AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ದಾನಿಶ್​ ಸೇಠ್​ಗೆ ಅಭಿನಂದನೆ ತಿಳಿಸಿದ ಕ್ರಿಕೆಟರ್​​ ಕೆ.ಎಲ್​. ರಾಹುಲ್​; ಕಾರಣ ಏನು?

‘ಫ್ರೆಂಚ್​​ ಬಿರಿಯಾನಿ’ ಹಾಗೂ ‘ಹಂಬಲ್ ಪೊಲಿಟಿಷಿಯನ್ ನಾಗರಾಜ್’ ಚಿತ್ರಗಳಲ್ಲಿ ದಾನಿಶ್​ ಅಭಿನಯಿಸಿದ್ದಾರೆ. ಅವರ ನಟನೆಯ ‘ಹಂಬಲ್ ಪೊಲಿಟಿಷಿಯನ್ ನಾಗರಾಜ್​’ ಕಥೆ ವೆಬ್​ ಸಿರೀಸ್ ಆಗಿ ವೂಟ್​ ಸೆಲೆಕ್ಟ್​ ಆ್ಯಪ್​ನಲ್ಲಿ ರಿಲೀಸ್​ ಆಗಿದೆ.

ನಟ ದಾನಿಶ್​ ಸೇಠ್​ಗೆ ಅಭಿನಂದನೆ ತಿಳಿಸಿದ ಕ್ರಿಕೆಟರ್​​ ಕೆ.ಎಲ್​. ರಾಹುಲ್​; ಕಾರಣ ಏನು?
ರಾಹುಲ್​-ದಾನಿಶ್​ ಸೇಠ್​
TV9 Web
| Edited By: |

Updated on:Jan 10, 2022 | 5:09 PM

Share

ದಾನಿಶ್​ ಸೇಠ್ (Danish Sait) ಅವರು ನಟನಾಗಿ, ನಿರೂಪಕನಾಗಿ ಎಲ್ಲರ ಗಮನ ಸೆಳೆದಿದ್ದಾರೆ. ಅವರು ಆರ್​ಸಿಬಿ ಇನ್​ಸೈಡರ್ (RCB Insider) ಕೂಡ ಹೌದು. ಮಾಡಿರುವ ಎರಡೂ ಸಿನಿಮಾಗಳಲ್ಲಿ ಭಿನ್ನ ಪಾತ್ರವನ್ನು ಮಾಡುವ ಮೂಲಕ ಅವರು ಅನೇಕರಿಗೆ ಇಷ್ಟವಾಗಿದ್ದಾರೆ. ಈಗ ಟೀಂ ಇಂಡಿಯಾ ಆಟಗಾರ, ಕನ್ನಡಿಗ ಕೆ.ಎಲ್​. ರಾಹುಲ್​ (KL Rahul) ಅವರು ದಾನಿಶ್​ಗೆ ಅಭಿನಂದನೆ ತಿಳಿಸಿದ್ದಾರೆ. ಈ ಬಗ್ಗೆ ರಾಹುಲ್​ ವಿಶೇಷ ಪೋಸ್ಟರ್​ ಒಂದನ್ನು ಶೇರ್​ ಮಾಡಿಕೊಂಡಿದ್ದಾರೆ. ಅಷ್ಟಕ್ಕೂ ಅವರು ದಾನಿಶ್​ಗೆ ಅಭಿನಂದನೆ ಹೇಳೋಕೆ ಕಾರಣವೇನು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

‘ಫ್ರೆಂಚ್​​ ಬಿರಿಯಾನಿ’ ಹಾಗೂ ‘ಹಂಬಲ್ ಪೊಲಿಟಿಷಿಯನ್ ನಾಗರಾಜ್’ ಚಿತ್ರಗಳಲ್ಲಿ ದಾನಿಶ್​ ಅಭಿನಯಿಸಿದ್ದಾರೆ. ಅವರ ನಟನೆಯ ‘ಹಂಬಲ್ ಪೊಲಿಟಿಷಿಯನ್ ನಾಗರಾಜ್​’ ಕಥೆ ವೆಬ್​ ಸಿರೀಸ್ ಆಗಿ ವೂಟ್​ ಸೆಲೆಕ್ಟ್​ ಆ್ಯಪ್​ನಲ್ಲಿ ರಿಲೀಸ್​ ಆಗಿದೆ. ಅವರ ನಟನೆ ಬಗ್ಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಕಾರಣಕ್ಕೆ ಕೆ.ಎಲ್​. ರಾಹುಲ್​ ಕೂಡ ದಾನಿಶ್​ಗೆ ಅಭಿನಂದನಾ ಸ್ಟೇಟಸ್​ ಹಾಕಿದ್ದಾರೆ.

ಇನ್​ಸ್ಟಾಗ್ರಾಮ್​ ಸ್ಟೇಟಸ್​ನಲ್ಲಿ ‘ಹಂಬಲ್ ಪೊಲಿಟಿಷಿಯನ್ ನಾಗರಾಜ್’ ಪೋಸ್ಟರ್ ಹಾಕಿರುವ ರಾಹುಲ್​ ಅವರು ‘ಅಭಿನಂದನೆಗಳು ದಾನಿಶ್​ ಸೇಠ್​’ ಎಂದು ಬರೆದುಕೊಂಡಿದ್ದಾರೆ. ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡಿದ್ದ ದಾನಿಶ್​, ‘ನನಗೆ ಕೆ.ಎಲ್​. ರಾಹುಲ್ ಉತ್ತಮ ಗೆಳೆಯ’ ಎಂದಿದ್ದರು. ಇಬ್ಬರೂ ಕನ್ನಡದವರು. ಈ ಮೊದಲು ರಾಹುಲ್​ ಕೂಡ ಆರ್​ಸಿಬಿಯಲ್ಲೇ ಇದ್ದರು. ಈ ಕಾರಣಕ್ಕೆ ಇಬ್ಬರ ನಡುವೆ ಒಳ್ಳೆಯ ಬಾಂಧವ್ಯ ಇದೆ.

ದಾನಿಶ್​ ಸೇಠ್ ಜೊತೆಗೆ ಪ್ರಕಾಶ್​ ಬೆಳವಾಡಿ, ವಿಜಯ್​ ಚೆಂಡೂರ್​, ದಿಶಾ ಮದನ್​ ಮುಂತಾದವರು ಈ ವೆಬ್​ ಸರಣಿಯಲ್ಲಿ ನಟಿಸಿದ್ದಾರೆ. ಸಾದ್​​ ಖಾನ್​ ನಿರ್ದೇಶನ ಮಾಡಿದ್ದಾರೆ. ನಕುಲ್​ ಅಭ್ಯಂಕರ್​ ಸಂಗೀತ ನಿರ್ದೇಶನ ಮಾಡಿದ್ದಾರೆ. ವೂಟ್​ ಸೆಲೆಕ್ಟ್​ ಮೂಲಕ 2022ರ ಜ.6ರಂದು ಈ ವೆಬ್​ ಸರಣಿ ಬಿಡುಗಡೆ ಆಗಿದೆ.

ಇದು ಒಟ್ಟು 10 ಎಪಿಸೋಡ್ ಹೊಂದಿರುವ ಕಾಮಿಡಿ ಆಧಾರಿತ ವೆಬ್‌ ಸೀರಿಸ್. ನಾಗರಾಜ್​ ಒಬ್ಬ ಸ್ವಯಂ ಸೇವಕನಾಗಿ ಸೇವೆ ಸಲ್ಲಿಸುತ್ತಾ ರಾಜಕೀಯ ಕ್ಷೇತ್ರಕ್ಕೆ ಕಾಲಿಡುತ್ತಾನೆ. ನಂತರ ಮುಖ್ಯಮಂತ್ರಿ ಸ್ಥಾನಕ್ಕೇರಲು ಏನೆಲ್ಲಾ ಸರ್ಕಸ್ ಮಾಡಲಿದ್ದಾನೆ ಎಂಬುದು ಇಲ್ಲಿನ ಹೈಲೈಟ್​.

ಇದನ್ನೂ ಓದಿ: Humble Politiciann Nograj: ಮತ್ತೆ ‘ಹಂಬಲ್ ಪೊಲಿಟಿಶಿಯನ್’ ಆದ ದಾನಿಶ್; ಮಜವಾದ ಟ್ರೈಲರ್ ಇಲ್ಲಿದೆ

ದಾನಿಶ್​ ಸೇಠ್​ ಸಹೋದರಿ ಕುಬ್ರಾ ಸೇಠ್​ಗೆ ‘ಫೌಂಡೇಶನ್​’ ಅವಕಾಶ; ಹಾಲಿವುಡ್​ ಕಲಾವಿದರ ಜತೆ ನಟನೆ

Published On - 5:05 pm, Mon, 10 January 22

ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು, ನಿಧಿ ಪತ್ತೆ!
ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು, ನಿಧಿ ಪತ್ತೆ!