AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kiran Yogeshwar: ಬಿಗ್​ ಬಾಸ್​ ಮನೆಯಿಂದ ಕಿರಣ್​ ಯೋಗೇಶ್ವರ್​ ಔಟ್​; ನಡೆಯಿತು ಮೊದಲ ಎಲಿಮಿನೇಷನ್​

Bigg Boss Elimination: ಈ ವಾರ ಸೋನು ಶ್ರೀನಿವಾಸ್​ ಗೌಡ ಸೇರಿದಂತೆ ಹಲವರು ನಾಮಿನೇಟ್​ ಆಗಿದ್ದರು. ಆದರೆ ಅಂತಿಮವಾಗಿ ಕಿರಣ್​ ಯೋಗೇಶ್ವರ್​ ಅವರು ಎಲಿಮಿನೇಟ್​ ಆಗಿದ್ದಾರೆ.

Kiran Yogeshwar: ಬಿಗ್​ ಬಾಸ್​ ಮನೆಯಿಂದ ಕಿರಣ್​ ಯೋಗೇಶ್ವರ್​ ಔಟ್​; ನಡೆಯಿತು ಮೊದಲ ಎಲಿಮಿನೇಷನ್​
ಕಿರಣ್ ಯೋಗೇಶ್ವರ್
TV9 Web
| Updated By: ಮದನ್​ ಕುಮಾರ್​|

Updated on:Aug 13, 2022 | 8:56 PM

Share

ಭಾರಿ ಕೌತುಕ ಮೂಡಿಸಿದ ‘ಬಿಗ್​ ಬಾಸ್​ ಕನ್ನಡ ಒಟಿಟಿ’ (Bigg Boss Kannada OTT ) ಶೋನಲ್ಲಿ ಮೊದಲ ಎಲಿಮಿನೇಷನ್​ ನಡೆದಿದೆ. ಕಿರಣ್​ ಯೋಗೇಶ್ವರ್ (Kiran Yogeshwar) ಅವರು ಔಟ್​ ಆಗಿದ್ದಾರೆ. ಕಿರಣ್​ ಅವರಿಗೆ ಕನ್ನಡ ಸರಿಯಾಗಿ ಮಾತನಾಡಲು ಬರುವುದಿಲ್ಲ. ಅಲ್ಲದೇ ಇತರೆ ಸ್ಪರ್ಧಿಗಳ ಜೊತೆ ಹೊಂದಿಕೊಳ್ಳಲು ಕೂಡ ಅವರಿಗೆ ಸಾಧ್ಯವಾಗುತ್ತಿರಲಿಲ್ಲ. ಅಂತಿಮವಾಗಿ ಅತಿ ಕಡಿಮೆ ವೋಟ್​ ಬಂದಿರುವುದು ಕೂಡ ಅವರಿಗೆ. ಆದ್ದರಿಂದ ಮೊದಲ ವಾರವೇ ಅವರ ಬಿಗ್​ ಬಾಸ್​ ಪಯಣ ಅಂತ್ಯವಾಗಿದೆ. ಇಂದು (ಆಗಸ್ಟ್​ 13) ನಡೆದ ವಾರದ ಪಂಚಾಯಿತಿಯಲ್ಲಿ ಕಿಚ್ಚ ಸುದೀಪ್​ ಅವರು ಎಲಿಮಿನೇಷನ್ (Bigg Boss Elimination)​ ಘೋಷಿಸಿದರು.

‘ಒಂದೇ ವಾರದಲ್ಲಿ ನಾನು ಎಲ್ಲ ಜೊತೆ ಕ್ಲೋಸ್​ ಆದೆ. ನಿಮ್ಮೆಲ್ಲರನ್ನೂ ಮಿಸ್​ ಮಾಡಿಕೊಳ್ಳುತ್ತೇನೆ. ಈ ಮನೆಯನ್ನೂ ಮಿಸ್​ ಮಾಡಿಕೊಳ್ಳುತ್ತೇನೆ’ ಎಂದು ಹೇಳುವ ಮೂಲಕ ಕಿರಣ್​ ಯೋಗೇಶ್ವರ್​ ಅವರು ಎಲ್ಲರಿಗೂ ವಿದಾಯ ಹೇಳಿದ್ದಾರೆ. ಯಾವುದೇ ಬೇಸರ ಇಲ್ಲದೇ ನಗುನಗುತ್ತಲೇ ಅವರು ದೊಡ್ಮನೆಯಿಂದ ಹೊರಬಂದಿದ್ದಾರೆ.

ಸಾನ್ಯಾ ಅಯ್ಯರ್​, ರಾಕೇಶ್​ ಅಡಿಗ, ಆರ್ಯವರ್ಧನ್​ ಗುರೂಜಿ, ಸೋನು ಶ್ರೀನಿವಾಸ್​ ಗೌಡ, ಅರ್ಜುನ್​ ರಮೇಶ್​, ಉದಯ್​ ಸೂರ್ಯ, ಸ್ಫೂರ್ತಿ ಗೌಡ, ಜಯಶ್ರೀ ಆರಾಧ್ಯ, ಅಕ್ಷತಾ ಕುಕ್ಕಿ, ಕಿರಣ್​ ಯೋಗೇಶ್ವರ್​ ಅವರು ಈ ವಾರ ನಾಮಿನೇಟ್​ ಆಗಿದ್ದರು. ಅತಿ ಕಡಿಮೆ ವೋಟ್​ ಪಡೆದ ಕಿರಣ್​ ಅವರು ಬಿಗ್​ ಬಾಸ್​ ಮನೆಯಿಂದ ಹೊರಬಂದಿದ್ದಾರೆ.

ಇದನ್ನೂ ಓದಿ
Image
Bigg Boss: ‘ಬಿಗ್​ ಬಾಸ್’​ ಮನೆಗೆ ಹೊಗ್ತಾರಾ ಸ್ಟಾರ್​ ನಿರೂಪಕಿ? ಎಲ್ಲರಿಗಿಂತ ಹೆಚ್ಚು ಸಂಭಾವನೆ ಸಿಗೋದು ಇವರಿಗೆ
Image
Bigg Boss Kannada: ‘ಕಷ್ಟ ಹೇಳ್ಕೊಂಡು ಸಿಂಪಥಿ ಗಿಟ್ಟಿಸಬೇಡಿ’: ಬಿಗ್​ ಬಾಸ್​ ಸ್ಪರ್ಧಿಗೆ ಗುರೂಜಿ ಮಾತಿನ ಡಿಚ್ಚಿ
Image
Sonu Srinivas Gowda: ‘ಸುದೀಪ್​ ಇರುವ ವೇದಿಕೆಗೆ ಇದು ಗೌರವ ಅಲ್ಲ’: ಸೋನು ಶ್ರೀನಿವಾಸ್​ ಗೌಡ ಆಯ್ಕೆ ಆಗಿದ್ದಕ್ಕೆ ನೆಟ್ಟಿಗರು ಗರಂ
Image
Bigg Boss OTT Kannada: ಮೊದಲ ದಿನವೇ ಬಿಗ್​ ಬಾಸ್​ನಲ್ಲಿ ಕಣ್ಣೀರ ಕೋಡಿ; ನೋವು ತೋಡಿಕೊಂಡು ಗಳಗಳನೆ ಅತ್ತ ಸ್ಪರ್ಧಿಗಳು

ಇದನ್ನೂ ಓದಿ: Sonu Srinivas Gowda: ಸೋನು ಶ್ರೀನಿವಾಸ್​ ಗೌಡ ಫೋನ್​ ನಂಬರ್​ ಏನು? ಅದ್ರಲ್ಲೂ ಚಾಲಕಿತನ ತೋರಿದ ರೀಲ್ಸ್​ ಬೆಡಗಿ

ಮೊದಲ ವಾರದ ಎಲಿಮಿನೇಷನ್​ ಬಳಿಕ ಬಿಗ್​ ಬಾಸ್​ ಒಟಿಟಿ ಮನೆಯಲ್ಲಿ ಆಟ ಚುರುಕಾಗಿದೆ. ಇನ್ನುಳಿದ ಸ್ಪರ್ಧಿಗಳಿಗೆ ಟೆನ್ಷನ್​ ಹೆಚ್ಚಿದೆ. ಸೋನು ಗೌಡ ಅವರು ಈ ಶೋಗೆ ಆಯ್ಕೆ ಆಗಿರುವ ಬಗ್ಗೆ ಅನೇಕರಿಗೆ ತಕರಾರು ಇದೆ. ಕನ್ನಡ ಸರಿಯಾಗಿ ಬರುವುದಿಲ್ಲ ಎಂಬ ಕಾರಣಕ್ಕೆ ಜಶ್ವಂತ್​ ಬಗ್ಗೆಯೂ ಕೆಲವರಿಗೆ ಅಸಮಾಧಾನ ಇದೆ. ಈ ವಾರ ಅಕ್ಷತಾ ಕುಕ್ಕಿ ಅವರು ಕಳಪೆ ಹಣೆಪಟ್ಟಿ ಪಡೆದುಕೊಂಡಿದ್ದರು. ಅವರೆಲ್ಲರನ್ನೂ ಬಿಟ್ಟು ಕಿರಣ್​ ಯೋಗೇಶ್ವರ್​ ಅವರು ಔಟ್​ ಆಗಿರುವುದು ಪ್ರೇಕ್ಷಕರಿಗೆ ಅಚ್ಚರಿ ಮೂಡಿಸಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:51 pm, Sat, 13 August 22

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ