AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ದಾನಿಶ್​ ಸೇಠ್​ಗೆ ಅಭಿನಂದನೆ ತಿಳಿಸಿದ ಕ್ರಿಕೆಟರ್​​ ಕೆ.ಎಲ್​. ರಾಹುಲ್​; ಕಾರಣ ಏನು?

‘ಫ್ರೆಂಚ್​​ ಬಿರಿಯಾನಿ’ ಹಾಗೂ ‘ಹಂಬಲ್ ಪೊಲಿಟಿಷಿಯನ್ ನಾಗರಾಜ್’ ಚಿತ್ರಗಳಲ್ಲಿ ದಾನಿಶ್​ ಅಭಿನಯಿಸಿದ್ದಾರೆ. ಅವರ ನಟನೆಯ ‘ಹಂಬಲ್ ಪೊಲಿಟಿಷಿಯನ್ ನಾಗರಾಜ್​’ ಕಥೆ ವೆಬ್​ ಸಿರೀಸ್ ಆಗಿ ವೂಟ್​ ಸೆಲೆಕ್ಟ್​ ಆ್ಯಪ್​ನಲ್ಲಿ ರಿಲೀಸ್​ ಆಗಿದೆ.

ನಟ ದಾನಿಶ್​ ಸೇಠ್​ಗೆ ಅಭಿನಂದನೆ ತಿಳಿಸಿದ ಕ್ರಿಕೆಟರ್​​ ಕೆ.ಎಲ್​. ರಾಹುಲ್​; ಕಾರಣ ಏನು?
ರಾಹುಲ್​-ದಾನಿಶ್​ ಸೇಠ್​
TV9 Web
| Edited By: |

Updated on:Jan 10, 2022 | 5:09 PM

Share

ದಾನಿಶ್​ ಸೇಠ್ (Danish Sait) ಅವರು ನಟನಾಗಿ, ನಿರೂಪಕನಾಗಿ ಎಲ್ಲರ ಗಮನ ಸೆಳೆದಿದ್ದಾರೆ. ಅವರು ಆರ್​ಸಿಬಿ ಇನ್​ಸೈಡರ್ (RCB Insider) ಕೂಡ ಹೌದು. ಮಾಡಿರುವ ಎರಡೂ ಸಿನಿಮಾಗಳಲ್ಲಿ ಭಿನ್ನ ಪಾತ್ರವನ್ನು ಮಾಡುವ ಮೂಲಕ ಅವರು ಅನೇಕರಿಗೆ ಇಷ್ಟವಾಗಿದ್ದಾರೆ. ಈಗ ಟೀಂ ಇಂಡಿಯಾ ಆಟಗಾರ, ಕನ್ನಡಿಗ ಕೆ.ಎಲ್​. ರಾಹುಲ್​ (KL Rahul) ಅವರು ದಾನಿಶ್​ಗೆ ಅಭಿನಂದನೆ ತಿಳಿಸಿದ್ದಾರೆ. ಈ ಬಗ್ಗೆ ರಾಹುಲ್​ ವಿಶೇಷ ಪೋಸ್ಟರ್​ ಒಂದನ್ನು ಶೇರ್​ ಮಾಡಿಕೊಂಡಿದ್ದಾರೆ. ಅಷ್ಟಕ್ಕೂ ಅವರು ದಾನಿಶ್​ಗೆ ಅಭಿನಂದನೆ ಹೇಳೋಕೆ ಕಾರಣವೇನು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

‘ಫ್ರೆಂಚ್​​ ಬಿರಿಯಾನಿ’ ಹಾಗೂ ‘ಹಂಬಲ್ ಪೊಲಿಟಿಷಿಯನ್ ನಾಗರಾಜ್’ ಚಿತ್ರಗಳಲ್ಲಿ ದಾನಿಶ್​ ಅಭಿನಯಿಸಿದ್ದಾರೆ. ಅವರ ನಟನೆಯ ‘ಹಂಬಲ್ ಪೊಲಿಟಿಷಿಯನ್ ನಾಗರಾಜ್​’ ಕಥೆ ವೆಬ್​ ಸಿರೀಸ್ ಆಗಿ ವೂಟ್​ ಸೆಲೆಕ್ಟ್​ ಆ್ಯಪ್​ನಲ್ಲಿ ರಿಲೀಸ್​ ಆಗಿದೆ. ಅವರ ನಟನೆ ಬಗ್ಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಕಾರಣಕ್ಕೆ ಕೆ.ಎಲ್​. ರಾಹುಲ್​ ಕೂಡ ದಾನಿಶ್​ಗೆ ಅಭಿನಂದನಾ ಸ್ಟೇಟಸ್​ ಹಾಕಿದ್ದಾರೆ.

ಇನ್​ಸ್ಟಾಗ್ರಾಮ್​ ಸ್ಟೇಟಸ್​ನಲ್ಲಿ ‘ಹಂಬಲ್ ಪೊಲಿಟಿಷಿಯನ್ ನಾಗರಾಜ್’ ಪೋಸ್ಟರ್ ಹಾಕಿರುವ ರಾಹುಲ್​ ಅವರು ‘ಅಭಿನಂದನೆಗಳು ದಾನಿಶ್​ ಸೇಠ್​’ ಎಂದು ಬರೆದುಕೊಂಡಿದ್ದಾರೆ. ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡಿದ್ದ ದಾನಿಶ್​, ‘ನನಗೆ ಕೆ.ಎಲ್​. ರಾಹುಲ್ ಉತ್ತಮ ಗೆಳೆಯ’ ಎಂದಿದ್ದರು. ಇಬ್ಬರೂ ಕನ್ನಡದವರು. ಈ ಮೊದಲು ರಾಹುಲ್​ ಕೂಡ ಆರ್​ಸಿಬಿಯಲ್ಲೇ ಇದ್ದರು. ಈ ಕಾರಣಕ್ಕೆ ಇಬ್ಬರ ನಡುವೆ ಒಳ್ಳೆಯ ಬಾಂಧವ್ಯ ಇದೆ.

ದಾನಿಶ್​ ಸೇಠ್ ಜೊತೆಗೆ ಪ್ರಕಾಶ್​ ಬೆಳವಾಡಿ, ವಿಜಯ್​ ಚೆಂಡೂರ್​, ದಿಶಾ ಮದನ್​ ಮುಂತಾದವರು ಈ ವೆಬ್​ ಸರಣಿಯಲ್ಲಿ ನಟಿಸಿದ್ದಾರೆ. ಸಾದ್​​ ಖಾನ್​ ನಿರ್ದೇಶನ ಮಾಡಿದ್ದಾರೆ. ನಕುಲ್​ ಅಭ್ಯಂಕರ್​ ಸಂಗೀತ ನಿರ್ದೇಶನ ಮಾಡಿದ್ದಾರೆ. ವೂಟ್​ ಸೆಲೆಕ್ಟ್​ ಮೂಲಕ 2022ರ ಜ.6ರಂದು ಈ ವೆಬ್​ ಸರಣಿ ಬಿಡುಗಡೆ ಆಗಿದೆ.

ಇದು ಒಟ್ಟು 10 ಎಪಿಸೋಡ್ ಹೊಂದಿರುವ ಕಾಮಿಡಿ ಆಧಾರಿತ ವೆಬ್‌ ಸೀರಿಸ್. ನಾಗರಾಜ್​ ಒಬ್ಬ ಸ್ವಯಂ ಸೇವಕನಾಗಿ ಸೇವೆ ಸಲ್ಲಿಸುತ್ತಾ ರಾಜಕೀಯ ಕ್ಷೇತ್ರಕ್ಕೆ ಕಾಲಿಡುತ್ತಾನೆ. ನಂತರ ಮುಖ್ಯಮಂತ್ರಿ ಸ್ಥಾನಕ್ಕೇರಲು ಏನೆಲ್ಲಾ ಸರ್ಕಸ್ ಮಾಡಲಿದ್ದಾನೆ ಎಂಬುದು ಇಲ್ಲಿನ ಹೈಲೈಟ್​.

ಇದನ್ನೂ ಓದಿ: Humble Politiciann Nograj: ಮತ್ತೆ ‘ಹಂಬಲ್ ಪೊಲಿಟಿಶಿಯನ್’ ಆದ ದಾನಿಶ್; ಮಜವಾದ ಟ್ರೈಲರ್ ಇಲ್ಲಿದೆ

ದಾನಿಶ್​ ಸೇಠ್​ ಸಹೋದರಿ ಕುಬ್ರಾ ಸೇಠ್​ಗೆ ‘ಫೌಂಡೇಶನ್​’ ಅವಕಾಶ; ಹಾಲಿವುಡ್​ ಕಲಾವಿದರ ಜತೆ ನಟನೆ

Published On - 5:05 pm, Mon, 10 January 22

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ