದೀಪ್​ ಖಂಡಿಸಿದ್ದಾರೆ. ‘ನಿಮ್ಮ ಮಾತುಗಳು ಕ್ಯೂಟ್​ ಆಗಿ ಇರಲಿಲ್ಲ. ಬಿಗ್​ ಬಾಸ್​ಗೆ ಅವಮಾನ ಮಾಡುವ ರೀತಿಯಲ್ಲಿ ಇತ್ತು. ಇನ್ಮುಂದೆ ನಿಮಗೆ ಬಿಗ್​ ಬಾಸ್​ ಆದೇಶವೇ ನೀಡುವುದಿಲ್ಲ ಎಂದುಕೊಳ್ಳಿ’ ಅಂತ ಸುದೀಪ್​ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ
Image
Sonu Srinivas Gowda: ‘ಬಿಗ್ ಬಾಸ್’ ಮನೆಯಲ್ಲಿ ಕಳಪೆ ಆಟ ತೋರಿದ ಸೋನು ಶ್ರೀನಿವಾಸ್ ಗೌಡಗೆ ಶಿಕ್ಷೆ
Image
‘ಬಿಗ್ ಬಾಸ್​ಗೆ ಬಂದಿದ್ದು ಆಟ ಆಡೋಕೆ, ಶೋಕಿ ಮಾಡೋಕೆ’: ಸೋನು ಶ್ರೀನಿವಾಸ್ ಗೌಡ
Image
Sonu Srinivas Gowda: ಮೂಡ್ ಇಲ್ಲ ಅಂದ್ರೆ ಸೋನು ಶ್ರೀನಿವಾಸ್​ ಗೌಡ 3 ದಿನ ಸ್ನಾನ ಮಾಡಲ್ಲ; ಎಲ್ಲರ ಎದುರು ಸತ್ಯ ಬಯಲು
Image
Sonu Srinivas Gowda: ಸೋನು ಶ್ರೀನಿವಾಸ್​ ಗೌಡ ಫೋನ್​ ನಂಬರ್​ ಏನು? ಅದ್ರಲ್ಲೂ ಚಾಲಕಿತನ ತೋರಿದ ರೀಲ್ಸ್​ ಬೆಡಗಿ

‘ಬಿಗ್​ ಬಾಸ್ ಕನ್ನಡ ಒಟಿಟಿ’​ ಮನೆಯಲ್ಲಿ ಅಡುಗೆ ಮಾಡುವುದು ಮುಖ್ಯ ಕೆಲಸ. ಎಲ್ಲರೂ ಅಡುಗೆ ಕೆಲಸದಲ್ಲಿ ಭಾಗಿಯಾದರೆ ಒಳ್ಳೆಯದು. ಆದರೆ ಸೋನು ಶ್ರೀನಿವಾಸ್​ ಗೌಡ ಅವರು ಅಡುಗೆ ವಿಚಾರದಲ್ಲಿ ಕಳ್ಳಾಟ ಆಡಿದ್ದಾರೆ. ತಮಗೆ ಅಡುಗೆ ಬರುತ್ತದೆ ಎಂಬ ವಿಚಾರವನ್ನು ಅವರು ಮುಚ್ಚಿಟ್ಟಿದ್ದರು. ನಾಲ್ಕನೇ ವಾರದಲ್ಲಿ ಆ ಸತ್ಯ ಬಯಲಾಗಿದೆ. ಇದನ್ನು ಗಮನಿಸಿದ ಸುದೀಪ್​ ಅವರು ನೇರವಾಗಿ ಕ್ಲಾಸ್​ ತೆಗೆದುಕೊಂಡಿದ್ದಾರೆ.

ಸೋನು ಗೌಡ ಅವರು ಮಾತನಾಡುವಾಗ ಪದೇ ಪದೇ ಉಗಿಯುತ್ತಾರೆ. ಅದನ್ನೂ ಸುದೀಪ್​ ಪ್ರಶ್ನಿಸಿದ್ದಾರೆ. ಮಾಡಿದ ತಪ್ಪುಗಳನ್ನು ವಾರದ ಪಂಚಾಯಿತಿಯಲ್ಲಿ ಎಲ್ಲರ ಎದುರು ಒಪ್ಪಿಕೊಂಡು ಸೋನು ಗೌಡ ಕಣ್ಣೀರು ಹಾಕಿದ್ದಾರೆ.

ದೊಡ್ಮನೆಯಲ್ಲಿ ಕೆಲವರು ಬಳಸುವ ಭಾಷೆ ಕೂಡ ಸುದೀಪ್​ಗೆ ಹಿಡಿಸಿಲ್ಲ. ಆ ಬಗ್ಗೆಯೂ ಛಾಟಿ ಬೀಸಿದ್ದಾರೆ. ‘ನಿಮ್ಮಲ್ಲಿ ತುಂಬ ಜನ ಮಾತನಾಡುವ ಏಕವಚನ ನಿಜಕ್ಕೂ ಚಪ್ಪಲಿ ತಗೊಂಡು ಹೊಡೆದಂತೆ ಇರುತ್ತೆ. ಸ್ನೇಹಿತರಾದ ನಂತರ ಏಕವಚನ ಇರಬಾರದು ಅಂತಲ್ಲ. ಆದರೆ ನಿಮ್ಮ ಏಕವಚನದಲ್ಲಿ ಗೌರವ ಕಾಣಿಸಿಲ್ಲ’ ಎಂದು ಸುದೀಪ್​ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್