AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರಣ್​ ಜೋಹರ್ ವರ್ತನೆಗೆ ಕಾಜೋಲ್ ಅಸಮಾಧಾನ; ‘ಕಾಫಿ ವಿತ್​ ಕರಣ್​’ ಶೋನಲ್ಲಿ ನಡೆದಿದ್ದೇನು?

‘ಕಾಫಿ ವಿತ್​ ಕರಣ್​’ ಶೋನಲ್ಲಿ ಒಂದಲ್ಲಾ ಒಂದು ವಿವಾದ ಆಗೋದು ಗ್ಯಾರಂಟಿ. ಪ್ರತಿ ಬಾರಿಯೂ ಕರಣ್​ ಜೋಹರ್​ ಅವರು ವಿವಾದಾತ್ಮಕ ಪ್ರಶ್ನೆ ಕೇಳುತ್ತಾರೆ. ಈ ಬಾರಿ ಅವರು ‘ಅನ್​ಪ್ರೊಫೆಷನಲ್​’ ಆಗಿ ನಡೆದುಕೊಂಡಿದ್ದಾರೆ ಅಂತ ನಟಿ ಕಾಜೋಲ್​ ಆರೋಪಿಸಿದ್ದಾರೆ ಎಂದು ವರದಿ ಆಗಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಕರಣ್​ ಜೋಹರ್ ವರ್ತನೆಗೆ ಕಾಜೋಲ್ ಅಸಮಾಧಾನ; ‘ಕಾಫಿ ವಿತ್​ ಕರಣ್​’ ಶೋನಲ್ಲಿ ನಡೆದಿದ್ದೇನು?
ಕರಣ್​ ಜೋಹರ್​, ಕಾಜೋಲ್​
ಮದನ್​ ಕುಮಾರ್​
|

Updated on: Nov 30, 2023 | 2:48 PM

Share

ನಿರ್ಮಾಪಕ, ನಿರ್ದೇಶಕ, ನಿರೂಪಕ ಕರಣ್​ ಜೋಹರ್​ (Karan Johar) ಅವರಿಗೆ ಬಾಲಿವುಡ್​ನಲ್ಲಿ ಬಹುತೇಕ ಎಲ್ಲರ ಜೊತೆ ಸ್ನೇಹ ಇದೆ. ಅನೇಕರಿಗೆ ಅವರೇ ಗಾಡ್​ ಫಾದರ್​. ಕಾಜೋಲ್​ ಜೊತೆ ಅವರು ಹಲವು ವರ್ಷಗಳಿಂದ ಸ್ನೇಹ ಹೊಂದಿದ್ದಾರೆ. ಈಗ ಕಾಜೋಲ್ ಅವರು ‘ಕಾಫಿ ವಿತ್​ ಕರಣ್​’ (Koffee With Karan) ಶೋಗೆ ಅತಿಥಿಯಾಗಿ ಆಗಮಿಸಿದ್ದಾರೆ. ಈ ವೇಳೆ ಕರಣ್​ ಜೋಹರ್​ ನಡೆದುಕೊಂಡ ರೀತಿ ಕಾಜೋಲ್​ಗೆ ಇಷ್ಟ ಆಗಿಲ್ಲ. ಹಾಗಾಗಿ ಅವರು ನೇರವಾಗಿ ಟೀಕೆ ಮಾಡಿದ್ದಾರೆ ಎನ್ನಲಾಗಿದೆ. ಇದಕ್ಕೆಲ್ಲ ಕಾರಣ ಆಗಿರುವುದು ರಣವೀರ್​ ಸಿಂಗ್​! ಈ ವಿಷಯದಲ್ಲಿ ರಣವೀರ್​ ಸಿಂಗ್​ (Ranveer Singh) ಯಾಕೆ ಬಂದ್ರು? ಅದಕ್ಕೆ ಇಲ್ಲಿದೆ ಉತ್ತರ..

‘ಕಾಫಿ ವಿತ್​ ಕರಣ್​’ ಕಾರ್ಯಕ್ರಮದ ಲೇಟೆಸ್ಟ್​ ಸಂಚಿಕೆಗೆ ರಾಣಿ ಮುಖರ್ಜಿ ಮತ್ತು ಕಾಜೋಲ್​ ಅವರು ಜೊತೆಯಾಗಿ ಬಂದಿದ್ದಾರೆ. ಈ ವೇಳೆ ಕರಣ್​ ಜೋಹರ್​ಗೆ ರಣವೀರ್​ ಸಿಂಗ್​ ಕಡೆಯಿಂದ ಫೋನ್​ ಕರೆ ಬಂದಿದೆ. ಕಾರ್ಯಕ್ರಮದ ಶೂಟಿಂಗ್​ ನಡುವೆ ಕರೆ ಸ್ವೀಕರಿಸಿದ ಕರಣ್​ ಜೋಹರ್​ ಅವರು ಬಹಳ ಹೊತ್ತು ಮಾತನಾಡಿದ್ದಾರೆ. ಇದರಿಂದ ರಾಣಿ ಮುಖರ್ಜಿ ಮತ್ತು ಕಾಜೋಲ್​ ಕಾಯುವಂತಾಗಿದೆ. ಕರಣ್​ ಜೋಹರ್​ ಅವರ ಈ ವರ್ತನೆಯನ್ನು ಕಾಜೋಲ್​ ಅವರು ‘ಅನ್​ಪ್ರೊಫೆಷನಲ್​’ ಎಂದು ಕರೆದಿದ್ದಾರೆ. ಅಲ್ಲದೇ, ಅವರು ಕೂಗಾಡಿದ್ದಾರೆ ಎಂದು ಕೂಡ ಹೇಳಲಾಗುತ್ತಿದೆ.

ಇದನ್ನೂ ಓದಿ: Kajol Viral Video: ಕ್ಯಾಮೆರಾ ಎದುರಲ್ಲೇ ಡ್ರೆಸ್​ ಚೇಂಜ್​ ಮಾಡಿದ್ರಾ ಕಾಜೋಲ್​? ನೆಟ್ಟಿಗರ ದಾರಿ ತಪ್ಪಿಸಿದ ಡೀಪ್​ಫೇಕ್ ವಿಡಿಯೋ

ನವೆಂಬರ್​ 30ರ ರಾತ್ರಿ ‘ಕಾಪಿ ವಿತ್​ ಕರಣ್​’ ಕಾರ್ಯಕ್ರಮದ ಹೊಸ ಸಂಚಿಕೆ ಪ್ರಸಾರ ಆಗಲಿದೆ. ‘ಡಿಸ್ನಿ ಪ್ಲಸ್​ ಹಾಟ್​ ಸ್ಟಾರ್​’ ಒಟಿಟಿಯಲ್ಲಿ ಈ ಶೋ ಬಿತ್ತರ ಆಗುತ್ತಿದೆ. ಯಶಸ್ವಿಯಾಗಿ 7 ಸೀಸನ್​ಗಳನ್ನು ಪೂರೈಸಿರುವ ಈ ಕಾರ್ಯಕ್ರಮದ 8ನೇ ಸೀಸನ್​ ಈಗ ಪ್ರಸಾರ ಆಗುತ್ತಿದೆ. ಈ ಶೋನಲ್ಲಿ ಕರಣ್​ ಜೋಹರ್​ ಅವರು ಹಲವು ವಿವಾದಾತ್ಮಕ ಪ್ರಶ್ನೆಗಳನ್ನು ಕೇಳುತ್ತಾರೆ. ಹಾಗಾಗಿ ಕೆಲವು ಸೆಲೆಬ್ರಿಟಿಗಳು ಈ ಶೋಗೆ ಬರಲು ಹಿಂದೇಟು ಹಾಕುತ್ತಾರೆ. ಈ ಮೊದಲು ರಣಬೀರ್​ ಕಪೂರ್​ ಅವರು ಕಟು ಮಾತುಗಳಿಂದ ಟೀಕೆ ಮಾಡಿದ ವಿಡಿಯೋ ವೈರಲ್​ ಆಗಿತ್ತು.

ಇದನ್ನೂ ಓದಿ: ಕಾಜೋಲ್ ಬಟ್ಟೆ ಬದಲಿಸುತ್ತಿರುವ ನಕಲಿ ವಿಡಿಯೋ ವೈರಲ್

8ನೇ ಸೀಸನ್​ನಲ್ಲಿ ರಣವೀರ್​ ಸಿಂಗ್​ ಮತ್ತು ದೀಪಿಕಾ ಪಡುಕೋಣೆ ಅವರು ಜೊತೆಯಾಗಿ ಕಾಣಿಸಿಕೊಂಡರು. ಈ ವೇಳೆ ದೀಪಿಕಾ ಪಡುಕೋಣೆ ಅವರು ತಮ್ಮ ಹಳೇ ರಿಲೇಷನ್​ಶಿಪ್​ ಬಗ್ಗೆ ಬಾಯಿ ಬಿಟ್ಟಿದ್ದರು. ರಣವೀರ್​ ಸಿಂಗ್​ ಜೊತೆ ಡೇಟಿಂಗ್ ಮಾಡುತ್ತಿರುವಾಗಲೇ ಬೇರೆ ಪುರುಷರ ಜೊತೆ ಸಂಪರ್ಕದಲ್ಲಿ ಇದ್ದೆ ಎಂದು ಹೇಳಿಕೊಂಡಿದ್ದಕ್ಕೆ ಅವರನ್ನು ನೆಟ್ಟಿಗರು ಟ್ರೋಲ್​ ಮಾಡಿದ್ದರು. ಹಾಗಂತ ಆ ಟ್ರೋಲ್​ಗಳಿಗೆ ದೀಪಿಕಾ ಅವರಾಗಲಿ, ರಣವೀರ್​ ಸಿಂಗ್​ ಅವರಾಗಲಿ ತಲೆ ಕೆಡಿಸಿಕೊಳ್ಳಲಿಲ್ಲ. ಈಗ ರಾಣಿ ಮುಖರ್ಜಿ ಮತ್ತು ಕಾಜೋಲ್​ ಅವರ ಸಂಚಿಕೆಯಿಂದ ಯಾವ ವಿವಾದ ಹುಟ್ಟಿಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ