AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ದಾನಿಶ್​ ಸೇಠ್​ಗೆ ಅಭಿನಂದನೆ ತಿಳಿಸಿದ ಕ್ರಿಕೆಟರ್​​ ಕೆ.ಎಲ್​. ರಾಹುಲ್​; ಕಾರಣ ಏನು?

‘ಫ್ರೆಂಚ್​​ ಬಿರಿಯಾನಿ’ ಹಾಗೂ ‘ಹಂಬಲ್ ಪೊಲಿಟಿಷಿಯನ್ ನಾಗರಾಜ್’ ಚಿತ್ರಗಳಲ್ಲಿ ದಾನಿಶ್​ ಅಭಿನಯಿಸಿದ್ದಾರೆ. ಅವರ ನಟನೆಯ ‘ಹಂಬಲ್ ಪೊಲಿಟಿಷಿಯನ್ ನಾಗರಾಜ್​’ ಕಥೆ ವೆಬ್​ ಸಿರೀಸ್ ಆಗಿ ವೂಟ್​ ಸೆಲೆಕ್ಟ್​ ಆ್ಯಪ್​ನಲ್ಲಿ ರಿಲೀಸ್​ ಆಗಿದೆ.

ನಟ ದಾನಿಶ್​ ಸೇಠ್​ಗೆ ಅಭಿನಂದನೆ ತಿಳಿಸಿದ ಕ್ರಿಕೆಟರ್​​ ಕೆ.ಎಲ್​. ರಾಹುಲ್​; ಕಾರಣ ಏನು?
ರಾಹುಲ್​-ದಾನಿಶ್​ ಸೇಠ್​
TV9 Web
| Edited By: |

Updated on:Jan 10, 2022 | 5:09 PM

Share

ದಾನಿಶ್​ ಸೇಠ್ (Danish Sait) ಅವರು ನಟನಾಗಿ, ನಿರೂಪಕನಾಗಿ ಎಲ್ಲರ ಗಮನ ಸೆಳೆದಿದ್ದಾರೆ. ಅವರು ಆರ್​ಸಿಬಿ ಇನ್​ಸೈಡರ್ (RCB Insider) ಕೂಡ ಹೌದು. ಮಾಡಿರುವ ಎರಡೂ ಸಿನಿಮಾಗಳಲ್ಲಿ ಭಿನ್ನ ಪಾತ್ರವನ್ನು ಮಾಡುವ ಮೂಲಕ ಅವರು ಅನೇಕರಿಗೆ ಇಷ್ಟವಾಗಿದ್ದಾರೆ. ಈಗ ಟೀಂ ಇಂಡಿಯಾ ಆಟಗಾರ, ಕನ್ನಡಿಗ ಕೆ.ಎಲ್​. ರಾಹುಲ್​ (KL Rahul) ಅವರು ದಾನಿಶ್​ಗೆ ಅಭಿನಂದನೆ ತಿಳಿಸಿದ್ದಾರೆ. ಈ ಬಗ್ಗೆ ರಾಹುಲ್​ ವಿಶೇಷ ಪೋಸ್ಟರ್​ ಒಂದನ್ನು ಶೇರ್​ ಮಾಡಿಕೊಂಡಿದ್ದಾರೆ. ಅಷ್ಟಕ್ಕೂ ಅವರು ದಾನಿಶ್​ಗೆ ಅಭಿನಂದನೆ ಹೇಳೋಕೆ ಕಾರಣವೇನು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

‘ಫ್ರೆಂಚ್​​ ಬಿರಿಯಾನಿ’ ಹಾಗೂ ‘ಹಂಬಲ್ ಪೊಲಿಟಿಷಿಯನ್ ನಾಗರಾಜ್’ ಚಿತ್ರಗಳಲ್ಲಿ ದಾನಿಶ್​ ಅಭಿನಯಿಸಿದ್ದಾರೆ. ಅವರ ನಟನೆಯ ‘ಹಂಬಲ್ ಪೊಲಿಟಿಷಿಯನ್ ನಾಗರಾಜ್​’ ಕಥೆ ವೆಬ್​ ಸಿರೀಸ್ ಆಗಿ ವೂಟ್​ ಸೆಲೆಕ್ಟ್​ ಆ್ಯಪ್​ನಲ್ಲಿ ರಿಲೀಸ್​ ಆಗಿದೆ. ಅವರ ನಟನೆ ಬಗ್ಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಕಾರಣಕ್ಕೆ ಕೆ.ಎಲ್​. ರಾಹುಲ್​ ಕೂಡ ದಾನಿಶ್​ಗೆ ಅಭಿನಂದನಾ ಸ್ಟೇಟಸ್​ ಹಾಕಿದ್ದಾರೆ.

ಇನ್​ಸ್ಟಾಗ್ರಾಮ್​ ಸ್ಟೇಟಸ್​ನಲ್ಲಿ ‘ಹಂಬಲ್ ಪೊಲಿಟಿಷಿಯನ್ ನಾಗರಾಜ್’ ಪೋಸ್ಟರ್ ಹಾಕಿರುವ ರಾಹುಲ್​ ಅವರು ‘ಅಭಿನಂದನೆಗಳು ದಾನಿಶ್​ ಸೇಠ್​’ ಎಂದು ಬರೆದುಕೊಂಡಿದ್ದಾರೆ. ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡಿದ್ದ ದಾನಿಶ್​, ‘ನನಗೆ ಕೆ.ಎಲ್​. ರಾಹುಲ್ ಉತ್ತಮ ಗೆಳೆಯ’ ಎಂದಿದ್ದರು. ಇಬ್ಬರೂ ಕನ್ನಡದವರು. ಈ ಮೊದಲು ರಾಹುಲ್​ ಕೂಡ ಆರ್​ಸಿಬಿಯಲ್ಲೇ ಇದ್ದರು. ಈ ಕಾರಣಕ್ಕೆ ಇಬ್ಬರ ನಡುವೆ ಒಳ್ಳೆಯ ಬಾಂಧವ್ಯ ಇದೆ.

ದಾನಿಶ್​ ಸೇಠ್ ಜೊತೆಗೆ ಪ್ರಕಾಶ್​ ಬೆಳವಾಡಿ, ವಿಜಯ್​ ಚೆಂಡೂರ್​, ದಿಶಾ ಮದನ್​ ಮುಂತಾದವರು ಈ ವೆಬ್​ ಸರಣಿಯಲ್ಲಿ ನಟಿಸಿದ್ದಾರೆ. ಸಾದ್​​ ಖಾನ್​ ನಿರ್ದೇಶನ ಮಾಡಿದ್ದಾರೆ. ನಕುಲ್​ ಅಭ್ಯಂಕರ್​ ಸಂಗೀತ ನಿರ್ದೇಶನ ಮಾಡಿದ್ದಾರೆ. ವೂಟ್​ ಸೆಲೆಕ್ಟ್​ ಮೂಲಕ 2022ರ ಜ.6ರಂದು ಈ ವೆಬ್​ ಸರಣಿ ಬಿಡುಗಡೆ ಆಗಿದೆ.

ಇದು ಒಟ್ಟು 10 ಎಪಿಸೋಡ್ ಹೊಂದಿರುವ ಕಾಮಿಡಿ ಆಧಾರಿತ ವೆಬ್‌ ಸೀರಿಸ್. ನಾಗರಾಜ್​ ಒಬ್ಬ ಸ್ವಯಂ ಸೇವಕನಾಗಿ ಸೇವೆ ಸಲ್ಲಿಸುತ್ತಾ ರಾಜಕೀಯ ಕ್ಷೇತ್ರಕ್ಕೆ ಕಾಲಿಡುತ್ತಾನೆ. ನಂತರ ಮುಖ್ಯಮಂತ್ರಿ ಸ್ಥಾನಕ್ಕೇರಲು ಏನೆಲ್ಲಾ ಸರ್ಕಸ್ ಮಾಡಲಿದ್ದಾನೆ ಎಂಬುದು ಇಲ್ಲಿನ ಹೈಲೈಟ್​.

ಇದನ್ನೂ ಓದಿ: Humble Politiciann Nograj: ಮತ್ತೆ ‘ಹಂಬಲ್ ಪೊಲಿಟಿಶಿಯನ್’ ಆದ ದಾನಿಶ್; ಮಜವಾದ ಟ್ರೈಲರ್ ಇಲ್ಲಿದೆ

ದಾನಿಶ್​ ಸೇಠ್​ ಸಹೋದರಿ ಕುಬ್ರಾ ಸೇಠ್​ಗೆ ‘ಫೌಂಡೇಶನ್​’ ಅವಕಾಶ; ಹಾಲಿವುಡ್​ ಕಲಾವಿದರ ಜತೆ ನಟನೆ

Published On - 5:05 pm, Mon, 10 January 22

Follow Us
ವಾರಾಣಸಿಯ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ
ವಾರಾಣಸಿಯ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ
ಡಿಕೆಶಿ ಬಣಕ್ಕೆ ಮೇ ಕ್ರಾಂತಿ ಕನಸು: ಸಿದ್ದರಾಮಯ್ಯ ಬಣ ಅಹಿಂದ ಕಾರ್ಡ್​ ಪ್ಲೇ!
ಡಿಕೆಶಿ ಬಣಕ್ಕೆ ಮೇ ಕ್ರಾಂತಿ ಕನಸು: ಸಿದ್ದರಾಮಯ್ಯ ಬಣ ಅಹಿಂದ ಕಾರ್ಡ್​ ಪ್ಲೇ!
ಹಾಸನ ಹಲವು ಅವಾಂತರ ಸೃಷ್ಟಿಸಿದ ಮಳೆ: ಧರೆಗುರುಳಿದ ವಿದ್ಯುತ್​ ಕಂಬ, ಮರಗಳು
ಹಾಸನ ಹಲವು ಅವಾಂತರ ಸೃಷ್ಟಿಸಿದ ಮಳೆ: ಧರೆಗುರುಳಿದ ವಿದ್ಯುತ್​ ಕಂಬ, ಮರಗಳು
ಐವಿ ಡ್ರಿಪ್​ ಹಾಕಿಸಿಕೊಂಡು ಕೆಲಸಕ್ಕೆ ಹಾಜರಾದ ಅಂಗನವಾಡಿ ಕಾರ್ಯಕರ್ತೆ
ಐವಿ ಡ್ರಿಪ್​ ಹಾಕಿಸಿಕೊಂಡು ಕೆಲಸಕ್ಕೆ ಹಾಜರಾದ ಅಂಗನವಾಡಿ ಕಾರ್ಯಕರ್ತೆ
ದೇವಾಲಯದಲ್ಲಿ ಪ್ರಸಾದ ಬೇಡ ಅನ್ನೋದು ಘೋರ ಪಾಪ! ಯಾಕೆ ಗೊತ್ತಾ?
ದೇವಾಲಯದಲ್ಲಿ ಪ್ರಸಾದ ಬೇಡ ಅನ್ನೋದು ಘೋರ ಪಾಪ! ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೇಮ ವ್ಯವಹಾರಗಳಿಗೆ ಮನ್ನಣೆ
ಇಂದು ಈ ರಾಶಿಯವರಿಗೆ ಪ್ರೇಮ ವ್ಯವಹಾರಗಳಿಗೆ ಮನ್ನಣೆ
‘ಯಾವುದೇ ಗಿಮಿಕ್ ಇಲ್ಲದೇ ಗೆದ್ದ ಸಿನಿಮಾ ನಮ್ಮದು’: ನಟ ವಿನೋದ್ ಪ್ರಭಾಕರ್
‘ಯಾವುದೇ ಗಿಮಿಕ್ ಇಲ್ಲದೇ ಗೆದ್ದ ಸಿನಿಮಾ ನಮ್ಮದು’: ನಟ ವಿನೋದ್ ಪ್ರಭಾಕರ್
ಕುಲ್ಗಾಮ್​ನಲ್ಲಿ ಭೀಕರ ಅಪಘಾತ; ಕಾರು ಗುದ್ದಿದ ರಭಸಕ್ಕೆ ವಿದ್ಯಾರ್ಥಿನಿ ಸಾವು
ಕುಲ್ಗಾಮ್​ನಲ್ಲಿ ಭೀಕರ ಅಪಘಾತ; ಕಾರು ಗುದ್ದಿದ ರಭಸಕ್ಕೆ ವಿದ್ಯಾರ್ಥಿನಿ ಸಾವು
ಕಾಶಿ-ಪುಣೆ ಅಮೃತ್ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
ಕಾಶಿ-ಪುಣೆ ಅಮೃತ್ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
ರಾಯಚೂರಲ್ಲಿ ಶೈಕ್ಷಣಿಕ ಕ್ರಾಂತಿ
ರಾಯಚೂರಲ್ಲಿ ಶೈಕ್ಷಣಿಕ ಕ್ರಾಂತಿ