AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಯವಿಟ್ಟು ಕಾಫಿ ವಿತ್ ಕರಣ್​ ಶೋಗೆ ಬನ್ನಿ’; ಸೆಲೆಬ್ರಿಟಿಗಳಿಗೆ ಕರೆ ಮಾಡಿ ಬೇಡಿದ ಕರಣ್ ಜೋಹರ್

ಕರಣ್​ ಜೋಹರ್ ಅವರು ಯಶಸ್ವಿಯಾಗಿ ‘ಕಾಫಿ ವಿತ್ ಕರಣ್​’ ಶೋನ ಆರು ಸೀಸನ್​ಗಳನ್ನು ಪೂರೈಸಿದ್ದಾರೆ. ಈಗ ಏಳನೇ ಸೀಸನ್ ಡಿಸ್ನಿ+ ಹಾಟ್​ಸ್ಟಾರ್​ನಲ್ಲಿ ಪ್ರಸಾರ ಆಗುತ್ತಿದೆ.

‘ದಯವಿಟ್ಟು ಕಾಫಿ ವಿತ್ ಕರಣ್​ ಶೋಗೆ ಬನ್ನಿ’; ಸೆಲೆಬ್ರಿಟಿಗಳಿಗೆ ಕರೆ ಮಾಡಿ ಬೇಡಿದ ಕರಣ್ ಜೋಹರ್
ಕರಣ್
TV9 Web
| Edited By: |

Updated on: Jun 28, 2022 | 4:49 PM

Share

ಕರಣ್ ಜೋಹರ್ (Karan Johar) ಅವರಿಗೆ ಬಾಲಿವುಡ್​ನಲ್ಲಿ ಬಹುಬೇಡಿಕೆ ಇದೆ. ಅವರು ನಿರ್ಮಾಪಕನಾಗಿ, ನಿರ್ದೇಶಕನಾಗಿ ಗುರುತಿಸಿಕೊಂಡಿದ್ದಾರೆ. ಬಾಲಿವುಡ್​ನಲ್ಲಿ ಅವರ ಮಾತು ನಡೆಯುತ್ತದೆ. ಅವರು ಪಾರ್ಟಿ ಆಯೋಜನೆ ಮಾಡಿದರೆ ಸಾಕು, ಇಡೀ ಬಾಲಿವುಡ್​ ಈ ಪಾರ್ಟಿಗೆ ಹಾಜರಿ ಹಾಕುತ್ತದೆ. ಅಷ್ಟರ ಮಟ್ಟಿಗೆ ಕರಣ್ ಜೋಹರ್ ಫೇಮಸ್. ಈಗ ಕರಣ್ ಜೋಹರ್ ನಡೆಸಿಕೊಡುತ್ತಿರುವ ‘ಕಾಫಿ ವಿತ್ ಕರಣ್​’ ಶೋನ (Koffee With Karan Chat Show) ಏಳನೇ ಸೀಸನ್ ಬರುತ್ತಿದೆ. ಈ ಚಾಟ್ ಶೋಗೆ ಬರುವಂತೆ ಸೆಲೆಬ್ರಿಟಿಗಳ ಎದುರು ಬೇಡುವ ಪರಿಸ್ಥಿತಿ ಕರಣ್​ಗೆ ಬಂದಿದೆ. ಈ ಫನ್ನಿ ಪ್ರೋಮೋ ಸಖತ್ ವೈರಲ್ ಆಗುತ್ತಿದೆ.

ಕರಣ್​ ಜೋಹರ್ ಅವರು ಯಶಸ್ವಿಯಾಗಿ ‘ಕಾಫಿ ವಿತ್ ಕರಣ್​’ ಶೋನ ಆರು ಸೀಸನ್​ಗಳನ್ನು ಪೂರೈಸಿದ್ದಾರೆ. ಈಗ ಏಳನೇ ಸೀಸನ್ ಡಿಸ್ನಿ+ ಹಾಟ್​ಸ್ಟಾರ್​ನಲ್ಲಿ ಪ್ರಸಾರ ಆಗುತ್ತಿದೆ. ಜುಲೈ 7ರಿಂದ ಈ ಶೋ ಪ್ರಸಾರ ಆರಂಭಿಸಲಿದೆ. ಇದಕ್ಕೆ ಈಗಾಗಲೇ ಪ್ರಮೋಷನ್ ಕಾರ್ಯಗಳು ಆರಂಭವಾಗಿದೆ. ಇದರ ಹೊಸ ಪ್ರೋಮೋ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ
Image
ಶಾರುಖ್-ಕರಣ್ ಸಂಬಂಧದ ಬಗ್ಗೆ ಹುಟ್ಟಿತ್ತು ಅನುಮಾನ; ಎಲ್ಲವನ್ನೂ ವಿವರಿಸಿದ್ದ ಜೋಹರ್  
Image
‘ನಾವು ‘ಕೆಜಿಎಫ್​’ ರೀತಿಯ ಸಿನಿಮಾ ಮಾಡಿದ್ರೆ ಕಟು ಟೀಕೆ ವ್ಯಕ್ತವಾಗುತ್ತಿತ್ತು’: ಕರಣ್​ ಜೋಹರ್​ ಆರೋಪ
Image
‘ನನ್ನನ್ನೇಕೆ ದೂಷಿಸುತ್ತೀರಿ?’; ಏಕಾಏಕಿ ಸಿಟ್ಟಾದ ನಿರ್ಮಾಪಕ ಕರಣ್​ ಜೋಹರ್
Image
‘ಇಂಥ ಕೆಲಸ ಮಾಡ್ಬೇಡಿ’: ಎಲ್ಲರ ಎದುರು ಕರಣ್​ ಜೋಹರ್​ಗೆ ಅನಿಲ್​ ಕಪೂರ್ ವಾರ್ನಿಂಗ್​; ವಿಡಿಯೋ ವೈರಲ್​​

ಡಿಸ್ನಿ+ ಹಾಟ್​ಸ್ಟಾರ್ ಹಂಚಿಕೊಂಡಿರುವ ಪ್ರೋಮೋದಲ್ಲಿ ‘ನನ್ನ ಶೋಗಾಗಿ ಎಲ್ಲರೂ ಕಾದಿದ್ದಾರೆ’ ಎಂದು ಹೇಳುತ್ತಾರೆ ಕರಣ್. ಸೋಶಿಯಲ್ ಮೀಡಿಯಾದಲ್ಲಿ ‘ಕಾಫಿ ವಿತ್​ ಕರಣ್​’ ಶೋ ಬಗ್ಗೆ ಕಾಣಿಸಿದ ನೆಗೆಟಿವ್ ಕಾಮೆಂಟ್​ಗಳನ್ನು ತೋರಿಸಲಾಗುತ್ತದೆ. ‘ಎಲ್ಲರೂ ಅಲ್ಲ, ಆದರೆ, ಸೆಲೆಬ್ರಿಟಿಗಳೆಲ್ಲರೂ ನನ್ನ ಶೋಗೆ ಬರೋಕೆ ಇಷ್ಟಪಡುತ್ತಾರೆ’ ಎಂದು ಹೇಳುತ್ತಾರೆ ಕರಣ್​. ಈ ಬೆನ್ನಲ್ಲೇ ಅವರು ಸೆಲೆಬ್ರಿಟಿಗಳಿಗೆ ಕರೆ ಮಾಡಿ ತಮ್ಮ ಶೋಗೆ ಬರುವಂತೆ ಬೇಡಿಕೊಳ್ಳುತ್ತಾರೆ. ಅಷ್ಟೇ ಅಲ್ಲ, ಎರಡು ಹ್ಯಾಂಪರ್, ಸಿನಿಮಾದಲ್ಲಿ ಆಫರ್ ನೀಡುವ ಆಮಿಷ ಒಡ್ಡುತ್ತಾರೆ. ಆದರೆ, ಯಾರೊಬ್ಬರೂ ಈ ಶೋಗೆ ಬರೋಕೆ ಆಸಕ್ತಿ ತೋರುವುದಿಲ್ಲ. ಈ ಪ್ರೋಮೋ ಸಖತ್ ಫನ್ನಿ ಆಗಿದೆ.

‘ಕಾಫಿ ವಿತ್ ಕರಣ್’ ಮೊದಲ ಸೀಸನ್ ಪ್ರಸಾರವಾಗಿದ್ದು 2004ರಲ್ಲಿ. ಇದೇ ಮೊದಲ ಬಾರಿಗೆ ಈ ಶೋ ಟಿವಿಯಲ್ಲಿ ಪ್ರಸಾರವಾಗದೆ ಒಟಿಟಿಯಲ್ಲಿ ಟೆಲಿಕಾಸ್ಟ್​ ಆಗುತ್ತಿದೆ. ಈ ಬಾರಿ ದಕ್ಷಿಣದ ಕಲಾವಿದರಾದ ಸಮಂತಾ, ವಿಜಯ್ ದೇವರಕೊಂಡ ಮೊದಲಾದವರು ಈ ಶೋನಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ಈ ಶೋನಲ್ಲಿ ಕೆಲ ಪ್ರಶ್ನೆಗಳು ತುಂಬಾನೇ ನೇರವಾಗಿರುತ್ತದೆ. ಇದರಿಂದ ವಿವಾದಗಳು ಹೊತ್ತಿಕೊಂಡಿದ್ದೂ ಇದೆ. ರಣಬೀರ್ ಕಪೂರ್ ಅವರು ಈ ಶೋ ಬಗ್ಗೆ ಅಸಮಾಧಾನ ಹೊರಹಾಕಿದ್ದರು. ಸಲ್ಮಾನ್ ಖಾನ್, ಶಾರುಖ್ ಸೇರಿ ಅನೇಕರು ಈ ಶೋನಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: ನಿರ್ಮಾಪಕ ಕರಣ್ ಜೋಹರ್​​ನಿಂದ ಐದು ಕೋಟಿ ರೂಪಾಯಿ ಸುಲಿಗೆ ಮಾಡಲು ನಡೆದಿತ್ತು ಪ್ಲ್ಯಾನ್​

ಶಾರುಖ್-ಕರಣ್ ಸಂಬಂಧದ ಬಗ್ಗೆ ಹುಟ್ಟಿತ್ತು ಅನುಮಾನ; ಎಲ್ಲವನ್ನೂ ವಿವರಿಸಿದ್ದ ಜೋಹರ್  

Follow Us
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ