AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ರಾತ್ರಿ ಎಂಬುದೆಲ್ಲ ಇರುವುದಿಲ್ಲ, ಏಕೆಂದರೆ ನೀವು ಸುಸ್ತಾಗಿರುತ್ತೀರಿ ಎಂದ ಆಲಿಯಾ ಭಟ್

ಕರಣ್ ಜೋಹರ್ ಅವರು ನಡೆಸಿಕೊಡುವ ‘ಕಾಫಿ ವಿತ್ ಕರಣ್​’ ಕಾರ್ಯಕ್ರಮದಲ್ಲಿ ಸಾಕಷ್ಟು ನೇರ ಪ್ರಶ್ನೆಗಳು ಎದುರಾಗುತ್ತವೆ. ಇದರಿಂದ ಹಲವು ವಿವಾದಗಳು ಹುಟ್ಟಿಕೊಂಡಿದ್ದೂ ಇದೆ.

ಮೊದಲ ರಾತ್ರಿ ಎಂಬುದೆಲ್ಲ ಇರುವುದಿಲ್ಲ, ಏಕೆಂದರೆ ನೀವು ಸುಸ್ತಾಗಿರುತ್ತೀರಿ ಎಂದ ಆಲಿಯಾ ಭಟ್
ಕರಣ್-ಆಲಿಯಾ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Jul 05, 2022 | 9:55 PM

ಕರಣ್ ಜೋಹರ್ (Karan Johar) ಅವರು ‘ಕಾಫಿ ವಿತ್ ಕರಣ್ ಸೀಸನ್ 7’ (Koffee With Karan 7) ನಡೆಸಿಕೊಡಲು ರೆಡಿ ಆಗಿದ್ದಾರೆ. ಈ ಈ ಕಾರ್ಯಕ್ರಮದ ಹಲವು ಪ್ರೋಮೋಗಳನ್ನು ಹಂಚಿಕೊಳ್ಳಲಾಗುತ್ತಿದೆ. ಪ್ರತಿ ಬಾರಿ ಟಿವಿಯಲ್ಲಿ ಪ್ರಸಾರವಾಗುತ್ತಿದ್ದ ಈ ಶೋ ಈ ಬಾರಿ ನೇರವಾಗಿ ಒಟಿಟಿ ಹಾದಿ ಹಿಡಿದಿದೆ. ಮೊದಲ ಎಪಿಸೋಡ್​ಗೆ ರಣವೀರ್ ಸಿಂಗ್ ಹಾಗೂ ಆಲಿಯಾ ಭಟ್ (Alia Bhatt) ಆಗಮಿಸಲಿದ್ದಾರೆ. ಇದರ ಪ್ರೋಮೋವನ್ನು ಕರಣ್ ಜೋಹರ್ ಹಂಚಿಕೊಂಡಿದ್ದಾರೆ. ಡಿಸ್ನಿ+ ಹಾಟ್​ಸ್ಟಾರ್​ನಲ್ಲಿ ಜುಲೈ 7ರಂದು 7 ಗಂಟೆಗೆ ಈ ಕಾರ್ಯಕ್ರಮ ಪ್ರಸಾರ ಕಾಣಲಿದೆ.

ರಣವೀರ್ ಸಿಂಗ್ ಹಾಗೂ ಆಲಿಯಾ ಭಟ್ ‘ಗಲ್ಲಿ ಬಾಯ್​’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಸಿನಿಮಾ ಗೆದ್ದಿತ್ತು. ಈಗ ಇಬ್ಬರೂ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಚಿತ್ರದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಕರಣ್ ಅವರೇ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಕಾರಣದಿಂದ ಮೊದಲ ಅತಿಥಿಯಾಗಿ ರಣವೀರ್ ಹಾಗೂ ಆಲಿಯಾ ಬಂದಿದ್ದಾರೆ. ಈ ವೇಳೆ ಆಲಿಯಾ ಭಟ್​ಗೆ ಕೆಲ ನೇರ ಪ್ರಶ್ನೆಗಳನ್ನು ಕೇಳಲಾಗಿದೆ.

ಇದನ್ನೂ ಓದಿ
Image
ಶಾರುಖ್-ಕರಣ್ ಸಂಬಂಧದ ಬಗ್ಗೆ ಹುಟ್ಟಿತ್ತು ಅನುಮಾನ; ಎಲ್ಲವನ್ನೂ ವಿವರಿಸಿದ್ದ ಜೋಹರ್  
Image
‘ನಾವು ‘ಕೆಜಿಎಫ್​’ ರೀತಿಯ ಸಿನಿಮಾ ಮಾಡಿದ್ರೆ ಕಟು ಟೀಕೆ ವ್ಯಕ್ತವಾಗುತ್ತಿತ್ತು’: ಕರಣ್​ ಜೋಹರ್​ ಆರೋಪ
Image
‘ನನ್ನನ್ನೇಕೆ ದೂಷಿಸುತ್ತೀರಿ?’; ಏಕಾಏಕಿ ಸಿಟ್ಟಾದ ನಿರ್ಮಾಪಕ ಕರಣ್​ ಜೋಹರ್
Image
‘ಇಂಥ ಕೆಲಸ ಮಾಡ್ಬೇಡಿ’: ಎಲ್ಲರ ಎದುರು ಕರಣ್​ ಜೋಹರ್​ಗೆ ಅನಿಲ್​ ಕಪೂರ್ ವಾರ್ನಿಂಗ್​; ವಿಡಿಯೋ ವೈರಲ್​​

‘ಮದುವೆ ನಂತರ ಅರ್ಥವಾದ ಒಂದು ವಿಚಾರ ಯಾವುದು ಹೇಳಿ’ ಎಂದು ಆಲಿಯಾಗೆ ಕರಣ್ ಪ್ರಶ್ನೆ ಮಾಡಿದರು. ಇದಕ್ಕೆ ಉತ್ತರಿಸಿದ ಆಲಿಯಾ ‘ಮೊದಲ ರಾತ್ರಿ ಎಂಬುದು ಇರುವುದಿಲ್ಲ. ನೀವು ಸುಸ್ತಾಗಿರುತ್ತೀರಿ’ ಎಂದಿದ್ದಾರೆ. ಇದನ್ನು ಕೇಳಿ ರಣವೀರ್ ಸಿಂಗ್ ಬಿದ್ದುಬಿದ್ದು ನಕ್ಕಿದ್ದಾರೆ.

ಕರಣ್ ಜೋಹರ್ ಅವರು ನಡೆಸಿಕೊಡುವ ‘ಕಾಫಿ ವಿತ್ ಕರಣ್​’ ಕಾರ್ಯಕ್ರಮದಲ್ಲಿ ಸಾಕಷ್ಟು ನೇರ ಪ್ರಶ್ನೆಗಳು ಎದುರಾಗುತ್ತವೆ. ಇದರಿಂದ ಹಲವು ವಿವಾದಗಳು ಹುಟ್ಟಿಕೊಂಡಿದ್ದೂ ಇದೆ. ಈ ಶೋನಿಂದ ಕೆಲ ಸೆಲೆಬ್ರಿಟಿಗಳು ತಮ್ಮ ಘನೆತೆಗೆ ದಕ್ಕೆ ಬಂದಿದೆ ಎಂದು ಆರೋಪಿಸಿದ್ದರು.

ಆಲಿಯಾ ಭಟ್ ಶೀಘ್ರದಲ್ಲೇ ತಾಯಿ ಆಗುತ್ತಿದ್ದಾರೆ. ಮದುವೆ ಆದ ಕೇವಲ ಎರಡೂವರೆ ತಿಂಗಳಿಗೆ ಅವರು ಪ್ರೆಗ್ನೆಂಟ್ ಆದ ವಿಚಾರ ಸಾಕಷ್ಟು ಟ್ರೋಲ್ ಆಗಿದೆ. ಪ್ರೆಗ್ನೆಂಟ್ ವಿಚಾರದ ಬಗ್ಗೆ ‘ಕಾಫಿ ವಿತ್ ಕರಣ್’ ಶೋನಲ್ಲಿ ಅವರು ಮಾತನಾಡುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ಗಂಗೂಬಾಯಿ ಕಾಠಿಯಾವಾಡಿ: ಆಲಿಯಾ ಭಟ್​ಳಂತೆ ಕಾಣಿಸಿಕೊಂಡ ಬೆಕ್ಕು ಫುಲ್ ವೈರಲ್: ನೆಟ್ಟಿಗರು ಫಿದಾ

ಪ್ರೆಗ್ನೆನ್ಸಿ ಘೋಷಣೆಗೂ ಮೊದಲು ಆಲಿಯಾ ಭಟ್ ತೆಗೆದುಕೊಂಡಿದ್ರು ಒಂದು ಮಹತ್ವದ ನಿರ್ಧಾರ

ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?